Homeರಾಷ್ಟ್ರೀಯಇಸ್ಲಾಂ ವಿರೋಧಿ ಟ್ವೀಟ್‌: ಹರಿಯಾಣ ಐಟಿ ಸೆಲ್ ಮುಖ್ಯಸ್ಥನನ್ನು ಕೈಬಿಟ್ಟ ಬಿಜೆಪಿ

ಇಸ್ಲಾಂ ವಿರೋಧಿ ಟ್ವೀಟ್‌: ಹರಿಯಾಣ ಐಟಿ ಸೆಲ್ ಮುಖ್ಯಸ್ಥನನ್ನು ಕೈಬಿಟ್ಟ ಬಿಜೆಪಿ

- Advertisement -
- Advertisement -

ಮುಸ್ಲಿಮರು ಮತ್ತು ಇಸ್ಲಾಂ ವಿರುದ್ಧ ವಿವಾದಾತ್ಮಕ ಟ್ವೀಟ್‌ ಮಾಡಿದ್ದಕ್ಕಾಗಿ ಹರಿಯಾಣ ಬಿಜೆಪಿ ಐಟಿ ಸೆಲ್‌‌ ವಿಭಾಗದ ಮುಖ್ಯಸ್ಥ ಅರುಣ್ ಯಾದವ್ ಅವರನ್ನು ಪಕ್ಷವು ಗುರುವಾರ ಕೈಬಿಟ್ಟಿದೆ. ಅವರನ್ನು ಬಂಧಿಸುವಂತೆ ಒತ್ತಡಗಳು ಹೆಚ್ಚುತ್ತಿವೆ. 2018 ರ ಟ್ವೀಟ್‌ಗಾಗಿ ಖ್ಯಾತ ಪತ್ರಕರ್ತ ಮೊಹಮ್ಮದ್ ಜುಬೇರ್‌ ಅವರನ್ನು ಬಂಧಿಸಿರುವ ಹಿನ್ನಲೆಯಲ್ಲಿ, ಅರುಣ್ ಯಾದವ್ ಅವರನ್ನು ಕೂಡಾ ಟ್ವೀಟ್‌ ಆಧಾರದಲ್ಲಿ ಬಂಧಿಸಬೇಕು ಎಂದು ಅವರ ವಿರೋಧಿಗಳು ಅವರ ಸಾಮಾಜಿಕ ಮಾಧ್ಯಮಗಳ ಪೋಸ್ಟ್‌ ಅನ್ನು ಹಂಚಿಕೊಳ್ಳುತ್ತಿದ್ದಾರೆ.

#ArrestArunYadav ಎಂಬ ಹ್ಯಾಶ್‌ ಟ್ಯಾಗ್ ಗುರುವಾರ ಟ್ವಿಟರ್‌ನಲ್ಲಿ ಟಾಪ್ ಟ್ರೆಂಡ್‌ಗಳಲ್ಲಿ ಒಂದಾಗಿತ್ತು. 2017 ಮತ್ತು ಈ ವರ್ಷದ ಮೇ ತಿಂಗಳ ನಡುವೆ ಪೋಸ್ಟ್ ಮಾಡಲಾಗಿರುವ ಅವರ ಟ್ವೀಟ್‌ಗಳನ್ನು ಸಾವಿರಾರು ಬಾರಿ ಜನರು ಹಂಚಿಕೊಂಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅರುಣ್‌ ಯಾದವ್ ವಿರುದ್ಧ ಇನ್ನೂ ಯಾವುದೇ ಪೊಲೀಸ್ ದೂರು ದಾಖಲಾಗಿಲ್ಲ ಎಂದು ಹರಿಯಾಣ ಅಧಿಕಾರಿಗಳು ಎನ್‌ಡಿಟಿವಿಗೆ ತಿಳಿಸಿದ್ದಾರೆ. ಬಿಜೆಪಿ ಅವರನ್ನು ಇನ್ನೂ ಪಕ್ಷದಿಂದ ತೆಗೆದುಹಾಕಿಲ್ಲ.

“ಬಿಜೆಪಿಯು ಮತ್ತೊಂದು ‘ಫ್ರಿಂಜ್ ಎಲಿಮೆಂಟ್’ ಅನ್ನು ವಜಾಗೊಳಿಸಿದೆ. ಆದರೆ ಈ ಕಣ್ಣಿಗೆ ಮಣ್ಣೆರೆಚುವ ಬದಲು, ಈ ‘ದ್ವೇಷದ ಗುಲಾಮರನ್ನು’ ಬಂಧನಕ್ಕೆ ಒಳಗಾಗುತ್ತಾರೆಯೆ?” ಎಂದು ಯುವ ಕಾಂಗ್ರೆಸ್ ಮುಖಂಡ ಶ್ರೀನಿವಾಸ್ ಬಿವಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ದ್ವೇಷ ಭಾಷಣ: ಬಿಜೆಪಿ ಬೆಂಬಲಿತ ಸಂಘಟನೆ ಹೆಚ್‌ಜೆವಿ ರಾಜ್ಯ ಸಂಚಾಲಕ ಕೇಶವ ಮೂರ್ತಿ ವಿರುದ್ಧ ಎಫ್‌ಐಆರ್‌

“ಹಲೋ ಹರಿಯಾಣ DGP, ದೆಹಲಿ ಪೊಲೀಸ್‌. 2018 ರ ಟ್ವೀಟ್‌ಗಾಗಿ ಜುಬೈರ್ ಅವರನ್ನು ಬಂಧಿಸಬಹುದಾದರೆ, ಅರುಣ್ ಯಾದವ್ ಯಾಕೆ ಬಂಧಿಸಬಾರದು” ಎಂದು ಟಿಪ್ಪು ಸುಲ್ತಾನ್ ಪಕ್ಷದ ಅಧ್ಯಕ್ಷ ಶೇಖ್ ಸಾದಿಕ್ ಟ್ವೀಟ್ ಮಾಡಿದ್ದಾರೆ.

ಟಿವಿ ಕಾರ್ಯಕ್ರಮವೊಂದರಲ್ಲಿ ಪ್ರವಾದಿ ಮುಹಮ್ಮದ್ ಅವರ ವಿರುದ್ಧ ನೀಡಲಾಗಿದ್ದ ನೂಪುರ್ ಶರ್ಮಾ ಅವರ ವಿವಾದಾತ್ಮಕ ಹೇಳಿಕೆಯನ್ನು ಎತ್ತಿ ತೋರಿಸಿದ ನಂತರ ಜೂನ್ 27 ರಂದು ಜುಬೈರ್ ಅವರನ್ನು ದೆಹಲಿಯಲ್ಲಿ ಬಂಧಿಸಲಾಯಿತು.

ಜುಲೈ 2 ರಂದು, ಪೋಲೀಸರು ಜುಬೇರ್ ವಿರುದ್ಧ ವಿದೇಶಿ ಕೊಡುಗೆ ನಿಯಂತ್ರಣ ಕಾಯ್ದೆಯಡಿಯಲ್ಲಿ ಹೆಚ್ಚುವರಿ ಆರೋಪವನ್ನು ಸೇರಿಸಿದ್ದು, 14 ದಿನಗಳವರೆಗೆ ಕಸ್ಟಡಿಯಲ್ಲಿ ಇರಿಸಲಾಗಿದೆ. ಜುಲೈ 4 ರಂದು, ದ್ವೇಷದ ಆರೋಪ ಹೊತ್ತಿರುವ ಮೂವರು ಹಿಂದೂ ಕಟ್ಟರ್‌ವಾದಿಗಳನ್ನು “ಹೇಟ್‌ ಮೋಂಗರ್‌ಗಳು” ಎಂದು ಕರೆದಿದ್ದಕ್ಕಾಗಿ ಅವರ ವಿರುದ್ಧ ಉತ್ತರ ಪ್ರದೇಶದಲ್ಲಿ ಮತ್ತೊಂದು ಪ್ರಕರಣವನ್ನು ದಾಖಲಿಸಲಾಯಿತು.

ಇದನ್ನೂ ಓದಿ: ಪ್ರವಾದಿ ನಿಂದನೆ: ಅಮಾನತುಗೊಂಡ ಬಿಜೆಪಿ ವಕ್ತಾರೆ ನೂಪುರ್‌ ಶರ್ಮಾಗೆ ಕೋಲ್ಕತ್ತಾ ಪೊಲೀಸರ ಸಮನ್ಸ್

ಕೊಲೆ ಬೆದರಿಕೆಗಳನ್ನು ಉಲ್ಲೇಖಿಸಿ ಜುಬೇರ್ ಅವರು ಜಾಮೀನಿಗಾಗಿ ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಿದ್ದಾರೆ. ಕಳೆದ ವಾರ ನೂಪುರ್ ಶರ್ಮಾ ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿದ ಸುಪ್ರೀಂ ಕೋರ್ಟ್, ಆಕೆಯನ್ನು ಏಕೆ ಬಂಧಿಸಿಲ್ಲ ಮತ್ತು ‘ದೇಶದಾದ್ಯಂತ ಗಲಭೆ ಹೊತ್ತಿ ಉರಿಯಲು’ ಆಕೆಯೆ ಹೊಣೆ ಎಂದು ಹೇಳಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....