Homeಮುಖಪುಟ'ಸರ್ಕಾರ ವಿರೋಧಿ ಕಾವ್ಯಕ್ಕೆ ಅವಕಾಶವಿಲ್ಲ': ರೇಖ್ತಾ ಸಾಂಸ್ಕೃತಿಕ ಉತ್ಸವದಿಂದ ಹಿಂದೆ ಸರಿದ ಕವಿ ವಾಜಪೇಯಿ

‘ಸರ್ಕಾರ ವಿರೋಧಿ ಕಾವ್ಯಕ್ಕೆ ಅವಕಾಶವಿಲ್ಲ’: ರೇಖ್ತಾ ಸಾಂಸ್ಕೃತಿಕ ಉತ್ಸವದಿಂದ ಹಿಂದೆ ಸರಿದ ಕವಿ ವಾಜಪೇಯಿ

- Advertisement -
- Advertisement -

ಸರ್ಕಾರವನ್ನು ಟೀಕಿಸುವ ಕವಿತೆಗಳನ್ನು ಓದಬೇಡಿ ಎಂದು ಸಂಘಟಕರು ಕೇಳಿದ್ದರಿಂದ ರೇಖ್ತಾ ಫೌಂಡೇಶನ್ ಆಯೋಜಿಸಿರುವ ಸಾಂಸ್ಕೃತಿಕ ಉತ್ಸವದಲ್ಲಿ ಭಾಗವಹಿಸುವುದಿಲ್ಲ ಎಂದು ಕವಿ ಅಶೋಕ್ ವಾಜಪೇಯಿ ಶುಕ್ರವಾರ ಹೇಳಿದ್ದಾರೆ.

ಸುಂದರ್ ನರ್ಸರಿಯಲ್ಲಿ ಮೂರು ದಿನಗಳ ಆರ್ತ್ ಕಲ್ಚರ್ ಫೆಸ್ಟ್‌ ನಡೆಯುತ್ತಿದ್ದು, ಶುಕ್ರವಾರ ನಡೆದ ಕವಿಗೋಷ್ಠಿಯಲ್ಲಿ ಅನಾಮಿಕಾ, ಬದ್ರಿ ನಾರಾಯಣ್, ದಿನೇಶ್ ಕುಶ್ವಾಹಾ ಮತ್ತು ಮಾನವ್ ಕೌಲ್ ಸೇರಿದಂತೆ ಇತರ ಕವಿಗಳೊಂದಿಗೆ ವಾಜಪೇಯಿ ಪಾಲ್ಗೊಳ್ಳಬೇಕಿತ್ತು.

”ಸಂಘಟಕರು ನನಗೆ ರಾಜಕೀಯವನ್ನಾಗಲಿ, ಸರಕಾರವನ್ನಾಗಲಿ ನೇರವಾಗಿ ವಿಮರ್ಶಿಸದ ಕವಿತೆಗಳನ್ನು ಓದುವಂತೆ ಕೇಳಲಾಗಿರುವುದರಿಂದ ಅರ್ಥ್ ಮತ್ತು ರೇಖ್ತಾ ಆಯೋಜಿಸಿರುವ ಸಂಸ್ಕೃತಿ ಉತ್ಸವದಲ್ಲಿ ನಾನು ಭಾಗವಹಿಸುವುದಿಲ್ಲ. ಈ ರೀತಿಯ ಸೆನ್ಸಾರ್ಶಿಪ್ ಸ್ವೀಕಾರಾರ್ಹವಲ್ಲ” ಎಂದು ವಾಜಪೇಯಿ ಫೇಸ್‌ಬುಕ್‌ನಲ್ಲಿ ಹಿಂದಿಯಲ್ಲಿ ಬರೆದಿದ್ದಾರೆ.

ಈ ಬಗ್ಗೆ ಪಿಟಿಐ ಜೊತೆ ಮಾತನಾಡಿದ ವಾಜಪೇಯಿ ಅವರು, ”ನಾನು ಏಳು ”ಕೋರಸ್”ಅನ್ನು ಓದಲು ನಿರ್ಧರಿಸಿದ್ದೆ. ಇದು ಮೊದಲು ಗ್ರೀಕ್ ರಂಗಭೂಮಿಗೆ ಸಂಬಂಧಿಸಿದ ಸಾಹಿತ್ಯ ಸಾಧನವಾಗಿದ್ದು, ಇದರಲ್ಲಿ ನಾಟಕ ಆರಂಭವಾಗುವ ಸನ್ನಿವೇಶದ ಬಗ್ಗೆ ಪ್ರದರ್ಶಕರು ಪ್ರತಿಕ್ರಿಯಿಸುತ್ತಾರೆ”  ಎಂದು ಹೇಳಿದರು.

ಇದನ್ನೂ ಓದಿ: ಬಿಬಿಸಿ ಮೇಲೆ ಕೈ ಹಾಕಿದರೆ ಇಂದಿರಾ ಗಾಂಧಿಗೆ ಆದಂತೆ ಮೋದಿಜಿಗೂ ಆಗಲಿದೆ!

”ರೇಖ್ತಾ ಫೌಂಡೇಶನ್‌ನ ವ್ಯಕ್ತಿಯೊಬ್ಬರು ನನ್ನನ್ನು ಸಂಪರ್ಕಿಸಿ, ರಾಜಕೀಯವನ್ನು ಒಳಗೊಳ್ಳದ ಕವಿತೆಗಳನ್ನು ಓದುತ್ತೀರಾ ಎಂದು ಕೇಳಿದರು. ಕವಿತೆ ಹೇಗೆ ಅರಾಜಕೀಯವಾಗಬಹುದು ಎಂದು ನಾನು ಕೇಳಿದೆ, ಆದ್ದರಿಂದ ಅವರು ಅದರಿಂದ ದೂರವಿರಲು ನನ್ನನ್ನು ಕೇಳಿದರು. ಆಗ ನಾನು, ಈ ರೀತಿಯ ಸೆನ್ಸಾರ್‌ಶಿಪ್‌ನ್ನು ನಾನು ಬೆಂಬಲಿಸುವುದಿಲ್ಲ ಮತ್ತು ನಾನು ಇದರಲ್ಲಿ ಸೇರುವುದಿಲ್ಲ” ಎಂದು ಹೇಳಿರುವುದಾಗಿ ವಾಜಪೇಯಿ ತಿಳಿಸಿದರು.

2008-2011ರ ಅವಧಿಯಲ್ಲಿ ಲಲಿತ ಕಲಾ ಅಕಾಡೆಮಿಯ ಅಧ್ಯಕ್ಷರಾಗಿದ್ದ ವಾಜಪೇಯಿ ಅವರು, 2015ರಲ್ಲಿ ”ಜೀವನ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕಿನ ಮೇಲಿನ ಆಕ್ರಮಣ”ವನ್ನು ಪ್ರತಿಭಟಿಸಿ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನು ಹಿಂದಿರುಗಿಸಿದ್ದರು.

ಬರಹಗಾರ ಪುರುಷೋತ್ತಮ್ ಅಗರ್ವಾಲ್ ಅವರು ವಾಜಪೇಯಿ ಅವರನ್ನು ಬೆಂಬಲಿಸಿ ಹೀಗೆ ಬರೆಯುತ್ತಾರೆ, ”ತುರ್ತು ಪರಿಸ್ಥಿತಿಯು ವೈಯಕ್ತಿಕ ಸರ್ವಾಧಿಕಾರವಾಗಿತ್ತು, ಆದರೆ ಈಗ ನಾವು ಸೈದ್ಧಾಂತಿಕ ಸರ್ವಾಧಿಕಾರಕ್ಕೆ ದೂಡಲ್ಪಡುತ್ತಿದ್ದೇವೆ. ಈ ಸರ್ವಾಧಿಕಾರಕ್ಕೆ ಪ್ರತಿರೋಧವೊಡ್ಡುವುದು ಕಡ್ಡಾಯ ಮತ್ತು ಅದು ನಮ್ಮ ಕರ್ತವ್ಯವಾಗಿದೆ” ಎಂದು ಹೇಳಿದ್ದಾರೆ.

ಈ ಮಧ್ಯೆ ಆಯೋಜಕರು, ”ಎಲ್ಲ ಆರೋಪಗಳನ್ನು ನಿರಾಕರಿಸಿದ್ದಾರೆ. ಈ ಉತ್ಸವವು ಮಾತನಾಡುವವರಿಗೆ ವೇದಿಕೆಯನ್ನು ಒದಗಿಸುತ್ತದೆ ಮತ್ತು ಅವರು ಮಾತನಾಡುವ ಸ್ವಾತಂತ್ರ್ಯವನ್ನು ಕಿತ್ತುಕೊಳ್ಳುವುದಿಲ್ಲ” ಎಂದು ಹೇಳಿದ್ದಾರೆ.

ಫೆಬ್ರುವರಿ 25 ಮತ್ತು 26ರಂದು ನಡೆಯುತ್ತಿರುವ ಈ ಉತ್ಸವಕ್ಕೆ ಬಲಪಂಥೀಯದಿಂದ ಹಲವಾರು ವಿವಾದಾತ್ಮಕ ವ್ಯಕ್ತಿಗಳನ್ನು ಆಹ್ವಾನಿಸಿದೆ. ಈ ಹಿಂದೆ ದ್ವೇಷಪೂರಿತ ಕಾಮೆಂಟ್‌ಗಳನ್ನು ಮಾಡಿದ್ದ ಚಲನಚಿತ್ರ ನಿರ್ಮಾಪಕ ಅವರನ್ನು ಕರೆಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...