Homeಮುಖಪುಟರಾಷ್ಟ್ರ ವಿರೋಧಿ ಟ್ವೀಟ್: JNU ಸಂಶೋಧನಾ ವಿದ್ವಾಂಸ ಸಾಜಿದ್ ಬಿನ್ ಸಯೀದ್ ವಿರುದ್ಧ ಪ್ರಕರಣ!

ರಾಷ್ಟ್ರ ವಿರೋಧಿ ಟ್ವೀಟ್: JNU ಸಂಶೋಧನಾ ವಿದ್ವಾಂಸ ಸಾಜಿದ್ ಬಿನ್ ಸಯೀದ್ ವಿರುದ್ಧ ಪ್ರಕರಣ!

- Advertisement -
- Advertisement -

ಭಾರತೀಯ ಸೇನೆ ಮತ್ತು ರಾಷ್ಟ್ರೀಯ ಸ್ವಯಂ ಸೇವಕ ಸಂಘಕ್ಕೆ ಅಪಚಾರವೆಸಗುವಂತಹ “ರಾಷ್ಟ್ರ ವಿರೋಧಿ” ಟ್ವೀಟ್‌ಗೆ ಸಂಬಂಧಿಸಿದಂತೆ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಸಂಶೋಧನಾ ವಿದ್ವಾಂಸ ಸಾಜಿದ್ ಬಿನ್ ಸಯೀದ್ ವಿರುದ್ಧ ದೆಹಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ದಿ ಪ್ರಿಂಟ್ ವರದಿ ಮಾಡಿದೆ.

ಈ ಟ್ವೀಟ್‌ನ ಆಧಾರದ ಮೇಲೆ ಜುಲೈ 8 ರಂದು ಸಯೀದ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಈ ಟ್ವೀಟ್ ನ ಸ್ಕ್ರೀನ್‌ಶಾಟ್ ಅನ್ನು ಪೊಲೀಸರಿಗೆ ನೀಡಲಾಯಿತು. ಅದರಲ್ಲಿ, “ಭಾರತೀಯ ಮಿಲಿಟರಿ ಕಾಶ್ಮೀರಿಗಳ ವ್ಯವಸ್ಥಿತ ನರಮೇಧವನ್ನು ಮಾಡುತ್ತಿದೆ. ಇದನ್ನು ಆರ್‌ಎಸ್‌ಎಸ್ ರೂಪಿಸಿದೆ. ಬಿಜೆಪಿ ಸರ್ಕಾರವು ತಮ್ಮ ಪ್ರಾದೇಶಿಕ ದುರಾಶೆಯನ್ನು ನಿಲ್ಲಿಸಬೇಕು ಮತ್ತು ಯುಎನ್ ಖಾತರಿಪಡಿಸಿದ ಕಾಶ್ಮೀರಿಗಳ ಸ್ವ-ನಿರ್ಣಯದ ಹಕ್ಕನ್ನು ಸ್ವೀಕರಿಸಲು ಸಿದ್ಧರಾಗಿರಬೇಕು. ಅಂತರರಾಷ್ಟ್ರೀಯ ಸಂಸ್ಥೆಗಳಿಂದ ಈ ವಿಷಯದಲ್ಲಿ ಮಧ್ಯಪ್ರವೇಶಿಸಲು ಇದು ಸರಿಯಾದ ಸಮಯ. #ಕಾಶ್ಮೀರ” ಎಂದು ಟ್ವೀಟ್ ಮಾಡಲಾಗಿದೆ.

ಆದರೆ ಈ ಟ್ವೀಟ್ ಸಯೀದ್ ಅವರ ಟೈಮ್ ಲೈನ್ ನಲ್ಲಿ ಕಾಣಿಸುತ್ತಿಲ್ಲ!

ಬಿಜೆಪಿ ಕಾರ್ಯಕರ್ತ ತಜಿಂದರ್ ಯಾದವ್ ಅವರ ದೂರಿನ ಮೇರೆಗೆ “ಗಲಭೆಯನ್ನು ಉಂಟುಮಾಡುವ ಉದ್ದೇಶದಿಂದ ಪ್ರಚೋದನೆ” ಮತ್ತು “ಶಾಂತಿ ಉಲ್ಲಂಘನೆಯನ್ನು ಪ್ರಚೋದಿಸುವುದು” ಎಂದು ಸಯೀದ್ ವಿರುದ್ಧ ಪ್ರಕರಣ ದಾಖಲಾಗಿದೆ.

ನೈರುತ್ಯ ದೆಹಲಿಯ ಕಪಶೇರಾ ಪ್ರದೇಶದ ನಿವಾಸಿ ಯಾದವ್, ಬಿಜೆಪಿಯ ಯುವ ವಿಭಾಗವಾದ ಭಾರತೀಯ ಜನತಾ ಯುವ ಮೋರ್ಚಾದ ಮೆಹ್ರೌಲಿ ಜಿಲ್ಲೆಯ ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ.

“ಸಯೀದ್, ಸೇನೆ ಮತ್ತು ಭಾರತ ಸರ್ಕಾರದ ವಿರುದ್ಧ ರಾಷ್ಟ್ರ ವಿರೋಧಿ ಟ್ವೀಟ್ ಬರೆದಿದ್ದಾರೆ. ಭಾರತೀಯ ಸೇನೆ ಕಾಶ್ಮೀರದ ಭಯೋತ್ಪಾದಕರನ್ನು ನಿರ್ಮೂಲನೆ ಮಾಡಲು ನಡೆಸಿದ ಕಾರ್ಯಾಚರಣೆ ಕುರಿತು, ಅವರು ನಿರಪರಾಧಿಗಳು” ಎಂದು ಟ್ವೀಟ್ ಮಾಡಿದ್ದರು ಎಂಬುದಾಗಿ ತಜಿಂದರ್ ಯಾದವ್ ದೂರಿದ್ದಾರೆ.

“ನಮಗೆ ದೂರು ಬಂದಿತ್ತು. ಪ್ರೋಟೋಕಾಲ್ ಪ್ರಕಾರ ನಾವು ಪ್ರಕರಣ ದಾಖಲಿಸಿದ್ದೇವೆ. ಇದನ್ನು ಪರಿಶೀಲಿಸಲಾಗುತ್ತಿದೆ ”ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸಯೀದ್ ಮತ್ತೊಂದು ಟ್ವೀಟ್‌ನಲ್ಲಿ, “ಕಾಶ್ಮೀರವು ಜಗತ್ತಿನ ಅತ್ಯಂತ ಹೆಚ್ಚಿನ ಮಿಲಿಟರಿ ಇರುವ ಸ್ಥಳವಾಗಿದ್ದು, ಮಾನವ ಹಕ್ಕುಗಳ ಉಲ್ಲಂಘನೆಯು ಪ್ರತಿದಿನವೂ ನಡೆಯುತ್ತಿದೆ. ಜಿಯೋನಿಸ್ಟ್ ಇಸ್ರೇಲ್ ಪ್ಯಾಲೆಸ್ಟೈನ್ ನಲ್ಲಿ ನರಮೇಧ ಮಾಡಿದಂತೆ, ಇಲ್ಲಿನ ಸರ್ಕಾರವು ಕಾಶ್ಮೀರದಲ್ಲಿ ಮಾಡಲು ಕನಸು ಕಾಣುತ್ತಿದೆ. ಆದರೆ ಯಶಸ್ವಿಯಾಗುವುದಿಲ್ಲ” ಎಂದಿದ್ದಾರೆ.

 

“ರಾಷ್ಟ್ರ ವಿರೋಧಿ ಮತ್ತು ನಮ್ಮ ದೇಶದ ಹಿತಾಸಕ್ತಿಗೆ ವಿರುದ್ಧವಾದ ಕೆಲವು ಮಾಹಿತಿಗಳು ಬಂದಿದೆ. ಇದು ಭಾರತದ ಸೈನ್ಯ ಮತ್ತು ಸೈನಿಕರ ಬಗ್ಗೆ ಅವಹೇಳನಕಾರಿಯಾಗಿದ್ದು, ಇದು ನಮ್ಮ ದೇಶದ ಮತ್ತು ನಮ್ಮ ಗೌರವಾನ್ವಿತ ಸೈನ್ಯದ ಸಮಗ್ರತೆಗೆ ಭಂಗ ತರುವಂತದ್ದು ”ಎಂದು ಎಫ್‌ಐಆರ್ ಹೇಳಿದೆ.

ಈ ಪ್ರಕರಣವನ್ನು ತುಂಬಾ ಎಚ್ಚರಿಕೆಯಿಂದ ತನಿಖೆ ಮಾಡಬೇಕು ಎಂದು ಆರ್ ಎಸ್ ಎಸ್ ಹೇಳಿದೆ.


ಇದನ್ನೂ ಓದಿ: ನಿಮಗೆ ಇದೇ ಸರಿಯಾದ ಚಿಕಿತ್ಸೆ : ಜೆಎನ್‌ಯು, ಜಾಮಿಯ ವಿದ್ಯಾರ್ಥಿಗಳಿಗೆ ಬೆದರಿಕೆ ಹಾಕಿದ ಕೇಂದ್ರ ಸಚಿವ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...