Homeಮುಖಪುಟಸಂಸತ್ತಿನಲ್ಲಿ ಮುಸ್ಲಿಂ ವಿರೋಧಿ ನಿಂದನೆ: ಬಿಜೆಪಿಯ ನಿಜವಾದ ಬಣ್ಣ ಬಯಲಾಗಿದೆ ಎಂದ ಮಹುವಾ ಮೊಯಿತ್ರಾ

ಸಂಸತ್ತಿನಲ್ಲಿ ಮುಸ್ಲಿಂ ವಿರೋಧಿ ನಿಂದನೆ: ಬಿಜೆಪಿಯ ನಿಜವಾದ ಬಣ್ಣ ಬಯಲಾಗಿದೆ ಎಂದ ಮಹುವಾ ಮೊಯಿತ್ರಾ

- Advertisement -
- Advertisement -

ಬಹುಜನ ಸಮಾಜ ಪಕ್ಷದ ಮುಸ್ಲಿಂ ಸಂಸದರ ವಿರುದ್ಧ ಬಿಜೆಪಿ ಸಂಸದ ಸಂಸತ್ತಿನಲ್ಲಿಯೇ ಕೋಮು ದೂಷಣೆ ಮಾಡಿದ ನಂತರ ತೃಣಮೂಲ ಕಾಂಗ್ರೆಸ್ ಸಂಸದ ಮಹುವಾ ಮೊಯಿತ್ರಾ ಅವರು ಬಿಜೆಪಿಯನ್ನು ತೀವ್ರವಾಗಿ ಟೀಕಿಸಿದ್ದಾರೆ.

ಈ ವಿಚಾರವಾಗಿ ಸುದ್ದಿ ಸಂಸ್ಥೆ ಪಿಟಿಐಗೆ ಮಾತನಾಡಿದ ಮೊಯಿತ್ರಾ, ”ಬಿಜೆಪಿ ಇಂತಹ ದ್ವೇಷದ ವಾತಾವರಣ ಸೃಷ್ಟಿಸಿದೆ. ಅವರು ಬಹಿರಂಗವಾಗಿ ಇಂತಹ ವಿಷಯಗಳನ್ನು ಹೇಳುವುದನ್ನು ಸಾಮಾನ್ಯಗೊಳಿಸಿದ್ದಾರೆ” ಎಂದು ಹರಿಹಾಯ್ದರು.

ಈ ದೇಶದಲ್ಲಿ ಅಲ್ಪಸಂಖ್ಯಾತ ಮುಸ್ಲಿಂ ಸಮುದಾಯವನ್ನು ವಿರುದ್ಧ ದ್ವೇಷದ ಭಾಷಣ ಮಾಡುತ್ತಿರುವುದನ್ನು ನೋಡಿ ನನಗೆ ಅಸಹ್ಯವೆನಿಸುತ್ತದೆ. ಆದರೆ ಈಗ ”ಬಿಜೆಪಿಯ ನಿಜವಾದ ಬಣ್ಣ ಬಯಲಾಗಿರುವುದು ಸಂತೋಷವಾಗಿದೆ” ಎಂದು ಹೇಳಿದರು.

ದಕ್ಷಿಣ ದೆಹಲಿಯ ಬಿಜೆಪಿ ಸಂಸದ ರಮೇಶ್ ಬಿಧುರಿ ಅವರು ಬಿಎಸ್‌ಪಿ ಸಂಸದ ಡ್ಯಾನಿಶ್ ಅಲಿ ಅವರಿಗೆ ಅವಹೇಳನಕಾರಿ ಪದಗಳನ್ನು ಬಳಸಿದ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹರಡಿದ ನಂತರ ವಿವಾದ ಭುಗಿಲೆದ್ದಿದೆ.

ಬಿಧುರಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರಿಗೆ ಅಲಿ ಪತ್ರ ಬರೆದಿದ್ದಾರೆ. ಕ್ರಮ ತೆಗೆದುಕೊಳ್ಳದಿದ್ದರೆ ಸಂಸತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದ್ದಾರೆ.

ಇದನ್ನೂ ಓದಿ: ‘ಇಂತಹ ವರ್ತನೆಗಳಿಗೆ BJP, RSS ಮುಕ್ತ ಅವಕಾಶ ನೀಡಿದೆ’: ಮುಸ್ಲಿಂ ವಿರೋಧಿ ನಿಂದನೆಗೆ ಶಶಿ ತರೂರ್ ಪ್ರತಿಕ್ರಿಯೆ

ಪತ್ರದಲ್ಲಿ ಏನಿದೆ?

”ಅವರು ನನ್ನ ವಿರುದ್ಧ ಅತ್ಯಂತ ಅಸಹ್ಯಕರ, ನಿಂದನೀಯ ಆಕ್ರಮಣ ಮಾಡಿದ್ದಾರೆ … ಅವರು ನನ್ನ ವಿರುದ್ಧ ಬಳಸಿದ ಪದಗಳಲ್ಲಿ ‘ಭದ್ವಾ’ (ಪಿಂಪ್), ‘ಕಟ್ವಾ’ (ಸುನ್ನತಿ ಮಾಡಿಸಿಕೊಂಡವರು), ‘ಮುಲ್ಲಾ ಉಗ್ರವಾದಿ’ ಮತ್ತು ‘ಮುಲ್ಲಾ ಆಟಂಕ್ವಾಡಿ. ‘(ಮುಸ್ಲಿಂ ಭಯೋತ್ಪಾದಕ) ಇತ್ಯಾದಿ… ಇದು ಅತ್ಯಂತ ದುರದೃಷ್ಟಕರ ಮತ್ತು ಸ್ಪೀಕರ್ ಆಗಿ ನಿಮ್ಮ ನೇತೃತ್ವದ ಹೊಸ ಸಂಸತ್ತಿನ ಕಟ್ಟಡದಲ್ಲಿ ಇದು ನಡೆದಿದೆ. ಈ ಮಹಾನ್ ರಾಷ್ಟ್ರದ ಅಲ್ಪಸಂಖ್ಯಾತ ಸದಸ್ಯ ಮತ್ತು ಚುನಾಯಿತ ಸಂಸದನಾಗಿ ನನಗೆ ನಿಜವಾಗಿಯೂ ಹೃದಯ ವಿದ್ರಾವಕ ಎನಿಸಿದೆ” ಎಂದು ಬರೆದಿದ್ದಾರೆ.

ವಿವಾದದ ಬಗ್ಗೆ ಪ್ರತಿಕ್ರಿಯಿಸಿದ ಮಹುವಾ ಮೊಯಿತ್ರಾ, ”ಬಿಧುರಿಯನ್ನು ಉದಾಹರಣೆಯಾಗಿ ಮಾಡಬೇಕು. ಸಮಸ್ಯೆ ಬಿಧುರಿಯೊಬ್ಬರದ್ದಲ್ಲ, ಸಮಸ್ಯೆ ಏನೆಂದರೆ, ಬಿಜೆಪಿಯವರು ಇಂತಹ ಮಾತುಗಳನ್ನು ಬಹಿರಂಗವಾಗಿ ಹೇಳುವುದನ್ನು ಸಾಮಾನ್ಯಗೊಳಿಸಿದ ವ್ಯವಸ್ಥೆಯನ್ನು ಸೃಷ್ಟಿಸಿದ್ದಾರೆ. ಜನರು ಬಿಜೆಪಿಯ ನಿಜವಾದ ಬಣ್ಣವನ್ನು ನೋಡಿದ್ದಾರೆ” ಎಂದರು.

”ಒಂದು ಘಟನೆ ಬಗ್ಗೆ ನನಗೆ ಅಸಹ್ಯ ಹುಟ್ಟಿದೆ. ಆದರೆ ಒಂದು ರೀತಿಯಲ್ಲಿ ನನಗೆ ಸಂತೋಷವಾಗಿದೆ ಏಕೆಂದರೆ ಜನರು ಬಿಜೆಪಿಯ ನಿಜವಾದ ಬಣ್ಣವನ್ನು ನೋಡುವ ಸಮಯ ಬಂದಿದೆ” ಎಂದು ಹೇಳಿದ್ದಾರೆ.

“ವಿಶ್ವದ ಅತ್ಯುನ್ನತ,  ಶ್ರೇಷ್ಠ ಪ್ರಜಾಪ್ರಭುತ್ವ ದೇಶದಲ್ಲಿ ಚುನಾಯಿತ ಪ್ರತಿನಿಧಿಯಾಗಿರುವ ಸಂಸದರ ಮುಖಕ್ಕೆ “ಈಸ್ ಮುಲ್ಲೆ ಕೊ ನಿಕಾಲ್ ಕೊ (ಈ ಮುಸಲ್ಮಾನನನ್ನು ಒದೆಯಿರಿ) ಎಂದು ನೀವು ಹೇಳಿದಂತಿದೆ ನಿಮ್ ಮಾತುಗಳು…” ಎಂದು ಮೋಯಿತ್ರಾ ಕಿಡಿಕಾರಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...