Homeಮುಖಪುಟಜಿನೀವಾದಲ್ಲಿ 'ಭಾರತ ವಿರೋಧಿ' ಪೋಸ್ಟರ್‌: ಸ್ವಿಸ್ ರಾಯಭಾರಿಗೆ ಸಮನ್ಸ್

ಜಿನೀವಾದಲ್ಲಿ ‘ಭಾರತ ವಿರೋಧಿ’ ಪೋಸ್ಟರ್‌: ಸ್ವಿಸ್ ರಾಯಭಾರಿಗೆ ಸಮನ್ಸ್

- Advertisement -
- Advertisement -

ಜಿನೀವಾದಲ್ಲಿ ”ಭಾರತ ವಿರೋಧಿ ಪೋಸ್ಟರ್‌ಗಳನ್ನು” ತೋರಿಸುವ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಒಂದು ದಿನದ ನಂತರ, ಮಾರ್ಚ್ 5ರ ಭಾನುವಾರದಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯಕ್ಕೆ ಸ್ವಿಸ್ ರಾಯಭಾರಿಯನ್ನು ಕರೆಸಿ ಭಾರತ ಪ್ರತಿಭಟಿಸಿದೆ.

ಭಾನುವಾರ, MEA ಕಾರ್ಯದರ್ಶಿ (ಪಶ್ಚಿಮ) ಸಂಜಯ್ ವರ್ಮಾ ಅವರು, ಸ್ವಿಸ್ ರಾಯಭಾರಿಯನ್ನು ಕರೆದು, ಜಿನೀವಾದಲ್ಲಿನ ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮಂಡಳಿಯ ಕಟ್ಟಡದ ಮುಂದೆ ಆಧಾರರಹಿತ ಮತ್ತು ದುರುದ್ದೇಶಪೂರಿತ ಭಾರತ ವಿರೋಧಿ ಪೋಸ್ಟರ್‌ಗಳನ್ನು ಹಾಕಿದ್ದರ ಬಗ್ಗೆ ಪ್ರಶ್ನೆ ಮಾಡಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಭಾರತೀಯ ವಿದ್ಯಾರ್ಥಿಯೊಬ್ಬರು ಜಿನೀವಾದಲ್ಲಿ ತೆಗೆದ ವೀಡಿಯೊವನ್ನು ಅನಾಮಧೇಯ ಟ್ವಿಟ್ಟರ್ ಬಳಕೆದಾರರು (ಟ್ವಿಟರ್ ಬ್ಲೂ ಟಿಕ್ನೊಂದಿಗೆ)  ಹಂಚಿಕೊಂಡ ನಂತರ ಸ್ವಿಸ್ ರಾಯಭಾರಿಗೆ ಸಮನ್ಸ್ ನೀಡಲಾಗಿದೆ.

”ಜಿನೀವಾದಲ್ಲಿ ಭಾರತೀಯ ವಿದ್ಯಾರ್ಥಿಯೊಬ್ಬರು ಚಿತ್ರೀಕರಿಸಿದ ವೀಡಿಯೊ ವೈರಲ್ ಆಗಿದ್ದು, ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮಂಡಳಿಯ ಕಟ್ಟಡದ ಬಳಿ ಭಾರತದ ವಿರುದ್ಧ ಉನ್ನತ ಮಟ್ಟದ ಪ್ರಚಾರವನ್ನು ಬಿಚ್ಚಿಟ್ಟಿರುವುದನ್ನು ಕಾಣಬಹುದು. ಇದು ಹೊಸ ಟೂಲ್‌ಕಿಟ್ ಅಥವಾ 2024 ರ ಯೋಜಿತ ಸಿದ್ಧತೆಯೇ??” ಎಂದು ಟ್ವೀಟ್ ಮಾಡಲಾಗಿದೆ.

ಇದನ್ನೂ ಓದಿ: ಭಾರತ ಮೌನವಾಗಿರಬೇಕೆಂದು ಬಿಜೆಪಿ ಬಯಸುತ್ತಿದೆ: ಲಂಡನ್‌ ಸಂವಾದದಲ್ಲಿ ರಾಹುಲ್ ಹೇಳಿಕೆ

ಈ ವಿಡಿಯೋ ಬಗ್ಗೆ ಭಾರತೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ”ಅವರು ಇನ್ನು ಮುಂದೆ ಭಾರತವನ್ನು ತಡೆಯಲು ಸಾಧ್ಯವಿಲ್ಲ, ಭಾರತವು ಬೆಳೆಯುತ್ತಿದೆ, ಭಾರತವು ಬೆಳೆಯುತ್ತಿದೆ, ಭಾರತವು ಅಭಿವೃದ್ಧಿ ಹೊಂದುತ್ತಿದೆ” ಎಂದು ಒಬ್ಬರು ರೀಟ್ವೀಟ್ ಮಾಡಿದ್ದಾರೆ.

”ಭಾರತದ ಬಲವಾದ ವಿದೇಶಾಂಗ ನೀತಿ ಮತ್ತು ಪ್ರಸ್ತುತ ಸಮಯದ ಅನೇಕ ವಿಷಯಗಳಲ್ಲಿ ತಟಸ್ಥ ನಿಲುವುಗಳನ್ನು ತಾಳುತ್ತಿದೆ. ಉದಾಹರಣೆಗೆ ಉಕ್ರೇನ್ ಮೇಲೆ ರಷ್ಯಾದ ಮಿಲಿಟರಿ ಕ್ರಮ, ಇರಾನ್ ವಿಷಯ ಮತ್ತು ಇನ್ನೂ ಹೆಚ್ಚಿನವು” ಎಂದು ಮತ್ತೊಬ್ಬರು ಹೇಳಿದ್ದಾರೆ.

ಭಾರತದಲ್ಲಿನ ಸ್ವಿಸ್ ರಾಯಭಾರಿ ರಾಲ್ಫ್ ಹೆಕ್ನರ್ ಅವರ ಪರವಾಗಿ ನೀಡಿದ ಹೇಳಿಕೆಯಲ್ಲಿ, ”ರಾಯಭಾರ ಕಚೇರಿಯು, ಭಾರತದ ಕಳವಳವನ್ನು ಗಂಭೀರತೆಯೊಂದಿಗೆ ಬರ್ನ್‌ಗೆ ತಿಳಿಸುತ್ತದೆ” ಎಂದು ಹೇಳಿದರು.

ಭಾರತವು ಜಾಗತಿಕ ಸಂಸ್ಥೆ ಜಿ20 ಅಧ್ಯಕ್ಷ ಸ್ಥಾನ ವಹಿಸಿರುವ ಈ ಸಮಯದಲ್ಲಿ, ಸರ್ಕಾರವು ಇಂತಹ ಘಟನೆಗಳನ್ನು ಗಂಭೀರವಾಗಿ ಪರಿಗಣಿಸುತ್ತಿದೆ.

ಭಾರತವು ಅನೇಕ ದೇಶಗಳಲ್ಲಿ ಈ ರೀತಿಯ ಘಟನೆಗಳನ್ನು ಎದುರಿಸಿದೆ. ಇತ್ತೀಚಿನ ವರದಿಗಳ ಪ್ರಕಾರ ಖಲಿಸ್ತಾನಿ ಬೆಂಬಲಿಗರು ಆಸ್ಟ್ರೇಲಿಯಾದಲ್ಲಿ ಭಾರತೀಯರೊಂದಿಗೆ ಘರ್ಷಣೆ ನಡೆಸುತ್ತಿದ್ದಾರೆ. ಮಾಲ್ಡೀವ್ಸ್‌ನಲ್ಲಿನ ‘ಇಂಡಿಯಾ ಔಟ್ ಅಭಿಯಾನ’ ಇಂತಹ ಭಾರತ ವಿರೋಧಿ ಅಭಿಯಾನಕ್ಕೆ ಇದು ಮತ್ತೊಂದು ಉದಾಹರಣೆಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...