Homeಮುಖಪುಟ'ಸರ್ಕಾರ ವಿರೋಧಿ ಕಾವ್ಯಕ್ಕೆ ಅವಕಾಶವಿಲ್ಲ': ರೇಖ್ತಾ ಸಾಂಸ್ಕೃತಿಕ ಉತ್ಸವದಿಂದ ಹಿಂದೆ ಸರಿದ ಕವಿ ವಾಜಪೇಯಿ

‘ಸರ್ಕಾರ ವಿರೋಧಿ ಕಾವ್ಯಕ್ಕೆ ಅವಕಾಶವಿಲ್ಲ’: ರೇಖ್ತಾ ಸಾಂಸ್ಕೃತಿಕ ಉತ್ಸವದಿಂದ ಹಿಂದೆ ಸರಿದ ಕವಿ ವಾಜಪೇಯಿ

- Advertisement -
- Advertisement -

ಸರ್ಕಾರವನ್ನು ಟೀಕಿಸುವ ಕವಿತೆಗಳನ್ನು ಓದಬೇಡಿ ಎಂದು ಸಂಘಟಕರು ಕೇಳಿದ್ದರಿಂದ ರೇಖ್ತಾ ಫೌಂಡೇಶನ್ ಆಯೋಜಿಸಿರುವ ಸಾಂಸ್ಕೃತಿಕ ಉತ್ಸವದಲ್ಲಿ ಭಾಗವಹಿಸುವುದಿಲ್ಲ ಎಂದು ಕವಿ ಅಶೋಕ್ ವಾಜಪೇಯಿ ಶುಕ್ರವಾರ ಹೇಳಿದ್ದಾರೆ.

ಸುಂದರ್ ನರ್ಸರಿಯಲ್ಲಿ ಮೂರು ದಿನಗಳ ಆರ್ತ್ ಕಲ್ಚರ್ ಫೆಸ್ಟ್‌ ನಡೆಯುತ್ತಿದ್ದು, ಶುಕ್ರವಾರ ನಡೆದ ಕವಿಗೋಷ್ಠಿಯಲ್ಲಿ ಅನಾಮಿಕಾ, ಬದ್ರಿ ನಾರಾಯಣ್, ದಿನೇಶ್ ಕುಶ್ವಾಹಾ ಮತ್ತು ಮಾನವ್ ಕೌಲ್ ಸೇರಿದಂತೆ ಇತರ ಕವಿಗಳೊಂದಿಗೆ ವಾಜಪೇಯಿ ಪಾಲ್ಗೊಳ್ಳಬೇಕಿತ್ತು.

”ಸಂಘಟಕರು ನನಗೆ ರಾಜಕೀಯವನ್ನಾಗಲಿ, ಸರಕಾರವನ್ನಾಗಲಿ ನೇರವಾಗಿ ವಿಮರ್ಶಿಸದ ಕವಿತೆಗಳನ್ನು ಓದುವಂತೆ ಕೇಳಲಾಗಿರುವುದರಿಂದ ಅರ್ಥ್ ಮತ್ತು ರೇಖ್ತಾ ಆಯೋಜಿಸಿರುವ ಸಂಸ್ಕೃತಿ ಉತ್ಸವದಲ್ಲಿ ನಾನು ಭಾಗವಹಿಸುವುದಿಲ್ಲ. ಈ ರೀತಿಯ ಸೆನ್ಸಾರ್ಶಿಪ್ ಸ್ವೀಕಾರಾರ್ಹವಲ್ಲ” ಎಂದು ವಾಜಪೇಯಿ ಫೇಸ್‌ಬುಕ್‌ನಲ್ಲಿ ಹಿಂದಿಯಲ್ಲಿ ಬರೆದಿದ್ದಾರೆ.

ಈ ಬಗ್ಗೆ ಪಿಟಿಐ ಜೊತೆ ಮಾತನಾಡಿದ ವಾಜಪೇಯಿ ಅವರು, ”ನಾನು ಏಳು ”ಕೋರಸ್”ಅನ್ನು ಓದಲು ನಿರ್ಧರಿಸಿದ್ದೆ. ಇದು ಮೊದಲು ಗ್ರೀಕ್ ರಂಗಭೂಮಿಗೆ ಸಂಬಂಧಿಸಿದ ಸಾಹಿತ್ಯ ಸಾಧನವಾಗಿದ್ದು, ಇದರಲ್ಲಿ ನಾಟಕ ಆರಂಭವಾಗುವ ಸನ್ನಿವೇಶದ ಬಗ್ಗೆ ಪ್ರದರ್ಶಕರು ಪ್ರತಿಕ್ರಿಯಿಸುತ್ತಾರೆ”  ಎಂದು ಹೇಳಿದರು.

ಇದನ್ನೂ ಓದಿ: ಬಿಬಿಸಿ ಮೇಲೆ ಕೈ ಹಾಕಿದರೆ ಇಂದಿರಾ ಗಾಂಧಿಗೆ ಆದಂತೆ ಮೋದಿಜಿಗೂ ಆಗಲಿದೆ!

”ರೇಖ್ತಾ ಫೌಂಡೇಶನ್‌ನ ವ್ಯಕ್ತಿಯೊಬ್ಬರು ನನ್ನನ್ನು ಸಂಪರ್ಕಿಸಿ, ರಾಜಕೀಯವನ್ನು ಒಳಗೊಳ್ಳದ ಕವಿತೆಗಳನ್ನು ಓದುತ್ತೀರಾ ಎಂದು ಕೇಳಿದರು. ಕವಿತೆ ಹೇಗೆ ಅರಾಜಕೀಯವಾಗಬಹುದು ಎಂದು ನಾನು ಕೇಳಿದೆ, ಆದ್ದರಿಂದ ಅವರು ಅದರಿಂದ ದೂರವಿರಲು ನನ್ನನ್ನು ಕೇಳಿದರು. ಆಗ ನಾನು, ಈ ರೀತಿಯ ಸೆನ್ಸಾರ್‌ಶಿಪ್‌ನ್ನು ನಾನು ಬೆಂಬಲಿಸುವುದಿಲ್ಲ ಮತ್ತು ನಾನು ಇದರಲ್ಲಿ ಸೇರುವುದಿಲ್ಲ” ಎಂದು ಹೇಳಿರುವುದಾಗಿ ವಾಜಪೇಯಿ ತಿಳಿಸಿದರು.

2008-2011ರ ಅವಧಿಯಲ್ಲಿ ಲಲಿತ ಕಲಾ ಅಕಾಡೆಮಿಯ ಅಧ್ಯಕ್ಷರಾಗಿದ್ದ ವಾಜಪೇಯಿ ಅವರು, 2015ರಲ್ಲಿ ”ಜೀವನ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕಿನ ಮೇಲಿನ ಆಕ್ರಮಣ”ವನ್ನು ಪ್ರತಿಭಟಿಸಿ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನು ಹಿಂದಿರುಗಿಸಿದ್ದರು.

ಬರಹಗಾರ ಪುರುಷೋತ್ತಮ್ ಅಗರ್ವಾಲ್ ಅವರು ವಾಜಪೇಯಿ ಅವರನ್ನು ಬೆಂಬಲಿಸಿ ಹೀಗೆ ಬರೆಯುತ್ತಾರೆ, ”ತುರ್ತು ಪರಿಸ್ಥಿತಿಯು ವೈಯಕ್ತಿಕ ಸರ್ವಾಧಿಕಾರವಾಗಿತ್ತು, ಆದರೆ ಈಗ ನಾವು ಸೈದ್ಧಾಂತಿಕ ಸರ್ವಾಧಿಕಾರಕ್ಕೆ ದೂಡಲ್ಪಡುತ್ತಿದ್ದೇವೆ. ಈ ಸರ್ವಾಧಿಕಾರಕ್ಕೆ ಪ್ರತಿರೋಧವೊಡ್ಡುವುದು ಕಡ್ಡಾಯ ಮತ್ತು ಅದು ನಮ್ಮ ಕರ್ತವ್ಯವಾಗಿದೆ” ಎಂದು ಹೇಳಿದ್ದಾರೆ.

ಈ ಮಧ್ಯೆ ಆಯೋಜಕರು, ”ಎಲ್ಲ ಆರೋಪಗಳನ್ನು ನಿರಾಕರಿಸಿದ್ದಾರೆ. ಈ ಉತ್ಸವವು ಮಾತನಾಡುವವರಿಗೆ ವೇದಿಕೆಯನ್ನು ಒದಗಿಸುತ್ತದೆ ಮತ್ತು ಅವರು ಮಾತನಾಡುವ ಸ್ವಾತಂತ್ರ್ಯವನ್ನು ಕಿತ್ತುಕೊಳ್ಳುವುದಿಲ್ಲ” ಎಂದು ಹೇಳಿದ್ದಾರೆ.

ಫೆಬ್ರುವರಿ 25 ಮತ್ತು 26ರಂದು ನಡೆಯುತ್ತಿರುವ ಈ ಉತ್ಸವಕ್ಕೆ ಬಲಪಂಥೀಯದಿಂದ ಹಲವಾರು ವಿವಾದಾತ್ಮಕ ವ್ಯಕ್ತಿಗಳನ್ನು ಆಹ್ವಾನಿಸಿದೆ. ಈ ಹಿಂದೆ ದ್ವೇಷಪೂರಿತ ಕಾಮೆಂಟ್‌ಗಳನ್ನು ಮಾಡಿದ್ದ ಚಲನಚಿತ್ರ ನಿರ್ಮಾಪಕ ಅವರನ್ನು ಕರೆಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ: ನಂದಿಗ್ರಾಮದಲ್ಲಿ ಕಾಂಗ್ರೆಸ್‌ಗೆ ಮಮತಾ ಬೆಂಬಲ: ಬಂಗಾಳದ ವಿರೋಧ ಪಕ್ಷಗಳ ರಾಜಕೀಯದಲ್ಲಿ ಮರುಹೊಂದಾಣಿಕೆಯ ಸುಳಿವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ಹೊಸ ರಾಜಕೀಯ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಬಣ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ ಅವರಿಗೆ...

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...