Homeಮುಖಪುಟ’ದೇಶ ವಿರೋಧಿ ಬಿಜೆಪಿ ಅರ್ನಾಬ್’- ಟ್ವಿಟ್ಟರ್‌‌ನಲ್ಲಿ ಹ್ಯಾಶ್‌‌ಟ್ಯಾಗ್‌ ಟ್ರೆಂಡ್

’ದೇಶ ವಿರೋಧಿ ಬಿಜೆಪಿ ಅರ್ನಾಬ್’- ಟ್ವಿಟ್ಟರ್‌‌ನಲ್ಲಿ ಹ್ಯಾಶ್‌‌ಟ್ಯಾಗ್‌ ಟ್ರೆಂಡ್

- Advertisement -
- Advertisement -

2019 ರ ಫೆಬ್ರವರಿ 14 ರಂದು ಪುಲ್ವಾಮ ಭಯೋತ್ಪಾದಕ ದಾಳಿಯಲ್ಲಿ 40 ಕ್ಕೂ ಹೆಚ್ಚು ಸೈನಿಕರು ಹುತಾತ್ಮರಾಗಿದ್ದರು. ಈ ಘಟನೆಯನ್ನು ರಿಪಬ್ಲಿಕ್ ಟಿವಿ ಸಂಪಾದಕ ಅರ್ನಾಬ್ ಗೋಸ್ವಾಮಿ ಸಂಭ್ರಮಪಟ್ಟಿದ್ದಾರೆಂದು ಇತ್ತೀಚೆಗೆ ಅವರ ವಾಟ್ಸಪ್ ಚಾಟ್‌ಗಳು ಬಹಿರಂಗ ಪಡಿಸಿದೆ. ಈ ಹಿನ್ನಲೆಯಲ್ಲಿ ಅದನ್ನು ವಿರೋಧಿಸಿ ಹಾಗೂ ಅವರನ್ನು ಬಂಧಿಸುವಂತೆ ಆಗ್ರಹಿಸಿ #AntiNationalBJPArnab (ದೇಶವಿರೋಧಿ ಬಿಜೆಪಿ ಅರ್ನಾಬ್), #AntiNationalArnab(ದೇಶವಿರೋಧಿ ಅರ್ನಾಬ್) ಹ್ಯಾಶ್‌ಟ್ಯಾಗ್‌ ಟ್ವಿಟ್ಟರ್‌ನಲ್ಲಿ ಟ್ರೆಂಡ್ ಆಗಿದೆ.

ದೆಹಲಿ ಕಾಂಗ್ರೆಸ್, “ಬಾಲಕೋಟ್ ಸ್ಟ್ರೈಕ್‌ ಅನ್ನು ಮೂರು ದಿನ ಹಿಂದೆಯೆ ಅರ್ನಬ್‌ಗೆ ತಿಳಿದಿತ್ತು. ಸೇನೆಯ ರಹಸ್ಯ ಅರ್ನಾಬ್‌ಗೆ ಹೇಗೆ ತಿಳಿಯಿತು. ಇದು ಬಹಳ ದೊಡ್ಡ ರಕ್ಷಣಾ ವೈಫಲ್ಯ, ಇದು ತನಿಖೆಯಾಗಲೆ ಬೇಕು” ಎಂದು ಟ್ವೀಟ್ ಮಾಡಿದೆ. ಅರ್ನಾಬ್ ತನ್ನ ವಾಟ್ಸಪ್‌ ಚಾಟ್‌ಗಳಲ್ಲಿ ಬಾಲಕೋಟ್ ದಾಳಿಯ ಬಗ್ಗೆ ಮೂರು ದಿನದ ಮುಂಚೆಯೆ ಹೇಳಿದ್ದು, ಇದರಿಂದಾಗಿ ಬಿಜೆಪಿಯು ಜಾಸ್ತಿ ಸ್ಥಾನಗಳನ್ನು ಗೆಲ್ಲುತ್ತದೆ ಎಂದು ಸೂಚಿಸಿದ್ದರು.

ಇದನ್ನೂ ಓದಿ: ಪುಲ್ವಾಮ ದಾಳಿಯನ್ನು ಸಂಭ್ರಮಿಸಿದ್ದ ಅರ್ನಾಬ್: ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ

ಮಾನವ ಹಕ್ಕು ಹೋರಾಟಗಾರ ತಿರುಮುರುಗನ್ ಗಾಂಧಿ, “ಅರ್ನಾಬ್ ಯಾರು, ಪುಲ್ವಾಮಾ ಯಾಕೆ ಸಂಭವಿಸಿತು, ಬಾಲಕೋಟ್‌ ಅನ್ನು ಹೇಗೆ ಯೋಜಿಸಿದ್ದಾರೆ, ಸಾಮಾಜಿಕ ಕಾರ್ಯಕರ್ತರನ್ನು ಯಾರು ಬೆದರಿಸುತ್ತಾರೆ, ರಾಷ್ಟ್ರೀಯತೆಯ ಹಿಂದೆ ಏನಿದೆ, ಬಿಜೆಪಿ ಸತ್ಯಗಳನ್ನು ಹೇಗೆ ತಿರುಚುತ್ತದೆ, ನಿಜವಾದ ರಾಷ್ಟ್ರ ವಿರೋಧಿ ಯಾರು ಎಂದು ರಾಷ್ಟ್ರಕ್ಕೆ ಈಗ ತಿಳಿಯಿತು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕಂಗನಾ ಕುರಿತು ಅಶ್ಲೀಲವಾಗಿ ಪ್ರತಿಕ್ರಿಯಿಸಿದ್ದ ಅರ್ನಾಬ್: ರಿಪಬ್ಲಿಕ್ ಟಿಆರ್‌ಪಿ ದಾಹಕ್ಕೆ ಕಂಗನಾ ಬಲಿಪಶು?

ಕೇವಲ ಭಯೋತ್ಪಾದಕರಷ್ಟೇ ಸೈನಿಕರ ಸಾವನ್ನು ಸಂಭ್ರಮಿಸುತ್ತಾರೆ ಎಂದು ವಿನಯ್ ಕುಮಾರ್‌ ಟ್ವೀಟ್ ಮಾಡಿದ್ದಾರೆ.

ಸಾಮಾಜಿಕ ಕಾರ್ಯಕರ್ತ ಶ್ರಿವತ್ಸ, “ದೇಶವಿರೋಧಿ ಅರ್ನಾಬ್, ಕೊಳಕು ನಾವಿಕಾ, ಪ್ರಯೋಜನಕ್ಕೆ ಬಾರದ ಪ್ರಕಾಶ್ ಜಾವ್ಡೇಕರ್, ಮೂರ್ಖ ರಜತ್‌ ಶರ್ಮ ಅವರನ್ನು, ಸೈನಿಕ ರಹಸ್ಯವನ್ನು ತಡೆಯುವುದಕ್ಕಾಗಿ ಸುಪ್ರೀಂಕೋಟ್ ಸಮಿತಿಯನ್ನು ಮುಖ್ಯನ್ಯಾಯಮೂರ್ತಿ ಬೋಬ್ಡೆಯವರು ತಕ್ಷಣ ನೇಮಿಸಬೇಕು” ಎಂದು ವ್ಯಂಗ್ಯವಾಡಿದ್ದಾರೆ.‌‌

ಇದನ್ನೂ ಓದಿ: ಕಂಗನಾ ಕುರಿತು ಅಶ್ಲೀಲವಾಗಿ ಪ್ರತಿಕ್ರಿಯಿಸಿದ್ದ ಅರ್ನಾಬ್: ರಿಪಬ್ಲಿಕ್ ಟಿಆರ್‌ಪಿ ದಾಹಕ್ಕೆ ಕಂಗನಾ ಬಲಿಪಶು?

ಉಪನ್ಯಾಸಕ ಜಗದೀಶ್ ಎಸ್ ಪಾಟಿಲ್, “ಬಿಜೆಪಿ ಕೈಯಲ್ಲಿ ಹೇಗೆ ಒತ್ತೆಯಾಳಾಗಿದ್ದೀರಿ ಎಂದು ವಾಟ್ಸಾಪ್ ಚಾಟ್‌ಗಳು ರಾಷ್ಟ್ರಕ್ಕೆ ತೋರಿಸಿದೆ. ರೈತರಿಗೆ ಉಪನ್ಯಾಸ ನೀಡುವುದನ್ನು ನಿಲ್ಲಿಸಿ”

ಜ್ಞಾನಿ ತಾವರೆಕೆರೆ ಅವರು, “ಕ್ರೊನಾಲಜಿ ನೋಡಿ, ಪುಲ್ವಾಮಾ ದಾಳಿ ಸಂಭವಿಸುತ್ತದೆ. ಆ ದಾಳಿಯ ನಂತರ ಹೆಚ್ಚಿನ ಸ್ಥಾನ ಗೆಲ್ಲುವುದಾಗಿ ಬಿಜೆಪಿ ನಾಯಕ ಯಡಿಯೂರಪ್ಪ ಹೇಳಿಕೊಂಡಿದ್ದಾರೆ. ಎನ್ಐಎ ಡೇವಿಂದರ್ ಸಿಂಗ್ ಅವರನ್ನು ಹಿಡಿಯಿತು ಮತ್ತು ಅವನು “ಇಲ್ಲಿ ಏನೋ ದೊಡ್ಡದು ನಡೆಯಲಿದೆ” ಎಂದು ಹೇಳುತ್ತಾನೆ. ಸೇನೆಯನ್ನು ಪ್ರಚಾರ ಮಾಡಿ ಬಿಜೆಪಿ ಚುನಾವಣೆಯಲ್ಲಿ ಜಯಗಳಿಸಿತು. ನಾವು ಸಿಕ್ಕಾಪಟ್ಟೆ ಗೆಲ್ಲಲಿದ್ದೇವೆ ಎಂದು ಅರ್ನಾಬ್ ಹೇಳುತ್ತಾನೆ” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಅರ್ನಾಬ್‌ ಜೊತೆಗಿನ ವಾಟ್ಸಾಪ್ ಚಾಟ್ ಲೀಕ್ ಬೆನ್ನಲ್ಲೆ ಬಾರ್ಕ್‌ ಮಾಜಿ ಸಿಇಒ ದಾಸ್‌ಗುಪ್ತ ಐಸಿಯುಗೆ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...