Homeಮುಖಪುಟಮುಸ್ಲಿಮರ ವಿರುದ್ಧದ ದ್ವೇಷ ಭಾಷಣ ಕಳೆದ 6 ತಿಂಗಳಲ್ಲಿ ಅತಿ ಹೆಚ್ಚಳ: ವರದಿ

ಮುಸ್ಲಿಮರ ವಿರುದ್ಧದ ದ್ವೇಷ ಭಾಷಣ ಕಳೆದ 6 ತಿಂಗಳಲ್ಲಿ ಅತಿ ಹೆಚ್ಚಳ: ವರದಿ

- Advertisement -
- Advertisement -

ಭಾರತದಲ್ಲಿ ಕಳೆದ ಆರು ತಿಂಗಳಲ್ಲಿ ಮುಸ್ಲಿಂ ವಿರೋಧಿ ದ್ವೇಷ ಭಾಷಣಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿರುವ ಬಗ್ಗೆ ವಾಷಿಂಗ್ಟನ್ ಮೂಲದ ಸಂಶೋಧನಾ ಸಮಿತಿ ಸ್ಪೋಟಕ ಮಾಹಿತಿಯನ್ನು ಬಹಿರಂಗಗೊಳಿಸಿದೆ. ವರ್ಷದ ಮೊದಲ ಆರು ತಿಂಗಳಿಗೆ ಹೋಲಿಸಿದರೆ 2023ರ ದ್ವಿತೀಯಾರ್ಧದಲ್ಲಿ ಭಾರತದಲ್ಲಿ ಮುಸ್ಲಿಂ ವಿರೋಧಿ ದ್ವೇಷದ ಭಾಷಣವು ಶೇಕಡಾ 62ರಷ್ಟು ಹೆಚ್ಚಾಗಿದೆ ಎಂದು ತಿಳಿಸಿದೆ.

‘ಇಂಡಿಯಾ ಹೇಟ್ ಲ್ಯಾಬ್’ 2023ರಲ್ಲಿ ಮುಸ್ಲಿಮರನ್ನು ಗುರಿಯಾಗಿಸಿಕೊಂಡ 668 ದ್ವೇಷ ಭಾಷಣ ಘಟನೆಗಳನ್ನು ಉಲ್ಲೇಖಿಸಿದೆ. ಅದರಲ್ಲಿ 255 ವರ್ಷದ ಮೊದಲಾರ್ಧದಲ್ಲಿ ಸಂಭವಿಸಿದೆ ಮತ್ತು 2023ರ ಕೊನೆಯ ಆರು ತಿಂಗಳಲ್ಲಿ 413 ಘಟನೆಗಳು ನಡೆದಿವೆ ಎಂದು ಸಂಶೋಧನಾ ಸಮಿತಿ ಸೋಮವಾರ ಬಿಡುಗಡೆ ಮಾಡಿದ ವರದಿಯಲ್ಲಿ ತಿಳಿಸಿದೆ.

ವರದಿಯ ಪ್ರಕಾರ, ಸುಮಾರು 75 ಪ್ರತಿಶತ ಅಥವಾ 498 ಘಟನೆಗಳು ಭಾರತೀಯ ಜನತಾ ಪಕ್ಷ (ಬಿಜೆಪಿ) ಆಡಳಿತವಿರುವ ರಾಜ್ಯಗಳಲ್ಲಿ ನಡೆದಿವೆ. ಮಹಾರಾಷ್ಟ್ರ, ಉತ್ತರ ಪ್ರದೇಶ ಮತ್ತು ಮಧ್ಯಪ್ರದೇಶ ರಾಜ್ಯಗಳಲ್ಲಿ ಹೆಚ್ಚು ದ್ವೇಷಪೂರಿತ ಭಾಷಣಗಳನ್ನು ಮಾಡಲಾಗಿದೆ ಎಂದು ವರದಿಯು ತಿಳಿಸಿದೆ.

ಅಕ್ಟೋಬರ್ 7ರಂದು ಹಮಾಸ್‌ ಸಶಸ್ತ್ರ ಗುಂಪು ಮತ್ತು ಇಸ್ರೇಲ್‌ ನಡುವೆ ಯುದ್ಧ ಘೋಷಣೆ ಬಳಿಕ ಭಾರತೀಯ ಮುಸ್ಲಿಮರ ವಿರುದ್ಧ ದ್ವೇಷದ ಭಾಷಣದ 41 ಘಟನೆಗಳು ವರದಿಯಾಗಿದೆ. ಅಂದರೆ 2023ರ ಕೊನೆಯ ಮೂರು ತಿಂಗಳಲ್ಲಿ ಸುಮಾರು 20 ಪ್ರತಿ ಶತದಷ್ಟು ದ್ವೇಷ ಭಾಷಣ ಪ್ರಕರಣಗಳು ವರದಿಯಾಗಿದೆ ಎಂದು ಸಂಶೋಧನೆಯು ಉಲ್ಲೇಖಿಸಿದೆ.

ಸಂಶೋಧನೆಯ ವೇಳೆ ಧರ್ಮ, ಜನಾಂಗೀಯತೆ, ರಾಷ್ಟ್ರೀಯತೆ, ಜನಾಂಗ ಅಥವಾ ಲಿಂಗದ ಆಧಾರದ ಮೇಲೆ ವ್ಯಕ್ತಿ ಅಥವಾ ಗುಂಪಿನ ಬಗ್ಗೆ ಪೂರ್ವಾಗ್ರಹ ಪೀಡಿತ ಅಥವಾ ತಾರತಮ್ಯದ ಭಾಷೆಯ ಬಳಕೆ ಎಂಬ ವಿಶ್ವಸಂಸ್ಥೆಯ ವ್ಯಾಖ್ಯಾನದಂತೆ ದ್ವೇಷ ಭಾಷಣವನ್ನು ಪತ್ತೆಹಚ್ಚಲಾಗಿದೆ ಎಂದು ಸಂಶೋಧನೆಯು ಬಹಿರಂಗಪಡಿಸಿದೆ. 2014ರಲ್ಲಿ ಪ್ರಧಾನಿಯಾಗಿ ಮೋದಿ ಅಧಿಕಾರವನ್ನು ಸ್ವೀಕರಿಸಿದ ಬಳಿಕ ಮೋದಿ ಆಡಳಿತದಲ್ಲಿ ಮುಸ್ಲಿಮರ ಮೇಲೆ ಅನ್ಯಾಯ ನಡೆಸಲಾಗಿದೆ ಎಂದು ಹೇಳಿದೆ.

ಅವರು UN ಮಾನವ ಹಕ್ಕುಗಳ ಕಚೇರಿ ಮೂಲಭೂತವಾಗಿ ತಾರತಮ್ಯ ಎಂದು ಕರೆಯುವ 2019ರ ಪೌರತ್ವ ಕಾನೂನು, ಮತಾಂತರ-ವಿರೋಧಿ ಶಾಸನ ಮತ್ತು ಮುಸ್ಲಿಂ ಬಹುಸಂಖ್ಯಾತ ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ಹಿಂಪಡೆದಿರುವುದು ಸೇರಿದಂತೆ ವಿವಿಧ ವಿಚಾರಗಳನ್ನು ಉಲ್ಲೇಖಿಸಲಾಗಿದೆ. ಅಕ್ರಮ ಕಟ್ಟಡಗಳನ್ನು ತೆಗೆದುಹಾಕುವ ಹೆಸರಿನಲ್ಲಿ ಮುಸ್ಲಿಂ ಆಸ್ತಿಗಳನ್ನು ಧ್ವಂಸಗೊಳಿಸಲಾಗಿದೆ ಮತ್ತು ಕರ್ನಾಟಕದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದಾಗ ತರಗತಿಯಲ್ಲಿ ಹಿಜಾಬ್ ಧರಿಸುವುದನ್ನು ನಿಷೇಧಿಸಲಾಗಿದೆ ಎಂದು ಸಮಿತಿಯ ವರದಿಯು ಉಲ್ಲೇಖಿಸಿದೆ.

ಮೋದಿ ಸರ್ಕಾರವು ಅಲ್ಪಸಂಖ್ಯಾತರ ಮೇಲಿನ ಈ ದಾಳಿಯನ್ನು ನಿರಾಕರಿಸಿದೆ. ವಾಷಿಂಗ್ಟನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಮತ್ತು ಭಾರತದ ವಿದೇಶಾಂಗ ಸಚಿವಾಲಯವು ಈ ಬಗ್ಗೆ ಪ್ರತಿಕ್ರಿಯೆಗೆ ಮುಂದೆ ಬಂದಿಲ್ಲ ಎಂದು ವರದಿ ತಿಳಿಸಿದೆ. ಇಂಡಿಯಾ ಹೇಟ್ ಲ್ಯಾಬ್ ಹಿಂದೂ ರಾಷ್ಟ್ರೀಯತಾವಾದಿ ಗುಂಪುಗಳ ಆನ್‌ಲೈನ್ ಚಟುವಟಿಕೆಯನ್ನು  ಟ್ರ್ಯಾಕ್ ಮಾಡಿದೆ, ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ ದ್ವೇಷ ಭಾಷಣದ ವೀಡಿಯೊಗಳನ್ನು ಪರಿಶೀಲಿಸಿದೆ ಮತ್ತು ಭಾರತೀಯ ಮಾಧ್ಯಮಗಳು ವರದಿ ಮಾಡಿದ ಪ್ರತ್ಯೇಕ ಘಟನೆಗಳ ದಾಖಲೆಯನ್ನು ಸಂಗ್ರಹಿಸಿ ವರದಿಯನ್ನು ಸಿದ್ದ ಪಡಿಸಿದೆ.

ಇದನ್ನು ಓದಿ: ಬಿಜೆಪಿ ಆಡಳಿತದ ಹರ್ಯಾಣದಲ್ಲಿ INLD ಪಕ್ಷದ ರಾಜ್ಯಾಧ್ಯಕ್ಷರನ್ನು ಗುಂಡಿಟ್ಟು ಹತ್ಯೆ: ಸಂಶಯಕ್ಕೆ ಕಾರಣವಾದ INDIA ಒಕ್ಕೂಟದ ಜೊತೆ ಮೈತ್ರಿ ಹಂತದಲ್ಲಿ ನಡೆದ ಘಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...

ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆ: ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚನೆ

ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳನ್ನು ಪರಿಶೀಲಿಸಿ, ಅವುಗಳನ್ನು ಹಿಂಪಡೆಯುವ ಕುರಿತು ಸರ್ಕಾರಕ್ಕೆ ಶಿಫಾರಸು ಮಾಡಲು ಕರ್ನಾಟಕ ಸರ್ಕಾರವು ಆರು ಮಂದಿ ಸಚಿವರನ್ನೊಳಗೊಂಡ ಸಂಪುಟ ಉಪಸಮಿತಿಯನ್ನು ರಚಿಸಿದೆ. ಸರ್ಕಾರದ ಅಧಿಕೃತ...

ಉದ್ಯಾನವನ ನುಂಗುವ ಕಾಯ್ದೆ ತಿದ್ದುಪಡಿ : ಸರ್ಕಾರದ ವಿರುದ್ಧ ಸಿಡಿದೆದ್ದ ಬೆಂಗಳೂರಿಗರು

ಕರ್ನಾಟಕ ವಿಧಾನಮಂಡಲವು ಸರ್ಕಾರಿ ಉದ್ಯಾನವನಗಳು ಮತ್ತು ತೋಟಗಳ ಕೆಲವು ಭಾಗಗಳನ್ನು ಸಾರ್ವಜನಿಕ ಮೂಲಸೌಕರ್ಯ ಯೋಜನೆಗಳಿಗಾಗಿ ಬಳಸಲು ಅನುಮತಿಸುವ ಕಾಯ್ದೆ ತಿದ್ದುಪಡಿಯನ್ನು ಅಂಗೀಕರಿಸಿದ ನಂತರ, ಬೆಂಗಳೂರಿನ ಉದ್ಯಾನವನಗಳು ಹೊಸ ರಾಜಕೀಯ ಮತ್ತು ಪರಿಸರ ವಿವಾದದ...

ನೇಪಾಳ–ಟಿಬೆಟ್ ಭೀಕರ ಪ್ರವಾಹ: ನೇಪಾಳದಲ್ಲಿ 734 ಸಾವು, 2,498 ಮಂದಿ ನಾಪತ್ತೆ; ಒಟ್ಟು ಸಾವಿನ ಸಂಖ್ಯೆ 750ಕ್ಕೆ ಏರಿಕೆ!

ನೇಪಾಳ–ಚೀನಾ ಗಡಿ ಪ್ರದೇಶದಲ್ಲಿ ಹಿಮನದಿ ಕುಸಿತದಿಂದ ಉಂಟಾದ ಭೀಕರ ಪ್ರವಾಹ ಮತ್ತು ಅವಶೇಷ ಪ್ರವಾಹದಲ್ಲಿ ನೇಪಾಳದಲ್ಲಿ ಇದುವರೆಗೆ 734 ಮಂದಿ ಮೃತಪಟ್ಟಿದ್ದು, 2,498 ಮಂದಿ ನಾಪತ್ತೆಯಾಗಿದ್ದಾರೆ. ಚೀನಾದ ಟಿಬೆಟ್ ಪ್ರದೇಶದಲ್ಲಿ 16 ಮಂದಿ...

“ಇಂತಹ ಸೌಹಾರ್ದತೆಯ ಮಾತುಗಳನ್ನು ಅಮೆರಿಕಾದಲ್ಲಲ್ಲ, ಭಾರತಕ್ಕೆ ಬಂದು ಇಲ್ಲಿನ ಜನರಿಗೆ ಹೇಳಿ!” – ಭಾಗವತ್‌ಗೆ ವಿರೋಧ ಪಕ್ಷಗಳ ಸವಾಲು

ನ್ಯೂಯಾರ್ಕ್/ಮುಂಬೈ: ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ ಅವರು ಅಮೆರಿಕಾದ ನ್ಯೂಯಾರ್ಕ್‌ನಲ್ಲಿ ನೀಡಿರುವ ಸೌಹಾರ್ದತೆಯ ಹೇಳಿಕೆ ಈಗ ಭಾರತೀಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ವಿದೇಶಿ ಮಣ್ಣಿನಲ್ಲಿ ಮುಸ್ಲಿಂ ಸಮುದಾಯದ ಪರವಾಗಿ...

ಸ್ವದೇಶದಲ್ಲಿ ಹಿಂದೂ ರಾಷ್ಟ್ರ, ವಿದೇಶದಲ್ಲಿ ಒಳಗೊಳ್ಳುವಿಕೆ ಮಂತ್ರ : ಆರ್‌ಎಸ್‌ಎಸ್‌ ದ್ವಂದ್ವ ನಿಲುವು ಪ್ರಶ್ನಿಸಿದ ಪ್ರಿಯಾಂಕ್ ಖರ್ಗೆ

"ಭಾರತದಲ್ಲಿ ಮುಸ್ಲಿಮರು ಇರಬಾರದು ಎನ್ನುವವನು ಹಿಂದೂ ಅಲ್ಲ" ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಅಮೆರಿದಲ್ಲಿ ನೀಡಿರುವ ಹೇಳಿಕೆಯ ಸುತ್ತ ಭಾರೀ ಚರ್ಚೆಗಳು ನಡೆಯುತ್ತಿವೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ...

ಮಹಾರಾಷ್ಟ್ರ | ಬುಡಕಟ್ಟು ವಿದ್ಯಾರ್ಥಿಗಳ ಹೋರಾಟಕ್ಕೆ ಜಯ : ಎಲ್ಲಾ ಬೇಡಿಕೆಗಳ ಈಡೇರಿಕೆಗೆ ಒಪ್ಪಿದ ಸರ್ಕಾರ

ಮಹಾರಾಷ್ಟ್ರದಲ್ಲಿ ಸರ್ಕಾರಿ ಉದ್ಯೋಗಗಳಲ್ಲಿ ಪರಿಶಿಷ್ಟ ಪಂಗಡದ (ಎಸ್‌ಟಿ) ಅಭ್ಯರ್ಥಿಗಳಿಗೆ ಆದ್ಯತೆ ಹಾಗೂ ವಸತಿ ಶಾಲೆಗಳ ಮೂಲಸೌಕರ್ಯ ಸುಧಾರಣೆಗೆ ಆಗ್ರಹಿಸಿ ಕಳೆದ 16 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಬುಡಕಟ್ಟು ವಿದ್ಯಾರ್ಥಿಗಳ ಸುದೀರ್ಘ ಹೋರಾಟಕ್ಕೆ...