Homeಮುಖಪುಟರೈತ ವಿರೋಧಿ ಟ್ವೀಟ್: ಬಿಜೆಪಿ ಸಂಸದೆ ಕಂಗನಾ ರಣಾವತ್‌ಗೆ ಸುಪ್ರೀಂ ಕೋರ್ಟ್ ತರಾಟೆ; ಪ್ರಕರಣ ರದ್ದತಿಗೆ...

ರೈತ ವಿರೋಧಿ ಟ್ವೀಟ್: ಬಿಜೆಪಿ ಸಂಸದೆ ಕಂಗನಾ ರಣಾವತ್‌ಗೆ ಸುಪ್ರೀಂ ಕೋರ್ಟ್ ತರಾಟೆ; ಪ್ರಕರಣ ರದ್ದತಿಗೆ ನಕಾರ

- Advertisement -
- Advertisement -

ಕೃಷಿ ಕಾಯ್ದೆಗಳನ್ನು ವಿರೋಧಿಸಿ 2021ರಲ್ಲಿ ರೈತರು ನಡೆಸುತ್ತಿದ್ದ ಪ್ರತಿಭಟನೆಯಲ್ಲಿ ಮಹಿಳೆಯೊಬ್ಬರು ಭಾಗವಹಿಸಿದ್ದರ ಬಗ್ಗೆ ವಿವಾದಾತ್ಮಕ ಟ್ವೀಟ್‌ ಮಾಡಿದ್ದಕ್ಕೆ ಸಂಬಂಧಿಸಿದಂತೆ ತನ್ನ ವಿರುದ್ದ ದಾಖಲಾಗಿರುವ ಮಾನಹಾನಿ ಮೊಕದ್ದಮೆ ರದ್ದುಗೊಳಿಸುವಂತೆ ಕೋರಿ ನಟಿ ಹಾಗೂ ಸಂಸದೆ ಕಂಗನಾ ರಣಾವತ್ ಅವರು ಸಲ್ಲಿಸಿದ್ದ ಅರ್ಜಿಯನ್ನು ಆಲಿಸಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ.

“ನಿಮ್ಮ ಹೇಳಿಕೆ ಬಗ್ಗೆ ನಿಮ್ಮ ಅಭಿಪ್ರಾಯ ಏನು? ನೀವು ಮಸಾಲೆ ಸೇರಿಸಿದ್ದೀರಿ, ಇದು ಸರಳವಾದ ಮರುಟ್ವೀಟ್ ಆಗಿರಲಿಲ್ಲ” ಎಂದ ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರಿದ್ದ ಪೀಠ, ಇಂತಹ ವಿಚಾರಗಳ ಕುರಿತು ವಿಚಾರಣಾ ನ್ಯಾಯಾಲಯವೇ ತೀರ್ಮಾನ ತೆಗೆದುಕೊಳ್ಳಬೇಕು ತಾನಲ್ಲ‌” ಎಂದಿದೆ.

ಪಂಜಾಬ್‌ನ ಭಟಿಂಡಾ ಜಿಲ್ಲೆಯ 73 ವರ್ಷದ ಮಹಿಂದರ್ ಕೌರ್ ಅವರು ಕಂಗನಾ ವಿರುದ್ಧ ಪ್ರಕರಣ ದಾಖಲಿಸಿದ್ದು, ಕಂಗನಾ ಅವರು, 2019ರಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ದೆಹಲಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ “ಶಾಹೀನ್ ಬಾಗ್ ದಾದಿ ಬಿಲ್ಕಿಸ್” ಎಂದು ತಪ್ಪಾಗಿ ಗುರುತಿಸುವ ಮೂಲಕ ಟ್ವೀಟ್‌ನಲ್ಲಿ ನನ್ನನ್ನು ಅವಮಾನಿಸಿದ್ದಾರೆ ಎಂದು ಆರೋಪಿಸಿದ್ದಾರೆ.

“ಪ್ರಭಾವಿ ಅಜ್ಜಿ ಎಂದು ಟೈಮ್‌ ಮ್ಯಾಗಝಿನ್‌ನಲ್ಲಿ ಪ್ರಸಿದ್ಧರಾಗಿದ್ದವರು ಈಗ 100 ರೂಪಾಯಿಗೆ ಸಿಗುತ್ತಿದ್ದಾರೆ. ಭಾರತದ ಅಂತಾರಾಷ್ಟ್ರೀಯ ಸಾರ್ವಜನಿಕ ರಾಯಭಾರಿಯನ್ನು (ಅಜ್ಜಿ) ಪಾಕಿಸ್ತಾನದ ಪತ್ರಕರ್ತರು ಮುಜುಗರ ಉಂಟುಮಾಡುವ ರೀತಿಯಲ್ಲಿ ಅಪಹರಿಸಿದ್ದಾರೆ. ಅಂತಾರಾಷ್ಟ್ರೀಯವಾಗಿ ನಮ್ಮ ಪರ ಮಾತನಾಡಲು ನಮ್ಮದೇ ಜನರು ಬೇಕು” ಎಂದು ಅವರು ಕಂಗನಾ ಟ್ವೀಟ್‌ ಮಾಡಿದ್ದರು.

ನ್ಯಾಯಾಲಯಕ್ಕೆ ಹಾಜರಾಗಿದ್ದ ಕಂಗನಾ ಪರ ವಕೀಲ, “ಅವರು (ಕಂಗನಾ) ಇನ್ನೊಬ್ಬರು ವ್ಯಕ್ತಿಯ ಪೋಸ್ಟ್ ಅನ್ನು ಮರುಟ್ವೀಟ್ ಮಾತ್ರ ಮಾಡಿದ್ದಾರೆ. ಮೂಲ ಟ್ವೀಟ್ ಮಾಡಿದ ವ್ಯಕ್ತಿಗೆ ಸಮನ್ಸ್ ನೀಡಲಾಗಿಲ್ಲ” ಎಂದು ವಾದಿಸಿದ್ದಾರೆ.

ಅಲ್ಲದೆ, ಕಂಗನಾ ಮಾತನಾಡಿದ್ದು ಮಹಿಂದರ್ ಕೌರ್‌ ಅವರ ಬಗ್ಗೆ ಅಲ್ಲ, ಬದಲಿಗೆ ಶಾಹೀನ್‌ ಬಾಗ್‌ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಬಿಲ್ಕಿಸ್‌ ಬಾನು ಎಂಬವರ ಬಗ್ಗೆ. ಈ ಕುರಿತು ಕಂಗನಾ ಸ್ಪಷ್ಟೀಕರಣ ನೀಡಿದ್ದು ಅದನ್ನು ಪರಿಗಣಿಸಿಲ್ಲ ಎಂದು ಹೇಳಿದ್ದಾರೆ.

ಆದರೆ, ಇದರಿಂದ ತೃಪ್ತವಾಗದ ನ್ಯಾಯಾಲಯ ರಣಾವತ್ ಅವರ ಟ್ವೀಟ್‌ಗಳ ಬಗ್ಗೆ ಪ್ರತಿಕ್ರಿಯಿಸಲು ಇಚ್ಛಿಸಲಿಲ್ಲ.

“ಸಾಕ್ಷ್ಯ ಸ್ವೀಕಾರಾರ್ಹವಲ್ಲದ ಕಾರಣ ದೂರನ್ನು (ವಿಚಾರಣಾ ನ್ಯಾಯಾಲಯ) ವಜಾಗೊಳಿಸಬಹುದು. ನಿಮ್ಮ ಟ್ವೀಟ್ ಬಗ್ಗೆ ಹೇಳಿಕೆ ನೀಡುವಂತೆ ನಮ್ಮನ್ನು ಕೇಳಬೇಡಿ. ಇದು ನಿಮ್ಮ ವಿಚಾರಣೆಗೆ ಅಡ್ಡಿಪಡಿಸಬಹುದು. ನೀವು ಅರ್ಜಿ ಹಿಂತೆಗೆದುಕೊಳ್ಳಿ. ಹಿಂತೆಗೆದುಕೊಳ್ಳಲು ಬಯಸುತ್ತೀರಾ? ” ಎಂದು ನ್ಯಾಯಾಲಯ ಕೇಳಿದೆ. ಆ ನಂತರ ಕಂಗನಾ ಪರ ವಕೀಲರು ಅರ್ಜಿ ಹಿಂಪಡೆಯಲು ನಿರ್ಧರಿಸಿದರು. ಹಾಗಾಗಿ, ನ್ಯಾಯಾಲಯ ಕೂಡ ಅರ್ಜಿಯನ್ನು ವಜಾಗೊಳಿಸಿತು ಎಂದು ಬಾರ್ & ಬೆಂಚ್ ವರದಿ ಮಾಡಿದೆ.

ಪ್ರಕರಣ ಸಂಬಂಧ ಫೆಬ್ರವರಿ 2022ರಲ್ಲಿ ಭಟಿಂಡಾ ಮ್ಯಾಜಿಸ್ಟ್ರೇಟ್ ಜಾರಿ ಮಾಡಿದ್ದ ಸಮನ್ಸ್ ಪ್ರಶ್ನಿಸಿ ಕಂಗನಾ ಸಲ್ಲಿಸಿದ್ದ ಅರ್ಜಿಯನ್ನು ಕಳೆದ ತಿಂಗಳು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ವಜಾಗೊಳಿಸಿತ್ತು.

‘ಸಂಘರ್ಷ ಶಮನಕ್ಕೆ ಯಾವುದೇ ಪರಿಹಾರ ತಿಳಿಸಿಲ್ಲ’: ಮಣಿಪುರದಲ್ಲಿ ಪ್ರಧಾನಿ ಮೋದಿ ಭಾಷಣದ ಬಗ್ಗೆ ಸ್ಥಳೀಯರ ಅಸಮಾಧಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...