Homeಚಳವಳಿಕೃಷಿ ನೀತಿ ವಿರೋಧಿ ಹೋರಾಟ: ಪೆರುವಿನ ರೈತರ ಹೋರಾಟಕ್ಕೆ ಜಯ

ಕೃಷಿ ನೀತಿ ವಿರೋಧಿ ಹೋರಾಟ: ಪೆರುವಿನ ರೈತರ ಹೋರಾಟಕ್ಕೆ ಜಯ

ಅಧ್ಯಕ್ಷ ಫ್ರಾನ್ಸಿಸ್ಕೊ ಸಗಾಟಿ ಸರ್ಕಾರದ ಮುಂದೆ ಕಾಯ್ದೆ ಹಿಂಪಡೆಯುವ ಪ್ರಸ್ತಾವನೆಯನ್ನು ಇಟ್ಟು ಬಹುಮತದ ಮೇರೆಗೆ ಅವುಗಳನ್ನು ಹಿಂಪಡೆಯಲಾಗಿದೆ.

- Advertisement -
- Advertisement -

ನಮ್ಮಿಂದ ಸಾಧ್ಯವಾಯಿತು! ಹೀಗೆ ಒಕ್ಕೊರಲನಿಂದ ಉದ್ಗಾರ ತೆಗೆದಿದ್ದು ಪೆರುವಿನ ಕೃಷಿಕರು.
ಡಿಸೆಂಬರ್‌ ತಿಂಗಳಲ್ಲಿ ಪೆರುವಿನ ಸರ್ಕಾರ ಕಾರ್ಪೊರೇಟ್‌ ವಲಯಕ್ಕೆ ಅನುಕೂಲವಾಗುವಂತಹ ಕಾಯ್ದೆಗಳನ್ನು ಜಾರಿಗೆ ತಂದಿತ್ತು. ಅದನ್ನು ಅಲ್ಲಿನ ರೈತರು ದಿಟ್ಟ ಹೋರಾಟದ ಮೂಲಕ ಹಿಮ್ಮೆಟ್ಟಿಸಿದ್ದಾರೆ. ರೈತರ ಹೋರಾಟಕ್ಕೆ ತಲೆಬಾಗಿದ ಸರ್ಕಾರ ಆ ನೀತಿಗಳನ್ನು ಹಿಂಪಡೆದಿದೆ.

ಪೆರು ಸರ್ಕಾರ ಜಾರಿಗೆ ತಂದಿದ್ದ ಕಾಯ್ದೆಗಳು ಕಾರ್ಪೊರೇಟ್‌ ಸಂಸ್ಥೆಗಳಿಗೆ ಶೇ. 15ರಷ್ಟು ತೆರಿಗೆ ವಿನಾಯಿತಿ ನೀಡಿತ್ತು. ಜೊತೆಗೆ ಕೃಷಿ ಉತ್ಪನ್ನಗಳ ರಫ್ತಿಗೆ ಹೆಚ್ಚಿನ ಸ್ವಾತಂತ್ರ್ಯ ನೀಡಿತ್ತು. ಈ ಕಾಯ್ದೆಗಳಿಂದ ಕೃಷಿ ಕೂಲಿಗೆ ಕತ್ತರಿ ಹಾಕಿತ್ತು.

ಆಕ್ರೋಶಗೊಂಡ ರೈತರು ಈಗಾಗಲೇ ದುಸ್ಥಿತಿಯಲ್ಲಿರುವ ನಮ್ಮ ಪರಿಸ್ಥಿತಿ ಇನ್ನಷ್ಟು ಹದಗೆಡಲಿದೆ ಎಂದು ಪ್ರತಿಭಟನೆ ಆರಂಭಿಸಿದ್ದರು. ದಕ್ಷಿಣಾ ಲಿಮಾ- ಅಮೆರಿಕದ ಹೆದ್ದಾರಿಯನ್ನು 300ಕಿ.ಮೀ. ಉದ್ದಕ್ಕೂ ತಡೆಹಿಡಿದಿದ್ದರು.

ಸರ್ಕಾರ ಪ್ರತಿಭಟನಾ ನಿರತ ರೈತರೊಂದಿಗೆ ಮಾತುಕತೆಯ ಮೂಲಕ ಸಂಧಾನ ಸೂತ್ರವನ್ನು ಕಂಡುಕೊಳ್ಳುವ ಪ್ರಯತ್ನ ನಡೆಸಿತ್ತಾದರೂ ಅದು ಫಲಕೊಡಲಿಲ್ಲ.

ಭಾರತದ ಹೋರಾಟವನ್ನು ನೆನಪಿಸುವಂತೆ ಅಲ್ಲೂ ಸಾವಿರಾರು ಸಂಖ್ಯೆಯಲ್ಲಿ ರೈತರು ಹೋರಾಟದಲ್ಲಿ ಪಾಲ್ಗೊಂಡರು. ಹೆದ್ದಾರಿಯಲ್ಲಿ 2000ಕ್ಕೂ ಹೆಚ್ಚು ಲಾರಿಗಳು, ಬಸ್‌ಗಳು ನಿಂತಿದ್ದವು.

ಕೃಷಿ ಕೂಲಿ ಹೆಚ್ಚಿಸುವುದು ಮತ್ತು ಹೊಸ ಕಾಯ್ದೆಯನ್ನು ಹಿಂಪಡೆಯುವುದು ಮುಖ್ಯ ಬೇಡಿಕೆಯಾಗಿತ್ತು. ಈ ಬೇಡಿಕೆ ಈಡೇರದೆ ಪ್ರತಿಭಟನೆ ನಿಲ್ಲಿಸುವಂತೆ ಮಾತೇ ಇಲ್ಲ ಎಂದು ರೈತರು ಪಟ್ಟು ಹಿಡಿದಿದ್ದರು.

ಕೊನೆಗೂ ರೈತ ಹೋರಾಟಕ್ಕೆ ಮಣಿದ ಸರ್ಕಾರ ಕೃಷಿ ಕಾಯ್ದೆಯನ್ನು ಹಿಂಪಡೆದಿದೆ. ಅಧ್ಯಕ್ಷ ಫ್ರಾನ್ಸಿಸ್ಕೊ ಸಗಾಟಿ ಸರ್ಕಾರದ ಮುಂದೆ ಕಾಯ್ದೆ ಹಿಂಪಡೆಯುವ ಪ್ರಸ್ತಾವನೆಯನ್ನು ಇಟ್ಟು ಬಹುಮತದ ಮೇರೆಗೆ ಅವುಗಳನ್ನು ಹಿಂಪಡೆಯಲಾಗಿದೆ.

ಕಾರ್ಪೊರೇಟ್‌ ಸಂಸ್ಥೆಗಳು ಕೃಷಿ ವಲಯದ ಮೇಲೆ ಹಿಡಿತ ಸಾಧಿಸುವ ಪ್ರಯತ್ನಕ್ಕೆ ಹಿನ್ನಡೆ ಉಂಟು ಮಾಡಿದ ಈ ಹೋರಾಟ, ಭಾರತದ ರೈತ ಹೋರಾಟಕ್ಕೆ ಉತ್ಸಾಹ ನೀಡಿದೆ ಎಂದು ದೆಹಲಿ ಗಡಿಯಲ್ಲಿರುವ ಪ್ರತಿಭಟನಾ ನಿರತ ರೈತರು ಹೇಳುತ್ತಾರೆ.

ದೆಹಲಿಯಲ್ಲಿಯೂ ಕೇಂದ್ರದ ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ವಿರೋಧಿಸಿ ನಡೆಸುತ್ತಿರುವ ರೈತರ ದಿಟ್ಟ ಹೋರಾಟ 55ನೇ ದಿನಕ್ಕೆ ಕಾಲಿಟ್ಟಿದೆ. ಹೋರಾಟ ತೀವ್ರಗೊಳಿಸಲು ಜನವರಿ 26ರ ಗಣರಾಜ್ಯೋತ್ಸವದಂದು ದೆಹಲಿಯಲ್ಲಿ ಟ್ರಾಕ್ಟರ್ ಪೆರೇಡ್ ನಡೆಸಲು ತೀರ್ಮಾನಿಸಿದ್ದಾರೆ.


ಇದನ್ನೂ ಓದಿ: ಟ್ರಾಕ್ಟರ್ ರ್ಯಾಲಿ ತಡೆಯುವಂತೆ PIL: ಕಾನೂನಿನಡಿ ಇರುವ ಎಲ್ಲಾ ಅಧಿಕಾರ ಬಳಸಲು ನೀವು ಸ್ವಂತಂತ್ರರು…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...