Homeಕರ್ನಾಟಕರೈತ ವಿರೋಧಿ ಕಾಯ್ದೆ: ಕರ್ನಾಟಕ ರೈತ ಸಂಘ (AIKKS) ವತಿಯಿಂದ ವಿಚಾರ ಸಂಕಿರಣ; ಜಾಥ

ರೈತ ವಿರೋಧಿ ಕಾಯ್ದೆ: ಕರ್ನಾಟಕ ರೈತ ಸಂಘ (AIKKS) ವತಿಯಿಂದ ವಿಚಾರ ಸಂಕಿರಣ; ಜಾಥ

ವಿವಿದ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಈ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಸಂಘದ ರಾಜ್ಯಾಧ್ಯಕ್ಷರಾದ ಡಿ.ಎಚ್‌.ಪೂಜಾರ್ ಹೇಳಿದರು.

- Advertisement -
- Advertisement -

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಾರಿಗೆ ತರಲು ಹೊರಟಿರುವ ಕೃಷಿ ಮತ್ತು ಭೂ ಸುಧಾರಣಾ ಕಾಯ್ದೆಗಳ ಕುರಿತ ವಿಚಾರ ಸಂಕಿರಣವನ್ನು ಕರ್ನಾಟಕ ರೈತ ಸಂಘ (AIKKS), ರಾಯಚೂರು ವತಿಯಿಂದ ನವೆಂಬರ್ 7 ರಂದು ಹಮ್ಮಿಕೊಳ್ಳಲಾಗಿದ್ದು, ನವೆಂಬರ್ 9 ರಂದು ಮಾನ್ವಿ ತಾಲ್ಲೂಕಿನ ತಹಶೀಲ್ದಾರ್ ಕಛೇರಿಗೆ ಕಾಲ್ನಡಿಗೆ- ಚಾಥ ನಡೆಸಲಾಗುತ್ತಿದೆ.

ವಿವಿದ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಈ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ನಾನು ಗೌರಿ.ಕಾಂ ಜೊತೆ ಮಾತನಾಡಿದ ಸಂಘದ ರಾಜ್ಯಾಧ್ಯಕ್ಷರಾದ ಡಿ.ಎಚ್‌.ಪೂಜಾರ್ ಹೇಳಿದರು.

ಇದನ್ನೂ ಓದಿ: ರೈತ ವಿರೋಧಿ ಕಾಯ್ದೆ: SDPI ಪಕ್ಷದಿಂದ ’ಜಾಗೋ ಕಿಸಾನ್’ ಅಭಿಯಾನ ಆರಂಭ

“ಕೇಂದ್ರ ಮತ್ತು ರಾಜ್ಯ ಸರ್ಕಾರ ಅನೇಕ ಕಾಯ್ದೆಗಳಿಗೆ ತಿದ್ದುಪಡಿ ತಂದು ಕೃಷಿ ಕ್ಷೇತ್ರವನ್ನು ಕಾಪೋರೇಟ್ ಕಂಪನಿಗಳಿಗೊಪ್ಪಿಸಿದೆ. ಎಪಿಎಂಸಿ, ಭೂ ಸುಧಾರಣೆ, ಕಾಂಟ್ರಾಕ್ಟ್ ಪಾರ್ಫಿರಿಗ್, ವಿದ್ಯುತ್ ಇತರೆ ಕಾಯ್ದೆಗಳಿಗೆ ತಿದ್ದುಪಡಿ ಮಾಡಿದ್ದರಿಂದ ದೇಶದ ಶೇ 86 ರಷ್ಟು ಸಣ್ಣ ಮಧ್ಯಮ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಲಿದ್ದಾರೆ. ಇಷ್ಟು ಮಾತ್ರವಲ್ಲ ವಿದೇಶಿ ಕಂಪನಿಗಳು ಆಹಾರ ಕ್ಷೇತ್ರದ ಮೇಲೆ ಏಕಸ್ವಾಮ್ಯತೆ ಸಾಧಿಸಲಿವೆ. ರೈತರು-ಇತರೆ ವರ್ಗದ ಜನರು, ಆಹಾರ ಕ್ಷೇತ್ರದ ಮೇಲಿನ ಸಾರ್ವಭೌಮತ್ವ ಕಳೆದುಕೊಳ್ಳಲಿದ್ದಾರೆ. ಮೆಕ್ಕೆ ಜೋಳ, ಸಜ್ಜೆ ಇತರೆ ಬೆಳೆಗಳಿಗೆ ಕಳೆದ ವರ್ಷಕ್ಕಿಂತ ಅರ್ಧದಷ್ಟು ಬೆಲೆ ಕಡಿಮೆಯಾಗಿದೆ. ಇನ್ನು ಮುಂದೆ ಬೆಂಬಲ ಬೆಲೆ ನಿಗದಿ ಮಾಡುವ ಮತ್ತು ಖರೀದಿ ಕೇಂದ್ರ ತೆರೆಯುವ ಜವಾಬ್ದಾರಿಯಿಂದ ಸರ್ಕಾರ ಹಿಂದೆ ಸರಿಯಲಿದೆ. ಈಗಾಗಲೆ ಒಂದು ತಿಂಗಳಿಂದ ಮೆಕ್ಕೆ ಜೋಳ, ಸಜ್ಜೆ ಇತರೆ ಬೆಳೆ ಕಟಾವು ಮಾಡುತ್ತಿದ್ದರೂ ಖರೀದಿ ಕೇಂದ್ರ ತೆರೆದಿಲ್ಲ. ಹಾಗಾಗಿ, ವೈಜ್ಞಾನಿಕ ಬೆಲೆ, ಸ್ವಾಮಿನಾಥನ್ ಆಯೋಗದ ವರದಿ ಜಾರಿ ಮತ್ತು ರೈತ ವಿರೋಧಿ ಕಾಯ್ದೆಗಳನ್ನು ವಾಪಾಸ್ ಪಡೆಯಲು ಒತ್ತಾಯ 250 ಕ್ಕೂ ಸಂಘಟನೆಗಳು ನಿರಂತರವಾಗಿ ಹೋರಾಡುತ್ತಿವೆ. ನವೆಂಬರ್ 26,27.2020 ರಂದು ರಾಷ್ಟ್ರ ಮಟ್ಟದಲ್ಲಿ ಪುನಃ ಹೋರಾಟ ಹಮ್ಮಿಕೊಳ್ಳಲಾಗಿದೆ. ರೈತರು ಮತ್ತು ಪ್ರಜ್ಞಾವಂತ ಜನರು ಆಯಾ ಕ್ಷೇತ್ರದ ಸಂಸದರು, ಶಾಸಕರ ಮೇಲೆ ಒತ್ತಾಯ ಹೇರಬೇಕಾಗಿದೆ. ಹಾಗಾಗಿ ಇದನ್ನು ಹೋರಾಟದ ಭಾಗವಾಗಿ ಹಮ್ಮಿಕೊಳ್ಳಲಾಗಿದೆ” ಎಂದು ಹೇಳಿದರು.

ಇದನ್ನೂ ಓದಿ: ಆರ್‌ಸಿಇಪಿ ಬಿಜೆಪಿ ಸರ್ಕಾರದ ರೈತ ವಿರೋಧಿ ಒಪ್ಪಂದ, ರೈತರಿಗೆ ಮರಣಶಾಸನ: ಸಿದ್ದರಾಮಯ್ಯ

ನಮ್ಮ ಹಕ್ಕೊತ್ತಾಯಗಳು:

  1. ಹೂವಿನಬಾವಿ ಗ್ರಾಮದ ಸ.ನಂ.32,43 ಒಟ್ಟು 605 ಎಕರೆ ಭೂಮಿಯ ಪೈಕಿ 300 ಎಕರೆ ಭೂಮಿಯನ್ನು ಕುರಿ, ಮೇಕೆ, ದನಕರುಗಳನ್ನು ಮೇಯಿಸಲು ಮೀಸಲಿಡಬೇಕು. ಈ ಭೂಮಿಯಲ್ಲಿ ಕಳೆದ 50 ವರ್ಷಗಳಿಂದ ಸಾಗುವಳಿ ಮಾಡುವ ಭೂ ರಹಿತ ಬಡವರಿಗೆ ಪಟ್ಟಾ ಕೊಡಬೇಕು.
  2. ಮದಕಿನಾಳ ಗ್ರಾಮದಲ್ಲಿ ಅನಧಿಕೃತ ಕಲ್ಲು ಗಣಿಗಾರಿಕೆ ನಡೆಸಿರುವ ಸಪ್ತಗಿರಿ ಸ್ಟೋನ್ ಕ್ರಷರ್ ಮಾಲಿಕರ ಮೇಲೆ ಕ್ರಿಮಿನಲ್ ಕೇಸ್ ದಾಖಲಿಸಿ ಮತ್ತು ಗಣಿಗಾರಿಕೆಯನ್ನು ನಿಷೇಧಿಸಬೇಕು.
  3. ಕೃಷ್ಣ 5 ಎ ಮತ್ತು ಬಿ. ಸ್ಕೀಂ ಯೋಜನೆ ಅಡಿಯಲ್ಲಿ ಮಸ್ಕಿ ತಾಲೂಕಿನ ಎಲ್ಲಾ ಹಳ್ಳಿಗಳನ್ನು ಸಂಪೂರ್ಣ ನೀರಾವರಿಗೊಳಪಡಿಸಬೇಕು. ಕನಕನಾಲ ಜಲಾಶಯದ ಆಳು ತೆಗೆದು 14 ಹಳ್ಳಿಗಳ ಭೂಮಿಗೆ ನೀರಾವರಿ ಕಲ್ಪಿಸಬೇಕು.
  4. ತೀವ್ರ ಮಳೆಯಿಂದ ಸೂರ್ಯಕಾಂತಿ, ತೊಗರೆ, ಸಜ್ಜೆ, ಜೋಳ, ಭತ್ತ, ಈರುಳ್ಳಿ ಸೇರಿದಂತೆ ಇತರೆ ಬೆಳೆಗಳು ನಷ್ಟವಾಗಿವೆ: ರೈತರ ಪ್ರತಿ ಎಕರೆ ಭೂಮಿಗೆ 30-50 ಸಾವಿರ ಪರಿಹಾರ ಒದಗಿಸಬೇಕು. ಕುಸಿದು ಬಿದ್ದಿರುವ ಮನೆಗಳನ್ನು ತೀವ್ರಗತಿಯಲ್ಲಿ ಪುನರ್ ನಿರ್ಮಾಣ ಮಾಡಬೇಕು.
  5. ಬಹುಗ್ರಾಮ ಯೋಜನೆ ಅಡಿಯಲ್ಲಿ ತಾಲೂಕಿನ ಎಲ್ಲಾ ಗ್ರಾಮಗಳಿಗೆ ಶುದ್ಧವಾದ ಕುಡಿಯುವ ನೀರು ಒದಗಿಸಬೇಕು.
  6. ಹಲವು ಗ್ರಾಮಗಳಲ್ಲಿ ನಿರ್ಮಾಣಗೊಂಡಿರುವ ಶುದ್ದೀಕರಣ ಘಟಕಗಳು ಅನುಪಯುಕ್ತವಾಗಿವೆ. ಕಳಪೆ ಕಾಮಗಾರಿ ಮತ್ತು ತುಕ್ಕು ಹಿಡಿದಿರುವ ಯಂತ್ರಗಳ ಕುರಿತು ತನಿಖೆ ನಡೆಸಬೇಕು.
  7. ಮಸ್ಕಿ ತಾಲೂಕಿನ ಪಾಮನಕೆಲೂರ, ಕೋಟೆಕಲ್, ಹಾಲಪುರ, ರಾಮಲದಿನ್ನಿ, ಬೋಗಪುರ, ರತ್ನಾಪುರ ಹಟ್ಟಿ, ಗಂಟೆರ ಹಟ್ಟಿ, ವಿರಾಮರ ಇತರೆ ಗ್ರಾಮಗಳಲ್ಲಿ ಸರ್ಕಾರಿ ಭೂಮಿ ಸಾಗುವಳಿ ಮಾಡುವ ರೈತರಿಗೆ ಪಟ್ಟಾ ಒದಗಿಸಬೇಕು. ತಾಲೂಕಿನ ಗ್ರಾಮಗಳಲ್ಲಿರುವ ಸ್ಮಶಾನದ ಸಮಸ್ಯೆಯನ್ನು ಪರಿಹರಿಸಬೇಕು.

ಈ ಮೇಲಿನ ಸಮಸ್ಯೆಗಳ ಪರಿಹರಿಸುವಿಕೆ ಸೇರಿದಂತೆ ಇನ್ನೂ ಹತ್ತಾರು ಸಮಸ್ಯೆಗಳ ಬಗ್ಗೆ ವಿಚಾರ ಸಂಕಿರಣ ನಡೆಸಿ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ. ಅವುಗಳ ಆಧಾರದ ಮೇಲೆ ಕಾಲ್ನಡಿಗೆ ಜಾತವನ್ನು ಹಮ್ಮಿಕೊಳ್ಳಲಾಗುತ್ತದೆ ಎಂದು ಹೇಳಿದರು.


ಇದನ್ನೂ ಓದಿ: ಕೃಷಿ ಮಸೂದೆ ವಿರೋಧಿಸುವ ರೈತರನ್ನು ಭಯೋತ್ಪಾದಕರು ಎಂದ ನಟಿ ಕಂಗನಾ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...