Homeಅಂತರಾಷ್ಟ್ರೀಯಬಿಬಿಸಿ ಪತ್ರಕರ್ತನ್ನು ಬೆನ್ನಟ್ಟಿ ‘ದೇಶದ್ರೋಹಿ’ ಎಂದ ಪ್ರತಿಭಟನಾಕಾರರು!

ಬಿಬಿಸಿ ಪತ್ರಕರ್ತನ್ನು ಬೆನ್ನಟ್ಟಿ ‘ದೇಶದ್ರೋಹಿ’ ಎಂದ ಪ್ರತಿಭಟನಾಕಾರರು!

- Advertisement -
- Advertisement -

ಲಂಡನಿನ ವೆಸ್ಟ್‌‌ಮಿನಿಸ್ಟರ್ ಹೊರಗಿನ ಲಾಕ್ಡೌನ್ ವಿರೋಧಿ ಪ್ರತಿಭಟನೆಯ ಸಮಯದಲ್ಲಿ ಪ್ರತಿಭಟನಾಕಾರರು ಬಿಬಿಸಿ ಪತ್ರಕರ್ತನನ್ನು ಬೆನ್ನಟ್ಟಿರುವ ಘಟನೆ ಕಳೆದ ಭಾನುವಾರ ನಡೆದಿದೆ. ಘಟನೆಯ ಬಗ್ಗೆ ಇಂಗ್ಲೇಂಡ್ ಪ್ರಧಾನಿ ಬೋರಿಸ್‌ ಜೋನ್ಸನ್‌‌ ಅಘಾತ ವ್ಯಕ್ತಪಡಿಸಿದ್ದಾರೆ.

ಘಟನೆಯ ವಿಡಿಯೊವನ್ನು ಮಂಗಳವಾರ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಲಾಗಿತ್ತು. ಬಿಬಿಸಿ ನ್ಯೂಸ್‌‌ನ ಪೊಲಿಟಿಕಲ್‌ ಎಡಿಟರ್‌ ಆಗಿರುವ ನಿಕೋಲಸ್ ವ್ಯಾಟ್ ಅವರನ್ನು ಬೆನ್ನಟ್ಟಿರುವ ಗುಂಪೊಂದು, ಅವರನ್ನು ‘ದೇಶದ್ರೋಹಿ’ ಮತ್ತು ‘ಕಲ್ಮಷ’ ಎಂದು ಕರೆದಿದ್ದಾರೆ.

ಇದನ್ನೂ ಓದಿ: ಮುಂಬೈ :ಏಷ್ಯಾದ ಅತಿ ದೊಡ್ಡ ಸ್ಲಂ ಧಾರಾವಿಯಲ್ಲಿ 2ನೇ ದಿನವು ಕೊರೊನಾ ಪ್ರಕರಣಗಳಿಲ್ಲ!

ಇಂಗ್ಲೆಂಡ್‌ ಸರ್ಕಾರವು ಕೊರೊನಾ ನಿರ್ಬಂಧವನ್ನು ನಾಲ್ಕು ವಾರಗಳವರೆಗೆ ವಿಸ್ತರಿಸುವುದನ್ನು ವಿರೋಧಿಸಿ ಈ ಜನಸಮೂಹವು ವೆಸ್ಟ್‌‌ಮಿನಿಷ್ಟರ್‌‌ನಲ್ಲಿ ಜಮಾಯಿಸಿತ್ತು.

ಪತ್ರಕರ್ತನನ್ನು ಬೆನ್ನಟ್ಟಿದ ಪ್ರತಿಭಟನಾಕರನೊಬ್ಬ, “ಲಾಕ್‌ಡೌನ್‌ಗಳು ಕಾನೂನು ಬದ್ಧವೆಂದು ನೀವು ಯಾಕೆ ವರದಿ ಮಾಡಿದ್ದೀರಿ? ಜನರನ್ನು ಅವರ ಮನೆಯಲ್ಲಿ ಲಾಕ್‌ ಮಾಡುವುದನ್ನು ಹೇಗೆ ಕಾನೂನು ಬದ್ಧವಾವಾಗುತ್ತದೆ?” ಎಂದು ಕೇಳಿದ್ದಾರೆ.

ಆಕ್ರಮಣಕಾರಿ ಗುಂಪು ನಿಕೋಲಸ್‌ ವ್ಯಾಟ್ ಅವರನ್ನು ಬೆನ್ನಟ್ಟುತ್ತಿರುವುದನ್ನು ಪೊಲೀಸರು ನೋಡುತ್ತಿದ್ದರೂ ಅವರ ರಕ್ಷಣೆಗೆ ಮುಂದಾಗಿಲ್ಲ.

ಇದನ್ನೂ ಓದಿ: ಮುಸ್ಲಿಂ ವ್ಯಕ್ತಿಯ ಮೇಲಿನ ಹಲ್ಲೆ ಸಮಾಜಕ್ಕೆ ಒಂದು ಕಳಂಕ : ರಾಹುಲ್ ಗಾಂಧಿ

“ತಮ್ಮ ಕೆಲಸ ಮಾಡುತ್ತಿರುವ ನಿಕ್‌ ವ್ಯಾಟ್ ಅವರನ್ನು ಬೆನ್ನಟ್ಟುತ್ತಿರುವುದು ನಾಚಿಕೆಗೇಡಾಗಿದೆ. ಮಾಧ್ಯಮಗಳು ಭಯವಿಲ್ಲದೆ ವರದಿ ಮಾಡಬೇಕು. ಅವು ನಮ್ಮ ಪ್ರಜಾಪ್ರಭುತ್ವದ ಜೀವನಾಡಿ” ಎಂದು ಪ್ರಧಾನಿ ಬೋರಿಸ್ ಜಾನ್ಸನ್‌ ಟ್ವೀಟ್ ಮಾಡಿದ್ದಾರೆ.

ಅವರ ಅಧಿಕೃತ ವಕ್ತಾರರು, “ಈ ವಿಡಿಯೊ ತುಣುಕು ತೀವ್ರವಾಗಿ ಗೊಂದಲಕ್ಕೀಡುಮಾಡಿದೆ. ಪತ್ರಕರ್ತರ ಮೇಲೆ ಎಂದಿಗೂ ಇಂತಹದ್ದು ನಡೆಯಬಾರದು. ಪ್ರತಿಭಟಿಸುವುದು ಪ್ರಜಾಪ್ರಭುತ್ವದ ಮೂಲಭೂತ ಹಕ್ಕಾಗಿದ್ದರೂ, ಹಿಂಸೆ ಮತ್ತು ಈ ರೀತಿಯ ಬೆದರಿಕೆ ಎಂದಿಗೂ ಸ್ವೀಕಾರಾರ್ಹವಲ್ಲ” ಎಂದು ಹೇಳಿದ್ದಾರೆ.

ಈ ಘಟನೆಯನ್ನು ದೇಶದ ಗೃಹ ಕಾರ್ಯದರ್ಶಿ ಪ್ರೀತಿ ಪಟೇಲ್ ಮತ್ತು ಬಿಬಿಸಿ ಕೂಡ ಖಂಡಿಸಿದೆ.

“ಈ ನಡವಳಿಕೆಯು ಸಂಪೂರ್ಣವಾಗಿ ಸ್ವೀಕಾರಾರ್ಹವಲ್ಲ. ಎಲ್ಲಾ ಪತ್ರಕರ್ತರು ಬೆದರಿಕೆ ಅಥವಾ ಅಡೆತಡೆಗಳಿಲ್ಲದೆ ತಮ್ಮ ಕೆಲಸವನ್ನು ನಿರ್ವಹಿಸಲು ಸಾಧ್ಯವಾಗಬೇಕು” ಎಂದು ಬಿಬಿಸಿ ನ್ಯೂಸ್‌ನ ವಕ್ತಾರರು ಹೇಳಿದ್ದಾರೆ.

ಪ್ರೀತಿ ಪಟೇಲ್ ಅವರು, “ಈ ನಡವಳಿಕೆ ಎಂದಿಗೂ ಸ್ವೀಕಾರಾರ್ಹವಲ್ಲ. ಪತ್ರಕರ್ತರ ಸುರಕ್ಷತೆ ನಮ್ಮ ಪ್ರಜಾಪ್ರಭುತ್ವದ ಮೂಲಭೂತ ತತ್ವದಾಗಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ನೇಮಕಾತಿಯಲ್ಲಿ ಹಿನ್ನಡೆ ಕಾರಣ: ಹೊಸ ಸಿಬಿಐ ನಿರ್ದೇಶಕರ ಅಧಿಕಾರವಧಿ ಕಡಿತಕ್ಕೆ ಮುಂದಾದ ಕೇಂದ್ರ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...