Homeಕರ್ನಾಟಕರೈತ ವಿರೋಧಿ ಕಾಯ್ದೆ: ಕರ್ನಾಟಕ ರೈತ ಸಂಘ (AIKKS) ವತಿಯಿಂದ ವಿಚಾರ ಸಂಕಿರಣ; ಜಾಥ

ರೈತ ವಿರೋಧಿ ಕಾಯ್ದೆ: ಕರ್ನಾಟಕ ರೈತ ಸಂಘ (AIKKS) ವತಿಯಿಂದ ವಿಚಾರ ಸಂಕಿರಣ; ಜಾಥ

ವಿವಿದ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಈ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಸಂಘದ ರಾಜ್ಯಾಧ್ಯಕ್ಷರಾದ ಡಿ.ಎಚ್‌.ಪೂಜಾರ್ ಹೇಳಿದರು.

- Advertisement -
- Advertisement -

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಾರಿಗೆ ತರಲು ಹೊರಟಿರುವ ಕೃಷಿ ಮತ್ತು ಭೂ ಸುಧಾರಣಾ ಕಾಯ್ದೆಗಳ ಕುರಿತ ವಿಚಾರ ಸಂಕಿರಣವನ್ನು ಕರ್ನಾಟಕ ರೈತ ಸಂಘ (AIKKS), ರಾಯಚೂರು ವತಿಯಿಂದ ನವೆಂಬರ್ 7 ರಂದು ಹಮ್ಮಿಕೊಳ್ಳಲಾಗಿದ್ದು, ನವೆಂಬರ್ 9 ರಂದು ಮಾನ್ವಿ ತಾಲ್ಲೂಕಿನ ತಹಶೀಲ್ದಾರ್ ಕಛೇರಿಗೆ ಕಾಲ್ನಡಿಗೆ- ಚಾಥ ನಡೆಸಲಾಗುತ್ತಿದೆ.

ವಿವಿದ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಈ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ನಾನು ಗೌರಿ.ಕಾಂ ಜೊತೆ ಮಾತನಾಡಿದ ಸಂಘದ ರಾಜ್ಯಾಧ್ಯಕ್ಷರಾದ ಡಿ.ಎಚ್‌.ಪೂಜಾರ್ ಹೇಳಿದರು.

ಇದನ್ನೂ ಓದಿ: ರೈತ ವಿರೋಧಿ ಕಾಯ್ದೆ: SDPI ಪಕ್ಷದಿಂದ ’ಜಾಗೋ ಕಿಸಾನ್’ ಅಭಿಯಾನ ಆರಂಭ

“ಕೇಂದ್ರ ಮತ್ತು ರಾಜ್ಯ ಸರ್ಕಾರ ಅನೇಕ ಕಾಯ್ದೆಗಳಿಗೆ ತಿದ್ದುಪಡಿ ತಂದು ಕೃಷಿ ಕ್ಷೇತ್ರವನ್ನು ಕಾಪೋರೇಟ್ ಕಂಪನಿಗಳಿಗೊಪ್ಪಿಸಿದೆ. ಎಪಿಎಂಸಿ, ಭೂ ಸುಧಾರಣೆ, ಕಾಂಟ್ರಾಕ್ಟ್ ಪಾರ್ಫಿರಿಗ್, ವಿದ್ಯುತ್ ಇತರೆ ಕಾಯ್ದೆಗಳಿಗೆ ತಿದ್ದುಪಡಿ ಮಾಡಿದ್ದರಿಂದ ದೇಶದ ಶೇ 86 ರಷ್ಟು ಸಣ್ಣ ಮಧ್ಯಮ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಲಿದ್ದಾರೆ. ಇಷ್ಟು ಮಾತ್ರವಲ್ಲ ವಿದೇಶಿ ಕಂಪನಿಗಳು ಆಹಾರ ಕ್ಷೇತ್ರದ ಮೇಲೆ ಏಕಸ್ವಾಮ್ಯತೆ ಸಾಧಿಸಲಿವೆ. ರೈತರು-ಇತರೆ ವರ್ಗದ ಜನರು, ಆಹಾರ ಕ್ಷೇತ್ರದ ಮೇಲಿನ ಸಾರ್ವಭೌಮತ್ವ ಕಳೆದುಕೊಳ್ಳಲಿದ್ದಾರೆ. ಮೆಕ್ಕೆ ಜೋಳ, ಸಜ್ಜೆ ಇತರೆ ಬೆಳೆಗಳಿಗೆ ಕಳೆದ ವರ್ಷಕ್ಕಿಂತ ಅರ್ಧದಷ್ಟು ಬೆಲೆ ಕಡಿಮೆಯಾಗಿದೆ. ಇನ್ನು ಮುಂದೆ ಬೆಂಬಲ ಬೆಲೆ ನಿಗದಿ ಮಾಡುವ ಮತ್ತು ಖರೀದಿ ಕೇಂದ್ರ ತೆರೆಯುವ ಜವಾಬ್ದಾರಿಯಿಂದ ಸರ್ಕಾರ ಹಿಂದೆ ಸರಿಯಲಿದೆ. ಈಗಾಗಲೆ ಒಂದು ತಿಂಗಳಿಂದ ಮೆಕ್ಕೆ ಜೋಳ, ಸಜ್ಜೆ ಇತರೆ ಬೆಳೆ ಕಟಾವು ಮಾಡುತ್ತಿದ್ದರೂ ಖರೀದಿ ಕೇಂದ್ರ ತೆರೆದಿಲ್ಲ. ಹಾಗಾಗಿ, ವೈಜ್ಞಾನಿಕ ಬೆಲೆ, ಸ್ವಾಮಿನಾಥನ್ ಆಯೋಗದ ವರದಿ ಜಾರಿ ಮತ್ತು ರೈತ ವಿರೋಧಿ ಕಾಯ್ದೆಗಳನ್ನು ವಾಪಾಸ್ ಪಡೆಯಲು ಒತ್ತಾಯ 250 ಕ್ಕೂ ಸಂಘಟನೆಗಳು ನಿರಂತರವಾಗಿ ಹೋರಾಡುತ್ತಿವೆ. ನವೆಂಬರ್ 26,27.2020 ರಂದು ರಾಷ್ಟ್ರ ಮಟ್ಟದಲ್ಲಿ ಪುನಃ ಹೋರಾಟ ಹಮ್ಮಿಕೊಳ್ಳಲಾಗಿದೆ. ರೈತರು ಮತ್ತು ಪ್ರಜ್ಞಾವಂತ ಜನರು ಆಯಾ ಕ್ಷೇತ್ರದ ಸಂಸದರು, ಶಾಸಕರ ಮೇಲೆ ಒತ್ತಾಯ ಹೇರಬೇಕಾಗಿದೆ. ಹಾಗಾಗಿ ಇದನ್ನು ಹೋರಾಟದ ಭಾಗವಾಗಿ ಹಮ್ಮಿಕೊಳ್ಳಲಾಗಿದೆ” ಎಂದು ಹೇಳಿದರು.

ಇದನ್ನೂ ಓದಿ: ಆರ್‌ಸಿಇಪಿ ಬಿಜೆಪಿ ಸರ್ಕಾರದ ರೈತ ವಿರೋಧಿ ಒಪ್ಪಂದ, ರೈತರಿಗೆ ಮರಣಶಾಸನ: ಸಿದ್ದರಾಮಯ್ಯ

ನಮ್ಮ ಹಕ್ಕೊತ್ತಾಯಗಳು:

  1. ಹೂವಿನಬಾವಿ ಗ್ರಾಮದ ಸ.ನಂ.32,43 ಒಟ್ಟು 605 ಎಕರೆ ಭೂಮಿಯ ಪೈಕಿ 300 ಎಕರೆ ಭೂಮಿಯನ್ನು ಕುರಿ, ಮೇಕೆ, ದನಕರುಗಳನ್ನು ಮೇಯಿಸಲು ಮೀಸಲಿಡಬೇಕು. ಈ ಭೂಮಿಯಲ್ಲಿ ಕಳೆದ 50 ವರ್ಷಗಳಿಂದ ಸಾಗುವಳಿ ಮಾಡುವ ಭೂ ರಹಿತ ಬಡವರಿಗೆ ಪಟ್ಟಾ ಕೊಡಬೇಕು.
  2. ಮದಕಿನಾಳ ಗ್ರಾಮದಲ್ಲಿ ಅನಧಿಕೃತ ಕಲ್ಲು ಗಣಿಗಾರಿಕೆ ನಡೆಸಿರುವ ಸಪ್ತಗಿರಿ ಸ್ಟೋನ್ ಕ್ರಷರ್ ಮಾಲಿಕರ ಮೇಲೆ ಕ್ರಿಮಿನಲ್ ಕೇಸ್ ದಾಖಲಿಸಿ ಮತ್ತು ಗಣಿಗಾರಿಕೆಯನ್ನು ನಿಷೇಧಿಸಬೇಕು.
  3. ಕೃಷ್ಣ 5 ಎ ಮತ್ತು ಬಿ. ಸ್ಕೀಂ ಯೋಜನೆ ಅಡಿಯಲ್ಲಿ ಮಸ್ಕಿ ತಾಲೂಕಿನ ಎಲ್ಲಾ ಹಳ್ಳಿಗಳನ್ನು ಸಂಪೂರ್ಣ ನೀರಾವರಿಗೊಳಪಡಿಸಬೇಕು. ಕನಕನಾಲ ಜಲಾಶಯದ ಆಳು ತೆಗೆದು 14 ಹಳ್ಳಿಗಳ ಭೂಮಿಗೆ ನೀರಾವರಿ ಕಲ್ಪಿಸಬೇಕು.
  4. ತೀವ್ರ ಮಳೆಯಿಂದ ಸೂರ್ಯಕಾಂತಿ, ತೊಗರೆ, ಸಜ್ಜೆ, ಜೋಳ, ಭತ್ತ, ಈರುಳ್ಳಿ ಸೇರಿದಂತೆ ಇತರೆ ಬೆಳೆಗಳು ನಷ್ಟವಾಗಿವೆ: ರೈತರ ಪ್ರತಿ ಎಕರೆ ಭೂಮಿಗೆ 30-50 ಸಾವಿರ ಪರಿಹಾರ ಒದಗಿಸಬೇಕು. ಕುಸಿದು ಬಿದ್ದಿರುವ ಮನೆಗಳನ್ನು ತೀವ್ರಗತಿಯಲ್ಲಿ ಪುನರ್ ನಿರ್ಮಾಣ ಮಾಡಬೇಕು.
  5. ಬಹುಗ್ರಾಮ ಯೋಜನೆ ಅಡಿಯಲ್ಲಿ ತಾಲೂಕಿನ ಎಲ್ಲಾ ಗ್ರಾಮಗಳಿಗೆ ಶುದ್ಧವಾದ ಕುಡಿಯುವ ನೀರು ಒದಗಿಸಬೇಕು.
  6. ಹಲವು ಗ್ರಾಮಗಳಲ್ಲಿ ನಿರ್ಮಾಣಗೊಂಡಿರುವ ಶುದ್ದೀಕರಣ ಘಟಕಗಳು ಅನುಪಯುಕ್ತವಾಗಿವೆ. ಕಳಪೆ ಕಾಮಗಾರಿ ಮತ್ತು ತುಕ್ಕು ಹಿಡಿದಿರುವ ಯಂತ್ರಗಳ ಕುರಿತು ತನಿಖೆ ನಡೆಸಬೇಕು.
  7. ಮಸ್ಕಿ ತಾಲೂಕಿನ ಪಾಮನಕೆಲೂರ, ಕೋಟೆಕಲ್, ಹಾಲಪುರ, ರಾಮಲದಿನ್ನಿ, ಬೋಗಪುರ, ರತ್ನಾಪುರ ಹಟ್ಟಿ, ಗಂಟೆರ ಹಟ್ಟಿ, ವಿರಾಮರ ಇತರೆ ಗ್ರಾಮಗಳಲ್ಲಿ ಸರ್ಕಾರಿ ಭೂಮಿ ಸಾಗುವಳಿ ಮಾಡುವ ರೈತರಿಗೆ ಪಟ್ಟಾ ಒದಗಿಸಬೇಕು. ತಾಲೂಕಿನ ಗ್ರಾಮಗಳಲ್ಲಿರುವ ಸ್ಮಶಾನದ ಸಮಸ್ಯೆಯನ್ನು ಪರಿಹರಿಸಬೇಕು.

ಈ ಮೇಲಿನ ಸಮಸ್ಯೆಗಳ ಪರಿಹರಿಸುವಿಕೆ ಸೇರಿದಂತೆ ಇನ್ನೂ ಹತ್ತಾರು ಸಮಸ್ಯೆಗಳ ಬಗ್ಗೆ ವಿಚಾರ ಸಂಕಿರಣ ನಡೆಸಿ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ. ಅವುಗಳ ಆಧಾರದ ಮೇಲೆ ಕಾಲ್ನಡಿಗೆ ಜಾತವನ್ನು ಹಮ್ಮಿಕೊಳ್ಳಲಾಗುತ್ತದೆ ಎಂದು ಹೇಳಿದರು.


ಇದನ್ನೂ ಓದಿ: ಕೃಷಿ ಮಸೂದೆ ವಿರೋಧಿಸುವ ರೈತರನ್ನು ಭಯೋತ್ಪಾದಕರು ಎಂದ ನಟಿ ಕಂಗನಾ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....