Homeಕರ್ನಾಟಕರೈತ ವಿರೋಧಿ ಕಾಯ್ದೆ: ಕರ್ನಾಟಕ ರೈತ ಸಂಘ (AIKKS) ವತಿಯಿಂದ ವಿಚಾರ ಸಂಕಿರಣ; ಜಾಥ

ರೈತ ವಿರೋಧಿ ಕಾಯ್ದೆ: ಕರ್ನಾಟಕ ರೈತ ಸಂಘ (AIKKS) ವತಿಯಿಂದ ವಿಚಾರ ಸಂಕಿರಣ; ಜಾಥ

ವಿವಿದ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಈ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಸಂಘದ ರಾಜ್ಯಾಧ್ಯಕ್ಷರಾದ ಡಿ.ಎಚ್‌.ಪೂಜಾರ್ ಹೇಳಿದರು.

- Advertisement -
- Advertisement -

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಾರಿಗೆ ತರಲು ಹೊರಟಿರುವ ಕೃಷಿ ಮತ್ತು ಭೂ ಸುಧಾರಣಾ ಕಾಯ್ದೆಗಳ ಕುರಿತ ವಿಚಾರ ಸಂಕಿರಣವನ್ನು ಕರ್ನಾಟಕ ರೈತ ಸಂಘ (AIKKS), ರಾಯಚೂರು ವತಿಯಿಂದ ನವೆಂಬರ್ 7 ರಂದು ಹಮ್ಮಿಕೊಳ್ಳಲಾಗಿದ್ದು, ನವೆಂಬರ್ 9 ರಂದು ಮಾನ್ವಿ ತಾಲ್ಲೂಕಿನ ತಹಶೀಲ್ದಾರ್ ಕಛೇರಿಗೆ ಕಾಲ್ನಡಿಗೆ- ಚಾಥ ನಡೆಸಲಾಗುತ್ತಿದೆ.

ವಿವಿದ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಈ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ನಾನು ಗೌರಿ.ಕಾಂ ಜೊತೆ ಮಾತನಾಡಿದ ಸಂಘದ ರಾಜ್ಯಾಧ್ಯಕ್ಷರಾದ ಡಿ.ಎಚ್‌.ಪೂಜಾರ್ ಹೇಳಿದರು.

ಇದನ್ನೂ ಓದಿ: ರೈತ ವಿರೋಧಿ ಕಾಯ್ದೆ: SDPI ಪಕ್ಷದಿಂದ ’ಜಾಗೋ ಕಿಸಾನ್’ ಅಭಿಯಾನ ಆರಂಭ

“ಕೇಂದ್ರ ಮತ್ತು ರಾಜ್ಯ ಸರ್ಕಾರ ಅನೇಕ ಕಾಯ್ದೆಗಳಿಗೆ ತಿದ್ದುಪಡಿ ತಂದು ಕೃಷಿ ಕ್ಷೇತ್ರವನ್ನು ಕಾಪೋರೇಟ್ ಕಂಪನಿಗಳಿಗೊಪ್ಪಿಸಿದೆ. ಎಪಿಎಂಸಿ, ಭೂ ಸುಧಾರಣೆ, ಕಾಂಟ್ರಾಕ್ಟ್ ಪಾರ್ಫಿರಿಗ್, ವಿದ್ಯುತ್ ಇತರೆ ಕಾಯ್ದೆಗಳಿಗೆ ತಿದ್ದುಪಡಿ ಮಾಡಿದ್ದರಿಂದ ದೇಶದ ಶೇ 86 ರಷ್ಟು ಸಣ್ಣ ಮಧ್ಯಮ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಲಿದ್ದಾರೆ. ಇಷ್ಟು ಮಾತ್ರವಲ್ಲ ವಿದೇಶಿ ಕಂಪನಿಗಳು ಆಹಾರ ಕ್ಷೇತ್ರದ ಮೇಲೆ ಏಕಸ್ವಾಮ್ಯತೆ ಸಾಧಿಸಲಿವೆ. ರೈತರು-ಇತರೆ ವರ್ಗದ ಜನರು, ಆಹಾರ ಕ್ಷೇತ್ರದ ಮೇಲಿನ ಸಾರ್ವಭೌಮತ್ವ ಕಳೆದುಕೊಳ್ಳಲಿದ್ದಾರೆ. ಮೆಕ್ಕೆ ಜೋಳ, ಸಜ್ಜೆ ಇತರೆ ಬೆಳೆಗಳಿಗೆ ಕಳೆದ ವರ್ಷಕ್ಕಿಂತ ಅರ್ಧದಷ್ಟು ಬೆಲೆ ಕಡಿಮೆಯಾಗಿದೆ. ಇನ್ನು ಮುಂದೆ ಬೆಂಬಲ ಬೆಲೆ ನಿಗದಿ ಮಾಡುವ ಮತ್ತು ಖರೀದಿ ಕೇಂದ್ರ ತೆರೆಯುವ ಜವಾಬ್ದಾರಿಯಿಂದ ಸರ್ಕಾರ ಹಿಂದೆ ಸರಿಯಲಿದೆ. ಈಗಾಗಲೆ ಒಂದು ತಿಂಗಳಿಂದ ಮೆಕ್ಕೆ ಜೋಳ, ಸಜ್ಜೆ ಇತರೆ ಬೆಳೆ ಕಟಾವು ಮಾಡುತ್ತಿದ್ದರೂ ಖರೀದಿ ಕೇಂದ್ರ ತೆರೆದಿಲ್ಲ. ಹಾಗಾಗಿ, ವೈಜ್ಞಾನಿಕ ಬೆಲೆ, ಸ್ವಾಮಿನಾಥನ್ ಆಯೋಗದ ವರದಿ ಜಾರಿ ಮತ್ತು ರೈತ ವಿರೋಧಿ ಕಾಯ್ದೆಗಳನ್ನು ವಾಪಾಸ್ ಪಡೆಯಲು ಒತ್ತಾಯ 250 ಕ್ಕೂ ಸಂಘಟನೆಗಳು ನಿರಂತರವಾಗಿ ಹೋರಾಡುತ್ತಿವೆ. ನವೆಂಬರ್ 26,27.2020 ರಂದು ರಾಷ್ಟ್ರ ಮಟ್ಟದಲ್ಲಿ ಪುನಃ ಹೋರಾಟ ಹಮ್ಮಿಕೊಳ್ಳಲಾಗಿದೆ. ರೈತರು ಮತ್ತು ಪ್ರಜ್ಞಾವಂತ ಜನರು ಆಯಾ ಕ್ಷೇತ್ರದ ಸಂಸದರು, ಶಾಸಕರ ಮೇಲೆ ಒತ್ತಾಯ ಹೇರಬೇಕಾಗಿದೆ. ಹಾಗಾಗಿ ಇದನ್ನು ಹೋರಾಟದ ಭಾಗವಾಗಿ ಹಮ್ಮಿಕೊಳ್ಳಲಾಗಿದೆ” ಎಂದು ಹೇಳಿದರು.

ಇದನ್ನೂ ಓದಿ: ಆರ್‌ಸಿಇಪಿ ಬಿಜೆಪಿ ಸರ್ಕಾರದ ರೈತ ವಿರೋಧಿ ಒಪ್ಪಂದ, ರೈತರಿಗೆ ಮರಣಶಾಸನ: ಸಿದ್ದರಾಮಯ್ಯ

ನಮ್ಮ ಹಕ್ಕೊತ್ತಾಯಗಳು:

  1. ಹೂವಿನಬಾವಿ ಗ್ರಾಮದ ಸ.ನಂ.32,43 ಒಟ್ಟು 605 ಎಕರೆ ಭೂಮಿಯ ಪೈಕಿ 300 ಎಕರೆ ಭೂಮಿಯನ್ನು ಕುರಿ, ಮೇಕೆ, ದನಕರುಗಳನ್ನು ಮೇಯಿಸಲು ಮೀಸಲಿಡಬೇಕು. ಈ ಭೂಮಿಯಲ್ಲಿ ಕಳೆದ 50 ವರ್ಷಗಳಿಂದ ಸಾಗುವಳಿ ಮಾಡುವ ಭೂ ರಹಿತ ಬಡವರಿಗೆ ಪಟ್ಟಾ ಕೊಡಬೇಕು.
  2. ಮದಕಿನಾಳ ಗ್ರಾಮದಲ್ಲಿ ಅನಧಿಕೃತ ಕಲ್ಲು ಗಣಿಗಾರಿಕೆ ನಡೆಸಿರುವ ಸಪ್ತಗಿರಿ ಸ್ಟೋನ್ ಕ್ರಷರ್ ಮಾಲಿಕರ ಮೇಲೆ ಕ್ರಿಮಿನಲ್ ಕೇಸ್ ದಾಖಲಿಸಿ ಮತ್ತು ಗಣಿಗಾರಿಕೆಯನ್ನು ನಿಷೇಧಿಸಬೇಕು.
  3. ಕೃಷ್ಣ 5 ಎ ಮತ್ತು ಬಿ. ಸ್ಕೀಂ ಯೋಜನೆ ಅಡಿಯಲ್ಲಿ ಮಸ್ಕಿ ತಾಲೂಕಿನ ಎಲ್ಲಾ ಹಳ್ಳಿಗಳನ್ನು ಸಂಪೂರ್ಣ ನೀರಾವರಿಗೊಳಪಡಿಸಬೇಕು. ಕನಕನಾಲ ಜಲಾಶಯದ ಆಳು ತೆಗೆದು 14 ಹಳ್ಳಿಗಳ ಭೂಮಿಗೆ ನೀರಾವರಿ ಕಲ್ಪಿಸಬೇಕು.
  4. ತೀವ್ರ ಮಳೆಯಿಂದ ಸೂರ್ಯಕಾಂತಿ, ತೊಗರೆ, ಸಜ್ಜೆ, ಜೋಳ, ಭತ್ತ, ಈರುಳ್ಳಿ ಸೇರಿದಂತೆ ಇತರೆ ಬೆಳೆಗಳು ನಷ್ಟವಾಗಿವೆ: ರೈತರ ಪ್ರತಿ ಎಕರೆ ಭೂಮಿಗೆ 30-50 ಸಾವಿರ ಪರಿಹಾರ ಒದಗಿಸಬೇಕು. ಕುಸಿದು ಬಿದ್ದಿರುವ ಮನೆಗಳನ್ನು ತೀವ್ರಗತಿಯಲ್ಲಿ ಪುನರ್ ನಿರ್ಮಾಣ ಮಾಡಬೇಕು.
  5. ಬಹುಗ್ರಾಮ ಯೋಜನೆ ಅಡಿಯಲ್ಲಿ ತಾಲೂಕಿನ ಎಲ್ಲಾ ಗ್ರಾಮಗಳಿಗೆ ಶುದ್ಧವಾದ ಕುಡಿಯುವ ನೀರು ಒದಗಿಸಬೇಕು.
  6. ಹಲವು ಗ್ರಾಮಗಳಲ್ಲಿ ನಿರ್ಮಾಣಗೊಂಡಿರುವ ಶುದ್ದೀಕರಣ ಘಟಕಗಳು ಅನುಪಯುಕ್ತವಾಗಿವೆ. ಕಳಪೆ ಕಾಮಗಾರಿ ಮತ್ತು ತುಕ್ಕು ಹಿಡಿದಿರುವ ಯಂತ್ರಗಳ ಕುರಿತು ತನಿಖೆ ನಡೆಸಬೇಕು.
  7. ಮಸ್ಕಿ ತಾಲೂಕಿನ ಪಾಮನಕೆಲೂರ, ಕೋಟೆಕಲ್, ಹಾಲಪುರ, ರಾಮಲದಿನ್ನಿ, ಬೋಗಪುರ, ರತ್ನಾಪುರ ಹಟ್ಟಿ, ಗಂಟೆರ ಹಟ್ಟಿ, ವಿರಾಮರ ಇತರೆ ಗ್ರಾಮಗಳಲ್ಲಿ ಸರ್ಕಾರಿ ಭೂಮಿ ಸಾಗುವಳಿ ಮಾಡುವ ರೈತರಿಗೆ ಪಟ್ಟಾ ಒದಗಿಸಬೇಕು. ತಾಲೂಕಿನ ಗ್ರಾಮಗಳಲ್ಲಿರುವ ಸ್ಮಶಾನದ ಸಮಸ್ಯೆಯನ್ನು ಪರಿಹರಿಸಬೇಕು.

ಈ ಮೇಲಿನ ಸಮಸ್ಯೆಗಳ ಪರಿಹರಿಸುವಿಕೆ ಸೇರಿದಂತೆ ಇನ್ನೂ ಹತ್ತಾರು ಸಮಸ್ಯೆಗಳ ಬಗ್ಗೆ ವಿಚಾರ ಸಂಕಿರಣ ನಡೆಸಿ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ. ಅವುಗಳ ಆಧಾರದ ಮೇಲೆ ಕಾಲ್ನಡಿಗೆ ಜಾತವನ್ನು ಹಮ್ಮಿಕೊಳ್ಳಲಾಗುತ್ತದೆ ಎಂದು ಹೇಳಿದರು.


ಇದನ್ನೂ ಓದಿ: ಕೃಷಿ ಮಸೂದೆ ವಿರೋಧಿಸುವ ರೈತರನ್ನು ಭಯೋತ್ಪಾದಕರು ಎಂದ ನಟಿ ಕಂಗನಾ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...