Homeಮುಖಪುಟ2002 ರಲ್ಲಿ ಗುಜರಾತ್‌ನಲ್ಲಿ ಮುಸ್ಲಿಂ ವಿರೋಧಿ ಹಿಂಸಾಚಾರ ಯಾವ ಸರ್ಕಾರದ ಅಡಿಯಲ್ಲಿ ನಡೆಯಿತು?: CBSE ಪ್ರಶ್ನೆ!

2002 ರಲ್ಲಿ ಗುಜರಾತ್‌ನಲ್ಲಿ ಮುಸ್ಲಿಂ ವಿರೋಧಿ ಹಿಂಸಾಚಾರ ಯಾವ ಸರ್ಕಾರದ ಅಡಿಯಲ್ಲಿ ನಡೆಯಿತು?: CBSE ಪ್ರಶ್ನೆ!

- Advertisement -
- Advertisement -

“2002 ರಲ್ಲಿ ಗುಜರಾತ್‌ನಲ್ಲಿ ಅಪಾರ ಪ್ರಮಾಣದ ಮುಸ್ಲಿಂ ವಿರೋಧಿ ಹಿಂಸಾಚಾರ ಯಾವ ಸರ್ಕಾರದ ಅಡಿಯಲ್ಲಿ ನಡೆಯಿತು?” ಇದು ಡಿಸೆಂಬರ್ 1ರ ಬುಧವಾರದಂದು CBSE 12 ನೇ ತರಗತಿಯ ಸಮಾಜಶಾಸ್ತ್ರದ ಅವಧಿ 1 ಪರೀಕ್ಷೆಯಲ್ಲಿ ಕೇಳಲಾದ ಪ್ರಶ್ನೆ!

ವಿದ್ಯಾರ್ಥಿಗಳಿಗೆ ಉತ್ತರಿಸಲು ನೀಡಲಾದ ಆಯ್ಕೆಗಳು ಇಂತಿವೆ..

(ಎ) ಕಾಂಗ್ರೆಸ್

(ಬಿ) ಬಿಜೆಪಿ

(ಸಿ) ಡೆಮಾಕ್ರಟಿಕ್

(ಡಿ) ರಿಪಬ್ಲಿಕನ್

ಇದಕ್ಕೆ ಬಿಜೆಪಿ ಎಂದು ಬಹುತೇಕ ವಿದ್ಯಾರ್ಥಿಗಳು ಉತ್ತರಿಸಿರಬಹುದು. ಆದರೆ ಪರೀಕ್ಷೆ ಆರಂಭವಾದ ಕೆಲವೇ ಸಮುಯದಲ್ಲಿ, CBSEಯು ಈ ಪ್ರಶ್ನೆಯನ್ನು ಅಸಮರ್ಪಕ ಮತ್ತು CBSE ಮಾರ್ಗಸೂಚಿಗಳನ್ನು ಉಲ್ಲಂಘಿಸಿದೆ ಎಂದು ಅಧಿಕೃತ ಹೇಳಿಕೆ ನೀಡಿದೆ ಎಂದು ದಿ ಕ್ವಿಂಟ್ ವರದಿ ಮಾಡಿದೆ.

ಈ ಕುರಿತು ಟ್ವೀಟ್ ಮಾಡಿರುವ ಸಿಬಿಎಸ್ಸಿ “ಇಂದಿನ 12 ನೇ ತರಗತಿಯ ಸಮಾಜಶಾಸ್ತ್ರದ ಅವಧಿ 1 ಪರೀಕ್ಷೆಯಲ್ಲಿ ಕೇಳಲಾದ ಪ್ರಶ್ನೆಯು ಅಸಮರ್ಪಕವಾಗಿದೆ ಮತ್ತು CBSE ಮಾರ್ಗಸೂಚಿಗಳನ್ನು ಉಲ್ಲಂಘಿಸುತ್ತದೆ. ಇದು ವಿಷಯಕ್ಕೆ ಸಂಬಂಧಿಸಿಲ್ಲವಾದರೂ ಪ್ರಶ್ನೆ ಪತ್ರಿಕೆ ಹೊಂದಿಸುವವರು ಎಸಗಿರುವ ಪ್ರಮಾದವಾಗಿದ್ದು, ಈ ದೋಷವನ್ನು ಸಿಬಿಎಸ್‌ಸಿ ಒಪ್ಪಿಕೊಂಡಿದೆ ಮತ್ತು ಇದಕ್ಕೆ ಕಾರಣರಾದ ವ್ಯಕ್ತಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುತ್ತದೆ” ಎಂದು ತಿಳಿಸಿದೆ.

ಆದರೆ ಸಿಬಿಎಸ್‌ಸಿ ತನ್ನ ಟ್ವೀಟ್‌ ನಲ್ಲಿ ಯಾವ ಪ್ರಶ್ನೆ ಎಂದು ಉಲ್ಲೇಖಿಸಿಲ್ಲ. ಈ ಕುರಿತು ಕ್ವಿಂಟ್ ಸಿಬಿಎಸ್‌ಸಿಯನ್ನು ಸಂಪರ್ಕಿಸಿದಾಗ “2002 ರಲ್ಲಿ ಗುಜರಾತ್‌ನಲ್ಲಿ ಅಪಾರ ಪ್ರಮಾಣದ ಮುಸ್ಲಿಂ ವಿರೋಧಿ ಹಿಂಸಾಚಾರ ಯಾವ ಸರ್ಕಾರದ ಅಡಿಯಲ್ಲಿ ನಡೆಯಿತು?” ಎಂಬ ಪ್ರಶ್ನೆಗೆ ಸಂಬಂಧಿಸಿದ ಸ್ಪಷ್ಟೀಕರಣ ಎಂದು ದೃಢಪಡಿಸಿದೆ.

ಇದು ಮೋದಿ ಸರ್ಕಾರಕ್ಕಾದ ಬಹುದೊಡ್ಡ ಮುಜುಗರ. ಆ ಪ್ರಶ್ನೆ ಕೇಳಿದವರಿಗೆ, ಅವರ ಧೈರ್ಯಕ್ಕೆ ಒಂದು ಸಲಾಂ ಎಂಬ ಪೋಸ್ಟರ್ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.


ಇದನ್ನೂ ಓದಿ: ಜೇನುಕುರುಬ ಆದಿವಾಸಿ ಯುವಕನಿಗೆ ಅರಣ್ಯ ಸಿಬ್ಬಂದಿಯಿಂದ ಗುಂಡೇಟು: ಭುಗಿಲೆದ್ದ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...