Homeಮುಖಪುಟರಾಷ್ಟ್ರ ವಿರೋಧಿ ಟ್ವೀಟ್: JNU ಸಂಶೋಧನಾ ವಿದ್ವಾಂಸ ಸಾಜಿದ್ ಬಿನ್ ಸಯೀದ್ ವಿರುದ್ಧ ಪ್ರಕರಣ!

ರಾಷ್ಟ್ರ ವಿರೋಧಿ ಟ್ವೀಟ್: JNU ಸಂಶೋಧನಾ ವಿದ್ವಾಂಸ ಸಾಜಿದ್ ಬಿನ್ ಸಯೀದ್ ವಿರುದ್ಧ ಪ್ರಕರಣ!

- Advertisement -
- Advertisement -

ಭಾರತೀಯ ಸೇನೆ ಮತ್ತು ರಾಷ್ಟ್ರೀಯ ಸ್ವಯಂ ಸೇವಕ ಸಂಘಕ್ಕೆ ಅಪಚಾರವೆಸಗುವಂತಹ “ರಾಷ್ಟ್ರ ವಿರೋಧಿ” ಟ್ವೀಟ್‌ಗೆ ಸಂಬಂಧಿಸಿದಂತೆ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಸಂಶೋಧನಾ ವಿದ್ವಾಂಸ ಸಾಜಿದ್ ಬಿನ್ ಸಯೀದ್ ವಿರುದ್ಧ ದೆಹಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ದಿ ಪ್ರಿಂಟ್ ವರದಿ ಮಾಡಿದೆ.

ಈ ಟ್ವೀಟ್‌ನ ಆಧಾರದ ಮೇಲೆ ಜುಲೈ 8 ರಂದು ಸಯೀದ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಈ ಟ್ವೀಟ್ ನ ಸ್ಕ್ರೀನ್‌ಶಾಟ್ ಅನ್ನು ಪೊಲೀಸರಿಗೆ ನೀಡಲಾಯಿತು. ಅದರಲ್ಲಿ, “ಭಾರತೀಯ ಮಿಲಿಟರಿ ಕಾಶ್ಮೀರಿಗಳ ವ್ಯವಸ್ಥಿತ ನರಮೇಧವನ್ನು ಮಾಡುತ್ತಿದೆ. ಇದನ್ನು ಆರ್‌ಎಸ್‌ಎಸ್ ರೂಪಿಸಿದೆ. ಬಿಜೆಪಿ ಸರ್ಕಾರವು ತಮ್ಮ ಪ್ರಾದೇಶಿಕ ದುರಾಶೆಯನ್ನು ನಿಲ್ಲಿಸಬೇಕು ಮತ್ತು ಯುಎನ್ ಖಾತರಿಪಡಿಸಿದ ಕಾಶ್ಮೀರಿಗಳ ಸ್ವ-ನಿರ್ಣಯದ ಹಕ್ಕನ್ನು ಸ್ವೀಕರಿಸಲು ಸಿದ್ಧರಾಗಿರಬೇಕು. ಅಂತರರಾಷ್ಟ್ರೀಯ ಸಂಸ್ಥೆಗಳಿಂದ ಈ ವಿಷಯದಲ್ಲಿ ಮಧ್ಯಪ್ರವೇಶಿಸಲು ಇದು ಸರಿಯಾದ ಸಮಯ. #ಕಾಶ್ಮೀರ” ಎಂದು ಟ್ವೀಟ್ ಮಾಡಲಾಗಿದೆ.

ಆದರೆ ಈ ಟ್ವೀಟ್ ಸಯೀದ್ ಅವರ ಟೈಮ್ ಲೈನ್ ನಲ್ಲಿ ಕಾಣಿಸುತ್ತಿಲ್ಲ!

ಬಿಜೆಪಿ ಕಾರ್ಯಕರ್ತ ತಜಿಂದರ್ ಯಾದವ್ ಅವರ ದೂರಿನ ಮೇರೆಗೆ “ಗಲಭೆಯನ್ನು ಉಂಟುಮಾಡುವ ಉದ್ದೇಶದಿಂದ ಪ್ರಚೋದನೆ” ಮತ್ತು “ಶಾಂತಿ ಉಲ್ಲಂಘನೆಯನ್ನು ಪ್ರಚೋದಿಸುವುದು” ಎಂದು ಸಯೀದ್ ವಿರುದ್ಧ ಪ್ರಕರಣ ದಾಖಲಾಗಿದೆ.

ನೈರುತ್ಯ ದೆಹಲಿಯ ಕಪಶೇರಾ ಪ್ರದೇಶದ ನಿವಾಸಿ ಯಾದವ್, ಬಿಜೆಪಿಯ ಯುವ ವಿಭಾಗವಾದ ಭಾರತೀಯ ಜನತಾ ಯುವ ಮೋರ್ಚಾದ ಮೆಹ್ರೌಲಿ ಜಿಲ್ಲೆಯ ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ.

“ಸಯೀದ್, ಸೇನೆ ಮತ್ತು ಭಾರತ ಸರ್ಕಾರದ ವಿರುದ್ಧ ರಾಷ್ಟ್ರ ವಿರೋಧಿ ಟ್ವೀಟ್ ಬರೆದಿದ್ದಾರೆ. ಭಾರತೀಯ ಸೇನೆ ಕಾಶ್ಮೀರದ ಭಯೋತ್ಪಾದಕರನ್ನು ನಿರ್ಮೂಲನೆ ಮಾಡಲು ನಡೆಸಿದ ಕಾರ್ಯಾಚರಣೆ ಕುರಿತು, ಅವರು ನಿರಪರಾಧಿಗಳು” ಎಂದು ಟ್ವೀಟ್ ಮಾಡಿದ್ದರು ಎಂಬುದಾಗಿ ತಜಿಂದರ್ ಯಾದವ್ ದೂರಿದ್ದಾರೆ.

“ನಮಗೆ ದೂರು ಬಂದಿತ್ತು. ಪ್ರೋಟೋಕಾಲ್ ಪ್ರಕಾರ ನಾವು ಪ್ರಕರಣ ದಾಖಲಿಸಿದ್ದೇವೆ. ಇದನ್ನು ಪರಿಶೀಲಿಸಲಾಗುತ್ತಿದೆ ”ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸಯೀದ್ ಮತ್ತೊಂದು ಟ್ವೀಟ್‌ನಲ್ಲಿ, “ಕಾಶ್ಮೀರವು ಜಗತ್ತಿನ ಅತ್ಯಂತ ಹೆಚ್ಚಿನ ಮಿಲಿಟರಿ ಇರುವ ಸ್ಥಳವಾಗಿದ್ದು, ಮಾನವ ಹಕ್ಕುಗಳ ಉಲ್ಲಂಘನೆಯು ಪ್ರತಿದಿನವೂ ನಡೆಯುತ್ತಿದೆ. ಜಿಯೋನಿಸ್ಟ್ ಇಸ್ರೇಲ್ ಪ್ಯಾಲೆಸ್ಟೈನ್ ನಲ್ಲಿ ನರಮೇಧ ಮಾಡಿದಂತೆ, ಇಲ್ಲಿನ ಸರ್ಕಾರವು ಕಾಶ್ಮೀರದಲ್ಲಿ ಮಾಡಲು ಕನಸು ಕಾಣುತ್ತಿದೆ. ಆದರೆ ಯಶಸ್ವಿಯಾಗುವುದಿಲ್ಲ” ಎಂದಿದ್ದಾರೆ.

 

“ರಾಷ್ಟ್ರ ವಿರೋಧಿ ಮತ್ತು ನಮ್ಮ ದೇಶದ ಹಿತಾಸಕ್ತಿಗೆ ವಿರುದ್ಧವಾದ ಕೆಲವು ಮಾಹಿತಿಗಳು ಬಂದಿದೆ. ಇದು ಭಾರತದ ಸೈನ್ಯ ಮತ್ತು ಸೈನಿಕರ ಬಗ್ಗೆ ಅವಹೇಳನಕಾರಿಯಾಗಿದ್ದು, ಇದು ನಮ್ಮ ದೇಶದ ಮತ್ತು ನಮ್ಮ ಗೌರವಾನ್ವಿತ ಸೈನ್ಯದ ಸಮಗ್ರತೆಗೆ ಭಂಗ ತರುವಂತದ್ದು ”ಎಂದು ಎಫ್‌ಐಆರ್ ಹೇಳಿದೆ.

ಈ ಪ್ರಕರಣವನ್ನು ತುಂಬಾ ಎಚ್ಚರಿಕೆಯಿಂದ ತನಿಖೆ ಮಾಡಬೇಕು ಎಂದು ಆರ್ ಎಸ್ ಎಸ್ ಹೇಳಿದೆ.


ಇದನ್ನೂ ಓದಿ: ನಿಮಗೆ ಇದೇ ಸರಿಯಾದ ಚಿಕಿತ್ಸೆ : ಜೆಎನ್‌ಯು, ಜಾಮಿಯ ವಿದ್ಯಾರ್ಥಿಗಳಿಗೆ ಬೆದರಿಕೆ ಹಾಕಿದ ಕೇಂದ್ರ ಸಚಿವ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...