Homeಅಂತರಾಷ್ಟ್ರೀಯಬಿಬಿಸಿ ಪತ್ರಕರ್ತನ್ನು ಬೆನ್ನಟ್ಟಿ ‘ದೇಶದ್ರೋಹಿ’ ಎಂದ ಪ್ರತಿಭಟನಾಕಾರರು!

ಬಿಬಿಸಿ ಪತ್ರಕರ್ತನ್ನು ಬೆನ್ನಟ್ಟಿ ‘ದೇಶದ್ರೋಹಿ’ ಎಂದ ಪ್ರತಿಭಟನಾಕಾರರು!

- Advertisement -
- Advertisement -

ಲಂಡನಿನ ವೆಸ್ಟ್‌‌ಮಿನಿಸ್ಟರ್ ಹೊರಗಿನ ಲಾಕ್ಡೌನ್ ವಿರೋಧಿ ಪ್ರತಿಭಟನೆಯ ಸಮಯದಲ್ಲಿ ಪ್ರತಿಭಟನಾಕಾರರು ಬಿಬಿಸಿ ಪತ್ರಕರ್ತನನ್ನು ಬೆನ್ನಟ್ಟಿರುವ ಘಟನೆ ಕಳೆದ ಭಾನುವಾರ ನಡೆದಿದೆ. ಘಟನೆಯ ಬಗ್ಗೆ ಇಂಗ್ಲೇಂಡ್ ಪ್ರಧಾನಿ ಬೋರಿಸ್‌ ಜೋನ್ಸನ್‌‌ ಅಘಾತ ವ್ಯಕ್ತಪಡಿಸಿದ್ದಾರೆ.

ಘಟನೆಯ ವಿಡಿಯೊವನ್ನು ಮಂಗಳವಾರ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಲಾಗಿತ್ತು. ಬಿಬಿಸಿ ನ್ಯೂಸ್‌‌ನ ಪೊಲಿಟಿಕಲ್‌ ಎಡಿಟರ್‌ ಆಗಿರುವ ನಿಕೋಲಸ್ ವ್ಯಾಟ್ ಅವರನ್ನು ಬೆನ್ನಟ್ಟಿರುವ ಗುಂಪೊಂದು, ಅವರನ್ನು ‘ದೇಶದ್ರೋಹಿ’ ಮತ್ತು ‘ಕಲ್ಮಷ’ ಎಂದು ಕರೆದಿದ್ದಾರೆ.

ಇದನ್ನೂ ಓದಿ: ಮುಂಬೈ :ಏಷ್ಯಾದ ಅತಿ ದೊಡ್ಡ ಸ್ಲಂ ಧಾರಾವಿಯಲ್ಲಿ 2ನೇ ದಿನವು ಕೊರೊನಾ ಪ್ರಕರಣಗಳಿಲ್ಲ!

ಇಂಗ್ಲೆಂಡ್‌ ಸರ್ಕಾರವು ಕೊರೊನಾ ನಿರ್ಬಂಧವನ್ನು ನಾಲ್ಕು ವಾರಗಳವರೆಗೆ ವಿಸ್ತರಿಸುವುದನ್ನು ವಿರೋಧಿಸಿ ಈ ಜನಸಮೂಹವು ವೆಸ್ಟ್‌‌ಮಿನಿಷ್ಟರ್‌‌ನಲ್ಲಿ ಜಮಾಯಿಸಿತ್ತು.

ಪತ್ರಕರ್ತನನ್ನು ಬೆನ್ನಟ್ಟಿದ ಪ್ರತಿಭಟನಾಕರನೊಬ್ಬ, “ಲಾಕ್‌ಡೌನ್‌ಗಳು ಕಾನೂನು ಬದ್ಧವೆಂದು ನೀವು ಯಾಕೆ ವರದಿ ಮಾಡಿದ್ದೀರಿ? ಜನರನ್ನು ಅವರ ಮನೆಯಲ್ಲಿ ಲಾಕ್‌ ಮಾಡುವುದನ್ನು ಹೇಗೆ ಕಾನೂನು ಬದ್ಧವಾವಾಗುತ್ತದೆ?” ಎಂದು ಕೇಳಿದ್ದಾರೆ.

ಆಕ್ರಮಣಕಾರಿ ಗುಂಪು ನಿಕೋಲಸ್‌ ವ್ಯಾಟ್ ಅವರನ್ನು ಬೆನ್ನಟ್ಟುತ್ತಿರುವುದನ್ನು ಪೊಲೀಸರು ನೋಡುತ್ತಿದ್ದರೂ ಅವರ ರಕ್ಷಣೆಗೆ ಮುಂದಾಗಿಲ್ಲ.

ಇದನ್ನೂ ಓದಿ: ಮುಸ್ಲಿಂ ವ್ಯಕ್ತಿಯ ಮೇಲಿನ ಹಲ್ಲೆ ಸಮಾಜಕ್ಕೆ ಒಂದು ಕಳಂಕ : ರಾಹುಲ್ ಗಾಂಧಿ

“ತಮ್ಮ ಕೆಲಸ ಮಾಡುತ್ತಿರುವ ನಿಕ್‌ ವ್ಯಾಟ್ ಅವರನ್ನು ಬೆನ್ನಟ್ಟುತ್ತಿರುವುದು ನಾಚಿಕೆಗೇಡಾಗಿದೆ. ಮಾಧ್ಯಮಗಳು ಭಯವಿಲ್ಲದೆ ವರದಿ ಮಾಡಬೇಕು. ಅವು ನಮ್ಮ ಪ್ರಜಾಪ್ರಭುತ್ವದ ಜೀವನಾಡಿ” ಎಂದು ಪ್ರಧಾನಿ ಬೋರಿಸ್ ಜಾನ್ಸನ್‌ ಟ್ವೀಟ್ ಮಾಡಿದ್ದಾರೆ.

ಅವರ ಅಧಿಕೃತ ವಕ್ತಾರರು, “ಈ ವಿಡಿಯೊ ತುಣುಕು ತೀವ್ರವಾಗಿ ಗೊಂದಲಕ್ಕೀಡುಮಾಡಿದೆ. ಪತ್ರಕರ್ತರ ಮೇಲೆ ಎಂದಿಗೂ ಇಂತಹದ್ದು ನಡೆಯಬಾರದು. ಪ್ರತಿಭಟಿಸುವುದು ಪ್ರಜಾಪ್ರಭುತ್ವದ ಮೂಲಭೂತ ಹಕ್ಕಾಗಿದ್ದರೂ, ಹಿಂಸೆ ಮತ್ತು ಈ ರೀತಿಯ ಬೆದರಿಕೆ ಎಂದಿಗೂ ಸ್ವೀಕಾರಾರ್ಹವಲ್ಲ” ಎಂದು ಹೇಳಿದ್ದಾರೆ.

ಈ ಘಟನೆಯನ್ನು ದೇಶದ ಗೃಹ ಕಾರ್ಯದರ್ಶಿ ಪ್ರೀತಿ ಪಟೇಲ್ ಮತ್ತು ಬಿಬಿಸಿ ಕೂಡ ಖಂಡಿಸಿದೆ.

“ಈ ನಡವಳಿಕೆಯು ಸಂಪೂರ್ಣವಾಗಿ ಸ್ವೀಕಾರಾರ್ಹವಲ್ಲ. ಎಲ್ಲಾ ಪತ್ರಕರ್ತರು ಬೆದರಿಕೆ ಅಥವಾ ಅಡೆತಡೆಗಳಿಲ್ಲದೆ ತಮ್ಮ ಕೆಲಸವನ್ನು ನಿರ್ವಹಿಸಲು ಸಾಧ್ಯವಾಗಬೇಕು” ಎಂದು ಬಿಬಿಸಿ ನ್ಯೂಸ್‌ನ ವಕ್ತಾರರು ಹೇಳಿದ್ದಾರೆ.

ಪ್ರೀತಿ ಪಟೇಲ್ ಅವರು, “ಈ ನಡವಳಿಕೆ ಎಂದಿಗೂ ಸ್ವೀಕಾರಾರ್ಹವಲ್ಲ. ಪತ್ರಕರ್ತರ ಸುರಕ್ಷತೆ ನಮ್ಮ ಪ್ರಜಾಪ್ರಭುತ್ವದ ಮೂಲಭೂತ ತತ್ವದಾಗಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ನೇಮಕಾತಿಯಲ್ಲಿ ಹಿನ್ನಡೆ ಕಾರಣ: ಹೊಸ ಸಿಬಿಐ ನಿರ್ದೇಶಕರ ಅಧಿಕಾರವಧಿ ಕಡಿತಕ್ಕೆ ಮುಂದಾದ ಕೇಂದ್ರ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...