Homeಮುಖಪುಟಜಿನೀವಾದಲ್ಲಿ 'ಭಾರತ ವಿರೋಧಿ' ಪೋಸ್ಟರ್‌: ಸ್ವಿಸ್ ರಾಯಭಾರಿಗೆ ಸಮನ್ಸ್

ಜಿನೀವಾದಲ್ಲಿ ‘ಭಾರತ ವಿರೋಧಿ’ ಪೋಸ್ಟರ್‌: ಸ್ವಿಸ್ ರಾಯಭಾರಿಗೆ ಸಮನ್ಸ್

- Advertisement -
- Advertisement -

ಜಿನೀವಾದಲ್ಲಿ ”ಭಾರತ ವಿರೋಧಿ ಪೋಸ್ಟರ್‌ಗಳನ್ನು” ತೋರಿಸುವ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಒಂದು ದಿನದ ನಂತರ, ಮಾರ್ಚ್ 5ರ ಭಾನುವಾರದಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯಕ್ಕೆ ಸ್ವಿಸ್ ರಾಯಭಾರಿಯನ್ನು ಕರೆಸಿ ಭಾರತ ಪ್ರತಿಭಟಿಸಿದೆ.

ಭಾನುವಾರ, MEA ಕಾರ್ಯದರ್ಶಿ (ಪಶ್ಚಿಮ) ಸಂಜಯ್ ವರ್ಮಾ ಅವರು, ಸ್ವಿಸ್ ರಾಯಭಾರಿಯನ್ನು ಕರೆದು, ಜಿನೀವಾದಲ್ಲಿನ ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮಂಡಳಿಯ ಕಟ್ಟಡದ ಮುಂದೆ ಆಧಾರರಹಿತ ಮತ್ತು ದುರುದ್ದೇಶಪೂರಿತ ಭಾರತ ವಿರೋಧಿ ಪೋಸ್ಟರ್‌ಗಳನ್ನು ಹಾಕಿದ್ದರ ಬಗ್ಗೆ ಪ್ರಶ್ನೆ ಮಾಡಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಭಾರತೀಯ ವಿದ್ಯಾರ್ಥಿಯೊಬ್ಬರು ಜಿನೀವಾದಲ್ಲಿ ತೆಗೆದ ವೀಡಿಯೊವನ್ನು ಅನಾಮಧೇಯ ಟ್ವಿಟ್ಟರ್ ಬಳಕೆದಾರರು (ಟ್ವಿಟರ್ ಬ್ಲೂ ಟಿಕ್ನೊಂದಿಗೆ)  ಹಂಚಿಕೊಂಡ ನಂತರ ಸ್ವಿಸ್ ರಾಯಭಾರಿಗೆ ಸಮನ್ಸ್ ನೀಡಲಾಗಿದೆ.

”ಜಿನೀವಾದಲ್ಲಿ ಭಾರತೀಯ ವಿದ್ಯಾರ್ಥಿಯೊಬ್ಬರು ಚಿತ್ರೀಕರಿಸಿದ ವೀಡಿಯೊ ವೈರಲ್ ಆಗಿದ್ದು, ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮಂಡಳಿಯ ಕಟ್ಟಡದ ಬಳಿ ಭಾರತದ ವಿರುದ್ಧ ಉನ್ನತ ಮಟ್ಟದ ಪ್ರಚಾರವನ್ನು ಬಿಚ್ಚಿಟ್ಟಿರುವುದನ್ನು ಕಾಣಬಹುದು. ಇದು ಹೊಸ ಟೂಲ್‌ಕಿಟ್ ಅಥವಾ 2024 ರ ಯೋಜಿತ ಸಿದ್ಧತೆಯೇ??” ಎಂದು ಟ್ವೀಟ್ ಮಾಡಲಾಗಿದೆ.

ಇದನ್ನೂ ಓದಿ: ಭಾರತ ಮೌನವಾಗಿರಬೇಕೆಂದು ಬಿಜೆಪಿ ಬಯಸುತ್ತಿದೆ: ಲಂಡನ್‌ ಸಂವಾದದಲ್ಲಿ ರಾಹುಲ್ ಹೇಳಿಕೆ

ಈ ವಿಡಿಯೋ ಬಗ್ಗೆ ಭಾರತೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ”ಅವರು ಇನ್ನು ಮುಂದೆ ಭಾರತವನ್ನು ತಡೆಯಲು ಸಾಧ್ಯವಿಲ್ಲ, ಭಾರತವು ಬೆಳೆಯುತ್ತಿದೆ, ಭಾರತವು ಬೆಳೆಯುತ್ತಿದೆ, ಭಾರತವು ಅಭಿವೃದ್ಧಿ ಹೊಂದುತ್ತಿದೆ” ಎಂದು ಒಬ್ಬರು ರೀಟ್ವೀಟ್ ಮಾಡಿದ್ದಾರೆ.

”ಭಾರತದ ಬಲವಾದ ವಿದೇಶಾಂಗ ನೀತಿ ಮತ್ತು ಪ್ರಸ್ತುತ ಸಮಯದ ಅನೇಕ ವಿಷಯಗಳಲ್ಲಿ ತಟಸ್ಥ ನಿಲುವುಗಳನ್ನು ತಾಳುತ್ತಿದೆ. ಉದಾಹರಣೆಗೆ ಉಕ್ರೇನ್ ಮೇಲೆ ರಷ್ಯಾದ ಮಿಲಿಟರಿ ಕ್ರಮ, ಇರಾನ್ ವಿಷಯ ಮತ್ತು ಇನ್ನೂ ಹೆಚ್ಚಿನವು” ಎಂದು ಮತ್ತೊಬ್ಬರು ಹೇಳಿದ್ದಾರೆ.

ಭಾರತದಲ್ಲಿನ ಸ್ವಿಸ್ ರಾಯಭಾರಿ ರಾಲ್ಫ್ ಹೆಕ್ನರ್ ಅವರ ಪರವಾಗಿ ನೀಡಿದ ಹೇಳಿಕೆಯಲ್ಲಿ, ”ರಾಯಭಾರ ಕಚೇರಿಯು, ಭಾರತದ ಕಳವಳವನ್ನು ಗಂಭೀರತೆಯೊಂದಿಗೆ ಬರ್ನ್‌ಗೆ ತಿಳಿಸುತ್ತದೆ” ಎಂದು ಹೇಳಿದರು.

ಭಾರತವು ಜಾಗತಿಕ ಸಂಸ್ಥೆ ಜಿ20 ಅಧ್ಯಕ್ಷ ಸ್ಥಾನ ವಹಿಸಿರುವ ಈ ಸಮಯದಲ್ಲಿ, ಸರ್ಕಾರವು ಇಂತಹ ಘಟನೆಗಳನ್ನು ಗಂಭೀರವಾಗಿ ಪರಿಗಣಿಸುತ್ತಿದೆ.

ಭಾರತವು ಅನೇಕ ದೇಶಗಳಲ್ಲಿ ಈ ರೀತಿಯ ಘಟನೆಗಳನ್ನು ಎದುರಿಸಿದೆ. ಇತ್ತೀಚಿನ ವರದಿಗಳ ಪ್ರಕಾರ ಖಲಿಸ್ತಾನಿ ಬೆಂಬಲಿಗರು ಆಸ್ಟ್ರೇಲಿಯಾದಲ್ಲಿ ಭಾರತೀಯರೊಂದಿಗೆ ಘರ್ಷಣೆ ನಡೆಸುತ್ತಿದ್ದಾರೆ. ಮಾಲ್ಡೀವ್ಸ್‌ನಲ್ಲಿನ ‘ಇಂಡಿಯಾ ಔಟ್ ಅಭಿಯಾನ’ ಇಂತಹ ಭಾರತ ವಿರೋಧಿ ಅಭಿಯಾನಕ್ಕೆ ಇದು ಮತ್ತೊಂದು ಉದಾಹರಣೆಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...