Homeರಾಷ್ಟ್ರೀಯಇಸ್ಲಾಂ ವಿರೋಧಿ ಟ್ವೀಟ್‌: ಹರಿಯಾಣ ಐಟಿ ಸೆಲ್ ಮುಖ್ಯಸ್ಥನನ್ನು ಕೈಬಿಟ್ಟ ಬಿಜೆಪಿ

ಇಸ್ಲಾಂ ವಿರೋಧಿ ಟ್ವೀಟ್‌: ಹರಿಯಾಣ ಐಟಿ ಸೆಲ್ ಮುಖ್ಯಸ್ಥನನ್ನು ಕೈಬಿಟ್ಟ ಬಿಜೆಪಿ

- Advertisement -
- Advertisement -

ಮುಸ್ಲಿಮರು ಮತ್ತು ಇಸ್ಲಾಂ ವಿರುದ್ಧ ವಿವಾದಾತ್ಮಕ ಟ್ವೀಟ್‌ ಮಾಡಿದ್ದಕ್ಕಾಗಿ ಹರಿಯಾಣ ಬಿಜೆಪಿ ಐಟಿ ಸೆಲ್‌‌ ವಿಭಾಗದ ಮುಖ್ಯಸ್ಥ ಅರುಣ್ ಯಾದವ್ ಅವರನ್ನು ಪಕ್ಷವು ಗುರುವಾರ ಕೈಬಿಟ್ಟಿದೆ. ಅವರನ್ನು ಬಂಧಿಸುವಂತೆ ಒತ್ತಡಗಳು ಹೆಚ್ಚುತ್ತಿವೆ. 2018 ರ ಟ್ವೀಟ್‌ಗಾಗಿ ಖ್ಯಾತ ಪತ್ರಕರ್ತ ಮೊಹಮ್ಮದ್ ಜುಬೇರ್‌ ಅವರನ್ನು ಬಂಧಿಸಿರುವ ಹಿನ್ನಲೆಯಲ್ಲಿ, ಅರುಣ್ ಯಾದವ್ ಅವರನ್ನು ಕೂಡಾ ಟ್ವೀಟ್‌ ಆಧಾರದಲ್ಲಿ ಬಂಧಿಸಬೇಕು ಎಂದು ಅವರ ವಿರೋಧಿಗಳು ಅವರ ಸಾಮಾಜಿಕ ಮಾಧ್ಯಮಗಳ ಪೋಸ್ಟ್‌ ಅನ್ನು ಹಂಚಿಕೊಳ್ಳುತ್ತಿದ್ದಾರೆ.

#ArrestArunYadav ಎಂಬ ಹ್ಯಾಶ್‌ ಟ್ಯಾಗ್ ಗುರುವಾರ ಟ್ವಿಟರ್‌ನಲ್ಲಿ ಟಾಪ್ ಟ್ರೆಂಡ್‌ಗಳಲ್ಲಿ ಒಂದಾಗಿತ್ತು. 2017 ಮತ್ತು ಈ ವರ್ಷದ ಮೇ ತಿಂಗಳ ನಡುವೆ ಪೋಸ್ಟ್ ಮಾಡಲಾಗಿರುವ ಅವರ ಟ್ವೀಟ್‌ಗಳನ್ನು ಸಾವಿರಾರು ಬಾರಿ ಜನರು ಹಂಚಿಕೊಂಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅರುಣ್‌ ಯಾದವ್ ವಿರುದ್ಧ ಇನ್ನೂ ಯಾವುದೇ ಪೊಲೀಸ್ ದೂರು ದಾಖಲಾಗಿಲ್ಲ ಎಂದು ಹರಿಯಾಣ ಅಧಿಕಾರಿಗಳು ಎನ್‌ಡಿಟಿವಿಗೆ ತಿಳಿಸಿದ್ದಾರೆ. ಬಿಜೆಪಿ ಅವರನ್ನು ಇನ್ನೂ ಪಕ್ಷದಿಂದ ತೆಗೆದುಹಾಕಿಲ್ಲ.

“ಬಿಜೆಪಿಯು ಮತ್ತೊಂದು ‘ಫ್ರಿಂಜ್ ಎಲಿಮೆಂಟ್’ ಅನ್ನು ವಜಾಗೊಳಿಸಿದೆ. ಆದರೆ ಈ ಕಣ್ಣಿಗೆ ಮಣ್ಣೆರೆಚುವ ಬದಲು, ಈ ‘ದ್ವೇಷದ ಗುಲಾಮರನ್ನು’ ಬಂಧನಕ್ಕೆ ಒಳಗಾಗುತ್ತಾರೆಯೆ?” ಎಂದು ಯುವ ಕಾಂಗ್ರೆಸ್ ಮುಖಂಡ ಶ್ರೀನಿವಾಸ್ ಬಿವಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ದ್ವೇಷ ಭಾಷಣ: ಬಿಜೆಪಿ ಬೆಂಬಲಿತ ಸಂಘಟನೆ ಹೆಚ್‌ಜೆವಿ ರಾಜ್ಯ ಸಂಚಾಲಕ ಕೇಶವ ಮೂರ್ತಿ ವಿರುದ್ಧ ಎಫ್‌ಐಆರ್‌

“ಹಲೋ ಹರಿಯಾಣ DGP, ದೆಹಲಿ ಪೊಲೀಸ್‌. 2018 ರ ಟ್ವೀಟ್‌ಗಾಗಿ ಜುಬೈರ್ ಅವರನ್ನು ಬಂಧಿಸಬಹುದಾದರೆ, ಅರುಣ್ ಯಾದವ್ ಯಾಕೆ ಬಂಧಿಸಬಾರದು” ಎಂದು ಟಿಪ್ಪು ಸುಲ್ತಾನ್ ಪಕ್ಷದ ಅಧ್ಯಕ್ಷ ಶೇಖ್ ಸಾದಿಕ್ ಟ್ವೀಟ್ ಮಾಡಿದ್ದಾರೆ.

ಟಿವಿ ಕಾರ್ಯಕ್ರಮವೊಂದರಲ್ಲಿ ಪ್ರವಾದಿ ಮುಹಮ್ಮದ್ ಅವರ ವಿರುದ್ಧ ನೀಡಲಾಗಿದ್ದ ನೂಪುರ್ ಶರ್ಮಾ ಅವರ ವಿವಾದಾತ್ಮಕ ಹೇಳಿಕೆಯನ್ನು ಎತ್ತಿ ತೋರಿಸಿದ ನಂತರ ಜೂನ್ 27 ರಂದು ಜುಬೈರ್ ಅವರನ್ನು ದೆಹಲಿಯಲ್ಲಿ ಬಂಧಿಸಲಾಯಿತು.

ಜುಲೈ 2 ರಂದು, ಪೋಲೀಸರು ಜುಬೇರ್ ವಿರುದ್ಧ ವಿದೇಶಿ ಕೊಡುಗೆ ನಿಯಂತ್ರಣ ಕಾಯ್ದೆಯಡಿಯಲ್ಲಿ ಹೆಚ್ಚುವರಿ ಆರೋಪವನ್ನು ಸೇರಿಸಿದ್ದು, 14 ದಿನಗಳವರೆಗೆ ಕಸ್ಟಡಿಯಲ್ಲಿ ಇರಿಸಲಾಗಿದೆ. ಜುಲೈ 4 ರಂದು, ದ್ವೇಷದ ಆರೋಪ ಹೊತ್ತಿರುವ ಮೂವರು ಹಿಂದೂ ಕಟ್ಟರ್‌ವಾದಿಗಳನ್ನು “ಹೇಟ್‌ ಮೋಂಗರ್‌ಗಳು” ಎಂದು ಕರೆದಿದ್ದಕ್ಕಾಗಿ ಅವರ ವಿರುದ್ಧ ಉತ್ತರ ಪ್ರದೇಶದಲ್ಲಿ ಮತ್ತೊಂದು ಪ್ರಕರಣವನ್ನು ದಾಖಲಿಸಲಾಯಿತು.

ಇದನ್ನೂ ಓದಿ: ಪ್ರವಾದಿ ನಿಂದನೆ: ಅಮಾನತುಗೊಂಡ ಬಿಜೆಪಿ ವಕ್ತಾರೆ ನೂಪುರ್‌ ಶರ್ಮಾಗೆ ಕೋಲ್ಕತ್ತಾ ಪೊಲೀಸರ ಸಮನ್ಸ್

ಕೊಲೆ ಬೆದರಿಕೆಗಳನ್ನು ಉಲ್ಲೇಖಿಸಿ ಜುಬೇರ್ ಅವರು ಜಾಮೀನಿಗಾಗಿ ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಿದ್ದಾರೆ. ಕಳೆದ ವಾರ ನೂಪುರ್ ಶರ್ಮಾ ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿದ ಸುಪ್ರೀಂ ಕೋರ್ಟ್, ಆಕೆಯನ್ನು ಏಕೆ ಬಂಧಿಸಿಲ್ಲ ಮತ್ತು ‘ದೇಶದಾದ್ಯಂತ ಗಲಭೆ ಹೊತ್ತಿ ಉರಿಯಲು’ ಆಕೆಯೆ ಹೊಣೆ ಎಂದು ಹೇಳಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...