Homeಮುಖಪುಟ'ಸರ್ಕಾರ ವಿರೋಧಿ ಕಾವ್ಯಕ್ಕೆ ಅವಕಾಶವಿಲ್ಲ': ರೇಖ್ತಾ ಸಾಂಸ್ಕೃತಿಕ ಉತ್ಸವದಿಂದ ಹಿಂದೆ ಸರಿದ ಕವಿ ವಾಜಪೇಯಿ

‘ಸರ್ಕಾರ ವಿರೋಧಿ ಕಾವ್ಯಕ್ಕೆ ಅವಕಾಶವಿಲ್ಲ’: ರೇಖ್ತಾ ಸಾಂಸ್ಕೃತಿಕ ಉತ್ಸವದಿಂದ ಹಿಂದೆ ಸರಿದ ಕವಿ ವಾಜಪೇಯಿ

- Advertisement -
- Advertisement -

ಸರ್ಕಾರವನ್ನು ಟೀಕಿಸುವ ಕವಿತೆಗಳನ್ನು ಓದಬೇಡಿ ಎಂದು ಸಂಘಟಕರು ಕೇಳಿದ್ದರಿಂದ ರೇಖ್ತಾ ಫೌಂಡೇಶನ್ ಆಯೋಜಿಸಿರುವ ಸಾಂಸ್ಕೃತಿಕ ಉತ್ಸವದಲ್ಲಿ ಭಾಗವಹಿಸುವುದಿಲ್ಲ ಎಂದು ಕವಿ ಅಶೋಕ್ ವಾಜಪೇಯಿ ಶುಕ್ರವಾರ ಹೇಳಿದ್ದಾರೆ.

ಸುಂದರ್ ನರ್ಸರಿಯಲ್ಲಿ ಮೂರು ದಿನಗಳ ಆರ್ತ್ ಕಲ್ಚರ್ ಫೆಸ್ಟ್‌ ನಡೆಯುತ್ತಿದ್ದು, ಶುಕ್ರವಾರ ನಡೆದ ಕವಿಗೋಷ್ಠಿಯಲ್ಲಿ ಅನಾಮಿಕಾ, ಬದ್ರಿ ನಾರಾಯಣ್, ದಿನೇಶ್ ಕುಶ್ವಾಹಾ ಮತ್ತು ಮಾನವ್ ಕೌಲ್ ಸೇರಿದಂತೆ ಇತರ ಕವಿಗಳೊಂದಿಗೆ ವಾಜಪೇಯಿ ಪಾಲ್ಗೊಳ್ಳಬೇಕಿತ್ತು.

”ಸಂಘಟಕರು ನನಗೆ ರಾಜಕೀಯವನ್ನಾಗಲಿ, ಸರಕಾರವನ್ನಾಗಲಿ ನೇರವಾಗಿ ವಿಮರ್ಶಿಸದ ಕವಿತೆಗಳನ್ನು ಓದುವಂತೆ ಕೇಳಲಾಗಿರುವುದರಿಂದ ಅರ್ಥ್ ಮತ್ತು ರೇಖ್ತಾ ಆಯೋಜಿಸಿರುವ ಸಂಸ್ಕೃತಿ ಉತ್ಸವದಲ್ಲಿ ನಾನು ಭಾಗವಹಿಸುವುದಿಲ್ಲ. ಈ ರೀತಿಯ ಸೆನ್ಸಾರ್ಶಿಪ್ ಸ್ವೀಕಾರಾರ್ಹವಲ್ಲ” ಎಂದು ವಾಜಪೇಯಿ ಫೇಸ್‌ಬುಕ್‌ನಲ್ಲಿ ಹಿಂದಿಯಲ್ಲಿ ಬರೆದಿದ್ದಾರೆ.

ಈ ಬಗ್ಗೆ ಪಿಟಿಐ ಜೊತೆ ಮಾತನಾಡಿದ ವಾಜಪೇಯಿ ಅವರು, ”ನಾನು ಏಳು ”ಕೋರಸ್”ಅನ್ನು ಓದಲು ನಿರ್ಧರಿಸಿದ್ದೆ. ಇದು ಮೊದಲು ಗ್ರೀಕ್ ರಂಗಭೂಮಿಗೆ ಸಂಬಂಧಿಸಿದ ಸಾಹಿತ್ಯ ಸಾಧನವಾಗಿದ್ದು, ಇದರಲ್ಲಿ ನಾಟಕ ಆರಂಭವಾಗುವ ಸನ್ನಿವೇಶದ ಬಗ್ಗೆ ಪ್ರದರ್ಶಕರು ಪ್ರತಿಕ್ರಿಯಿಸುತ್ತಾರೆ”  ಎಂದು ಹೇಳಿದರು.

ಇದನ್ನೂ ಓದಿ: ಬಿಬಿಸಿ ಮೇಲೆ ಕೈ ಹಾಕಿದರೆ ಇಂದಿರಾ ಗಾಂಧಿಗೆ ಆದಂತೆ ಮೋದಿಜಿಗೂ ಆಗಲಿದೆ!

”ರೇಖ್ತಾ ಫೌಂಡೇಶನ್‌ನ ವ್ಯಕ್ತಿಯೊಬ್ಬರು ನನ್ನನ್ನು ಸಂಪರ್ಕಿಸಿ, ರಾಜಕೀಯವನ್ನು ಒಳಗೊಳ್ಳದ ಕವಿತೆಗಳನ್ನು ಓದುತ್ತೀರಾ ಎಂದು ಕೇಳಿದರು. ಕವಿತೆ ಹೇಗೆ ಅರಾಜಕೀಯವಾಗಬಹುದು ಎಂದು ನಾನು ಕೇಳಿದೆ, ಆದ್ದರಿಂದ ಅವರು ಅದರಿಂದ ದೂರವಿರಲು ನನ್ನನ್ನು ಕೇಳಿದರು. ಆಗ ನಾನು, ಈ ರೀತಿಯ ಸೆನ್ಸಾರ್‌ಶಿಪ್‌ನ್ನು ನಾನು ಬೆಂಬಲಿಸುವುದಿಲ್ಲ ಮತ್ತು ನಾನು ಇದರಲ್ಲಿ ಸೇರುವುದಿಲ್ಲ” ಎಂದು ಹೇಳಿರುವುದಾಗಿ ವಾಜಪೇಯಿ ತಿಳಿಸಿದರು.

2008-2011ರ ಅವಧಿಯಲ್ಲಿ ಲಲಿತ ಕಲಾ ಅಕಾಡೆಮಿಯ ಅಧ್ಯಕ್ಷರಾಗಿದ್ದ ವಾಜಪೇಯಿ ಅವರು, 2015ರಲ್ಲಿ ”ಜೀವನ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕಿನ ಮೇಲಿನ ಆಕ್ರಮಣ”ವನ್ನು ಪ್ರತಿಭಟಿಸಿ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನು ಹಿಂದಿರುಗಿಸಿದ್ದರು.

ಬರಹಗಾರ ಪುರುಷೋತ್ತಮ್ ಅಗರ್ವಾಲ್ ಅವರು ವಾಜಪೇಯಿ ಅವರನ್ನು ಬೆಂಬಲಿಸಿ ಹೀಗೆ ಬರೆಯುತ್ತಾರೆ, ”ತುರ್ತು ಪರಿಸ್ಥಿತಿಯು ವೈಯಕ್ತಿಕ ಸರ್ವಾಧಿಕಾರವಾಗಿತ್ತು, ಆದರೆ ಈಗ ನಾವು ಸೈದ್ಧಾಂತಿಕ ಸರ್ವಾಧಿಕಾರಕ್ಕೆ ದೂಡಲ್ಪಡುತ್ತಿದ್ದೇವೆ. ಈ ಸರ್ವಾಧಿಕಾರಕ್ಕೆ ಪ್ರತಿರೋಧವೊಡ್ಡುವುದು ಕಡ್ಡಾಯ ಮತ್ತು ಅದು ನಮ್ಮ ಕರ್ತವ್ಯವಾಗಿದೆ” ಎಂದು ಹೇಳಿದ್ದಾರೆ.

ಈ ಮಧ್ಯೆ ಆಯೋಜಕರು, ”ಎಲ್ಲ ಆರೋಪಗಳನ್ನು ನಿರಾಕರಿಸಿದ್ದಾರೆ. ಈ ಉತ್ಸವವು ಮಾತನಾಡುವವರಿಗೆ ವೇದಿಕೆಯನ್ನು ಒದಗಿಸುತ್ತದೆ ಮತ್ತು ಅವರು ಮಾತನಾಡುವ ಸ್ವಾತಂತ್ರ್ಯವನ್ನು ಕಿತ್ತುಕೊಳ್ಳುವುದಿಲ್ಲ” ಎಂದು ಹೇಳಿದ್ದಾರೆ.

ಫೆಬ್ರುವರಿ 25 ಮತ್ತು 26ರಂದು ನಡೆಯುತ್ತಿರುವ ಈ ಉತ್ಸವಕ್ಕೆ ಬಲಪಂಥೀಯದಿಂದ ಹಲವಾರು ವಿವಾದಾತ್ಮಕ ವ್ಯಕ್ತಿಗಳನ್ನು ಆಹ್ವಾನಿಸಿದೆ. ಈ ಹಿಂದೆ ದ್ವೇಷಪೂರಿತ ಕಾಮೆಂಟ್‌ಗಳನ್ನು ಮಾಡಿದ್ದ ಚಲನಚಿತ್ರ ನಿರ್ಮಾಪಕ ಅವರನ್ನು ಕರೆಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...