Homeಮುಖಪುಟರೈತ ವಿರೋಧಿ ಟ್ವೀಟ್: ಬಿಜೆಪಿ ಸಂಸದೆ ಕಂಗನಾ ರಣಾವತ್‌ಗೆ ಸುಪ್ರೀಂ ಕೋರ್ಟ್ ತರಾಟೆ; ಪ್ರಕರಣ ರದ್ದತಿಗೆ...

ರೈತ ವಿರೋಧಿ ಟ್ವೀಟ್: ಬಿಜೆಪಿ ಸಂಸದೆ ಕಂಗನಾ ರಣಾವತ್‌ಗೆ ಸುಪ್ರೀಂ ಕೋರ್ಟ್ ತರಾಟೆ; ಪ್ರಕರಣ ರದ್ದತಿಗೆ ನಕಾರ

- Advertisement -
- Advertisement -

ಕೃಷಿ ಕಾಯ್ದೆಗಳನ್ನು ವಿರೋಧಿಸಿ 2021ರಲ್ಲಿ ರೈತರು ನಡೆಸುತ್ತಿದ್ದ ಪ್ರತಿಭಟನೆಯಲ್ಲಿ ಮಹಿಳೆಯೊಬ್ಬರು ಭಾಗವಹಿಸಿದ್ದರ ಬಗ್ಗೆ ವಿವಾದಾತ್ಮಕ ಟ್ವೀಟ್‌ ಮಾಡಿದ್ದಕ್ಕೆ ಸಂಬಂಧಿಸಿದಂತೆ ತನ್ನ ವಿರುದ್ದ ದಾಖಲಾಗಿರುವ ಮಾನಹಾನಿ ಮೊಕದ್ದಮೆ ರದ್ದುಗೊಳಿಸುವಂತೆ ಕೋರಿ ನಟಿ ಹಾಗೂ ಸಂಸದೆ ಕಂಗನಾ ರಣಾವತ್ ಅವರು ಸಲ್ಲಿಸಿದ್ದ ಅರ್ಜಿಯನ್ನು ಆಲಿಸಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ.

“ನಿಮ್ಮ ಹೇಳಿಕೆ ಬಗ್ಗೆ ನಿಮ್ಮ ಅಭಿಪ್ರಾಯ ಏನು? ನೀವು ಮಸಾಲೆ ಸೇರಿಸಿದ್ದೀರಿ, ಇದು ಸರಳವಾದ ಮರುಟ್ವೀಟ್ ಆಗಿರಲಿಲ್ಲ” ಎಂದ ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರಿದ್ದ ಪೀಠ, ಇಂತಹ ವಿಚಾರಗಳ ಕುರಿತು ವಿಚಾರಣಾ ನ್ಯಾಯಾಲಯವೇ ತೀರ್ಮಾನ ತೆಗೆದುಕೊಳ್ಳಬೇಕು ತಾನಲ್ಲ‌” ಎಂದಿದೆ.

ಪಂಜಾಬ್‌ನ ಭಟಿಂಡಾ ಜಿಲ್ಲೆಯ 73 ವರ್ಷದ ಮಹಿಂದರ್ ಕೌರ್ ಅವರು ಕಂಗನಾ ವಿರುದ್ಧ ಪ್ರಕರಣ ದಾಖಲಿಸಿದ್ದು, ಕಂಗನಾ ಅವರು, 2019ರಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ದೆಹಲಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ “ಶಾಹೀನ್ ಬಾಗ್ ದಾದಿ ಬಿಲ್ಕಿಸ್” ಎಂದು ತಪ್ಪಾಗಿ ಗುರುತಿಸುವ ಮೂಲಕ ಟ್ವೀಟ್‌ನಲ್ಲಿ ನನ್ನನ್ನು ಅವಮಾನಿಸಿದ್ದಾರೆ ಎಂದು ಆರೋಪಿಸಿದ್ದಾರೆ.

“ಪ್ರಭಾವಿ ಅಜ್ಜಿ ಎಂದು ಟೈಮ್‌ ಮ್ಯಾಗಝಿನ್‌ನಲ್ಲಿ ಪ್ರಸಿದ್ಧರಾಗಿದ್ದವರು ಈಗ 100 ರೂಪಾಯಿಗೆ ಸಿಗುತ್ತಿದ್ದಾರೆ. ಭಾರತದ ಅಂತಾರಾಷ್ಟ್ರೀಯ ಸಾರ್ವಜನಿಕ ರಾಯಭಾರಿಯನ್ನು (ಅಜ್ಜಿ) ಪಾಕಿಸ್ತಾನದ ಪತ್ರಕರ್ತರು ಮುಜುಗರ ಉಂಟುಮಾಡುವ ರೀತಿಯಲ್ಲಿ ಅಪಹರಿಸಿದ್ದಾರೆ. ಅಂತಾರಾಷ್ಟ್ರೀಯವಾಗಿ ನಮ್ಮ ಪರ ಮಾತನಾಡಲು ನಮ್ಮದೇ ಜನರು ಬೇಕು” ಎಂದು ಅವರು ಕಂಗನಾ ಟ್ವೀಟ್‌ ಮಾಡಿದ್ದರು.

ನ್ಯಾಯಾಲಯಕ್ಕೆ ಹಾಜರಾಗಿದ್ದ ಕಂಗನಾ ಪರ ವಕೀಲ, “ಅವರು (ಕಂಗನಾ) ಇನ್ನೊಬ್ಬರು ವ್ಯಕ್ತಿಯ ಪೋಸ್ಟ್ ಅನ್ನು ಮರುಟ್ವೀಟ್ ಮಾತ್ರ ಮಾಡಿದ್ದಾರೆ. ಮೂಲ ಟ್ವೀಟ್ ಮಾಡಿದ ವ್ಯಕ್ತಿಗೆ ಸಮನ್ಸ್ ನೀಡಲಾಗಿಲ್ಲ” ಎಂದು ವಾದಿಸಿದ್ದಾರೆ.

ಅಲ್ಲದೆ, ಕಂಗನಾ ಮಾತನಾಡಿದ್ದು ಮಹಿಂದರ್ ಕೌರ್‌ ಅವರ ಬಗ್ಗೆ ಅಲ್ಲ, ಬದಲಿಗೆ ಶಾಹೀನ್‌ ಬಾಗ್‌ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಬಿಲ್ಕಿಸ್‌ ಬಾನು ಎಂಬವರ ಬಗ್ಗೆ. ಈ ಕುರಿತು ಕಂಗನಾ ಸ್ಪಷ್ಟೀಕರಣ ನೀಡಿದ್ದು ಅದನ್ನು ಪರಿಗಣಿಸಿಲ್ಲ ಎಂದು ಹೇಳಿದ್ದಾರೆ.

ಆದರೆ, ಇದರಿಂದ ತೃಪ್ತವಾಗದ ನ್ಯಾಯಾಲಯ ರಣಾವತ್ ಅವರ ಟ್ವೀಟ್‌ಗಳ ಬಗ್ಗೆ ಪ್ರತಿಕ್ರಿಯಿಸಲು ಇಚ್ಛಿಸಲಿಲ್ಲ.

“ಸಾಕ್ಷ್ಯ ಸ್ವೀಕಾರಾರ್ಹವಲ್ಲದ ಕಾರಣ ದೂರನ್ನು (ವಿಚಾರಣಾ ನ್ಯಾಯಾಲಯ) ವಜಾಗೊಳಿಸಬಹುದು. ನಿಮ್ಮ ಟ್ವೀಟ್ ಬಗ್ಗೆ ಹೇಳಿಕೆ ನೀಡುವಂತೆ ನಮ್ಮನ್ನು ಕೇಳಬೇಡಿ. ಇದು ನಿಮ್ಮ ವಿಚಾರಣೆಗೆ ಅಡ್ಡಿಪಡಿಸಬಹುದು. ನೀವು ಅರ್ಜಿ ಹಿಂತೆಗೆದುಕೊಳ್ಳಿ. ಹಿಂತೆಗೆದುಕೊಳ್ಳಲು ಬಯಸುತ್ತೀರಾ? ” ಎಂದು ನ್ಯಾಯಾಲಯ ಕೇಳಿದೆ. ಆ ನಂತರ ಕಂಗನಾ ಪರ ವಕೀಲರು ಅರ್ಜಿ ಹಿಂಪಡೆಯಲು ನಿರ್ಧರಿಸಿದರು. ಹಾಗಾಗಿ, ನ್ಯಾಯಾಲಯ ಕೂಡ ಅರ್ಜಿಯನ್ನು ವಜಾಗೊಳಿಸಿತು ಎಂದು ಬಾರ್ & ಬೆಂಚ್ ವರದಿ ಮಾಡಿದೆ.

ಪ್ರಕರಣ ಸಂಬಂಧ ಫೆಬ್ರವರಿ 2022ರಲ್ಲಿ ಭಟಿಂಡಾ ಮ್ಯಾಜಿಸ್ಟ್ರೇಟ್ ಜಾರಿ ಮಾಡಿದ್ದ ಸಮನ್ಸ್ ಪ್ರಶ್ನಿಸಿ ಕಂಗನಾ ಸಲ್ಲಿಸಿದ್ದ ಅರ್ಜಿಯನ್ನು ಕಳೆದ ತಿಂಗಳು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ವಜಾಗೊಳಿಸಿತ್ತು.

‘ಸಂಘರ್ಷ ಶಮನಕ್ಕೆ ಯಾವುದೇ ಪರಿಹಾರ ತಿಳಿಸಿಲ್ಲ’: ಮಣಿಪುರದಲ್ಲಿ ಪ್ರಧಾನಿ ಮೋದಿ ಭಾಷಣದ ಬಗ್ಗೆ ಸ್ಥಳೀಯರ ಅಸಮಾಧಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...