Homeಮುಖಪುಟರಾಷ್ಟ್ರ ವಿರೋಧಿ ಟ್ವೀಟ್: JNU ಸಂಶೋಧನಾ ವಿದ್ವಾಂಸ ಸಾಜಿದ್ ಬಿನ್ ಸಯೀದ್ ವಿರುದ್ಧ ಪ್ರಕರಣ!

ರಾಷ್ಟ್ರ ವಿರೋಧಿ ಟ್ವೀಟ್: JNU ಸಂಶೋಧನಾ ವಿದ್ವಾಂಸ ಸಾಜಿದ್ ಬಿನ್ ಸಯೀದ್ ವಿರುದ್ಧ ಪ್ರಕರಣ!

- Advertisement -
- Advertisement -

ಭಾರತೀಯ ಸೇನೆ ಮತ್ತು ರಾಷ್ಟ್ರೀಯ ಸ್ವಯಂ ಸೇವಕ ಸಂಘಕ್ಕೆ ಅಪಚಾರವೆಸಗುವಂತಹ “ರಾಷ್ಟ್ರ ವಿರೋಧಿ” ಟ್ವೀಟ್‌ಗೆ ಸಂಬಂಧಿಸಿದಂತೆ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಸಂಶೋಧನಾ ವಿದ್ವಾಂಸ ಸಾಜಿದ್ ಬಿನ್ ಸಯೀದ್ ವಿರುದ್ಧ ದೆಹಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ದಿ ಪ್ರಿಂಟ್ ವರದಿ ಮಾಡಿದೆ.

ಈ ಟ್ವೀಟ್‌ನ ಆಧಾರದ ಮೇಲೆ ಜುಲೈ 8 ರಂದು ಸಯೀದ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಈ ಟ್ವೀಟ್ ನ ಸ್ಕ್ರೀನ್‌ಶಾಟ್ ಅನ್ನು ಪೊಲೀಸರಿಗೆ ನೀಡಲಾಯಿತು. ಅದರಲ್ಲಿ, “ಭಾರತೀಯ ಮಿಲಿಟರಿ ಕಾಶ್ಮೀರಿಗಳ ವ್ಯವಸ್ಥಿತ ನರಮೇಧವನ್ನು ಮಾಡುತ್ತಿದೆ. ಇದನ್ನು ಆರ್‌ಎಸ್‌ಎಸ್ ರೂಪಿಸಿದೆ. ಬಿಜೆಪಿ ಸರ್ಕಾರವು ತಮ್ಮ ಪ್ರಾದೇಶಿಕ ದುರಾಶೆಯನ್ನು ನಿಲ್ಲಿಸಬೇಕು ಮತ್ತು ಯುಎನ್ ಖಾತರಿಪಡಿಸಿದ ಕಾಶ್ಮೀರಿಗಳ ಸ್ವ-ನಿರ್ಣಯದ ಹಕ್ಕನ್ನು ಸ್ವೀಕರಿಸಲು ಸಿದ್ಧರಾಗಿರಬೇಕು. ಅಂತರರಾಷ್ಟ್ರೀಯ ಸಂಸ್ಥೆಗಳಿಂದ ಈ ವಿಷಯದಲ್ಲಿ ಮಧ್ಯಪ್ರವೇಶಿಸಲು ಇದು ಸರಿಯಾದ ಸಮಯ. #ಕಾಶ್ಮೀರ” ಎಂದು ಟ್ವೀಟ್ ಮಾಡಲಾಗಿದೆ.

ಆದರೆ ಈ ಟ್ವೀಟ್ ಸಯೀದ್ ಅವರ ಟೈಮ್ ಲೈನ್ ನಲ್ಲಿ ಕಾಣಿಸುತ್ತಿಲ್ಲ!

ಬಿಜೆಪಿ ಕಾರ್ಯಕರ್ತ ತಜಿಂದರ್ ಯಾದವ್ ಅವರ ದೂರಿನ ಮೇರೆಗೆ “ಗಲಭೆಯನ್ನು ಉಂಟುಮಾಡುವ ಉದ್ದೇಶದಿಂದ ಪ್ರಚೋದನೆ” ಮತ್ತು “ಶಾಂತಿ ಉಲ್ಲಂಘನೆಯನ್ನು ಪ್ರಚೋದಿಸುವುದು” ಎಂದು ಸಯೀದ್ ವಿರುದ್ಧ ಪ್ರಕರಣ ದಾಖಲಾಗಿದೆ.

ನೈರುತ್ಯ ದೆಹಲಿಯ ಕಪಶೇರಾ ಪ್ರದೇಶದ ನಿವಾಸಿ ಯಾದವ್, ಬಿಜೆಪಿಯ ಯುವ ವಿಭಾಗವಾದ ಭಾರತೀಯ ಜನತಾ ಯುವ ಮೋರ್ಚಾದ ಮೆಹ್ರೌಲಿ ಜಿಲ್ಲೆಯ ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ.

“ಸಯೀದ್, ಸೇನೆ ಮತ್ತು ಭಾರತ ಸರ್ಕಾರದ ವಿರುದ್ಧ ರಾಷ್ಟ್ರ ವಿರೋಧಿ ಟ್ವೀಟ್ ಬರೆದಿದ್ದಾರೆ. ಭಾರತೀಯ ಸೇನೆ ಕಾಶ್ಮೀರದ ಭಯೋತ್ಪಾದಕರನ್ನು ನಿರ್ಮೂಲನೆ ಮಾಡಲು ನಡೆಸಿದ ಕಾರ್ಯಾಚರಣೆ ಕುರಿತು, ಅವರು ನಿರಪರಾಧಿಗಳು” ಎಂದು ಟ್ವೀಟ್ ಮಾಡಿದ್ದರು ಎಂಬುದಾಗಿ ತಜಿಂದರ್ ಯಾದವ್ ದೂರಿದ್ದಾರೆ.

“ನಮಗೆ ದೂರು ಬಂದಿತ್ತು. ಪ್ರೋಟೋಕಾಲ್ ಪ್ರಕಾರ ನಾವು ಪ್ರಕರಣ ದಾಖಲಿಸಿದ್ದೇವೆ. ಇದನ್ನು ಪರಿಶೀಲಿಸಲಾಗುತ್ತಿದೆ ”ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸಯೀದ್ ಮತ್ತೊಂದು ಟ್ವೀಟ್‌ನಲ್ಲಿ, “ಕಾಶ್ಮೀರವು ಜಗತ್ತಿನ ಅತ್ಯಂತ ಹೆಚ್ಚಿನ ಮಿಲಿಟರಿ ಇರುವ ಸ್ಥಳವಾಗಿದ್ದು, ಮಾನವ ಹಕ್ಕುಗಳ ಉಲ್ಲಂಘನೆಯು ಪ್ರತಿದಿನವೂ ನಡೆಯುತ್ತಿದೆ. ಜಿಯೋನಿಸ್ಟ್ ಇಸ್ರೇಲ್ ಪ್ಯಾಲೆಸ್ಟೈನ್ ನಲ್ಲಿ ನರಮೇಧ ಮಾಡಿದಂತೆ, ಇಲ್ಲಿನ ಸರ್ಕಾರವು ಕಾಶ್ಮೀರದಲ್ಲಿ ಮಾಡಲು ಕನಸು ಕಾಣುತ್ತಿದೆ. ಆದರೆ ಯಶಸ್ವಿಯಾಗುವುದಿಲ್ಲ” ಎಂದಿದ್ದಾರೆ.

 

“ರಾಷ್ಟ್ರ ವಿರೋಧಿ ಮತ್ತು ನಮ್ಮ ದೇಶದ ಹಿತಾಸಕ್ತಿಗೆ ವಿರುದ್ಧವಾದ ಕೆಲವು ಮಾಹಿತಿಗಳು ಬಂದಿದೆ. ಇದು ಭಾರತದ ಸೈನ್ಯ ಮತ್ತು ಸೈನಿಕರ ಬಗ್ಗೆ ಅವಹೇಳನಕಾರಿಯಾಗಿದ್ದು, ಇದು ನಮ್ಮ ದೇಶದ ಮತ್ತು ನಮ್ಮ ಗೌರವಾನ್ವಿತ ಸೈನ್ಯದ ಸಮಗ್ರತೆಗೆ ಭಂಗ ತರುವಂತದ್ದು ”ಎಂದು ಎಫ್‌ಐಆರ್ ಹೇಳಿದೆ.

ಈ ಪ್ರಕರಣವನ್ನು ತುಂಬಾ ಎಚ್ಚರಿಕೆಯಿಂದ ತನಿಖೆ ಮಾಡಬೇಕು ಎಂದು ಆರ್ ಎಸ್ ಎಸ್ ಹೇಳಿದೆ.


ಇದನ್ನೂ ಓದಿ: ನಿಮಗೆ ಇದೇ ಸರಿಯಾದ ಚಿಕಿತ್ಸೆ : ಜೆಎನ್‌ಯು, ಜಾಮಿಯ ವಿದ್ಯಾರ್ಥಿಗಳಿಗೆ ಬೆದರಿಕೆ ಹಾಕಿದ ಕೇಂದ್ರ ಸಚಿವ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...