Homeಅಂತರಾಷ್ಟ್ರೀಯಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

- Advertisement -
- Advertisement -

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ.

ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ ಕುಸಿತ, ಹಣದುಬ್ಬರ, ಬೆಲೆ ಏರಿಕೆ) ಶುರುವಾದ ಪ್ರತಿಭಟನೆ, ಈಗ ಸರ್ಕಾರ ವಿರೋಧಿ ಕ್ರಾಂತಿಯಾಗಿ ಬದಲಾಗಿದೆ. ಪ್ರತಿಭಟನಕಾರರು ಸುಪ್ರೀಂ ಲೀಡರ್ ಅಯತೊಲ್ಲಾ ಅಲಿ ಖಮೇನಿಯನ್ನು ಅಧಿಕಾರದಿಂದ ಕೆಳಗಿಳಿಸುವ ಘೋಷಣೆಗಳನ್ನು ಕೂಗುತ್ತಿದ್ದಾರೆ.

“ಸರ್ವಾಧಿಕಾರಿಗೆ ಮರಣ!”, “ಈ ವರ್ಷ ರಕ್ತದ ವರ್ಷ, ಸೈಯದ್ ಅಲಿ ಉರುಳುತ್ತಾನೆ/ಕೆಳಗಿಳಿಯುತ್ತಾನೆ” ಇತ್ಯಾದಿ ಘೋಷಣೆಗಳನ್ನು ಖಮೇನಿ ವಿರುದ್ದ ಪ್ರತಿಭಟನಕಾರರು ಕೂಗುತ್ತಿದ್ದಾರೆ. ಇದೇ ವೇಳೆ ಹಳೆಯ ಪಹ್ಲವಿ ರಾಜವಂಶದ ರಾಜಕುಮಾರ ರೆಝಾ ಪಹ್ಲವಿಯನ್ನು ಬೆಂಬಲಿಸುತ್ತಿದ್ದಾರೆ. “ಶಾಹ್ ದೀರ್ಘಾಯುಷ್ಯ!”, “ರೆಝಾ ಪಹ್ಲವಿ ಬರುತ್ತಿದ್ದಾರೆ!” ಈ ಘೋಷಣೆಗಳೂ ಕೂಡ ಪ್ರತಿಭಟನಾಕಾರರಿಂದ ಕೇಳಿ ಬರುತ್ತಿವೆ.

ಇರಾನ್‌ನ ಎಲ್ಲ 31 ಪ್ರಾಂತ್ಯಗಳ 100ಕ್ಕೂ ಹೆಚ್ಚು ನಗರಗಳಲ್ಲಿ (ತೆಹ್ರಾನ್, ಇಸ್ಫಹಾನ್, ಕೊಮ್, ಶಿರಾಜ್, ಕರ್ಮಾನ್‌ಶಾಹ್, ಮಶ್ಹದ್ ಸೇರಿದಂತೆ) ಪ್ರತಿಭಟನೆಗಳು ನಡೆಯುತ್ತಿವೆ. ಖಮೇನಿಯ ಪ್ರಭಾವ ಹೆಚ್ಚಿರುವ ಕೇಂದ್ರಗಳಲ್ಲೂ (ಕೊಮ್, ಮಶ್ಹದ್) ಪ್ರತಿಭಟನೆಗಳು ಹರಡಿವೆ.

ಪೊಲೀಸ್, ಬಸಿಜ್ ಪ್ಯಾರಾ ಮಿಲಿಟರಿ, ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಸೈನಿಕರು ಲೈವ್ ಬುಲೆಟ್, ಟಿಯರ್ ಗ್ಯಾಸ್, ಶಾಟ್‌ಗನ್‌ನಿಂದ ಮೆಟಲ್ ಪೆಲೆಟ್‌ಗಳನ್ನು ಬಳಸಿ ಪ್ರತಿಭಟನಾಕಾರರ ಮೇಲೆ ದಾಳಿ ಮಾಡುತ್ತಿದ್ದಾರೆ. ಪ್ರತಿಭಟನಕಾರರು ಬಸಿಜ್ ಕಚೇರಿಗಳು, ಸರ್ಕಾರಿ ಕಟ್ಟಡಗಳು, ಪೊಲೀಸ್ ವಾಹನಗಳನ್ನು ಸುಟ್ಟಿದ್ದಾರೆ. ಕೆಲವು ಸ್ಥಳಗಳಲ್ಲಿ ತೀವ್ರ ಘರ್ಷಣೆಗಳು ನಡೆದಿವೆ ಎಂದು ವರದಿಯಾಗಿದೆ.

ಮಾನವ ಹಕ್ಕು ಸಂಘಟನೆಗಳ ಪ್ರಕಾರ (HRANA, Hengaw, Amnesty)ಕನಿಷ್ಠ 51 ರಿಂದ 65ಕ್ಕೂ ಹೆಚ್ಚು ಪ್ರತಿಭಟನಕಾರರು ಸತ್ತಿದ್ದಾರೆ (ಮಕ್ಕಳು ಸೇರಿದಂತೆ). ಕೆಲವು ಪೊಲೀಸ್ ಅಧಿಕಾರಿಗಳು ಮತ್ತು ಐಆರ್‌ಜಿಸಿ ಸೈನಿಕರು ಕೂಡ ಬಲಿಯಾಗಿದ್ದಾರೆ.

2000ಕ್ಕಿಂತ ಹೆಚ್ಚು ಜನರನ್ನು ಬಂಧಿಸಲಾಗಿದೆ. ಆಸ್ಪತ್ರೆಗಳಲ್ಲಿ ಗಾಯಾಳುಗಳನ್ನು ಬಂಧಿಸುವ ಪ್ರಕ್ರಿಯೆಗಳೂ ನಡೆದಿವೆ.

ದೇಶವ್ಯಾಪಿ ಇಂಟರ್ನೆಟ್ ಮತ್ತು ಫೋನ್ ಸೇವೆಗಳನ್ನು ಸರ್ಕಾರ ಕಡಿತಗೊಳಿಸಿದೆ. ಇದರಿಂದ ಮಾಹಿತಿ ಹರಿವು ತಡೆಯಲಾಗಿದೆ, ಆದರೆ ವಿಪಿಎನ್‌ ಮತ್ತು ಸ್ಟಾರ್‌ಲಿಂಕ್ ಮೂಲಕ ಕೆಲವು ವೀಡಿಯೊಗಳು ಹೊರಬರುತ್ತಿವೆ.

ರಸ್ತೆಗಳನ್ನು ತಡೆಯುವುದು, ಬೆಂಕಿ ಹಚ್ಚುವುದು, ಖಮೇನಿ ಪೋಸ್ಟರ್‌ಗಳನ್ನು ಸುಡುವುದು (ಮಹಿಳೆಯರು ಸಿಗರೇಟ್ ಉರಿಸಲು ಬಳಸುವುದು), ಹಳೆಯ ಲಯನ್ ಅಂಡ್ ಸನ್ ಧ್ವಜವನ್ನು (ಪಹ್ಲವಿ ಕಾಲದ ರಾಜಧ್ವಜ) ತೋರಿಸುವುದು ಸೇರಿದಂತೆ ವಿವಿಧ ರೀತಿಯಲ್ಲಿ ಖಮೇನಿ ಆಡಳಿತದ ವಿರುದ್ದ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಅಂತಾರಾಷ್ಟ್ರಿಯ ಪ್ರತಿಕ್ರಿಯೆ

ಅಮೆರಿಕ ಅಧ್ಯಕ್ಷ ಟ್ರಂಪ್ “ಇರಾನ್ ದೊಡ್ಡ ಸಮಸ್ಯೆಯಲ್ಲಿದೆ” ಎಂದಿದ್ದು, ಪ್ರತಿಭಟನಕಾರರನ್ನು “ಧೈರ್ಯಶಾಲಿಗಳು” ಎಂದು ಹೊಗಳಿದ್ದಾರೆ. ಹೆಚ್ಚಿನ ಸಾವುಗಳಾದರೆ ತೀವ್ರ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ. ಯುರೋಪಿಯನ್ ದೇಶಗಳು (ಫ್ರಾನ್ಸ್, ಯುಕೆ, ಜರ್ಮನಿ) ಹತ್ಯೆಗಳನ್ನು ಖಂಡಿಸಿದ್ದು, ಸಂಯಮ ಕಾಯ್ದುಕೊಳ್ಳಲು ಒತ್ತಾಯಿಸಿವೆ. ಎಕ್ಸ್‌ (ಟ್ವಿಟರ್) ಪ್ರತಿಭಟನಾಕಾರರನ್ನು ಬೆಂಬಲಿಸಿ ಇರಾನ್ ಧ್ವಜದ ಇಮೋಜಿಯನ್ನು ಹಳೆಯ ಲಯನ್ ಅಂಡ್ ಸನ್‌ಗೆ ಬದಲಾಯಿಸಿದೆ.

ಈ ಪ್ರತಿಭಟನೆಗಳು ಇರಾನ್‌ನ ಇಸ್ಲಾಮಿಕ್ ರಿಪಬ್ಲಿಕ್‌ಗೆ ಇತ್ತೀಚಿನ ವರ್ಷಗಳಲ್ಲಿ ಎದುರಾಗಿರುವ ಅತಿ ದೊಡ್ಡ ಆಂತರಿಕ ಸವಾಲುಗಳಲ್ಲಿ ಒಂದು. ಆರ್ಥಿಕ ದುಸ್ಥಿತಿ, ರಾಜಕೀಯ ಆಡಳಿತದ ವಿರುದ್ದ ಆಕ್ರೋಶ ಮತ್ತು 2025ರ ಇಸ್ರೇಲ್-ಇರಾನ್ ಸಂಘರ್ಷದ ನಂತರ ಖಮೇನಿ ಆಡಳಿತಕ್ಕೆ ದೊಡ್ಡ ಸವಾಲು ಎದುರಾಗಿದೆ. ಸ್ಥಿತಿ ಬಹಳ ತ್ವರಿತವಾಗಿ ಬದಲಾಗುತ್ತಿದೆ, ದಮನ ತೀವ್ರವಾಗುತ್ತಿದ್ದರೂ ಪ್ರತಿಭಟನೆಗಳು ಮುಂದುವರೆಯುತ್ತಿವೆ ಎಂದು ವರದಿಗಳು ಹೇಳಿವೆ.

ಟ್ರಂಪ್ ಮಧ್ಯಪ್ರವೇಶ ಕೋರಿದ ಪಹ್ಲವಿ

ಹೊರಗಟ್ಟಲ್ಪಟ್ಟ ಇರಾನ್‌ನ ಮಾಜಿ ರಾಜಕುಮಾರ ರೆಝಾ ಪಹ್ಲವಿ (ಪಹ್ಲವಿ ವಂಶದ ಕೊನೆಯ ಶಾಹ್‌ನ ಮಗ) ಜನವರಿ 9, 2026ರಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಸಾಮಾಜಿಕ ಜಾಲತಾಣ ಪೋಸ್ಟ್ ಮೂಲಕ ತುರ್ತು ಮನವಿಯೊಂದನ್ನು ಮಾಡಿದ್ದು, ಇರಾನ್‌ನ ಆಂತರಿಕ ವಿಚಾರದಲ್ಲಿ ಮಧ್ಯಪ್ರವೇಶಿಸುವಂತೆ ಮತ್ತು ಪ್ರತಿಭಟನಾಕಾರರನ್ನು ಬೆಂಬಲಿಸುವಂತೆ ಕೋರಿದ್ದಾರೆ.

“ಮಿಸ್ಟರ್ ಪ್ರೆಸಿಡೆಂಟ್, ಇದು ನಿಮ್ಮ ಗಮನ, ಬೆಂಬಲ ಮತ್ತು ಕ್ರಮಕ್ಕಾಗಿ ತುರ್ತು ಮತ್ತು ತಕ್ಷಣದ ಕೋರಿಕೆಯಾಗಿದೆ. ಪ್ರತಿಭಟನಕಾರರು ರಸ್ತೆಗಳಲ್ಲಿ ಲೈವ್ ಬುಲೆಟ್‌ಗಳನ್ನು ಎದುರಿಸುತ್ತಿದ್ದಾರೆ. ಈಗ ದೇಶವ್ಯಾಪಿ ಇಂಟರ್ನೆಟ್ ಮತ್ತು ಫೋನ್ ಸೇವೆಗಳ ನಿರ್ಬಂಧದಿಂದ ಸಂಪರ್ಕ ಕಡಿತಗೊಂಡಿದೆ. ಸುಪ್ರೀಂ ಲೀಡರ್ ಅಲಿ ಖಮೇನಿ ಇಂಟರ್‌ನೆಟ್‌, ಫೋನ್‌ ಸೇವೆಗಳನ್ನು ನಿರ್ಬಂಧಿಸಿ ‘ಯುವ ನಾಯಕರನ್ನು ಕೊಲ್ಲಲು’ ಯೋಜಿಸುತ್ತಿದ್ದಾರೆ” ಎಂದು ಪಹ್ಲವಿ ಟ್ರಂಪ್‌ ಅನ್ನು ಉದ್ದೇಶಿಸಿ ಮಾಡಿದ ಪೋಸ್ಟ್‌ನಲ್ಲಿ ಆರೋಪಿಸಿದ್ದಾರೆ.

“ಟ್ರಂಪ್ ಶಾಂತಿ ಬಯಸುವ ಮತ್ತು ಮಾತಿನ ಮೇಲೆ ನಿಲ್ಲುವ ಮನುಷ್ಯ” ಎಂದು ಕೊಂಡಾಡಿರುವ ಪಹ್ಲವಿ, ಇರಾನ್ ಜನರಿಗೆ ಸಹಾಯ ಮಾಡಲು ಸಿದ್ಧರಾಗಿರಿ ಎಂದು ಕೋರಿದ್ದಾರೆ.

ಖಮೇನಿ ಹೇಳಿದ್ದೇನು?

ಜನವರಿ 9, 2026ರಂದು ಸುಪ್ರೀಂ ಲೀಡರ್ ಅಯತೊಲ್ಲಾ ಅಲಿ ಖಮೇನಿ ತಮ್ಮ ಮೊದಲ ಸಾರ್ವಜನಿಕ ಭಾಷಣದಲ್ಲಿ ಪ್ರತಿಭಟನೆಗಳನ್ನು ತೀವ್ರವಾಗಿ ಖಂಡಿಸಿದ್ದಾರೆ. ಪ್ರತಿಭಟನಕಾರರನ್ನು “ವಾಂಡಲ್ಸ್” (ವಿನಾಶಕಾರಿ), “ಸಬೋಟರ್ಸ್” (ವಿನಾಶಕಾರಿ ಏಜೆಂಟ್‌ಗಳು) ಮತ್ತು ವಿದೇಶಿ ಶಕ್ತಿಗಳ (ವಿಶೇಷವಾಗಿ ಅಮೆರಿಕ) ಬೆಂಬಲಿಗರು ಎಂದು ಕರೆದಿದ್ದಾರೆ.

“ಅಮೆರಿಕಾ ಅಧ್ಯಕ್ಷನನ್ನು ಸಂತೋಷಪಡಿಸಲು ಪ್ರತಿಭಟನಾಕಾರರು ತಮ್ಮ ರಸ್ತೆಗಳನ್ನು ಹಾಳುಗೆಡವುತ್ತಿದ್ದಾರೆ. ಟ್ರಂಪ್ ಕೈಗಳಲ್ಲಿ ಇರಾನ್ ಜನರ ರಕ್ತ ಮೆತ್ತಿಕೊಂಡಿವೆ. ಅವರು ತಮ್ಮ ದೇಶದ ಸಮಸ್ಯೆಗಳತ್ತ ಗಮನ ಹರಿಸಬೇಕು” ಎಂದು ಹೇಳಿದ್ದಾರೆ.

ಆಡಳಿತ “ಹಿಂದಕ್ಕೆ ಸರಿಯುವುದಿಲ್ಲ” ಎಂದು ದೃಢವಾಗಿ ಹೇಳಿ, ಹೆಚ್ಚಿನ ದಮನದ ಸಂಕೇತ ನೀಡಿದೆ.
ಪ್ರತಿಭಟನೆಗಳನ್ನು “ಟೆರರಿಸ್ಟ್ ಆಕ್ಷನ್‌” ಎಂದು ಕರೆದು, ಏಕತೆಗೆ ಕರೆ ಕೊಟ್ಟಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...

ನಾಲ್ಕು ತಿಂಗಳಲ್ಲೇ ಗರಿಷ್ಠ ಮಟ್ಟಕ್ಕೆ ತಲುಪಿದ ಯುವಜನರ ನಿರುದ್ಯೋಗ ಪ್ರಮಾಣ

15–29 ವರ್ಷ ವಯಸ್ಸಿನ ಯುವಕರಲ್ಲಿ ನಿರುದ್ಯೋಗ ದರವು ಫೆಬ್ರವರಿಯಲ್ಲಿ ನಾಲ್ಕು ತಿಂಗಳಲ್ಲೇ ಗರಿಷ್ಠ ಶೇ. 14.8 ಕ್ಕೆ ಏರಿದೆ. ಇದು ಜನವರಿಯಲ್ಲಿ ಶೇ. 14.7 ರಷ್ಟು ಹೆಚ್ಚಾಗಿ, ಯುವಜನರಲ್ಲಿ ನಿರುದ್ಯೋಗ ಹೆಚ್ಚಳ ಉಂಟಾಗಿದೆ...

ಆರ್‌ಎಸ್‌ಎಸ್‌ ನಿಷೇಧಕ್ಕೆ ಒತ್ತಾಯಿಸಿದ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಸಮಿತಿ; ಕಾಂಗ್ರೆಸ್ ಪ್ರತಿಕ್ರಿಯೆ

ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು ಆರೋಪಿಸಿರುವ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ಯುನೈಟೆಡ್ ಸ್ಟೇಟ್ಸ್ ಆಯೋಗವು, ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್) ಮತ್ತು ಭಾರತದ ಬಾಹ್ಯ ಗುಪ್ತಚರ ಸಂಸ್ಥೆಯಾದ ಸಂಶೋಧನೆ, ವಿಶ್ಲೇಷಣಾ...

ಕಾಂಗ್ರೆಸ್ ವಿರುದ್ಧದ ‘ಟರ್ಕಿ ಕಚೇರಿ’ ಹೇಳಿಕೆ: ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ಸಮನ್ಸ್ ಜಾರಿ ಮಾಡಿದ ದೆಹಲಿ ಹೈಕೋರ್ಟ್

ಕಾಂಗ್ರೆಸ್ ವಿರುದ್ಧದ "ಟರ್ಕಿ ಕಚೇರಿ" ಆರೋಪಕ್ಕೆ ಸಂಬಂಧಿಸಿದಂತೆ ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಟರ್ಕಿಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಂತರರಾಷ್ಟ್ರೀಯ ಕಚೇರಿಯನ್ನು ನಡೆಸುತ್ತಿದೆ...

ಚುನಾವಣಾ ಆಯೋಗ ಬಿಜೆಪಿ ಆಜ್ಞೆಯ ಮೇರೆಗೆ ಕೆಲಸ ಮಾಡುತ್ತಿದೆ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ವಿಧಾನಸಭಾ ಚುನಾವಣೆಗೂ ಮುನ್ನ, ಭಾರತದ ಚುನಾವಣಾ ಆಯೋಗ (ಇಸಿಐ) ಪ್ರಸ್ತುತ ಡಿಜಿಪಿ, ಕೋಲ್ಕತ್ತಾ ಪೊಲೀಸ್ ಆಯುಕ್ತರು, ಮುಖ್ಯ ಮತ್ತು ಗೃಹ ಕಾರ್ಯದರ್ಶಿಗಳನ್ನು ಬದಲಿಸುವ ಮೂಲಕ ಪ್ರಮುಖ ಪುನರ್ರಚನೆಯನ್ನು ಮಾಡಿದೆ. ಪಶ್ಚಿಮ ಬಂಗಾಳದ ಹೊಸ ಡಿಜಿ...

‘ಶಾಂತಿಗೆ ಇದು ಸಮಯವಲ್ಲ’: ‘ಕದನ ವಿರಾಮ’ ಪ್ರಸ್ತಾಪಗಳನ್ನು ತಿರಸ್ಕರಿಸಿದ ಇರಾನ್ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ 

ಇರಾನ್‌ನ ನೂತನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ ಅವರು ಉದ್ವಿಗ್ನತೆಯನ್ನು ಕಡಿಮೆ ಮಾಡುವ ಅಥವಾ ಎರಡು ಮಧ್ಯವರ್ತಿ ರಾಷ್ಟ್ರಗಳು ಟೆಹ್ರಾನ್‌ಗೆ ತಲುಪಿಸಿದ ಯುನೈಟೆಡ್ ಸ್ಟೇಟ್ಸ್‌ನೊಂದಿಗೆ ಕದನ ವಿರಾಮದ ಪ್ರಸ್ತಾಪಗಳನ್ನು ತಿರಸ್ಕರಿಸಿದರು ಎಂದು...

ಲೋಕಸಭೆ | 8 ವಿಪಕ್ಷ ಸಂಸದರ ಅಮಾನತು ರದ್ದು

ಲೋಕಸಭೆಯ ಎಂಟು ವಿಪಕ್ಷ ಸಂಸದರ ಅಮಾನತನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸ್ಪೀಕರ್ ಓಂ ಬಿರ್ಲಾ ಮಂಗಳವಾರ (ಮಾ.17) ವಾಪಸ್ ಪಡೆದಿದ್ದಾರೆ. ಅಶಿಸ್ತಿನ ಕಾರಣ ನೀಡಿ ಫೆಬ್ರವರಿ 8ರಂದು ಸಂಸದರನ್ನು ಅಮಾನತು ಮಾಡಲಾಗಿತ್ತು. ಅಮಾನತು...

ಪಿತೃತ್ವ ರಜೆಗೆ ಕಾನೂನು ತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಪಿತೃತ್ವ ರಜೆಯನ್ನು (paternity leave) ಸಾಮಾಜಿಕ ಭದ್ರತಾ ಸೌಲಭ್ಯವೆಂದು ಪರಿಗಣಿಸಿ ಕಾನೂನು ರೂಪಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಮಾ.17) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಈ ರಜೆಯ ಅವಧಿಯು ಪೋಷಕರು ಮತ್ತು ಮಗು ಇಬ್ಬರ...

‘ಕಾಲ ಎಲ್ಲಕ್ಕೂ ಉತ್ತರಿಸುತ್ತದೆ’; ಟಿವಿಕೆ ನಾಯಕನ ‘ಡಿಎಂಕೆ ಬೆದರಿಕೆ’ ಆರೋಪ ‘ಸತ್ಯಕ್ಕೆ ದೂರವಾದ ಮಾತು’ ಎಂದ ರಜನಿಕಾಂತ್

ರಾಜಕೀಯ ಪ್ರವೇಶಕ್ಕೆ ಯತ್ನಿಸಿದಾಗ ಡಿಎಂಕೆಯಿಂದ ಬೆದರಿಕೆ ಇತ್ತು ಎಂಬ ಟಿವಿಕೆ ನಾಯಕ ಆಧವ್ ಅರ್ಜುನ ಅವರ ಆರೋಪವನ್ನು ಸೂಪರ್‌ಸ್ಟಾರ್ ರಜನಿಕಾಂತ್ ಮಂಗಳವಾರ ನಿರಾಕರಿಸಿದ್ದಾರೆ ಮತ್ತು "ಕಾಲವೇ ಉತ್ತರ ನೀಡುತ್ತದೆ" ಎಂದು ಹೇಳಿದ್ದಾರೆ. ತಮ್ಮ ಅಧಿಕೃತ...

ಕಾಂಗ್ರೆಸ್‌ ಮಾನನಷ್ಟ ಪ್ರಕರಣ : ಅರ್ನಾಬ್ ಗೋಸ್ವಾಮಿ, ರಿಪಬ್ಲಿಕ್ ಟಿವಿಗೆ ದೆಹಲಿ ಹೈಕೋರ್ಟ್ ಸಮನ್ಸ್

ಟರ್ಕಿ ದೇಶದಲ್ಲಿ ಕಾಂಗ್ರೆಸ್‌ ಪಕ್ಷವು ಅಂತಾರಾಷ್ಟ್ರೀಯ ಕಚೇರಿ ಹೊಂದಿದೆ ಎಂಬ ವರದಿಗೆ ಸಂಬಂಧಿಸಿದಂತೆ, ಅರ್ನಾಬ್ ಗೋಸ್ವಾಮಿ ಮತ್ತು ರಿಪಬ್ಲಿಕ್ ಟಿವಿ ವಿರುದ್ಧ ಕಾಂಗ್ರೆಸ್ ಹೂಡಿರುವ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ಹೈಕೋರ್ಟ್ ಮಂಗಳವಾರ (ಮಾ.17)...