Homeಮುಖಪುಟ’ದೇಶ ವಿರೋಧಿ ಬಿಜೆಪಿ ಅರ್ನಾಬ್’- ಟ್ವಿಟ್ಟರ್‌‌ನಲ್ಲಿ ಹ್ಯಾಶ್‌‌ಟ್ಯಾಗ್‌ ಟ್ರೆಂಡ್

’ದೇಶ ವಿರೋಧಿ ಬಿಜೆಪಿ ಅರ್ನಾಬ್’- ಟ್ವಿಟ್ಟರ್‌‌ನಲ್ಲಿ ಹ್ಯಾಶ್‌‌ಟ್ಯಾಗ್‌ ಟ್ರೆಂಡ್

- Advertisement -
- Advertisement -

2019 ರ ಫೆಬ್ರವರಿ 14 ರಂದು ಪುಲ್ವಾಮ ಭಯೋತ್ಪಾದಕ ದಾಳಿಯಲ್ಲಿ 40 ಕ್ಕೂ ಹೆಚ್ಚು ಸೈನಿಕರು ಹುತಾತ್ಮರಾಗಿದ್ದರು. ಈ ಘಟನೆಯನ್ನು ರಿಪಬ್ಲಿಕ್ ಟಿವಿ ಸಂಪಾದಕ ಅರ್ನಾಬ್ ಗೋಸ್ವಾಮಿ ಸಂಭ್ರಮಪಟ್ಟಿದ್ದಾರೆಂದು ಇತ್ತೀಚೆಗೆ ಅವರ ವಾಟ್ಸಪ್ ಚಾಟ್‌ಗಳು ಬಹಿರಂಗ ಪಡಿಸಿದೆ. ಈ ಹಿನ್ನಲೆಯಲ್ಲಿ ಅದನ್ನು ವಿರೋಧಿಸಿ ಹಾಗೂ ಅವರನ್ನು ಬಂಧಿಸುವಂತೆ ಆಗ್ರಹಿಸಿ #AntiNationalBJPArnab (ದೇಶವಿರೋಧಿ ಬಿಜೆಪಿ ಅರ್ನಾಬ್), #AntiNationalArnab(ದೇಶವಿರೋಧಿ ಅರ್ನಾಬ್) ಹ್ಯಾಶ್‌ಟ್ಯಾಗ್‌ ಟ್ವಿಟ್ಟರ್‌ನಲ್ಲಿ ಟ್ರೆಂಡ್ ಆಗಿದೆ.

ದೆಹಲಿ ಕಾಂಗ್ರೆಸ್, “ಬಾಲಕೋಟ್ ಸ್ಟ್ರೈಕ್‌ ಅನ್ನು ಮೂರು ದಿನ ಹಿಂದೆಯೆ ಅರ್ನಬ್‌ಗೆ ತಿಳಿದಿತ್ತು. ಸೇನೆಯ ರಹಸ್ಯ ಅರ್ನಾಬ್‌ಗೆ ಹೇಗೆ ತಿಳಿಯಿತು. ಇದು ಬಹಳ ದೊಡ್ಡ ರಕ್ಷಣಾ ವೈಫಲ್ಯ, ಇದು ತನಿಖೆಯಾಗಲೆ ಬೇಕು” ಎಂದು ಟ್ವೀಟ್ ಮಾಡಿದೆ. ಅರ್ನಾಬ್ ತನ್ನ ವಾಟ್ಸಪ್‌ ಚಾಟ್‌ಗಳಲ್ಲಿ ಬಾಲಕೋಟ್ ದಾಳಿಯ ಬಗ್ಗೆ ಮೂರು ದಿನದ ಮುಂಚೆಯೆ ಹೇಳಿದ್ದು, ಇದರಿಂದಾಗಿ ಬಿಜೆಪಿಯು ಜಾಸ್ತಿ ಸ್ಥಾನಗಳನ್ನು ಗೆಲ್ಲುತ್ತದೆ ಎಂದು ಸೂಚಿಸಿದ್ದರು.

ಇದನ್ನೂ ಓದಿ: ಪುಲ್ವಾಮ ದಾಳಿಯನ್ನು ಸಂಭ್ರಮಿಸಿದ್ದ ಅರ್ನಾಬ್: ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ

ಮಾನವ ಹಕ್ಕು ಹೋರಾಟಗಾರ ತಿರುಮುರುಗನ್ ಗಾಂಧಿ, “ಅರ್ನಾಬ್ ಯಾರು, ಪುಲ್ವಾಮಾ ಯಾಕೆ ಸಂಭವಿಸಿತು, ಬಾಲಕೋಟ್‌ ಅನ್ನು ಹೇಗೆ ಯೋಜಿಸಿದ್ದಾರೆ, ಸಾಮಾಜಿಕ ಕಾರ್ಯಕರ್ತರನ್ನು ಯಾರು ಬೆದರಿಸುತ್ತಾರೆ, ರಾಷ್ಟ್ರೀಯತೆಯ ಹಿಂದೆ ಏನಿದೆ, ಬಿಜೆಪಿ ಸತ್ಯಗಳನ್ನು ಹೇಗೆ ತಿರುಚುತ್ತದೆ, ನಿಜವಾದ ರಾಷ್ಟ್ರ ವಿರೋಧಿ ಯಾರು ಎಂದು ರಾಷ್ಟ್ರಕ್ಕೆ ಈಗ ತಿಳಿಯಿತು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕಂಗನಾ ಕುರಿತು ಅಶ್ಲೀಲವಾಗಿ ಪ್ರತಿಕ್ರಿಯಿಸಿದ್ದ ಅರ್ನಾಬ್: ರಿಪಬ್ಲಿಕ್ ಟಿಆರ್‌ಪಿ ದಾಹಕ್ಕೆ ಕಂಗನಾ ಬಲಿಪಶು?

ಕೇವಲ ಭಯೋತ್ಪಾದಕರಷ್ಟೇ ಸೈನಿಕರ ಸಾವನ್ನು ಸಂಭ್ರಮಿಸುತ್ತಾರೆ ಎಂದು ವಿನಯ್ ಕುಮಾರ್‌ ಟ್ವೀಟ್ ಮಾಡಿದ್ದಾರೆ.

ಸಾಮಾಜಿಕ ಕಾರ್ಯಕರ್ತ ಶ್ರಿವತ್ಸ, “ದೇಶವಿರೋಧಿ ಅರ್ನಾಬ್, ಕೊಳಕು ನಾವಿಕಾ, ಪ್ರಯೋಜನಕ್ಕೆ ಬಾರದ ಪ್ರಕಾಶ್ ಜಾವ್ಡೇಕರ್, ಮೂರ್ಖ ರಜತ್‌ ಶರ್ಮ ಅವರನ್ನು, ಸೈನಿಕ ರಹಸ್ಯವನ್ನು ತಡೆಯುವುದಕ್ಕಾಗಿ ಸುಪ್ರೀಂಕೋಟ್ ಸಮಿತಿಯನ್ನು ಮುಖ್ಯನ್ಯಾಯಮೂರ್ತಿ ಬೋಬ್ಡೆಯವರು ತಕ್ಷಣ ನೇಮಿಸಬೇಕು” ಎಂದು ವ್ಯಂಗ್ಯವಾಡಿದ್ದಾರೆ.‌‌

ಇದನ್ನೂ ಓದಿ: ಕಂಗನಾ ಕುರಿತು ಅಶ್ಲೀಲವಾಗಿ ಪ್ರತಿಕ್ರಿಯಿಸಿದ್ದ ಅರ್ನಾಬ್: ರಿಪಬ್ಲಿಕ್ ಟಿಆರ್‌ಪಿ ದಾಹಕ್ಕೆ ಕಂಗನಾ ಬಲಿಪಶು?

ಉಪನ್ಯಾಸಕ ಜಗದೀಶ್ ಎಸ್ ಪಾಟಿಲ್, “ಬಿಜೆಪಿ ಕೈಯಲ್ಲಿ ಹೇಗೆ ಒತ್ತೆಯಾಳಾಗಿದ್ದೀರಿ ಎಂದು ವಾಟ್ಸಾಪ್ ಚಾಟ್‌ಗಳು ರಾಷ್ಟ್ರಕ್ಕೆ ತೋರಿಸಿದೆ. ರೈತರಿಗೆ ಉಪನ್ಯಾಸ ನೀಡುವುದನ್ನು ನಿಲ್ಲಿಸಿ”

ಜ್ಞಾನಿ ತಾವರೆಕೆರೆ ಅವರು, “ಕ್ರೊನಾಲಜಿ ನೋಡಿ, ಪುಲ್ವಾಮಾ ದಾಳಿ ಸಂಭವಿಸುತ್ತದೆ. ಆ ದಾಳಿಯ ನಂತರ ಹೆಚ್ಚಿನ ಸ್ಥಾನ ಗೆಲ್ಲುವುದಾಗಿ ಬಿಜೆಪಿ ನಾಯಕ ಯಡಿಯೂರಪ್ಪ ಹೇಳಿಕೊಂಡಿದ್ದಾರೆ. ಎನ್ಐಎ ಡೇವಿಂದರ್ ಸಿಂಗ್ ಅವರನ್ನು ಹಿಡಿಯಿತು ಮತ್ತು ಅವನು “ಇಲ್ಲಿ ಏನೋ ದೊಡ್ಡದು ನಡೆಯಲಿದೆ” ಎಂದು ಹೇಳುತ್ತಾನೆ. ಸೇನೆಯನ್ನು ಪ್ರಚಾರ ಮಾಡಿ ಬಿಜೆಪಿ ಚುನಾವಣೆಯಲ್ಲಿ ಜಯಗಳಿಸಿತು. ನಾವು ಸಿಕ್ಕಾಪಟ್ಟೆ ಗೆಲ್ಲಲಿದ್ದೇವೆ ಎಂದು ಅರ್ನಾಬ್ ಹೇಳುತ್ತಾನೆ” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಅರ್ನಾಬ್‌ ಜೊತೆಗಿನ ವಾಟ್ಸಾಪ್ ಚಾಟ್ ಲೀಕ್ ಬೆನ್ನಲ್ಲೆ ಬಾರ್ಕ್‌ ಮಾಜಿ ಸಿಇಒ ದಾಸ್‌ಗುಪ್ತ ಐಸಿಯುಗೆ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...