Homeಮುಖಪುಟಮುಸ್ಲಿಮರ ವಿರುದ್ಧದ ದ್ವೇಷ ಭಾಷಣ ಕಳೆದ 6 ತಿಂಗಳಲ್ಲಿ ಅತಿ ಹೆಚ್ಚಳ: ವರದಿ

ಮುಸ್ಲಿಮರ ವಿರುದ್ಧದ ದ್ವೇಷ ಭಾಷಣ ಕಳೆದ 6 ತಿಂಗಳಲ್ಲಿ ಅತಿ ಹೆಚ್ಚಳ: ವರದಿ

- Advertisement -
- Advertisement -

ಭಾರತದಲ್ಲಿ ಕಳೆದ ಆರು ತಿಂಗಳಲ್ಲಿ ಮುಸ್ಲಿಂ ವಿರೋಧಿ ದ್ವೇಷ ಭಾಷಣಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿರುವ ಬಗ್ಗೆ ವಾಷಿಂಗ್ಟನ್ ಮೂಲದ ಸಂಶೋಧನಾ ಸಮಿತಿ ಸ್ಪೋಟಕ ಮಾಹಿತಿಯನ್ನು ಬಹಿರಂಗಗೊಳಿಸಿದೆ. ವರ್ಷದ ಮೊದಲ ಆರು ತಿಂಗಳಿಗೆ ಹೋಲಿಸಿದರೆ 2023ರ ದ್ವಿತೀಯಾರ್ಧದಲ್ಲಿ ಭಾರತದಲ್ಲಿ ಮುಸ್ಲಿಂ ವಿರೋಧಿ ದ್ವೇಷದ ಭಾಷಣವು ಶೇಕಡಾ 62ರಷ್ಟು ಹೆಚ್ಚಾಗಿದೆ ಎಂದು ತಿಳಿಸಿದೆ.

‘ಇಂಡಿಯಾ ಹೇಟ್ ಲ್ಯಾಬ್’ 2023ರಲ್ಲಿ ಮುಸ್ಲಿಮರನ್ನು ಗುರಿಯಾಗಿಸಿಕೊಂಡ 668 ದ್ವೇಷ ಭಾಷಣ ಘಟನೆಗಳನ್ನು ಉಲ್ಲೇಖಿಸಿದೆ. ಅದರಲ್ಲಿ 255 ವರ್ಷದ ಮೊದಲಾರ್ಧದಲ್ಲಿ ಸಂಭವಿಸಿದೆ ಮತ್ತು 2023ರ ಕೊನೆಯ ಆರು ತಿಂಗಳಲ್ಲಿ 413 ಘಟನೆಗಳು ನಡೆದಿವೆ ಎಂದು ಸಂಶೋಧನಾ ಸಮಿತಿ ಸೋಮವಾರ ಬಿಡುಗಡೆ ಮಾಡಿದ ವರದಿಯಲ್ಲಿ ತಿಳಿಸಿದೆ.

ವರದಿಯ ಪ್ರಕಾರ, ಸುಮಾರು 75 ಪ್ರತಿಶತ ಅಥವಾ 498 ಘಟನೆಗಳು ಭಾರತೀಯ ಜನತಾ ಪಕ್ಷ (ಬಿಜೆಪಿ) ಆಡಳಿತವಿರುವ ರಾಜ್ಯಗಳಲ್ಲಿ ನಡೆದಿವೆ. ಮಹಾರಾಷ್ಟ್ರ, ಉತ್ತರ ಪ್ರದೇಶ ಮತ್ತು ಮಧ್ಯಪ್ರದೇಶ ರಾಜ್ಯಗಳಲ್ಲಿ ಹೆಚ್ಚು ದ್ವೇಷಪೂರಿತ ಭಾಷಣಗಳನ್ನು ಮಾಡಲಾಗಿದೆ ಎಂದು ವರದಿಯು ತಿಳಿಸಿದೆ.

ಅಕ್ಟೋಬರ್ 7ರಂದು ಹಮಾಸ್‌ ಸಶಸ್ತ್ರ ಗುಂಪು ಮತ್ತು ಇಸ್ರೇಲ್‌ ನಡುವೆ ಯುದ್ಧ ಘೋಷಣೆ ಬಳಿಕ ಭಾರತೀಯ ಮುಸ್ಲಿಮರ ವಿರುದ್ಧ ದ್ವೇಷದ ಭಾಷಣದ 41 ಘಟನೆಗಳು ವರದಿಯಾಗಿದೆ. ಅಂದರೆ 2023ರ ಕೊನೆಯ ಮೂರು ತಿಂಗಳಲ್ಲಿ ಸುಮಾರು 20 ಪ್ರತಿ ಶತದಷ್ಟು ದ್ವೇಷ ಭಾಷಣ ಪ್ರಕರಣಗಳು ವರದಿಯಾಗಿದೆ ಎಂದು ಸಂಶೋಧನೆಯು ಉಲ್ಲೇಖಿಸಿದೆ.

ಸಂಶೋಧನೆಯ ವೇಳೆ ಧರ್ಮ, ಜನಾಂಗೀಯತೆ, ರಾಷ್ಟ್ರೀಯತೆ, ಜನಾಂಗ ಅಥವಾ ಲಿಂಗದ ಆಧಾರದ ಮೇಲೆ ವ್ಯಕ್ತಿ ಅಥವಾ ಗುಂಪಿನ ಬಗ್ಗೆ ಪೂರ್ವಾಗ್ರಹ ಪೀಡಿತ ಅಥವಾ ತಾರತಮ್ಯದ ಭಾಷೆಯ ಬಳಕೆ ಎಂಬ ವಿಶ್ವಸಂಸ್ಥೆಯ ವ್ಯಾಖ್ಯಾನದಂತೆ ದ್ವೇಷ ಭಾಷಣವನ್ನು ಪತ್ತೆಹಚ್ಚಲಾಗಿದೆ ಎಂದು ಸಂಶೋಧನೆಯು ಬಹಿರಂಗಪಡಿಸಿದೆ. 2014ರಲ್ಲಿ ಪ್ರಧಾನಿಯಾಗಿ ಮೋದಿ ಅಧಿಕಾರವನ್ನು ಸ್ವೀಕರಿಸಿದ ಬಳಿಕ ಮೋದಿ ಆಡಳಿತದಲ್ಲಿ ಮುಸ್ಲಿಮರ ಮೇಲೆ ಅನ್ಯಾಯ ನಡೆಸಲಾಗಿದೆ ಎಂದು ಹೇಳಿದೆ.

ಅವರು UN ಮಾನವ ಹಕ್ಕುಗಳ ಕಚೇರಿ ಮೂಲಭೂತವಾಗಿ ತಾರತಮ್ಯ ಎಂದು ಕರೆಯುವ 2019ರ ಪೌರತ್ವ ಕಾನೂನು, ಮತಾಂತರ-ವಿರೋಧಿ ಶಾಸನ ಮತ್ತು ಮುಸ್ಲಿಂ ಬಹುಸಂಖ್ಯಾತ ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ಹಿಂಪಡೆದಿರುವುದು ಸೇರಿದಂತೆ ವಿವಿಧ ವಿಚಾರಗಳನ್ನು ಉಲ್ಲೇಖಿಸಲಾಗಿದೆ. ಅಕ್ರಮ ಕಟ್ಟಡಗಳನ್ನು ತೆಗೆದುಹಾಕುವ ಹೆಸರಿನಲ್ಲಿ ಮುಸ್ಲಿಂ ಆಸ್ತಿಗಳನ್ನು ಧ್ವಂಸಗೊಳಿಸಲಾಗಿದೆ ಮತ್ತು ಕರ್ನಾಟಕದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದಾಗ ತರಗತಿಯಲ್ಲಿ ಹಿಜಾಬ್ ಧರಿಸುವುದನ್ನು ನಿಷೇಧಿಸಲಾಗಿದೆ ಎಂದು ಸಮಿತಿಯ ವರದಿಯು ಉಲ್ಲೇಖಿಸಿದೆ.

ಮೋದಿ ಸರ್ಕಾರವು ಅಲ್ಪಸಂಖ್ಯಾತರ ಮೇಲಿನ ಈ ದಾಳಿಯನ್ನು ನಿರಾಕರಿಸಿದೆ. ವಾಷಿಂಗ್ಟನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಮತ್ತು ಭಾರತದ ವಿದೇಶಾಂಗ ಸಚಿವಾಲಯವು ಈ ಬಗ್ಗೆ ಪ್ರತಿಕ್ರಿಯೆಗೆ ಮುಂದೆ ಬಂದಿಲ್ಲ ಎಂದು ವರದಿ ತಿಳಿಸಿದೆ. ಇಂಡಿಯಾ ಹೇಟ್ ಲ್ಯಾಬ್ ಹಿಂದೂ ರಾಷ್ಟ್ರೀಯತಾವಾದಿ ಗುಂಪುಗಳ ಆನ್‌ಲೈನ್ ಚಟುವಟಿಕೆಯನ್ನು  ಟ್ರ್ಯಾಕ್ ಮಾಡಿದೆ, ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ ದ್ವೇಷ ಭಾಷಣದ ವೀಡಿಯೊಗಳನ್ನು ಪರಿಶೀಲಿಸಿದೆ ಮತ್ತು ಭಾರತೀಯ ಮಾಧ್ಯಮಗಳು ವರದಿ ಮಾಡಿದ ಪ್ರತ್ಯೇಕ ಘಟನೆಗಳ ದಾಖಲೆಯನ್ನು ಸಂಗ್ರಹಿಸಿ ವರದಿಯನ್ನು ಸಿದ್ದ ಪಡಿಸಿದೆ.

ಇದನ್ನು ಓದಿ: ಬಿಜೆಪಿ ಆಡಳಿತದ ಹರ್ಯಾಣದಲ್ಲಿ INLD ಪಕ್ಷದ ರಾಜ್ಯಾಧ್ಯಕ್ಷರನ್ನು ಗುಂಡಿಟ್ಟು ಹತ್ಯೆ: ಸಂಶಯಕ್ಕೆ ಕಾರಣವಾದ INDIA ಒಕ್ಕೂಟದ ಜೊತೆ ಮೈತ್ರಿ ಹಂತದಲ್ಲಿ ನಡೆದ ಘಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...