Homeಮುಖಪುಟಸಂಸತ್ತಿನಲ್ಲಿ ಮುಸ್ಲಿಂ ವಿರೋಧಿ ನಿಂದನೆ: ಬಿಜೆಪಿಯ ನಿಜವಾದ ಬಣ್ಣ ಬಯಲಾಗಿದೆ ಎಂದ ಮಹುವಾ ಮೊಯಿತ್ರಾ

ಸಂಸತ್ತಿನಲ್ಲಿ ಮುಸ್ಲಿಂ ವಿರೋಧಿ ನಿಂದನೆ: ಬಿಜೆಪಿಯ ನಿಜವಾದ ಬಣ್ಣ ಬಯಲಾಗಿದೆ ಎಂದ ಮಹುವಾ ಮೊಯಿತ್ರಾ

- Advertisement -
- Advertisement -

ಬಹುಜನ ಸಮಾಜ ಪಕ್ಷದ ಮುಸ್ಲಿಂ ಸಂಸದರ ವಿರುದ್ಧ ಬಿಜೆಪಿ ಸಂಸದ ಸಂಸತ್ತಿನಲ್ಲಿಯೇ ಕೋಮು ದೂಷಣೆ ಮಾಡಿದ ನಂತರ ತೃಣಮೂಲ ಕಾಂಗ್ರೆಸ್ ಸಂಸದ ಮಹುವಾ ಮೊಯಿತ್ರಾ ಅವರು ಬಿಜೆಪಿಯನ್ನು ತೀವ್ರವಾಗಿ ಟೀಕಿಸಿದ್ದಾರೆ.

ಈ ವಿಚಾರವಾಗಿ ಸುದ್ದಿ ಸಂಸ್ಥೆ ಪಿಟಿಐಗೆ ಮಾತನಾಡಿದ ಮೊಯಿತ್ರಾ, ”ಬಿಜೆಪಿ ಇಂತಹ ದ್ವೇಷದ ವಾತಾವರಣ ಸೃಷ್ಟಿಸಿದೆ. ಅವರು ಬಹಿರಂಗವಾಗಿ ಇಂತಹ ವಿಷಯಗಳನ್ನು ಹೇಳುವುದನ್ನು ಸಾಮಾನ್ಯಗೊಳಿಸಿದ್ದಾರೆ” ಎಂದು ಹರಿಹಾಯ್ದರು.

ಈ ದೇಶದಲ್ಲಿ ಅಲ್ಪಸಂಖ್ಯಾತ ಮುಸ್ಲಿಂ ಸಮುದಾಯವನ್ನು ವಿರುದ್ಧ ದ್ವೇಷದ ಭಾಷಣ ಮಾಡುತ್ತಿರುವುದನ್ನು ನೋಡಿ ನನಗೆ ಅಸಹ್ಯವೆನಿಸುತ್ತದೆ. ಆದರೆ ಈಗ ”ಬಿಜೆಪಿಯ ನಿಜವಾದ ಬಣ್ಣ ಬಯಲಾಗಿರುವುದು ಸಂತೋಷವಾಗಿದೆ” ಎಂದು ಹೇಳಿದರು.

ದಕ್ಷಿಣ ದೆಹಲಿಯ ಬಿಜೆಪಿ ಸಂಸದ ರಮೇಶ್ ಬಿಧುರಿ ಅವರು ಬಿಎಸ್‌ಪಿ ಸಂಸದ ಡ್ಯಾನಿಶ್ ಅಲಿ ಅವರಿಗೆ ಅವಹೇಳನಕಾರಿ ಪದಗಳನ್ನು ಬಳಸಿದ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹರಡಿದ ನಂತರ ವಿವಾದ ಭುಗಿಲೆದ್ದಿದೆ.

ಬಿಧುರಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರಿಗೆ ಅಲಿ ಪತ್ರ ಬರೆದಿದ್ದಾರೆ. ಕ್ರಮ ತೆಗೆದುಕೊಳ್ಳದಿದ್ದರೆ ಸಂಸತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದ್ದಾರೆ.

ಇದನ್ನೂ ಓದಿ: ‘ಇಂತಹ ವರ್ತನೆಗಳಿಗೆ BJP, RSS ಮುಕ್ತ ಅವಕಾಶ ನೀಡಿದೆ’: ಮುಸ್ಲಿಂ ವಿರೋಧಿ ನಿಂದನೆಗೆ ಶಶಿ ತರೂರ್ ಪ್ರತಿಕ್ರಿಯೆ

ಪತ್ರದಲ್ಲಿ ಏನಿದೆ?

”ಅವರು ನನ್ನ ವಿರುದ್ಧ ಅತ್ಯಂತ ಅಸಹ್ಯಕರ, ನಿಂದನೀಯ ಆಕ್ರಮಣ ಮಾಡಿದ್ದಾರೆ … ಅವರು ನನ್ನ ವಿರುದ್ಧ ಬಳಸಿದ ಪದಗಳಲ್ಲಿ ‘ಭದ್ವಾ’ (ಪಿಂಪ್), ‘ಕಟ್ವಾ’ (ಸುನ್ನತಿ ಮಾಡಿಸಿಕೊಂಡವರು), ‘ಮುಲ್ಲಾ ಉಗ್ರವಾದಿ’ ಮತ್ತು ‘ಮುಲ್ಲಾ ಆಟಂಕ್ವಾಡಿ. ‘(ಮುಸ್ಲಿಂ ಭಯೋತ್ಪಾದಕ) ಇತ್ಯಾದಿ… ಇದು ಅತ್ಯಂತ ದುರದೃಷ್ಟಕರ ಮತ್ತು ಸ್ಪೀಕರ್ ಆಗಿ ನಿಮ್ಮ ನೇತೃತ್ವದ ಹೊಸ ಸಂಸತ್ತಿನ ಕಟ್ಟಡದಲ್ಲಿ ಇದು ನಡೆದಿದೆ. ಈ ಮಹಾನ್ ರಾಷ್ಟ್ರದ ಅಲ್ಪಸಂಖ್ಯಾತ ಸದಸ್ಯ ಮತ್ತು ಚುನಾಯಿತ ಸಂಸದನಾಗಿ ನನಗೆ ನಿಜವಾಗಿಯೂ ಹೃದಯ ವಿದ್ರಾವಕ ಎನಿಸಿದೆ” ಎಂದು ಬರೆದಿದ್ದಾರೆ.

ವಿವಾದದ ಬಗ್ಗೆ ಪ್ರತಿಕ್ರಿಯಿಸಿದ ಮಹುವಾ ಮೊಯಿತ್ರಾ, ”ಬಿಧುರಿಯನ್ನು ಉದಾಹರಣೆಯಾಗಿ ಮಾಡಬೇಕು. ಸಮಸ್ಯೆ ಬಿಧುರಿಯೊಬ್ಬರದ್ದಲ್ಲ, ಸಮಸ್ಯೆ ಏನೆಂದರೆ, ಬಿಜೆಪಿಯವರು ಇಂತಹ ಮಾತುಗಳನ್ನು ಬಹಿರಂಗವಾಗಿ ಹೇಳುವುದನ್ನು ಸಾಮಾನ್ಯಗೊಳಿಸಿದ ವ್ಯವಸ್ಥೆಯನ್ನು ಸೃಷ್ಟಿಸಿದ್ದಾರೆ. ಜನರು ಬಿಜೆಪಿಯ ನಿಜವಾದ ಬಣ್ಣವನ್ನು ನೋಡಿದ್ದಾರೆ” ಎಂದರು.

”ಒಂದು ಘಟನೆ ಬಗ್ಗೆ ನನಗೆ ಅಸಹ್ಯ ಹುಟ್ಟಿದೆ. ಆದರೆ ಒಂದು ರೀತಿಯಲ್ಲಿ ನನಗೆ ಸಂತೋಷವಾಗಿದೆ ಏಕೆಂದರೆ ಜನರು ಬಿಜೆಪಿಯ ನಿಜವಾದ ಬಣ್ಣವನ್ನು ನೋಡುವ ಸಮಯ ಬಂದಿದೆ” ಎಂದು ಹೇಳಿದ್ದಾರೆ.

“ವಿಶ್ವದ ಅತ್ಯುನ್ನತ,  ಶ್ರೇಷ್ಠ ಪ್ರಜಾಪ್ರಭುತ್ವ ದೇಶದಲ್ಲಿ ಚುನಾಯಿತ ಪ್ರತಿನಿಧಿಯಾಗಿರುವ ಸಂಸದರ ಮುಖಕ್ಕೆ “ಈಸ್ ಮುಲ್ಲೆ ಕೊ ನಿಕಾಲ್ ಕೊ (ಈ ಮುಸಲ್ಮಾನನನ್ನು ಒದೆಯಿರಿ) ಎಂದು ನೀವು ಹೇಳಿದಂತಿದೆ ನಿಮ್ ಮಾತುಗಳು…” ಎಂದು ಮೋಯಿತ್ರಾ ಕಿಡಿಕಾರಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...

ಎಸ್‌ಐಆರ್‌ನಿಂದ ಹೊರಗಿಡಲಾದ ಜನರಿಗೆ ಪಡಿತರ ನಿರಾಕರಣೆ ಪ್ರಶ್ನಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಕಲ್ಕತ್ತಾ ಹೈಕೋರ್ಟ್‌ಗೆ ಹೋಗಲು ಸೂಚನೆ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ವ್ಯಕ್ತಿಗಳಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಿಡಿಎಸ್) ಪಡಿತರ ಸೌಲಭ್ಯ ಸೇರಿದಂತೆ ಇತರೆ ಕಲ್ಯಾಣ ಯೋಜನೆಗಳನ್ನು ನಿರಾಕರಿಸುತ್ತಿರುವ ಪಶ್ಚಿಮ ಬಂಗಾಳ...

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...