Homeಕರ್ನಾಟಕಪಕ್ಷ ವಿರೋಧಿ ಹೇಳಿಕೆ: ಬಸನಗೌಡ ಪಾಟೀಲ್ ಯತ್ನಾಳ್ ಬಿಜೆಪಿಯಿಂದ 6 ವರ್ಷ ಉಚ್ಚಾಟನೆ

ಪಕ್ಷ ವಿರೋಧಿ ಹೇಳಿಕೆ: ಬಸನಗೌಡ ಪಾಟೀಲ್ ಯತ್ನಾಳ್ ಬಿಜೆಪಿಯಿಂದ 6 ವರ್ಷ ಉಚ್ಚಾಟನೆ

- Advertisement -
- Advertisement -

ಪಕ್ಷ ಮತ್ತು ಹಿರಿಯ ನಾಯಕ ಬಿ.ಎಸ್. ಯಡಿಯೂರಪ್ಪ ವಿರುದ್ಧ ಹೇಳಿಕೆ ನೀಡಿದ್ದಕ್ಕಾಗಿ ಬಿಜಾಪುರ ನಗರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಲಾಗಿದೆ.

ಪಕ್ಷದ ಕೇಂದ್ರ ಶಿಸ್ತು ಸಮಿತಿಯು ಇಂದು (ಮಾರ್ಚ್ 26, 2025) ಯತ್ನಾಳ್ ಅವರನ್ನು ಉಚ್ಚಾಟನೆ ಮಾಡುವುದಾಗಿ ಘೋಷಿಸಿ ಪತ್ರ ಬರೆದಿದೆ. ಪತ್ರದ ಪ್ರಕಾರ, ಫೆಬ್ರವರಿ 10 ರಂದು ಯತ್ನಾಳ್ ಅವರಿಗೆ ಕಳುಹಿಸಲಾದ ‘ಶೋಕಾಸ್ ನೋಟಿಸ್‌ಗೆ ಪ್ರತಿಕ್ರಿಯೆ’ಯನ್ನು ಸಮಿತಿ ಪರಿಶೀಲಿಸಿದೆ. ಅವರ ಪಕ್ಷದ ಶಿಸ್ತಿನ ಪುನರಾವರ್ತಿತ ಉಲ್ಲಂಘನೆಗಳನ್ನು ಗಂಭೀರವಾಗಿ ಗಮನಿಸಿದೆ. ಉತ್ತಮ ನಡವಳಿಕೆಯ ಹಿಂದಿನ ಭರವಸೆಗಳ ಹೊರತಾಗಿಯೂ ಅವರು ಪದೇ ಪದೇ ಪಕ್ಷದ ಶಿಸ್ತನ್ನು ಉಲ್ಲಂಘಿಸಿದ್ದಾರೆ ಎಂದು ಸಮಿತಿ ಕಂಡುಕೊಂಡಿದೆ ಎಂದು ಹೇಳಿದೆ.

ಪರಿಣಾಮವಾಗಿ, ಸಮಿತಿಯು ತಕ್ಷಣದಿಂದ ಜಾರಿಗೆ ಬರುವಂತೆ ಆರು ವರ್ಷಗಳ ಕಾಲ ಅವರನ್ನು ಬಿಜೆಪಿಯಿಂದ ಉಚ್ಚಾಟಿಸಲು ನಿರ್ಧರಿಸಿದೆ.

ಶಿಸ್ತು ಸಮಿತಿಯ ಸದಸ್ಯ ಕಾರ್ಯದರ್ಶಿ ಓಂ ಪಾಠಕ್ ಅವರು ಸಹಿ ಮಾಡಿದ ಆದೇಶದಲ್ಲಿ, ಯತ್ನಾಳ್ ಅವರು ಈ ಹಿಂದೆ ಹೊಂದಿದ್ದ ಪಕ್ಷದ ಎಲ್ಲ ಹುದ್ದೆಯಿಂದ ತೆಗೆದುಹಾಕಲಾಗಿದೆ ಎಂದು ಹೇಳಲಾಗಿದೆ.

ಅನಿವಾರ್ಯವಾಗಿ ತೆಗೆದುಕೊಂಡಿರುವ ಕ್ರಮ: ವಿಜಯೇಂದ್ರ

‘ಯತ್ನಾಳ್ ಅವರ ವಿರುದ್ಧದ ಶಿಸ್ತುಕ್ರಮ ವರಿಷ್ಠರು ಸುದೀರ್ಘ ಅವಧಿಯಿಂದ ಸ್ಥಿತಿ-ಗತಿಗಳನ್ನು ಅವಲೋಕಿಸಿ ಅನಿವಾರ್ಯವಾಗಿ ತೆಗೆದುಕೊಂಡಿರುವ ಕ್ರಮವಾಗಿರುತ್ತದೆ’ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದ್ದಾರೆ.

ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಅವರು, “ಭಾರತೀಯ ಜನತಾ ಪಾರ್ಟಿ, ಲಕ್ಷಾಂತರ ಕಾರ್ಯಕರ್ತರನ್ನು ಹೊಂದುವ ಮೂಲಕ ವಿಶ್ವದಲ್ಲಿ ಅಗ್ರಮಾನ್ಯತೆ ಪಡೆದಿರುವ ರಾಜಕೀಯ ಪಕ್ಷ, ಸಂಘ ಸಂಸ್ಕಾರ ಪಡೆದಿರುವ ಸಮರ್ಪಣಾ ಮನೋಭಾವದ ಕಾರ್ಯಕರ್ತರ ಬೆವರ ಪರಿಶ್ರಮದಿಂದ ಸಮೃದ್ಧ ವೃಕ್ಷದಂತೆ ಬೆಳೆದಿರುವ ಪಕ್ಷದಲ್ಲಿ ಶಿಸ್ತು-ತ್ಯಾಗಕ್ಕೆ ಮೊದಲ ಆದ್ಯತೆ. ಪಕ್ಷದ ಹಿರಿಯರು ಹಾಗೂ ವರಿಷ್ಠರು ಈ ವಿಷಯದಲ್ಲಿ ಎಂದಿಗೂ ರಾಜಿ ಮಾಡಿಕೊಂಡಿರುವ ಉದಾಹರಣೆ ನಮ್ಮ ಮುಂದಿಲ್ಲ, ಸದ್ಯ ಬಸನಗೌಡ ಪಾಟೀಲ್ ಯತ್ನಾಳ್ ಅವರ ವಿರುದ್ಧದ ಶಿಸ್ತುಕ್ರಮ ವರಿಷ್ಠರು ಸುದೀರ್ಘ ಅವಧಿಯಿಂದ ಸ್ಥಿತಿ-ಗತಿಗಳನ್ನು ಅವಲೋಕಿಸಿ ಅನಿವಾರ್ಯವಾಗಿ ತೆಗೆದುಕೊಂಡಿರುವ ಕ್ರಮವಾಗಿರುತ್ತದೆ” ಎಂದು ಹೇಳಿದ್ದಾರೆ.

“ಪಕ್ಷದ ಬೆಳವಣಿಗೆಯಲ್ಲಿನ ಕಹಿ ಘಟನೆಗಳನ್ನು ಉಲ್ಲೇಖಿಸಿ ಪಕ್ಷದ ವರಿಷ್ಠರಿಗೆ ನಾನು ಎಂದೂ ದೂರುಗಳನ್ನು ಹೇಳಿಕೊಂಡಿಲ್ಲ, ದಾಖಲಿಸಿಯೂ ಇಲ್ಲ. ಯಡಿಯೂರಪ್ಪನವರು ಎಲ್ಲರನ್ನೂ ಸಮಚಿತ್ತ ಭಾವದಿಂದ ನೋಡಿ, ಪಕ್ಷವನ್ನು ಕುಟುಂಬದಂತೆ ಬೆಳೆಸಿದ ಮಾದರಿಯಲ್ಲಿಯೇ ನಡೆಯಬೇಕೆಂಬ ಸಂಕಲ್ಪ ಹೊತ್ತು, ಸಂಘದ ಹಿರಿಯರು ಮತ್ತು ಪಕ್ಷದ ಹಿರಿಯರ ಮಾರ್ಗದರ್ಶನದಲ್ಲಿ ಮುನ್ನಡೆಯುತ್ತಿದ್ದೇನೆ” ಎಂದಿದ್ದಾರೆ.

“ಕೆಲ ದಿನಗಳ ಹಿಂದೆ ನಡೆದ ಕಹಿ ಪ್ರಸಂಗಗಳಿಂದ ಎಂದಿಗೂ ನಾನು ಉದ್ವೇಗಗೊಳ್ಳಲಿಲ್ಲ, ಯಾರೊಂದಿಗೂ ದುಃಖ ತೋಡಿಕೊಂಡಿಲ್ಲ, ಸಮರ್ಪಣೆ-ತ್ಯಾಗದ ಪಾಠವನ್ನು ಹೇಳಿಕೊಡುವ ಸಂಸ್ಕಾರವಂತ ಸಂಘಟನೆಯ ವ್ಯವಸ್ಥೆಯಲ್ಲಿ ಬೆಳೆದು ಬಂದ ನಾನು ಸಹನೆ-ತಾಳ್ಮೆಯನ್ನು ಜವಾಬ್ದಾರಿ ನಿರ್ವಹಿಸುವ ನಿಟ್ಟಿನಲ್ಲಿ ಆಧಾರ ಸ್ಥಂಭವೆಂದು ಪರಿಗಣಿಸಿ ಮುನ್ನಡಿದಿದ್ದೇನೆ. ಈ ನಿಟ್ಟಿನಲ್ಲಿ ವರಿಷ್ಠರು ತೆಗೆದುಕೊಂಡಿರುವ ಶಿಸ್ತು ಕ್ರಮವನ್ನು ನಾನು ಸಂಭ್ರಮಿಸಲಾರೆ ಬದಲಾಗಿ ಈ ಬೆಳವಣಿಗೆಯನ್ನು ದುರದೃಷ್ಟಕರವೆಂದು ದುಃಖಿಸುತ್ತೇನೆ. ವಿಶ್ವಾಸ ರಾಜಕಾರಣವನ್ನು ಎಲ್ಲರೊಡಗೂಡಿ ಮುಂದುವರೆಸಿ ಪಕ್ಷ ಸಂಘಟನೆಗೆ ಕಟ್ಟಕಡೆಯ ಕಾರ್ಯಕರ್ತರನ್ನೂ ಅಣಿಗೊಳಿಸುವ ನಿಟ್ಟಿನಲ್ಲಿ ಮುನ್ನಡೆಯಲಿದ್ದೇನೆ” ಎಂದು ಹೇಳಿಕೊಂಡಿದ್ದಾರೆ.

“ಭವಿಷ್ಯದಲ್ಲಿಯೂ ನಾನು ನಡೆಯುವ ಹಾದಿಯಲ್ಲಿ ಎಲ್ಲಾದರೂ ಎಡವಿದರೆ, ಅದನ್ನು ತಿದ್ದಿ ತೀಡುವ ಅಧಿಕಾರ ಪಕ್ಷದ ಹಿರಿಯರೆಲ್ಲರಿಗೂ ಇದ್ದೇ ಇದೆ. ಎಲ್ಲರೂ ಸೇರಿ ರಚನಾತ್ಮಕ ಸಲಹೆಗಳನ್ನು ಸ್ವೀಕರಿಸಿ ಪಕ್ಷವನ್ನು ಮುನ್ನಡೆಸೋಣ, ಭ್ರಷ್ಟಾಚಾರ ಹಾಗೂ ಸ್ವಜನ ಪಕ್ಷಪಾತದಲ್ಲಿ ಮುಳುಗಿರುವ ಜನವಿರೋಧಿ ಕಾಂಗ್ರೆಸ್ ಸರ್ಕಾರವನ್ನು ಅಧಿಕಾರದಿಂದ ಕೆಳಗಿಳಿಸಿ, ಸಮೃದ್ಧ ಕರ್ನಾಟಕವನ್ನು ಕಟ್ಟುವ ನಿಟ್ಟಿನಲ್ಲಿ ವಿಕಸಿತ ಭಾರತದ ಸಂಕಲ್ಪ ಹೊತ್ತ ಮಾನ್ಯ ಪ್ರಧಾನಿ ನರೇಂದ್ರ ಮೋದಿ ಜೀ ಅವರಿಗೆ ಹೆಗಲು ಕೊಡೋಣ, ಪಕ್ಷದ ವರಿಷ್ಟರ ನಿರೀಕ್ಷೆಯ ಗುರಿ ತಲುಪೋಣ” ಎಂದು ಹೇಳಿಕೆಯಲ್ಲಿ ವಿವರಿಸಿದ್ದಾರೆ.

ಏಪ್ರಿಲ್ 1 ರಿಂದ ಕರ್ನಾಟಕದಲ್ಲಿ ಟೋಲ್ ದರಗಳು 3-5% ಏರಿಕೆ – ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...