Homeಚಳವಳಿಕೃಷಿ ನೀತಿ ವಿರೋಧಿ ಹೋರಾಟ: ಪೆರುವಿನ ರೈತರ ಹೋರಾಟಕ್ಕೆ ಜಯ

ಕೃಷಿ ನೀತಿ ವಿರೋಧಿ ಹೋರಾಟ: ಪೆರುವಿನ ರೈತರ ಹೋರಾಟಕ್ಕೆ ಜಯ

ಅಧ್ಯಕ್ಷ ಫ್ರಾನ್ಸಿಸ್ಕೊ ಸಗಾಟಿ ಸರ್ಕಾರದ ಮುಂದೆ ಕಾಯ್ದೆ ಹಿಂಪಡೆಯುವ ಪ್ರಸ್ತಾವನೆಯನ್ನು ಇಟ್ಟು ಬಹುಮತದ ಮೇರೆಗೆ ಅವುಗಳನ್ನು ಹಿಂಪಡೆಯಲಾಗಿದೆ.

- Advertisement -
- Advertisement -

ನಮ್ಮಿಂದ ಸಾಧ್ಯವಾಯಿತು! ಹೀಗೆ ಒಕ್ಕೊರಲನಿಂದ ಉದ್ಗಾರ ತೆಗೆದಿದ್ದು ಪೆರುವಿನ ಕೃಷಿಕರು.
ಡಿಸೆಂಬರ್‌ ತಿಂಗಳಲ್ಲಿ ಪೆರುವಿನ ಸರ್ಕಾರ ಕಾರ್ಪೊರೇಟ್‌ ವಲಯಕ್ಕೆ ಅನುಕೂಲವಾಗುವಂತಹ ಕಾಯ್ದೆಗಳನ್ನು ಜಾರಿಗೆ ತಂದಿತ್ತು. ಅದನ್ನು ಅಲ್ಲಿನ ರೈತರು ದಿಟ್ಟ ಹೋರಾಟದ ಮೂಲಕ ಹಿಮ್ಮೆಟ್ಟಿಸಿದ್ದಾರೆ. ರೈತರ ಹೋರಾಟಕ್ಕೆ ತಲೆಬಾಗಿದ ಸರ್ಕಾರ ಆ ನೀತಿಗಳನ್ನು ಹಿಂಪಡೆದಿದೆ.

ಪೆರು ಸರ್ಕಾರ ಜಾರಿಗೆ ತಂದಿದ್ದ ಕಾಯ್ದೆಗಳು ಕಾರ್ಪೊರೇಟ್‌ ಸಂಸ್ಥೆಗಳಿಗೆ ಶೇ. 15ರಷ್ಟು ತೆರಿಗೆ ವಿನಾಯಿತಿ ನೀಡಿತ್ತು. ಜೊತೆಗೆ ಕೃಷಿ ಉತ್ಪನ್ನಗಳ ರಫ್ತಿಗೆ ಹೆಚ್ಚಿನ ಸ್ವಾತಂತ್ರ್ಯ ನೀಡಿತ್ತು. ಈ ಕಾಯ್ದೆಗಳಿಂದ ಕೃಷಿ ಕೂಲಿಗೆ ಕತ್ತರಿ ಹಾಕಿತ್ತು.

ಆಕ್ರೋಶಗೊಂಡ ರೈತರು ಈಗಾಗಲೇ ದುಸ್ಥಿತಿಯಲ್ಲಿರುವ ನಮ್ಮ ಪರಿಸ್ಥಿತಿ ಇನ್ನಷ್ಟು ಹದಗೆಡಲಿದೆ ಎಂದು ಪ್ರತಿಭಟನೆ ಆರಂಭಿಸಿದ್ದರು. ದಕ್ಷಿಣಾ ಲಿಮಾ- ಅಮೆರಿಕದ ಹೆದ್ದಾರಿಯನ್ನು 300ಕಿ.ಮೀ. ಉದ್ದಕ್ಕೂ ತಡೆಹಿಡಿದಿದ್ದರು.

ಸರ್ಕಾರ ಪ್ರತಿಭಟನಾ ನಿರತ ರೈತರೊಂದಿಗೆ ಮಾತುಕತೆಯ ಮೂಲಕ ಸಂಧಾನ ಸೂತ್ರವನ್ನು ಕಂಡುಕೊಳ್ಳುವ ಪ್ರಯತ್ನ ನಡೆಸಿತ್ತಾದರೂ ಅದು ಫಲಕೊಡಲಿಲ್ಲ.

ಭಾರತದ ಹೋರಾಟವನ್ನು ನೆನಪಿಸುವಂತೆ ಅಲ್ಲೂ ಸಾವಿರಾರು ಸಂಖ್ಯೆಯಲ್ಲಿ ರೈತರು ಹೋರಾಟದಲ್ಲಿ ಪಾಲ್ಗೊಂಡರು. ಹೆದ್ದಾರಿಯಲ್ಲಿ 2000ಕ್ಕೂ ಹೆಚ್ಚು ಲಾರಿಗಳು, ಬಸ್‌ಗಳು ನಿಂತಿದ್ದವು.

ಕೃಷಿ ಕೂಲಿ ಹೆಚ್ಚಿಸುವುದು ಮತ್ತು ಹೊಸ ಕಾಯ್ದೆಯನ್ನು ಹಿಂಪಡೆಯುವುದು ಮುಖ್ಯ ಬೇಡಿಕೆಯಾಗಿತ್ತು. ಈ ಬೇಡಿಕೆ ಈಡೇರದೆ ಪ್ರತಿಭಟನೆ ನಿಲ್ಲಿಸುವಂತೆ ಮಾತೇ ಇಲ್ಲ ಎಂದು ರೈತರು ಪಟ್ಟು ಹಿಡಿದಿದ್ದರು.

ಕೊನೆಗೂ ರೈತ ಹೋರಾಟಕ್ಕೆ ಮಣಿದ ಸರ್ಕಾರ ಕೃಷಿ ಕಾಯ್ದೆಯನ್ನು ಹಿಂಪಡೆದಿದೆ. ಅಧ್ಯಕ್ಷ ಫ್ರಾನ್ಸಿಸ್ಕೊ ಸಗಾಟಿ ಸರ್ಕಾರದ ಮುಂದೆ ಕಾಯ್ದೆ ಹಿಂಪಡೆಯುವ ಪ್ರಸ್ತಾವನೆಯನ್ನು ಇಟ್ಟು ಬಹುಮತದ ಮೇರೆಗೆ ಅವುಗಳನ್ನು ಹಿಂಪಡೆಯಲಾಗಿದೆ.

ಕಾರ್ಪೊರೇಟ್‌ ಸಂಸ್ಥೆಗಳು ಕೃಷಿ ವಲಯದ ಮೇಲೆ ಹಿಡಿತ ಸಾಧಿಸುವ ಪ್ರಯತ್ನಕ್ಕೆ ಹಿನ್ನಡೆ ಉಂಟು ಮಾಡಿದ ಈ ಹೋರಾಟ, ಭಾರತದ ರೈತ ಹೋರಾಟಕ್ಕೆ ಉತ್ಸಾಹ ನೀಡಿದೆ ಎಂದು ದೆಹಲಿ ಗಡಿಯಲ್ಲಿರುವ ಪ್ರತಿಭಟನಾ ನಿರತ ರೈತರು ಹೇಳುತ್ತಾರೆ.

ದೆಹಲಿಯಲ್ಲಿಯೂ ಕೇಂದ್ರದ ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ವಿರೋಧಿಸಿ ನಡೆಸುತ್ತಿರುವ ರೈತರ ದಿಟ್ಟ ಹೋರಾಟ 55ನೇ ದಿನಕ್ಕೆ ಕಾಲಿಟ್ಟಿದೆ. ಹೋರಾಟ ತೀವ್ರಗೊಳಿಸಲು ಜನವರಿ 26ರ ಗಣರಾಜ್ಯೋತ್ಸವದಂದು ದೆಹಲಿಯಲ್ಲಿ ಟ್ರಾಕ್ಟರ್ ಪೆರೇಡ್ ನಡೆಸಲು ತೀರ್ಮಾನಿಸಿದ್ದಾರೆ.


ಇದನ್ನೂ ಓದಿ: ಟ್ರಾಕ್ಟರ್ ರ್ಯಾಲಿ ತಡೆಯುವಂತೆ PIL: ಕಾನೂನಿನಡಿ ಇರುವ ಎಲ್ಲಾ ಅಧಿಕಾರ ಬಳಸಲು ನೀವು ಸ್ವಂತಂತ್ರರು…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...