Homeಮುಖಪುಟರೈತ ವಿರೋಧಿ ಟ್ವೀಟ್: ಬಿಜೆಪಿ ಸಂಸದೆ ಕಂಗನಾ ರಣಾವತ್‌ಗೆ ಸುಪ್ರೀಂ ಕೋರ್ಟ್ ತರಾಟೆ; ಪ್ರಕರಣ ರದ್ದತಿಗೆ...

ರೈತ ವಿರೋಧಿ ಟ್ವೀಟ್: ಬಿಜೆಪಿ ಸಂಸದೆ ಕಂಗನಾ ರಣಾವತ್‌ಗೆ ಸುಪ್ರೀಂ ಕೋರ್ಟ್ ತರಾಟೆ; ಪ್ರಕರಣ ರದ್ದತಿಗೆ ನಕಾರ

- Advertisement -
- Advertisement -

ಕೃಷಿ ಕಾಯ್ದೆಗಳನ್ನು ವಿರೋಧಿಸಿ 2021ರಲ್ಲಿ ರೈತರು ನಡೆಸುತ್ತಿದ್ದ ಪ್ರತಿಭಟನೆಯಲ್ಲಿ ಮಹಿಳೆಯೊಬ್ಬರು ಭಾಗವಹಿಸಿದ್ದರ ಬಗ್ಗೆ ವಿವಾದಾತ್ಮಕ ಟ್ವೀಟ್‌ ಮಾಡಿದ್ದಕ್ಕೆ ಸಂಬಂಧಿಸಿದಂತೆ ತನ್ನ ವಿರುದ್ದ ದಾಖಲಾಗಿರುವ ಮಾನಹಾನಿ ಮೊಕದ್ದಮೆ ರದ್ದುಗೊಳಿಸುವಂತೆ ಕೋರಿ ನಟಿ ಹಾಗೂ ಸಂಸದೆ ಕಂಗನಾ ರಣಾವತ್ ಅವರು ಸಲ್ಲಿಸಿದ್ದ ಅರ್ಜಿಯನ್ನು ಆಲಿಸಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ.

“ನಿಮ್ಮ ಹೇಳಿಕೆ ಬಗ್ಗೆ ನಿಮ್ಮ ಅಭಿಪ್ರಾಯ ಏನು? ನೀವು ಮಸಾಲೆ ಸೇರಿಸಿದ್ದೀರಿ, ಇದು ಸರಳವಾದ ಮರುಟ್ವೀಟ್ ಆಗಿರಲಿಲ್ಲ” ಎಂದ ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರಿದ್ದ ಪೀಠ, ಇಂತಹ ವಿಚಾರಗಳ ಕುರಿತು ವಿಚಾರಣಾ ನ್ಯಾಯಾಲಯವೇ ತೀರ್ಮಾನ ತೆಗೆದುಕೊಳ್ಳಬೇಕು ತಾನಲ್ಲ‌” ಎಂದಿದೆ.

ಪಂಜಾಬ್‌ನ ಭಟಿಂಡಾ ಜಿಲ್ಲೆಯ 73 ವರ್ಷದ ಮಹಿಂದರ್ ಕೌರ್ ಅವರು ಕಂಗನಾ ವಿರುದ್ಧ ಪ್ರಕರಣ ದಾಖಲಿಸಿದ್ದು, ಕಂಗನಾ ಅವರು, 2019ರಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ದೆಹಲಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ “ಶಾಹೀನ್ ಬಾಗ್ ದಾದಿ ಬಿಲ್ಕಿಸ್” ಎಂದು ತಪ್ಪಾಗಿ ಗುರುತಿಸುವ ಮೂಲಕ ಟ್ವೀಟ್‌ನಲ್ಲಿ ನನ್ನನ್ನು ಅವಮಾನಿಸಿದ್ದಾರೆ ಎಂದು ಆರೋಪಿಸಿದ್ದಾರೆ.

“ಪ್ರಭಾವಿ ಅಜ್ಜಿ ಎಂದು ಟೈಮ್‌ ಮ್ಯಾಗಝಿನ್‌ನಲ್ಲಿ ಪ್ರಸಿದ್ಧರಾಗಿದ್ದವರು ಈಗ 100 ರೂಪಾಯಿಗೆ ಸಿಗುತ್ತಿದ್ದಾರೆ. ಭಾರತದ ಅಂತಾರಾಷ್ಟ್ರೀಯ ಸಾರ್ವಜನಿಕ ರಾಯಭಾರಿಯನ್ನು (ಅಜ್ಜಿ) ಪಾಕಿಸ್ತಾನದ ಪತ್ರಕರ್ತರು ಮುಜುಗರ ಉಂಟುಮಾಡುವ ರೀತಿಯಲ್ಲಿ ಅಪಹರಿಸಿದ್ದಾರೆ. ಅಂತಾರಾಷ್ಟ್ರೀಯವಾಗಿ ನಮ್ಮ ಪರ ಮಾತನಾಡಲು ನಮ್ಮದೇ ಜನರು ಬೇಕು” ಎಂದು ಅವರು ಕಂಗನಾ ಟ್ವೀಟ್‌ ಮಾಡಿದ್ದರು.

ನ್ಯಾಯಾಲಯಕ್ಕೆ ಹಾಜರಾಗಿದ್ದ ಕಂಗನಾ ಪರ ವಕೀಲ, “ಅವರು (ಕಂಗನಾ) ಇನ್ನೊಬ್ಬರು ವ್ಯಕ್ತಿಯ ಪೋಸ್ಟ್ ಅನ್ನು ಮರುಟ್ವೀಟ್ ಮಾತ್ರ ಮಾಡಿದ್ದಾರೆ. ಮೂಲ ಟ್ವೀಟ್ ಮಾಡಿದ ವ್ಯಕ್ತಿಗೆ ಸಮನ್ಸ್ ನೀಡಲಾಗಿಲ್ಲ” ಎಂದು ವಾದಿಸಿದ್ದಾರೆ.

ಅಲ್ಲದೆ, ಕಂಗನಾ ಮಾತನಾಡಿದ್ದು ಮಹಿಂದರ್ ಕೌರ್‌ ಅವರ ಬಗ್ಗೆ ಅಲ್ಲ, ಬದಲಿಗೆ ಶಾಹೀನ್‌ ಬಾಗ್‌ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಬಿಲ್ಕಿಸ್‌ ಬಾನು ಎಂಬವರ ಬಗ್ಗೆ. ಈ ಕುರಿತು ಕಂಗನಾ ಸ್ಪಷ್ಟೀಕರಣ ನೀಡಿದ್ದು ಅದನ್ನು ಪರಿಗಣಿಸಿಲ್ಲ ಎಂದು ಹೇಳಿದ್ದಾರೆ.

ಆದರೆ, ಇದರಿಂದ ತೃಪ್ತವಾಗದ ನ್ಯಾಯಾಲಯ ರಣಾವತ್ ಅವರ ಟ್ವೀಟ್‌ಗಳ ಬಗ್ಗೆ ಪ್ರತಿಕ್ರಿಯಿಸಲು ಇಚ್ಛಿಸಲಿಲ್ಲ.

“ಸಾಕ್ಷ್ಯ ಸ್ವೀಕಾರಾರ್ಹವಲ್ಲದ ಕಾರಣ ದೂರನ್ನು (ವಿಚಾರಣಾ ನ್ಯಾಯಾಲಯ) ವಜಾಗೊಳಿಸಬಹುದು. ನಿಮ್ಮ ಟ್ವೀಟ್ ಬಗ್ಗೆ ಹೇಳಿಕೆ ನೀಡುವಂತೆ ನಮ್ಮನ್ನು ಕೇಳಬೇಡಿ. ಇದು ನಿಮ್ಮ ವಿಚಾರಣೆಗೆ ಅಡ್ಡಿಪಡಿಸಬಹುದು. ನೀವು ಅರ್ಜಿ ಹಿಂತೆಗೆದುಕೊಳ್ಳಿ. ಹಿಂತೆಗೆದುಕೊಳ್ಳಲು ಬಯಸುತ್ತೀರಾ? ” ಎಂದು ನ್ಯಾಯಾಲಯ ಕೇಳಿದೆ. ಆ ನಂತರ ಕಂಗನಾ ಪರ ವಕೀಲರು ಅರ್ಜಿ ಹಿಂಪಡೆಯಲು ನಿರ್ಧರಿಸಿದರು. ಹಾಗಾಗಿ, ನ್ಯಾಯಾಲಯ ಕೂಡ ಅರ್ಜಿಯನ್ನು ವಜಾಗೊಳಿಸಿತು ಎಂದು ಬಾರ್ & ಬೆಂಚ್ ವರದಿ ಮಾಡಿದೆ.

ಪ್ರಕರಣ ಸಂಬಂಧ ಫೆಬ್ರವರಿ 2022ರಲ್ಲಿ ಭಟಿಂಡಾ ಮ್ಯಾಜಿಸ್ಟ್ರೇಟ್ ಜಾರಿ ಮಾಡಿದ್ದ ಸಮನ್ಸ್ ಪ್ರಶ್ನಿಸಿ ಕಂಗನಾ ಸಲ್ಲಿಸಿದ್ದ ಅರ್ಜಿಯನ್ನು ಕಳೆದ ತಿಂಗಳು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ವಜಾಗೊಳಿಸಿತ್ತು.

‘ಸಂಘರ್ಷ ಶಮನಕ್ಕೆ ಯಾವುದೇ ಪರಿಹಾರ ತಿಳಿಸಿಲ್ಲ’: ಮಣಿಪುರದಲ್ಲಿ ಪ್ರಧಾನಿ ಮೋದಿ ಭಾಷಣದ ಬಗ್ಗೆ ಸ್ಥಳೀಯರ ಅಸಮಾಧಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...