Homeಮುಖಪುಟ'ಸರ್ಕಾರ ವಿರೋಧಿ ಕಾವ್ಯಕ್ಕೆ ಅವಕಾಶವಿಲ್ಲ': ರೇಖ್ತಾ ಸಾಂಸ್ಕೃತಿಕ ಉತ್ಸವದಿಂದ ಹಿಂದೆ ಸರಿದ ಕವಿ ವಾಜಪೇಯಿ

‘ಸರ್ಕಾರ ವಿರೋಧಿ ಕಾವ್ಯಕ್ಕೆ ಅವಕಾಶವಿಲ್ಲ’: ರೇಖ್ತಾ ಸಾಂಸ್ಕೃತಿಕ ಉತ್ಸವದಿಂದ ಹಿಂದೆ ಸರಿದ ಕವಿ ವಾಜಪೇಯಿ

- Advertisement -
- Advertisement -

ಸರ್ಕಾರವನ್ನು ಟೀಕಿಸುವ ಕವಿತೆಗಳನ್ನು ಓದಬೇಡಿ ಎಂದು ಸಂಘಟಕರು ಕೇಳಿದ್ದರಿಂದ ರೇಖ್ತಾ ಫೌಂಡೇಶನ್ ಆಯೋಜಿಸಿರುವ ಸಾಂಸ್ಕೃತಿಕ ಉತ್ಸವದಲ್ಲಿ ಭಾಗವಹಿಸುವುದಿಲ್ಲ ಎಂದು ಕವಿ ಅಶೋಕ್ ವಾಜಪೇಯಿ ಶುಕ್ರವಾರ ಹೇಳಿದ್ದಾರೆ.

ಸುಂದರ್ ನರ್ಸರಿಯಲ್ಲಿ ಮೂರು ದಿನಗಳ ಆರ್ತ್ ಕಲ್ಚರ್ ಫೆಸ್ಟ್‌ ನಡೆಯುತ್ತಿದ್ದು, ಶುಕ್ರವಾರ ನಡೆದ ಕವಿಗೋಷ್ಠಿಯಲ್ಲಿ ಅನಾಮಿಕಾ, ಬದ್ರಿ ನಾರಾಯಣ್, ದಿನೇಶ್ ಕುಶ್ವಾಹಾ ಮತ್ತು ಮಾನವ್ ಕೌಲ್ ಸೇರಿದಂತೆ ಇತರ ಕವಿಗಳೊಂದಿಗೆ ವಾಜಪೇಯಿ ಪಾಲ್ಗೊಳ್ಳಬೇಕಿತ್ತು.

”ಸಂಘಟಕರು ನನಗೆ ರಾಜಕೀಯವನ್ನಾಗಲಿ, ಸರಕಾರವನ್ನಾಗಲಿ ನೇರವಾಗಿ ವಿಮರ್ಶಿಸದ ಕವಿತೆಗಳನ್ನು ಓದುವಂತೆ ಕೇಳಲಾಗಿರುವುದರಿಂದ ಅರ್ಥ್ ಮತ್ತು ರೇಖ್ತಾ ಆಯೋಜಿಸಿರುವ ಸಂಸ್ಕೃತಿ ಉತ್ಸವದಲ್ಲಿ ನಾನು ಭಾಗವಹಿಸುವುದಿಲ್ಲ. ಈ ರೀತಿಯ ಸೆನ್ಸಾರ್ಶಿಪ್ ಸ್ವೀಕಾರಾರ್ಹವಲ್ಲ” ಎಂದು ವಾಜಪೇಯಿ ಫೇಸ್‌ಬುಕ್‌ನಲ್ಲಿ ಹಿಂದಿಯಲ್ಲಿ ಬರೆದಿದ್ದಾರೆ.

ಈ ಬಗ್ಗೆ ಪಿಟಿಐ ಜೊತೆ ಮಾತನಾಡಿದ ವಾಜಪೇಯಿ ಅವರು, ”ನಾನು ಏಳು ”ಕೋರಸ್”ಅನ್ನು ಓದಲು ನಿರ್ಧರಿಸಿದ್ದೆ. ಇದು ಮೊದಲು ಗ್ರೀಕ್ ರಂಗಭೂಮಿಗೆ ಸಂಬಂಧಿಸಿದ ಸಾಹಿತ್ಯ ಸಾಧನವಾಗಿದ್ದು, ಇದರಲ್ಲಿ ನಾಟಕ ಆರಂಭವಾಗುವ ಸನ್ನಿವೇಶದ ಬಗ್ಗೆ ಪ್ರದರ್ಶಕರು ಪ್ರತಿಕ್ರಿಯಿಸುತ್ತಾರೆ”  ಎಂದು ಹೇಳಿದರು.

ಇದನ್ನೂ ಓದಿ: ಬಿಬಿಸಿ ಮೇಲೆ ಕೈ ಹಾಕಿದರೆ ಇಂದಿರಾ ಗಾಂಧಿಗೆ ಆದಂತೆ ಮೋದಿಜಿಗೂ ಆಗಲಿದೆ!

”ರೇಖ್ತಾ ಫೌಂಡೇಶನ್‌ನ ವ್ಯಕ್ತಿಯೊಬ್ಬರು ನನ್ನನ್ನು ಸಂಪರ್ಕಿಸಿ, ರಾಜಕೀಯವನ್ನು ಒಳಗೊಳ್ಳದ ಕವಿತೆಗಳನ್ನು ಓದುತ್ತೀರಾ ಎಂದು ಕೇಳಿದರು. ಕವಿತೆ ಹೇಗೆ ಅರಾಜಕೀಯವಾಗಬಹುದು ಎಂದು ನಾನು ಕೇಳಿದೆ, ಆದ್ದರಿಂದ ಅವರು ಅದರಿಂದ ದೂರವಿರಲು ನನ್ನನ್ನು ಕೇಳಿದರು. ಆಗ ನಾನು, ಈ ರೀತಿಯ ಸೆನ್ಸಾರ್‌ಶಿಪ್‌ನ್ನು ನಾನು ಬೆಂಬಲಿಸುವುದಿಲ್ಲ ಮತ್ತು ನಾನು ಇದರಲ್ಲಿ ಸೇರುವುದಿಲ್ಲ” ಎಂದು ಹೇಳಿರುವುದಾಗಿ ವಾಜಪೇಯಿ ತಿಳಿಸಿದರು.

2008-2011ರ ಅವಧಿಯಲ್ಲಿ ಲಲಿತ ಕಲಾ ಅಕಾಡೆಮಿಯ ಅಧ್ಯಕ್ಷರಾಗಿದ್ದ ವಾಜಪೇಯಿ ಅವರು, 2015ರಲ್ಲಿ ”ಜೀವನ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕಿನ ಮೇಲಿನ ಆಕ್ರಮಣ”ವನ್ನು ಪ್ರತಿಭಟಿಸಿ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನು ಹಿಂದಿರುಗಿಸಿದ್ದರು.

ಬರಹಗಾರ ಪುರುಷೋತ್ತಮ್ ಅಗರ್ವಾಲ್ ಅವರು ವಾಜಪೇಯಿ ಅವರನ್ನು ಬೆಂಬಲಿಸಿ ಹೀಗೆ ಬರೆಯುತ್ತಾರೆ, ”ತುರ್ತು ಪರಿಸ್ಥಿತಿಯು ವೈಯಕ್ತಿಕ ಸರ್ವಾಧಿಕಾರವಾಗಿತ್ತು, ಆದರೆ ಈಗ ನಾವು ಸೈದ್ಧಾಂತಿಕ ಸರ್ವಾಧಿಕಾರಕ್ಕೆ ದೂಡಲ್ಪಡುತ್ತಿದ್ದೇವೆ. ಈ ಸರ್ವಾಧಿಕಾರಕ್ಕೆ ಪ್ರತಿರೋಧವೊಡ್ಡುವುದು ಕಡ್ಡಾಯ ಮತ್ತು ಅದು ನಮ್ಮ ಕರ್ತವ್ಯವಾಗಿದೆ” ಎಂದು ಹೇಳಿದ್ದಾರೆ.

ಈ ಮಧ್ಯೆ ಆಯೋಜಕರು, ”ಎಲ್ಲ ಆರೋಪಗಳನ್ನು ನಿರಾಕರಿಸಿದ್ದಾರೆ. ಈ ಉತ್ಸವವು ಮಾತನಾಡುವವರಿಗೆ ವೇದಿಕೆಯನ್ನು ಒದಗಿಸುತ್ತದೆ ಮತ್ತು ಅವರು ಮಾತನಾಡುವ ಸ್ವಾತಂತ್ರ್ಯವನ್ನು ಕಿತ್ತುಕೊಳ್ಳುವುದಿಲ್ಲ” ಎಂದು ಹೇಳಿದ್ದಾರೆ.

ಫೆಬ್ರುವರಿ 25 ಮತ್ತು 26ರಂದು ನಡೆಯುತ್ತಿರುವ ಈ ಉತ್ಸವಕ್ಕೆ ಬಲಪಂಥೀಯದಿಂದ ಹಲವಾರು ವಿವಾದಾತ್ಮಕ ವ್ಯಕ್ತಿಗಳನ್ನು ಆಹ್ವಾನಿಸಿದೆ. ಈ ಹಿಂದೆ ದ್ವೇಷಪೂರಿತ ಕಾಮೆಂಟ್‌ಗಳನ್ನು ಮಾಡಿದ್ದ ಚಲನಚಿತ್ರ ನಿರ್ಮಾಪಕ ಅವರನ್ನು ಕರೆಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...