Homeಮುಖಪುಟ’ದೇಶ ವಿರೋಧಿ ಬಿಜೆಪಿ ಅರ್ನಾಬ್’- ಟ್ವಿಟ್ಟರ್‌‌ನಲ್ಲಿ ಹ್ಯಾಶ್‌‌ಟ್ಯಾಗ್‌ ಟ್ರೆಂಡ್

’ದೇಶ ವಿರೋಧಿ ಬಿಜೆಪಿ ಅರ್ನಾಬ್’- ಟ್ವಿಟ್ಟರ್‌‌ನಲ್ಲಿ ಹ್ಯಾಶ್‌‌ಟ್ಯಾಗ್‌ ಟ್ರೆಂಡ್

- Advertisement -
- Advertisement -

2019 ರ ಫೆಬ್ರವರಿ 14 ರಂದು ಪುಲ್ವಾಮ ಭಯೋತ್ಪಾದಕ ದಾಳಿಯಲ್ಲಿ 40 ಕ್ಕೂ ಹೆಚ್ಚು ಸೈನಿಕರು ಹುತಾತ್ಮರಾಗಿದ್ದರು. ಈ ಘಟನೆಯನ್ನು ರಿಪಬ್ಲಿಕ್ ಟಿವಿ ಸಂಪಾದಕ ಅರ್ನಾಬ್ ಗೋಸ್ವಾಮಿ ಸಂಭ್ರಮಪಟ್ಟಿದ್ದಾರೆಂದು ಇತ್ತೀಚೆಗೆ ಅವರ ವಾಟ್ಸಪ್ ಚಾಟ್‌ಗಳು ಬಹಿರಂಗ ಪಡಿಸಿದೆ. ಈ ಹಿನ್ನಲೆಯಲ್ಲಿ ಅದನ್ನು ವಿರೋಧಿಸಿ ಹಾಗೂ ಅವರನ್ನು ಬಂಧಿಸುವಂತೆ ಆಗ್ರಹಿಸಿ #AntiNationalBJPArnab (ದೇಶವಿರೋಧಿ ಬಿಜೆಪಿ ಅರ್ನಾಬ್), #AntiNationalArnab(ದೇಶವಿರೋಧಿ ಅರ್ನಾಬ್) ಹ್ಯಾಶ್‌ಟ್ಯಾಗ್‌ ಟ್ವಿಟ್ಟರ್‌ನಲ್ಲಿ ಟ್ರೆಂಡ್ ಆಗಿದೆ.

ದೆಹಲಿ ಕಾಂಗ್ರೆಸ್, “ಬಾಲಕೋಟ್ ಸ್ಟ್ರೈಕ್‌ ಅನ್ನು ಮೂರು ದಿನ ಹಿಂದೆಯೆ ಅರ್ನಬ್‌ಗೆ ತಿಳಿದಿತ್ತು. ಸೇನೆಯ ರಹಸ್ಯ ಅರ್ನಾಬ್‌ಗೆ ಹೇಗೆ ತಿಳಿಯಿತು. ಇದು ಬಹಳ ದೊಡ್ಡ ರಕ್ಷಣಾ ವೈಫಲ್ಯ, ಇದು ತನಿಖೆಯಾಗಲೆ ಬೇಕು” ಎಂದು ಟ್ವೀಟ್ ಮಾಡಿದೆ. ಅರ್ನಾಬ್ ತನ್ನ ವಾಟ್ಸಪ್‌ ಚಾಟ್‌ಗಳಲ್ಲಿ ಬಾಲಕೋಟ್ ದಾಳಿಯ ಬಗ್ಗೆ ಮೂರು ದಿನದ ಮುಂಚೆಯೆ ಹೇಳಿದ್ದು, ಇದರಿಂದಾಗಿ ಬಿಜೆಪಿಯು ಜಾಸ್ತಿ ಸ್ಥಾನಗಳನ್ನು ಗೆಲ್ಲುತ್ತದೆ ಎಂದು ಸೂಚಿಸಿದ್ದರು.

ಇದನ್ನೂ ಓದಿ: ಪುಲ್ವಾಮ ದಾಳಿಯನ್ನು ಸಂಭ್ರಮಿಸಿದ್ದ ಅರ್ನಾಬ್: ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ

ಮಾನವ ಹಕ್ಕು ಹೋರಾಟಗಾರ ತಿರುಮುರುಗನ್ ಗಾಂಧಿ, “ಅರ್ನಾಬ್ ಯಾರು, ಪುಲ್ವಾಮಾ ಯಾಕೆ ಸಂಭವಿಸಿತು, ಬಾಲಕೋಟ್‌ ಅನ್ನು ಹೇಗೆ ಯೋಜಿಸಿದ್ದಾರೆ, ಸಾಮಾಜಿಕ ಕಾರ್ಯಕರ್ತರನ್ನು ಯಾರು ಬೆದರಿಸುತ್ತಾರೆ, ರಾಷ್ಟ್ರೀಯತೆಯ ಹಿಂದೆ ಏನಿದೆ, ಬಿಜೆಪಿ ಸತ್ಯಗಳನ್ನು ಹೇಗೆ ತಿರುಚುತ್ತದೆ, ನಿಜವಾದ ರಾಷ್ಟ್ರ ವಿರೋಧಿ ಯಾರು ಎಂದು ರಾಷ್ಟ್ರಕ್ಕೆ ಈಗ ತಿಳಿಯಿತು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕಂಗನಾ ಕುರಿತು ಅಶ್ಲೀಲವಾಗಿ ಪ್ರತಿಕ್ರಿಯಿಸಿದ್ದ ಅರ್ನಾಬ್: ರಿಪಬ್ಲಿಕ್ ಟಿಆರ್‌ಪಿ ದಾಹಕ್ಕೆ ಕಂಗನಾ ಬಲಿಪಶು?

ಕೇವಲ ಭಯೋತ್ಪಾದಕರಷ್ಟೇ ಸೈನಿಕರ ಸಾವನ್ನು ಸಂಭ್ರಮಿಸುತ್ತಾರೆ ಎಂದು ವಿನಯ್ ಕುಮಾರ್‌ ಟ್ವೀಟ್ ಮಾಡಿದ್ದಾರೆ.

ಸಾಮಾಜಿಕ ಕಾರ್ಯಕರ್ತ ಶ್ರಿವತ್ಸ, “ದೇಶವಿರೋಧಿ ಅರ್ನಾಬ್, ಕೊಳಕು ನಾವಿಕಾ, ಪ್ರಯೋಜನಕ್ಕೆ ಬಾರದ ಪ್ರಕಾಶ್ ಜಾವ್ಡೇಕರ್, ಮೂರ್ಖ ರಜತ್‌ ಶರ್ಮ ಅವರನ್ನು, ಸೈನಿಕ ರಹಸ್ಯವನ್ನು ತಡೆಯುವುದಕ್ಕಾಗಿ ಸುಪ್ರೀಂಕೋಟ್ ಸಮಿತಿಯನ್ನು ಮುಖ್ಯನ್ಯಾಯಮೂರ್ತಿ ಬೋಬ್ಡೆಯವರು ತಕ್ಷಣ ನೇಮಿಸಬೇಕು” ಎಂದು ವ್ಯಂಗ್ಯವಾಡಿದ್ದಾರೆ.‌‌

ಇದನ್ನೂ ಓದಿ: ಕಂಗನಾ ಕುರಿತು ಅಶ್ಲೀಲವಾಗಿ ಪ್ರತಿಕ್ರಿಯಿಸಿದ್ದ ಅರ್ನಾಬ್: ರಿಪಬ್ಲಿಕ್ ಟಿಆರ್‌ಪಿ ದಾಹಕ್ಕೆ ಕಂಗನಾ ಬಲಿಪಶು?

ಉಪನ್ಯಾಸಕ ಜಗದೀಶ್ ಎಸ್ ಪಾಟಿಲ್, “ಬಿಜೆಪಿ ಕೈಯಲ್ಲಿ ಹೇಗೆ ಒತ್ತೆಯಾಳಾಗಿದ್ದೀರಿ ಎಂದು ವಾಟ್ಸಾಪ್ ಚಾಟ್‌ಗಳು ರಾಷ್ಟ್ರಕ್ಕೆ ತೋರಿಸಿದೆ. ರೈತರಿಗೆ ಉಪನ್ಯಾಸ ನೀಡುವುದನ್ನು ನಿಲ್ಲಿಸಿ”

ಜ್ಞಾನಿ ತಾವರೆಕೆರೆ ಅವರು, “ಕ್ರೊನಾಲಜಿ ನೋಡಿ, ಪುಲ್ವಾಮಾ ದಾಳಿ ಸಂಭವಿಸುತ್ತದೆ. ಆ ದಾಳಿಯ ನಂತರ ಹೆಚ್ಚಿನ ಸ್ಥಾನ ಗೆಲ್ಲುವುದಾಗಿ ಬಿಜೆಪಿ ನಾಯಕ ಯಡಿಯೂರಪ್ಪ ಹೇಳಿಕೊಂಡಿದ್ದಾರೆ. ಎನ್ಐಎ ಡೇವಿಂದರ್ ಸಿಂಗ್ ಅವರನ್ನು ಹಿಡಿಯಿತು ಮತ್ತು ಅವನು “ಇಲ್ಲಿ ಏನೋ ದೊಡ್ಡದು ನಡೆಯಲಿದೆ” ಎಂದು ಹೇಳುತ್ತಾನೆ. ಸೇನೆಯನ್ನು ಪ್ರಚಾರ ಮಾಡಿ ಬಿಜೆಪಿ ಚುನಾವಣೆಯಲ್ಲಿ ಜಯಗಳಿಸಿತು. ನಾವು ಸಿಕ್ಕಾಪಟ್ಟೆ ಗೆಲ್ಲಲಿದ್ದೇವೆ ಎಂದು ಅರ್ನಾಬ್ ಹೇಳುತ್ತಾನೆ” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಅರ್ನಾಬ್‌ ಜೊತೆಗಿನ ವಾಟ್ಸಾಪ್ ಚಾಟ್ ಲೀಕ್ ಬೆನ್ನಲ್ಲೆ ಬಾರ್ಕ್‌ ಮಾಜಿ ಸಿಇಒ ದಾಸ್‌ಗುಪ್ತ ಐಸಿಯುಗೆ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...