Homeಮುಖಪುಟನೆದರ್ಲ್ಯಾಂಡ್‌ನಲ್ಲಿ ಮುಂದುವರಿದ ಇಸ್ರೇಲ್ ವಿರೋಧಿ ಹಿಂಸಾಚಾರ : ವಾಹನಗಳಿಗೆ ಬೆಂಕಿ, ಪೊಲೀಸರೊಂದಿಗೆ ಸಂಘರ್ಷ

ನೆದರ್ಲ್ಯಾಂಡ್‌ನಲ್ಲಿ ಮುಂದುವರಿದ ಇಸ್ರೇಲ್ ವಿರೋಧಿ ಹಿಂಸಾಚಾರ : ವಾಹನಗಳಿಗೆ ಬೆಂಕಿ, ಪೊಲೀಸರೊಂದಿಗೆ ಸಂಘರ್ಷ

- Advertisement -
- Advertisement -

ನೆದರ್ಲ್ಯಾಂಡ್ ರಾಜಧಾನಿ ಆಮ್‌ಸ್ಟರ್‌ಡ್ಯಾಮ್​ನಲ್ಲಿ ಸೋಮವಾರ (ನ.11) ರಾತ್ರಿ ಮತ್ತೆ ಇಸ್ರೇಲ್ ವಿರೋಧಿ ಹಿಂಸಾಚಾರ ನಡೆದಿದೆ. ಕಳೆದ ವಾರದ ಹಿಂಸಾಚಾರ ಸಂಬಂಧ ಡಚ್ ಪೊಲೀಸರು ಮತ್ತೆ ಐವರನ್ನು ಬಂಧಿಸಿದ್ದಾರೆ ಎಂದು ಬಿಬಿಸಿ ವರದಿ ಮಾಡಿದೆ.

ಕಳೆದ ವಾರ ಆಮ್‌ಸ್ಟರ್‌ಡ್ಯಾಮ್​ನಲ್ಲಿ ನಡೆದ ಯುರೋಪಾ ಲೀಗ್ ಫುಟ್‍ಬಾಲ್ ಟೂರ್ನಿಯಲ್ಲಿ ಸ್ಥಳೀಯ ಅಜಾಕ್ಸ್ ಕ್ಲಬ್ ಹಾಗೂ ಇಸ್ರೇಲ್‍ನ ಮಕಾಬಿ ಕ್ಲಬ್ ನಡುವಿನ ಪಂದ್ಯದ ಬಳಿಕ ಇಸ್ರೇಲ್ ತಂಡದ ಆಟಗಾರರು ಹಾಗೂ ಬೆಂಬಲಿಗರ ಮೇಲೆ ಹಲ್ಲೆ ನಡೆಸಲಾಗಿತ್ತು. ಸೋಮವಾರ ತಡರಾತ್ರಿ ನಡೆದ ಹಿಂಸಾಚಾರ ಈ ಘಟನೆಯ ಮುಂದುವರಿದ ಭಾಗವಾಗಿದೆ.

ವರದಿಗಳ ಪ್ರಕಾರ, ಕಪ್ಪು ಬಟ್ಟೆ ಧರಿಸಿದ್ದ ಜನರ ಗುಂಪೊಂದು ಸ್ಫೋಟಕಗಳನ್ನು ಸಿಡಿಸಿ ನಗರದಲ್ಲಿನ ಜನಪ್ರಿಯ ಟ್ರಾಮ್‍ಗೆ ಬೆಂಕಿ ಹಚ್ಚಿದ್ದಾರೆ. ಆದರೆ, ಟ್ರಾಮ್‍ನಲ್ಲಿ ಯಾರೂ ಇರದ ಕಾರಣ ಯಾವುದೇ ಸಾವು-ನೋವು ಸಂಭವಿಸಿಲ್ಲ. ಹಿಂಸಾಚಾರ ನಡೆಸಿದವರು ‘ಫ್ರೀ ಪ್ಯಾಲೆಸ್ತೀನ್’ ಘೋಷಣೆ ಕೂಗುತ್ತಿದ್ದರು ಎಂದು ವರದಿಯಾಗಿದೆ.

ಕಳೆದ ವಾರ ಇಸ್ರೇಲಿ ಆಟಗಾರರು ಹಾಗೂ ತಂಡದ ಬೆಂಬಲಿಗರ ಮೇಲೆ ನಡೆದ ದಾಳಿಯಲ್ಲಿ ಐದು ಮಂದಿ ಗಾಯಗೊಂಡಿದ್ದರು. ದಾಳಿಯ ಬಳಿಕ ವಿಶೇಷ ವಿಮಾನದಲ್ಲಿ ಆಟಗಾರರು ಹಾಗೂ ಬೆಂಬಲಿಗರನ್ನು ಇಸ್ರೇಲ್ ಸ್ವದೇಶಕ್ಕೆ ಕರೆಸಿಕೊಂಡಿತ್ತು.

ಈ ಮಧ್ಯೆ, ಇಸ್ರೇಲ್ ಫುಟ್‍ಬಾಲ್ ತಂಡದ ಅಭಿಮಾನಿಗಳು ಕಳೆದ ಬುಧವಾರ ಆಮ್‌ಸ್ಟರ್‌ಡ್ಯಾಮ್‌ನಲ್ಲಿ ಟ್ಯಾಕ್ಸಿಯೊಂದಕ್ಕೆ ದಾಳಿ ನಡೆಸಿದ್ದರಲ್ಲದೆ, ಪ್ಯಾಲೆಸ್ತೀನ್ ಧ್ವಜವನ್ನು ಸುಟ್ಟು ಹಾಕಿದ್ದರು. ಮರುದಿನ ಪಂದ್ಯ ನಡೆಯುತ್ತಿದ್ದಾಗಲೂ ಇಸ್ರೇಲ್ ತಂಡದ ಅಭಿಮಾನಿಗಳು ಅರಬ್ ವಿರೋಧಿ ಘೋಷಣೆ ಕೂಗುತ್ತಿದ್ದುದು ವಿಡಿಯೋದಲ್ಲಿ ಸೆರೆಯಾಗಿದೆ ಎಂದು ರಾಯ್ಟರ್ಸ್ ವರದಿ ಮಾಡಿತ್ತು.

“ಇಸ್ರೇಲಿಗರು, ವಿಶೇಷವಾಗಿ ಯಹೂದಿಗಳ ಮೇಲಿನ ದಾಳಿಗಳು ಆಘಾತಕಾರಿ ಮತ್ತು ಖಂಡನೀಯ’ ಎಂದು ನೆದರ್ಲ್ಯಾಂಡ್ ಪ್ರಧಾನಮಂತ್ರಿ ಡಿಕ್ ಸ್ಕೂಫ್ ಸೋಮವಾರ ಹೇಳಿದ್ದಾರೆ.

ಆಮ್‌ಸ್ಟರ್‌ಡ್ಯಾಮ್​ನಲ್ಲಿ ಗುರುವಾರ (ನ.14) ದವರೆಗೆ ಪ್ರತಿಭಟನೆ ನಡೆಸುವುದನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ಆದರೂ, ಪ್ಯಾಲೆಸ್ತೀನ್ ಪರವಾದ ಪ್ರತಿಭಟನೆಗಳನ್ನು ನಗರ ಕೇಂದ್ರದಿಂದ ದೂರದಲ್ಲಿರುವ ಉದ್ಯಾನವನದಲ್ಲಿ ಮುಂದುವರಿಸಲು ಅನುಮತಿಸಲಾಗಿದೆ. ಪ್ರತಿಭಟನಾಕಾರರು ಆಮ್‌ಸ್ಟರ್‌ಡ್ಯಾಮ್ ಸಿಟಿ ಹಾಲ್ ಹೊರಗೆ ಪ್ರತಿಭಟಿಸುವುದಾಗಿ ಹೇಳಿದ್ದಾರೆ.

ಇದನ್ನೂ ಓದಿ : ‘ಶಿಬಿರ ತೊರೆಯದಿರಿ’ | ಸಿಆರ್‌ಪಿಎಫ್ ಸಿಬ್ಬಂದಿಗೆ ತಾಕೀತು ಮಾಡಿದ ಕುಕಿ ಸಂಘಟನೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...