Homeಮುಖಪುಟಜಿನೀವಾದಲ್ಲಿ 'ಭಾರತ ವಿರೋಧಿ' ಪೋಸ್ಟರ್‌: ಸ್ವಿಸ್ ರಾಯಭಾರಿಗೆ ಸಮನ್ಸ್

ಜಿನೀವಾದಲ್ಲಿ ‘ಭಾರತ ವಿರೋಧಿ’ ಪೋಸ್ಟರ್‌: ಸ್ವಿಸ್ ರಾಯಭಾರಿಗೆ ಸಮನ್ಸ್

- Advertisement -
- Advertisement -

ಜಿನೀವಾದಲ್ಲಿ ”ಭಾರತ ವಿರೋಧಿ ಪೋಸ್ಟರ್‌ಗಳನ್ನು” ತೋರಿಸುವ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಒಂದು ದಿನದ ನಂತರ, ಮಾರ್ಚ್ 5ರ ಭಾನುವಾರದಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯಕ್ಕೆ ಸ್ವಿಸ್ ರಾಯಭಾರಿಯನ್ನು ಕರೆಸಿ ಭಾರತ ಪ್ರತಿಭಟಿಸಿದೆ.

ಭಾನುವಾರ, MEA ಕಾರ್ಯದರ್ಶಿ (ಪಶ್ಚಿಮ) ಸಂಜಯ್ ವರ್ಮಾ ಅವರು, ಸ್ವಿಸ್ ರಾಯಭಾರಿಯನ್ನು ಕರೆದು, ಜಿನೀವಾದಲ್ಲಿನ ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮಂಡಳಿಯ ಕಟ್ಟಡದ ಮುಂದೆ ಆಧಾರರಹಿತ ಮತ್ತು ದುರುದ್ದೇಶಪೂರಿತ ಭಾರತ ವಿರೋಧಿ ಪೋಸ್ಟರ್‌ಗಳನ್ನು ಹಾಕಿದ್ದರ ಬಗ್ಗೆ ಪ್ರಶ್ನೆ ಮಾಡಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಭಾರತೀಯ ವಿದ್ಯಾರ್ಥಿಯೊಬ್ಬರು ಜಿನೀವಾದಲ್ಲಿ ತೆಗೆದ ವೀಡಿಯೊವನ್ನು ಅನಾಮಧೇಯ ಟ್ವಿಟ್ಟರ್ ಬಳಕೆದಾರರು (ಟ್ವಿಟರ್ ಬ್ಲೂ ಟಿಕ್ನೊಂದಿಗೆ)  ಹಂಚಿಕೊಂಡ ನಂತರ ಸ್ವಿಸ್ ರಾಯಭಾರಿಗೆ ಸಮನ್ಸ್ ನೀಡಲಾಗಿದೆ.

”ಜಿನೀವಾದಲ್ಲಿ ಭಾರತೀಯ ವಿದ್ಯಾರ್ಥಿಯೊಬ್ಬರು ಚಿತ್ರೀಕರಿಸಿದ ವೀಡಿಯೊ ವೈರಲ್ ಆಗಿದ್ದು, ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮಂಡಳಿಯ ಕಟ್ಟಡದ ಬಳಿ ಭಾರತದ ವಿರುದ್ಧ ಉನ್ನತ ಮಟ್ಟದ ಪ್ರಚಾರವನ್ನು ಬಿಚ್ಚಿಟ್ಟಿರುವುದನ್ನು ಕಾಣಬಹುದು. ಇದು ಹೊಸ ಟೂಲ್‌ಕಿಟ್ ಅಥವಾ 2024 ರ ಯೋಜಿತ ಸಿದ್ಧತೆಯೇ??” ಎಂದು ಟ್ವೀಟ್ ಮಾಡಲಾಗಿದೆ.

ಇದನ್ನೂ ಓದಿ: ಭಾರತ ಮೌನವಾಗಿರಬೇಕೆಂದು ಬಿಜೆಪಿ ಬಯಸುತ್ತಿದೆ: ಲಂಡನ್‌ ಸಂವಾದದಲ್ಲಿ ರಾಹುಲ್ ಹೇಳಿಕೆ

ಈ ವಿಡಿಯೋ ಬಗ್ಗೆ ಭಾರತೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ”ಅವರು ಇನ್ನು ಮುಂದೆ ಭಾರತವನ್ನು ತಡೆಯಲು ಸಾಧ್ಯವಿಲ್ಲ, ಭಾರತವು ಬೆಳೆಯುತ್ತಿದೆ, ಭಾರತವು ಬೆಳೆಯುತ್ತಿದೆ, ಭಾರತವು ಅಭಿವೃದ್ಧಿ ಹೊಂದುತ್ತಿದೆ” ಎಂದು ಒಬ್ಬರು ರೀಟ್ವೀಟ್ ಮಾಡಿದ್ದಾರೆ.

”ಭಾರತದ ಬಲವಾದ ವಿದೇಶಾಂಗ ನೀತಿ ಮತ್ತು ಪ್ರಸ್ತುತ ಸಮಯದ ಅನೇಕ ವಿಷಯಗಳಲ್ಲಿ ತಟಸ್ಥ ನಿಲುವುಗಳನ್ನು ತಾಳುತ್ತಿದೆ. ಉದಾಹರಣೆಗೆ ಉಕ್ರೇನ್ ಮೇಲೆ ರಷ್ಯಾದ ಮಿಲಿಟರಿ ಕ್ರಮ, ಇರಾನ್ ವಿಷಯ ಮತ್ತು ಇನ್ನೂ ಹೆಚ್ಚಿನವು” ಎಂದು ಮತ್ತೊಬ್ಬರು ಹೇಳಿದ್ದಾರೆ.

ಭಾರತದಲ್ಲಿನ ಸ್ವಿಸ್ ರಾಯಭಾರಿ ರಾಲ್ಫ್ ಹೆಕ್ನರ್ ಅವರ ಪರವಾಗಿ ನೀಡಿದ ಹೇಳಿಕೆಯಲ್ಲಿ, ”ರಾಯಭಾರ ಕಚೇರಿಯು, ಭಾರತದ ಕಳವಳವನ್ನು ಗಂಭೀರತೆಯೊಂದಿಗೆ ಬರ್ನ್‌ಗೆ ತಿಳಿಸುತ್ತದೆ” ಎಂದು ಹೇಳಿದರು.

ಭಾರತವು ಜಾಗತಿಕ ಸಂಸ್ಥೆ ಜಿ20 ಅಧ್ಯಕ್ಷ ಸ್ಥಾನ ವಹಿಸಿರುವ ಈ ಸಮಯದಲ್ಲಿ, ಸರ್ಕಾರವು ಇಂತಹ ಘಟನೆಗಳನ್ನು ಗಂಭೀರವಾಗಿ ಪರಿಗಣಿಸುತ್ತಿದೆ.

ಭಾರತವು ಅನೇಕ ದೇಶಗಳಲ್ಲಿ ಈ ರೀತಿಯ ಘಟನೆಗಳನ್ನು ಎದುರಿಸಿದೆ. ಇತ್ತೀಚಿನ ವರದಿಗಳ ಪ್ರಕಾರ ಖಲಿಸ್ತಾನಿ ಬೆಂಬಲಿಗರು ಆಸ್ಟ್ರೇಲಿಯಾದಲ್ಲಿ ಭಾರತೀಯರೊಂದಿಗೆ ಘರ್ಷಣೆ ನಡೆಸುತ್ತಿದ್ದಾರೆ. ಮಾಲ್ಡೀವ್ಸ್‌ನಲ್ಲಿನ ‘ಇಂಡಿಯಾ ಔಟ್ ಅಭಿಯಾನ’ ಇಂತಹ ಭಾರತ ವಿರೋಧಿ ಅಭಿಯಾನಕ್ಕೆ ಇದು ಮತ್ತೊಂದು ಉದಾಹರಣೆಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಕಾಂಗ್ರೆಸ್ ಜೊತೆ ಬಲವಂತದ ಮದುವೆ ಆಗಿತ್ತು’: ಖರ್ಗೆ ಅವರ ‘ಮೋದಿ ಜೊತೆ ಮದುವೆ’ ಟೀಕೆಗೆ ದೇವೇಗೌಡ ತಿರುಗೇಟು

ಸಂಸತ್ತಿನಲ್ಲಿ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರ 'ಮದುವೆ' ಮತ್ತು 'ಪ್ರೀತಿ' ಹೇಳಿಕೆಗೆ ಮಾಜಿ ಪ್ರಧಾನಿ ಮತ್ತು ರಾಜ್ಯಸಭಾ ಸಂಸದ ಎಚ್‌ಡಿ ದೇವೇಗೌಡ ಪ್ರತಿಕ್ರಿಯಿಸಿದ್ದಾರೆ. ದೇವೇಗೌಡರು ಕಾಂಗ್ರೆಸ್ ಅನ್ನು "ಪ್ರೀತಿಸಿದರು" ಆದರೆ ಮೋದಿ (ಬಿಜೆಪಿ)...

ರಾಹುಲ್ ಗಾಂಧಿಯನ್ನು ‘ಟಪೋರಿ’ ಎಂದು ಕರೆದ ಬಿಜೆಪಿ ಸಂಸದೆ ಕಂಗನಾ ರಣಾವತ್

ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ ಸಂಸದೆ - ನಟಿ ಕಂಗನಾ ರನೌತ್, ಅವರನ್ನು ಟಪೋರಿ ಎಂದು ಕರೆದಿದ್ದಾರೆ. ಅವರ ನಡವಳಿಕೆಯು ಮಹಿಳೆಯರಿಗೆ ಅನಾನುಕೂಲವನ್ನುಂಟು ಮಾಡುತ್ತದೆ ಎಂದು...

ಎಸ್‌ಬಿಐಗೆ ವಂಚನೆ ಪ್ರಕರಣ : ಅನಿಲ್ ಅಂಬಾನಿ ವಿಚಾರಣೆ ನಡೆಸಿದ ಸಿಬಿಐ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ದೂರಿನ ಮೇರೆಗೆ ರಿಲಯನ್ಸ್ ಕಮ್ಯುನಿಕೇಷನ್ಸ್ ಲಿಮಿಟೆಡ್ ವಿರುದ್ಧ ದಾಖಲಾಗಿರುವ 2,929 ಕೋಟಿ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ (ಮಾ.19) ಕೈಗಾರಿಕೋದ್ಯಮಿ ಅನಿಲ್ ಅಂಬಾನಿ ಅವರನ್ನು ಕೇಂದ್ರ...

ಬೆಂಗಳೂರಿನಲ್ಲಿ 2ನೇ ವಿಮಾನ ನಿಲ್ದಾಣಕ್ಕೆ ಕೇಂದ್ರದಿಂದ ಬೆಂಬಲ, ಭರವಸೆ: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್

ನವದೆಹಲಿ: ರಾಜ್ಯದಿಂದ ಕಾರ್ಯಸಾಧ್ಯತಾ ವರದಿ ಬಂದ ನಂತರ, ಬೆಂಗಳೂರಿನ ಎರಡನೇ ವಿಮಾನ ನಿಲ್ದಾಣಕ್ಕೆ ಅಗತ್ಯವಿರುವ ಎಲ್ಲಾ ಅನುಮತಿಗಳನ್ನು ಕೇಂದ್ರವು ನೀಡಲಿದೆ ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಕಿಂಜರಪು ರಾಮ್ ಮೋಹನ್ ನಾಯ್ಡು...

ಮಧ್ಯಪ್ರದೇಶ| ಪ್ರಬಲಜಾತಿ ಗುಂಪಿನಿಂದ ಹಲ್ಲೆ-ಜಾತಿನಿಂದನೆ; ನ್ಯಾಯ ಸಿಗದಿದ್ದರೆ ಸಾಮೂಹಿಕ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ ಎಂದ ದಲಿತ ಕುಟುಂಬ

ಮಧ್ಯಪ್ರದೇಶದ ನೀಮಚ್ ಜಿಲ್ಲೆಯ ದಲಿತ ಕುಟುಂಬವೊಂದರ ಮೇಲೆ ಗ್ರಾಮದ ಪ್ರಬಲಜಾತಿ ಗುಂಪೊಂದು ಜಾತಿ ಆಧಾರಿತ ನಿಂದನೆ ಮಾಡಿ ಹಲ್ಲೆ ನಡೆಸಿದ್ದಾರೆ. ದೂರ ನೀಡಿದರೂ ಕ್ರಮ ತಗೆದುಕೊಂಡಿದ್ದ ಎಂದು ಆರೋಪಿಸಿರುವ ಕುಟುಂಬ, ಪೊಲೀಸರು ನಿಷ್ಕ್ರಿಯತೆ...

ವಿಶ್ವದ ಅತಿದೊಡ್ಡ ಎಲ್‌ಎನ್‌ಜಿ ಹಬ್ ಖತಾರ್‌ನ ರಾಸ್ ಲಫನ್ ಇಂಡಸ್ಟ್ರಿಯಲ್ ಸಿಟಿ ಮೇಲೆ ಇರಾನ್ ಕ್ಷಿಪಣಿ ದಾಳಿ

ವಿಶ್ವದ ಅತಿದೊಡ್ಡ ಲಿಕ್ವಿಫೈಡ್ ನ್ಯಾಚುರಲ್ ಗ್ಯಾಸ್ (ಎಲ್‌ಎನ್‌ಜಿ) ರಫ್ತು ಕೇಂದ್ರಗಳಲ್ಲಿ ಒಂದಾದ ಖತಾರ್‌ನ ರಾಸ್ ಲಫನ್ ಇಂಡಸ್ಟ್ರಿಯಲ್ ಸಿಟಿ ಮೇಲೆ ಇರಾನ್ ಕ್ಷಿಪಣಿ ದಾಳಿ ನಡೆಸಿದೆ. ಈ ದಾಳಿಯಿಂದಾಗಿ ಅಲ್ಲಿನ ಅನಿಲ ಸೌಲಭ್ಯಗಳಲ್ಲಿ...

ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ : ತನಿಖಾ ವರದಿ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶನ

ಧರ್ಮಸ್ಥಳ ಗ್ರಾಮದಲ್ಲಿ 1990ರಿಂದ 2021ರ ನಡುವೆ ಸಂಭವಿಸಿದೆ ಎನ್ನಲಾದ 74 ಅಸಹಜ ಸಾವಿನ ಪ್ರಕರಣಗಳಿಗೆ ಸಂಬಂಧಿಸಿದಂತೆ ವರದಿ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಬುಧವಾರ (ಮಾ.18) ನಿರ್ದೇಶಿಸಿದೆ ಎಂದು barandbench.com ವರದಿ ಮಾಡಿದೆ....

ಛತ್ತೀಸ್‌ಗಢ| ಕ್ರಿಶ್ಚಿಯನ್ ಯುವಕನ ಮೇಲೆ ಹಿಂದುತ್ವವಾದಿ ಗುಂಪಿನಿಂದ ಹಲ್ಲೆ; ‘ಜೈ ಶ್ರೀ ರಾಮ್’ ಕೂಗುವಂತೆ ಒತ್ತಾಯ

ಛತ್ತೀಸ್‌ಗಢದ ಜಂಜ್‌ಗೀರ್-ಚಂಪಾ ಜಿಲ್ಲೆಯಲ್ಲಿ ಕ್ರಿಶ್ಚಿಯನ್ ಯುವಕನ ಮೇಲೆ ಹಿಂದುತ್ವವಾದಿಗಳ ಗುಂಪೊಂದು ಹಲ್ಲೆ ನಡೆಸಿ, ಜೈಶ್ರೀರಾಮ್ ಎಂದು ಘೋಷಣೆಗಳನ್ನು ಕೂಗುವಂತೆ ಒತ್ತಾಯಿಸಿದೆ ಎಂಬ ಆರೋಪ ಕೇಳಿಬಂದಿದೆ. ಇಂದು (ಮಾ.18) ನಡೆದಿದೆ ಎನ್ನಲಾದ ಈ ಘಟನೆಯ...

ಯುಪಿಎಸ್‌ಸಿ 440 ನೇ ರ‍್ಯಾಂಕ್ ಎಂದು ಸುಳ್ಳು ಹೇಳಿ ಸಂಭ್ರಮಾಚರಣೆ ಮಾಡಿದ್ದ ಬಿಹಾರದ ಯುವಕನ ಬಂಧನ

ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ನಾಗರಿಕ ಸೇವಾ ಪರೀಕ್ಷೆ (ಸಿಎಸ್‌ಇ) 2025 ರಲ್ಲಿ ಅಖಿಲ ಭಾರತ ರ‍್ಯಾಂಕ್ (ಎಐಆರ್) 440 ಗಳಿಸಿದ್ದೇನೆ ಎಂದು ಸುಳ್ಳು ಹೇಳಿಕೊಂಡ ಕೆಲವು ದಿನಗಳ ನಂತರ, ಬಿಹಾರದ ಶೇಖ್‌ಪುರ...

‘ಜೈ ಬಾಂಗ್ಲಾ’ ಘೋಷಣೆ ಕೂಗಿದ ಆರೋಪ: ಮಹಿಳೆಗೆ ಜಾಮೀನು ನೀಡಿದ ಹೈಕೋರ್ಟ್

ಬೆಂಗಳೂರಿನ ಹೆಬ್ಬಗೂಡಿಯಲ್ಲಿ ಅಕ್ರಮ ಎನ್ನಲಾದ ಶೆಡ್‌ಗಳ ತೆರವು ಕಾರ್ಯಾಚರಣೆ ವೇಳೆ 'ಜೈ ಬಾಂಗ್ಲಾ' ಘೋಷಣೆ ಕೂಗಿದ ಆರೋಪದ ಮೇಲೆ ಬಂಧಿತರಾದ ಪಶ್ಚಿಮ ಬಂಗಾಳದ ಮಹಿಳೆಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ನ್ಯಾಯಮೂರ್ತಿ ಎಸ್.ರಾಚಯ್ಯ...