Homeಅಂತರಾಷ್ಟ್ರೀಯಬಿಬಿಸಿ ಪತ್ರಕರ್ತನ್ನು ಬೆನ್ನಟ್ಟಿ ‘ದೇಶದ್ರೋಹಿ’ ಎಂದ ಪ್ರತಿಭಟನಾಕಾರರು!

ಬಿಬಿಸಿ ಪತ್ರಕರ್ತನ್ನು ಬೆನ್ನಟ್ಟಿ ‘ದೇಶದ್ರೋಹಿ’ ಎಂದ ಪ್ರತಿಭಟನಾಕಾರರು!

- Advertisement -
- Advertisement -

ಲಂಡನಿನ ವೆಸ್ಟ್‌‌ಮಿನಿಸ್ಟರ್ ಹೊರಗಿನ ಲಾಕ್ಡೌನ್ ವಿರೋಧಿ ಪ್ರತಿಭಟನೆಯ ಸಮಯದಲ್ಲಿ ಪ್ರತಿಭಟನಾಕಾರರು ಬಿಬಿಸಿ ಪತ್ರಕರ್ತನನ್ನು ಬೆನ್ನಟ್ಟಿರುವ ಘಟನೆ ಕಳೆದ ಭಾನುವಾರ ನಡೆದಿದೆ. ಘಟನೆಯ ಬಗ್ಗೆ ಇಂಗ್ಲೇಂಡ್ ಪ್ರಧಾನಿ ಬೋರಿಸ್‌ ಜೋನ್ಸನ್‌‌ ಅಘಾತ ವ್ಯಕ್ತಪಡಿಸಿದ್ದಾರೆ.

ಘಟನೆಯ ವಿಡಿಯೊವನ್ನು ಮಂಗಳವಾರ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಲಾಗಿತ್ತು. ಬಿಬಿಸಿ ನ್ಯೂಸ್‌‌ನ ಪೊಲಿಟಿಕಲ್‌ ಎಡಿಟರ್‌ ಆಗಿರುವ ನಿಕೋಲಸ್ ವ್ಯಾಟ್ ಅವರನ್ನು ಬೆನ್ನಟ್ಟಿರುವ ಗುಂಪೊಂದು, ಅವರನ್ನು ‘ದೇಶದ್ರೋಹಿ’ ಮತ್ತು ‘ಕಲ್ಮಷ’ ಎಂದು ಕರೆದಿದ್ದಾರೆ.

ಇದನ್ನೂ ಓದಿ: ಮುಂಬೈ :ಏಷ್ಯಾದ ಅತಿ ದೊಡ್ಡ ಸ್ಲಂ ಧಾರಾವಿಯಲ್ಲಿ 2ನೇ ದಿನವು ಕೊರೊನಾ ಪ್ರಕರಣಗಳಿಲ್ಲ!

ಇಂಗ್ಲೆಂಡ್‌ ಸರ್ಕಾರವು ಕೊರೊನಾ ನಿರ್ಬಂಧವನ್ನು ನಾಲ್ಕು ವಾರಗಳವರೆಗೆ ವಿಸ್ತರಿಸುವುದನ್ನು ವಿರೋಧಿಸಿ ಈ ಜನಸಮೂಹವು ವೆಸ್ಟ್‌‌ಮಿನಿಷ್ಟರ್‌‌ನಲ್ಲಿ ಜಮಾಯಿಸಿತ್ತು.

ಪತ್ರಕರ್ತನನ್ನು ಬೆನ್ನಟ್ಟಿದ ಪ್ರತಿಭಟನಾಕರನೊಬ್ಬ, “ಲಾಕ್‌ಡೌನ್‌ಗಳು ಕಾನೂನು ಬದ್ಧವೆಂದು ನೀವು ಯಾಕೆ ವರದಿ ಮಾಡಿದ್ದೀರಿ? ಜನರನ್ನು ಅವರ ಮನೆಯಲ್ಲಿ ಲಾಕ್‌ ಮಾಡುವುದನ್ನು ಹೇಗೆ ಕಾನೂನು ಬದ್ಧವಾವಾಗುತ್ತದೆ?” ಎಂದು ಕೇಳಿದ್ದಾರೆ.

ಆಕ್ರಮಣಕಾರಿ ಗುಂಪು ನಿಕೋಲಸ್‌ ವ್ಯಾಟ್ ಅವರನ್ನು ಬೆನ್ನಟ್ಟುತ್ತಿರುವುದನ್ನು ಪೊಲೀಸರು ನೋಡುತ್ತಿದ್ದರೂ ಅವರ ರಕ್ಷಣೆಗೆ ಮುಂದಾಗಿಲ್ಲ.

ಇದನ್ನೂ ಓದಿ: ಮುಸ್ಲಿಂ ವ್ಯಕ್ತಿಯ ಮೇಲಿನ ಹಲ್ಲೆ ಸಮಾಜಕ್ಕೆ ಒಂದು ಕಳಂಕ : ರಾಹುಲ್ ಗಾಂಧಿ

“ತಮ್ಮ ಕೆಲಸ ಮಾಡುತ್ತಿರುವ ನಿಕ್‌ ವ್ಯಾಟ್ ಅವರನ್ನು ಬೆನ್ನಟ್ಟುತ್ತಿರುವುದು ನಾಚಿಕೆಗೇಡಾಗಿದೆ. ಮಾಧ್ಯಮಗಳು ಭಯವಿಲ್ಲದೆ ವರದಿ ಮಾಡಬೇಕು. ಅವು ನಮ್ಮ ಪ್ರಜಾಪ್ರಭುತ್ವದ ಜೀವನಾಡಿ” ಎಂದು ಪ್ರಧಾನಿ ಬೋರಿಸ್ ಜಾನ್ಸನ್‌ ಟ್ವೀಟ್ ಮಾಡಿದ್ದಾರೆ.

ಅವರ ಅಧಿಕೃತ ವಕ್ತಾರರು, “ಈ ವಿಡಿಯೊ ತುಣುಕು ತೀವ್ರವಾಗಿ ಗೊಂದಲಕ್ಕೀಡುಮಾಡಿದೆ. ಪತ್ರಕರ್ತರ ಮೇಲೆ ಎಂದಿಗೂ ಇಂತಹದ್ದು ನಡೆಯಬಾರದು. ಪ್ರತಿಭಟಿಸುವುದು ಪ್ರಜಾಪ್ರಭುತ್ವದ ಮೂಲಭೂತ ಹಕ್ಕಾಗಿದ್ದರೂ, ಹಿಂಸೆ ಮತ್ತು ಈ ರೀತಿಯ ಬೆದರಿಕೆ ಎಂದಿಗೂ ಸ್ವೀಕಾರಾರ್ಹವಲ್ಲ” ಎಂದು ಹೇಳಿದ್ದಾರೆ.

ಈ ಘಟನೆಯನ್ನು ದೇಶದ ಗೃಹ ಕಾರ್ಯದರ್ಶಿ ಪ್ರೀತಿ ಪಟೇಲ್ ಮತ್ತು ಬಿಬಿಸಿ ಕೂಡ ಖಂಡಿಸಿದೆ.

“ಈ ನಡವಳಿಕೆಯು ಸಂಪೂರ್ಣವಾಗಿ ಸ್ವೀಕಾರಾರ್ಹವಲ್ಲ. ಎಲ್ಲಾ ಪತ್ರಕರ್ತರು ಬೆದರಿಕೆ ಅಥವಾ ಅಡೆತಡೆಗಳಿಲ್ಲದೆ ತಮ್ಮ ಕೆಲಸವನ್ನು ನಿರ್ವಹಿಸಲು ಸಾಧ್ಯವಾಗಬೇಕು” ಎಂದು ಬಿಬಿಸಿ ನ್ಯೂಸ್‌ನ ವಕ್ತಾರರು ಹೇಳಿದ್ದಾರೆ.

ಪ್ರೀತಿ ಪಟೇಲ್ ಅವರು, “ಈ ನಡವಳಿಕೆ ಎಂದಿಗೂ ಸ್ವೀಕಾರಾರ್ಹವಲ್ಲ. ಪತ್ರಕರ್ತರ ಸುರಕ್ಷತೆ ನಮ್ಮ ಪ್ರಜಾಪ್ರಭುತ್ವದ ಮೂಲಭೂತ ತತ್ವದಾಗಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ನೇಮಕಾತಿಯಲ್ಲಿ ಹಿನ್ನಡೆ ಕಾರಣ: ಹೊಸ ಸಿಬಿಐ ನಿರ್ದೇಶಕರ ಅಧಿಕಾರವಧಿ ಕಡಿತಕ್ಕೆ ಮುಂದಾದ ಕೇಂದ್ರ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...