Homeಮುಖಪುಟಪಕ್ಷ ವಿರೋಧಿ ಚಟುವಟಿಕೆ : ಇಬ್ಬರು ಹಾಲಿ ಶಾಸಕರು ಸೇರಿ 27 ಮಂದಿಯನ್ನು ಉಚ್ಚಾಟಿಸಿದ ಆರ್‌ಜೆಡಿ

ಪಕ್ಷ ವಿರೋಧಿ ಚಟುವಟಿಕೆ : ಇಬ್ಬರು ಹಾಲಿ ಶಾಸಕರು ಸೇರಿ 27 ಮಂದಿಯನ್ನು ಉಚ್ಚಾಟಿಸಿದ ಆರ್‌ಜೆಡಿ

- Advertisement -
- Advertisement -

ವಿಧಾನಸಭಾ ಚುನಾವಣೆಯ ಹೊಸ್ತಿಲಲ್ಲಿರುವ ಬಿಹಾರದಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಆರೋಪದ ಮೇಲೆ ಇಬ್ಬರು ಹಾಲಿ ಶಾಸಕರು, ಹಲವು ಮಾಜಿ ಶಾಸಕರು ಮತ್ತು ರಾಜ್ಯ ಮಹಿಳಾ ಘಟಕದ ಮುಖ್ಯಸ್ಥೆ ರಿತು ಜೈಸ್ವಾಲ್ ಸೇರಿದಂತೆ 27 ಮಂದಿಯನ್ನು ಆರ್‌ಜೆಡಿ ಸೋಮವಾರ ಪಕ್ಷದಿಂದ ಉಚ್ಚಾಟಿಸಿದೆ.

“ಪಕ್ಷ ವಿರೋಧಿ ಚಟುವಟಿಕೆಗಳ ಬಗ್ಗೆ ಅಧಿಕೃತ ಮಾಹಿತಿಯ ಆಧಾರದ ಮೇಲೆ 27 ಮಂದಿಯನ್ನು ಆರು ವರ್ಷಗಳ ಕಾಲ ಆರ್‌ಜೆಡಿಯ ಪ್ರಾಥಮಿಕ ಸದಸ್ಯತ್ವದಿಂದ ಹೊರಹಾಕಲಾಗಿದೆ” ಎಂದು ಆರ್‌ಜೆಡಿಯ ರಾಜ್ಯಾಧ್ಯಕ್ಷ ಮಂಗನಿ ಲಾಲ್ ಮಂಡಲ್ ಸೋಮವಾರ ಸಂಜೆ ಬಿಡುಗಡೆ ಮಾಡಿದ ಅಧಿಕೃತ ಪತ್ರದಲ್ಲಿ ತಿಳಿಸಿದ್ದಾರೆ.

ಉಚ್ಚಾಟಿತರಲ್ಲಿ ಹಾಲಿ ಶಾಸಕರಾದ ಛೋಟೆ ಲಾಲ್ ರೈ, ಮೊಹಮ್ಮದ್ ಕಮ್ರಾನ್ ಒಳಗೊಂಡಿದ್ದಾರೆ. ರೈ ಪ್ರಸ್ತುತ ಪಾರ್ಸಾ ಕ್ಷೇತ್ರದಿಂದ ಜೆಡಿಯು ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದು, ಗೋವಿಂದಪುರ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ಕಮ್ರಾನ್ ಅವರನ್ನು ಈ ಬಾರಿ ಕೈಬಿಡಲಾಗಿದೆ.

ಮಾಜಿ ಶಾಸಕರಾದ ರಾಮ್ ಪ್ರಕಾಶ್ ಮಹ್ತೋ, ಅನಿಲ್ ಸಹಾನಿ, ಸರೋಜ್ ಯಾದವ್, ಗಣೇಶ್ ಭಾರ್ತಿ ಮತ್ತು ಅನಿಲ್ ಯಾದವ್ ಉಚ್ಚಾಟಿತರಲ್ಲಿ ಸೇರಿದ್ದಾರೆ. ಗಮನಾರ್ಹವಾಗಿ ಪಕ್ಷದ ಮಹಿಳಾ ಘಟಕದ ಮುಖ್ಯಸ್ಥೆ ರಿತು ಜೈಸ್ವಾಲ್ ಅವರನ್ನು ಉಚ್ಚಾಟನೆ ಮಾಡಲಾಗಿದೆ. ರಿತು ಅವರು ಪರಿಹಾರ್ ಕ್ಷೇತ್ರದಿಂದ ಆರ್‌ಜೆಡಿಯ ಅಧಿಕೃತ ಅಭ್ಯರ್ಥಿ ವಿರುದ್ಧ ಸ್ಪರ್ಧಿಸಿದ್ದಾರೆ.

ವಿರೋಧ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಆರ್‌ಜೆಡಿಯ ತೇಜಸ್ವಿ ಯಾದವ್ ಸೋಮವಾರ ಸಂಜೆ ಫೇಸ್‌ಬುಕ್ ಲೈವ್‌ನಲ್ಲಿ ಮಾತನಾಡಿ, ಛತ್ ಪೂಜೆಗಾಗಿ ಮನೆಗೆ ಬಂದಿರುವ ವಲಸಿಗರು ತಮ್ಮ ಮತದಾನದ ಹಕ್ಕನ್ನು ಚಲಾಯಿಸಿದ ನಂತರವೇ ರಾಜ್ಯದಿಂದ ಹಿಂತಿರುಗಬೇಕೆಂದು ಮನವಿ ಮಾಡಿದ್ದಾರೆ. “ಮುಂದಿನ ಛತ್ ವೇಳೆಗೆ ಯಾರೂ ಉದ್ಯೋಗ, ಶಿಕ್ಷಣ ಅಥವಾ ಚಿಕಿತ್ಸೆಗಾಗಿ ಬಿಹಾರದಿಂದ ಹೊರಗೆ ಹೋಗಬೇಕಾಗಿಲ್ಲ ಎಂದು ನಾನು ಭರವಸೆ ನೀಡುತ್ತೇನೆ” ಎಂದಿದ್ದಾರೆ.

ಹಬ್ಬಕ್ಕಾಗಿ ಊರಿಗೆ ಮರಳುತ್ತಿರುವ ವಲಸಿಗರು ರೈಲುಗಳನ್ನು ಹತ್ತುವಾಗ ಎದುರಿಸುತ್ತಿರುವ ಸಮಸ್ಯೆಗಳನ್ನು ಉಲ್ಲೇಖಿಸಿದ ತೇಜಸ್ವಿ ಯಾದವ್, ಕೇಂದ್ರ ರೈಲ್ವೆ ಸಚಿವರ ವಿರುದ್ದ ವಾಗ್ದಾಳಿ ನಡೆಸಿದ್ದಾರೆ. 12,000 ವಿಶೇಷ ರೈಲುಗಳ ವ್ಯವಸ್ಥೆ ಮಾಡುವ ಸಚಿವರ ಹಿಂದಿನ ಹೇಳಿಕೆಯನ್ನು ಅಣಕಿಸಿದ್ದಾರೆ.

“ಎಲ್ಲಿ ಸಚಿವ ರೈಲುಗಳು? ಬಿಹಾರದ ಜನತೆ ತುಂಬಿ ತುಳುಕುತ್ತಿರುವ ರೈಲುಗಳಲ್ಲಿ, ಶೌಚಾಲಯಗಳಲ್ಲಿ ಕುಳಿತು ಪ್ರಯಾಣಿಸುತ್ತಿದ್ದಾರೆ. ಬಿಹಾರದ ಜನತೆಗೆ ಅವಮಾನ ಮಾಡಿದ ಪ್ರಧಾನಿ ಮೋದಿ ಮತ್ತು ಅವರ ಸರ್ಕಾರ ಕ್ಷಮೆ ಯಾಚಿಸಬೇಕು” ಎಂದು ತೇಜಸ್ವಿ ಯಾದವ್ ಆಗ್ರಹಿಸಿದ್ದಾರೆ.

“ಮಹಾಘಟಬಂಧನದ ಜಂಟಿ ಪ್ರಣಾಳಿಕೆಯನ್ನು ಬುಧವಾರ ಬಿಡುಗಡೆ ಮಾಡುತ್ತೇವೆ. ರಾಹುಲ್ ಗಾಂಧಿ ಜೊತೆ ಜಂಟಿ ಚುನಾವಣಾ ಪ್ರಚಾರ ಮಾಡುತ್ತೇವೆ” ಎಂದು ತೇಜಸ್ವಿ ಯಾದವ್ ಘೋಷಿಸಿದ್ದಾರೆ.

‘ನಮಗೆ ಪಿತೂರಿಯ ಶಂಕೆಯಿದೆ’: ತಮಿಳುನಾಡು ಎಸ್‌ಐಆರ್ ವಿರುದ್ದ ಸರ್ವಪಕ್ಷ ಸಭೆ ಕರೆದ ಡಿಎಂಕೆ ಮೈತ್ರಿಕೂಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...