Homeಮುಖಪುಟಬಾಂಗ್ಲಾದಲ್ಲಿ ಹಿಂಸೆಗೆ ತಿರುಗಿದ 'ಅಸಹಕಾರ ಚಳವಳಿ' : 98 ಮಂದಿ ಸಾವು

ಬಾಂಗ್ಲಾದಲ್ಲಿ ಹಿಂಸೆಗೆ ತಿರುಗಿದ ‘ಅಸಹಕಾರ ಚಳವಳಿ’ : 98 ಮಂದಿ ಸಾವು

- Advertisement -
- Advertisement -

ಬಾಂಗ್ಲಾದೇಶದಲ್ಲಿ ಪ್ರಧಾನಿ ಶೇಖ್ ಹಸೀನಾ ರಾಜೀನಾಮೆಗೆ ಒತ್ತಾಯಿಸಿ ವಿದ್ಯಾರ್ಥಿಗಳು ನಡೆಸುತ್ತಿರುವ ‘ಅಸಹಕಾರ ಚಳುವಳಿ’ಯು ಹಿಂಸಾಚಾರಕ್ಕೆ ತಿರುಗಿದ್ದು, ಪ್ರತಿಭಟನಾಕಾರರು ಮತ್ತು ಆಡಳಿತರೂಢ ಅವಾಮಿ ಲೀಗ್ ಪಕ್ಷದ ಬೆಂಬಲಿಗರ ನಡುವೆ ನಡೆದ ಘರ್ಷಣೆಯಲ್ಲಿ 98 ಮಂದಿ ಮೃತಪಟ್ಟಿದ್ದಾರೆ.

ಪ್ರಧಾನಿ ಶೇಖ್ ಹಸೀನಾ ಸರ್ಕಾರದ ವಿರುದ್ದ ನಡೆಸುತ್ತಿರುವ ಪ್ರತಿಭಟನೆಗೆ ಸರ್ಕಾರದ ಪರ ಇರುವ ಅವಾಮಿ ಲೀಗ್, ಛಾತ್ರಾ ಲೀಗ್ ಮತ್ತು ಜುಬೋ ಲೀಗ್ ಕಾರ್ಯಕರ್ತರು ಪ್ರತಿರೋಧ ವ್ಯಕ್ತಪಡಿಸಿದ್ದಾರೆ. ಇದರಿಂದ ಢಾಕಾ ಸೇರಿದಂತೆ ದೇಶದ 13 ಜಿಲ್ಲೆಗಳಲ್ಲಿ ಘರ್ಷಣೆ ಉಂಟಾಗಿದೆ. ಮೃತರಲ್ಲಿ ಸುಮಾರು 15ರಷ್ಟು ಭದ್ರತಾ ಸಿಬ್ಬಂದಿಯೂ ಸೇರಿದ್ದಾರೆ ಎಂದು ವರದಿಯಾಗಿದೆ.

ಭಾನುವಾರ ಸಂಜೆಯ ವೇಳೆಗೆ ದೇಶದಾದ್ಯಂತ ಕರ್ಫ್ಯೂ ಜಾರಿಗೊಳಿಸಿ ಸರ್ಕಾರ ಆದೇಶಿಸಿದೆ. ಫೇಸ್‌ಬುಕ್, ವಾಟ್ಸಾಪ್, ಇನ್‌ಸ್ಟಾಗ್ರಾಂ ಸೇರಿದಂತೆ ಸಾಮಾಜಿಕ ಮಾಧ್ಯಮಗಳು ಮತ್ತು 4ಜಿ ಮೊಬೈಲ್ ಇಂಟರ್‌ನೆಟ್‌ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ.

ಮಾತುಕತೆಗೆ ಬರುವಂತೆ ಪ್ರಧಾನಿ ಹಸೀನಾ ನೀಡಿರುವ ಆಹ್ವಾವನ್ನು ಪ್ರತಿಭಟನಾಕಾರರು ತಿರಸ್ಕರಿಸಿದ್ದಾರೆ. ಇದುವರೆಗೆ ದೇಶದಾದ್ಯಂತ ಸುಮಾರು 11 ಸಾವಿರ ಜನರನ್ನು ಬಂಧಿಸಲಾಗಿದೆ. ಶಾಲಾ-ಕಾಲೇಜು, ಕೋರ್ಟ್‌, ಕಚೇರಿಗಳನ್ನು ಮುಚ್ಚಲಾಗಿದೆ.

ಅವಾಮಿ ಲೀಗ್ ಕಚೇರಿಗಳು, ಸರ್ಕಾರಿ ವಾಹನಗಳು ಮತ್ತು ಕಚೇರಿಗಳು ಸೇರಿದಂತೆ ಅನೇಕ ಆಸ್ತಿ-ಪಾಸ್ತಿಗಳಿಗೆ ಪ್ರತಿಭಟನಾಕಾರರು ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ ಎಂದು ವರದಿಗಳು ಹೇಳಿವೆ.

ಪ್ರತಿಭಟನೆಗೆ ಕಾರಣವೇನು?

ಬಾಂಗ್ಲಾದೇಶದ ಸ್ವಾತಂತ್ರ್ಯಕ್ಕಾಗಿ 1971ರಲ್ಲಿ ಪಾಕಿಸ್ತಾನದ ವಿರುದ್ಧ ಹೋರಾಡಿದ ಯೋಧರ ಕುಟುಂಬಸ್ಥರಿಗೆ ಸರ್ಕಾರಿ ನೇಮಕಾತಿಗಳಲ್ಲಿ ಶೇ. 30 ಮೀಸಲಾತಿಯಿದೆ. ಈ ಮೀಸಲಾತಿ ವ್ಯವಸ್ಥೆ ತಾರತಮ್ಯದಿಂದ ಕೂಡಿದೆ. ಸ್ವಾತಂತ್ರ್ಯ ಚಳುವಳಿಯ ನೇತೃತ್ವ ವಹಿಸಿದ್ದ ಅವಾಮಿ ಲೀಗ್ ಪಕ್ಷದ ಮುಖ್ಯಸ್ಥೆ ಹಾಗೂ ಪ್ರಧಾನಿ ಶೇಖ್ ಹಸೀನಾರ ಬೆಂಬಲಿಗರು ಇದರಿಂದ ಹೆಚ್ಚಿನ ಪ್ರಯೋಜನ ಪಡೆಯುತ್ತಿದ್ದಾರೆ. ಹಾಗಾಗಿ, ಈ ಮೀಸಲಾತಿ ವ್ಯವಸ್ಥೆ ಕೊನೆಗೊಳಿಸಿ ಮೆರಿಟ್ ಆಧಾರಿತ ನೇಮಕಾತಿ ಜಾರಿಗೊಳಿಸಬೇಕು ಎಂಬುವುದು ಪ್ರತಿಭಟನಾಕಾರರ ಆಗ್ರಹವಾಗಿದೆ.

ತಿಂಗಳ ಹಿಂದೆ ಪ್ರಾರಂಭಗೊಂಡ ಪ್ರತಿಭಟನೆ ಕೆಲ ದಿನಗಳ ಕಾಲ ನಿಲ್ಲಿಸಲಾಗಿತ್ತು. ಭಾನುವಾರದಿಂದ ಮತ್ತೆ ಪ್ರತಿಭಟನೆ ಪ್ರಾರಂಭಗೊಂಡಿದ್ದು, ಹಿಂಸಾಚಾರಕ್ಕೆ ತಿರುಗಿದೆ.

ಇದನ್ನೂ ಓದಿ : ವಕ್ಫ್ ಕಾಯ್ದೆಗೆ ತಿದ್ದುಪಡಿ ತರಲು ಮುಂದಾದ ಕೇಂದ್ರ ಸರ್ಕಾರ: ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...