Homeಅಂತರಾಷ್ಟ್ರೀಯಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

- Advertisement -
- Advertisement -

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ.

ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ ಕುಸಿತ, ಹಣದುಬ್ಬರ, ಬೆಲೆ ಏರಿಕೆ) ಶುರುವಾದ ಪ್ರತಿಭಟನೆ, ಈಗ ಸರ್ಕಾರ ವಿರೋಧಿ ಕ್ರಾಂತಿಯಾಗಿ ಬದಲಾಗಿದೆ. ಪ್ರತಿಭಟನಕಾರರು ಸುಪ್ರೀಂ ಲೀಡರ್ ಅಯತೊಲ್ಲಾ ಅಲಿ ಖಮೇನಿಯನ್ನು ಅಧಿಕಾರದಿಂದ ಕೆಳಗಿಳಿಸುವ ಘೋಷಣೆಗಳನ್ನು ಕೂಗುತ್ತಿದ್ದಾರೆ.

“ಸರ್ವಾಧಿಕಾರಿಗೆ ಮರಣ!”, “ಈ ವರ್ಷ ರಕ್ತದ ವರ್ಷ, ಸೈಯದ್ ಅಲಿ ಉರುಳುತ್ತಾನೆ/ಕೆಳಗಿಳಿಯುತ್ತಾನೆ” ಇತ್ಯಾದಿ ಘೋಷಣೆಗಳನ್ನು ಖಮೇನಿ ವಿರುದ್ದ ಪ್ರತಿಭಟನಕಾರರು ಕೂಗುತ್ತಿದ್ದಾರೆ. ಇದೇ ವೇಳೆ ಹಳೆಯ ಪಹ್ಲವಿ ರಾಜವಂಶದ ರಾಜಕುಮಾರ ರೆಝಾ ಪಹ್ಲವಿಯನ್ನು ಬೆಂಬಲಿಸುತ್ತಿದ್ದಾರೆ. “ಶಾಹ್ ದೀರ್ಘಾಯುಷ್ಯ!”, “ರೆಝಾ ಪಹ್ಲವಿ ಬರುತ್ತಿದ್ದಾರೆ!” ಈ ಘೋಷಣೆಗಳೂ ಕೂಡ ಪ್ರತಿಭಟನಾಕಾರರಿಂದ ಕೇಳಿ ಬರುತ್ತಿವೆ.

ಇರಾನ್‌ನ ಎಲ್ಲ 31 ಪ್ರಾಂತ್ಯಗಳ 100ಕ್ಕೂ ಹೆಚ್ಚು ನಗರಗಳಲ್ಲಿ (ತೆಹ್ರಾನ್, ಇಸ್ಫಹಾನ್, ಕೊಮ್, ಶಿರಾಜ್, ಕರ್ಮಾನ್‌ಶಾಹ್, ಮಶ್ಹದ್ ಸೇರಿದಂತೆ) ಪ್ರತಿಭಟನೆಗಳು ನಡೆಯುತ್ತಿವೆ. ಖಮೇನಿಯ ಪ್ರಭಾವ ಹೆಚ್ಚಿರುವ ಕೇಂದ್ರಗಳಲ್ಲೂ (ಕೊಮ್, ಮಶ್ಹದ್) ಪ್ರತಿಭಟನೆಗಳು ಹರಡಿವೆ.

ಪೊಲೀಸ್, ಬಸಿಜ್ ಪ್ಯಾರಾ ಮಿಲಿಟರಿ, ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಸೈನಿಕರು ಲೈವ್ ಬುಲೆಟ್, ಟಿಯರ್ ಗ್ಯಾಸ್, ಶಾಟ್‌ಗನ್‌ನಿಂದ ಮೆಟಲ್ ಪೆಲೆಟ್‌ಗಳನ್ನು ಬಳಸಿ ಪ್ರತಿಭಟನಾಕಾರರ ಮೇಲೆ ದಾಳಿ ಮಾಡುತ್ತಿದ್ದಾರೆ. ಪ್ರತಿಭಟನಕಾರರು ಬಸಿಜ್ ಕಚೇರಿಗಳು, ಸರ್ಕಾರಿ ಕಟ್ಟಡಗಳು, ಪೊಲೀಸ್ ವಾಹನಗಳನ್ನು ಸುಟ್ಟಿದ್ದಾರೆ. ಕೆಲವು ಸ್ಥಳಗಳಲ್ಲಿ ತೀವ್ರ ಘರ್ಷಣೆಗಳು ನಡೆದಿವೆ ಎಂದು ವರದಿಯಾಗಿದೆ.

ಮಾನವ ಹಕ್ಕು ಸಂಘಟನೆಗಳ ಪ್ರಕಾರ (HRANA, Hengaw, Amnesty)ಕನಿಷ್ಠ 51 ರಿಂದ 65ಕ್ಕೂ ಹೆಚ್ಚು ಪ್ರತಿಭಟನಕಾರರು ಸತ್ತಿದ್ದಾರೆ (ಮಕ್ಕಳು ಸೇರಿದಂತೆ). ಕೆಲವು ಪೊಲೀಸ್ ಅಧಿಕಾರಿಗಳು ಮತ್ತು ಐಆರ್‌ಜಿಸಿ ಸೈನಿಕರು ಕೂಡ ಬಲಿಯಾಗಿದ್ದಾರೆ.

2000ಕ್ಕಿಂತ ಹೆಚ್ಚು ಜನರನ್ನು ಬಂಧಿಸಲಾಗಿದೆ. ಆಸ್ಪತ್ರೆಗಳಲ್ಲಿ ಗಾಯಾಳುಗಳನ್ನು ಬಂಧಿಸುವ ಪ್ರಕ್ರಿಯೆಗಳೂ ನಡೆದಿವೆ.

ದೇಶವ್ಯಾಪಿ ಇಂಟರ್ನೆಟ್ ಮತ್ತು ಫೋನ್ ಸೇವೆಗಳನ್ನು ಸರ್ಕಾರ ಕಡಿತಗೊಳಿಸಿದೆ. ಇದರಿಂದ ಮಾಹಿತಿ ಹರಿವು ತಡೆಯಲಾಗಿದೆ, ಆದರೆ ವಿಪಿಎನ್‌ ಮತ್ತು ಸ್ಟಾರ್‌ಲಿಂಕ್ ಮೂಲಕ ಕೆಲವು ವೀಡಿಯೊಗಳು ಹೊರಬರುತ್ತಿವೆ.

ರಸ್ತೆಗಳನ್ನು ತಡೆಯುವುದು, ಬೆಂಕಿ ಹಚ್ಚುವುದು, ಖಮೇನಿ ಪೋಸ್ಟರ್‌ಗಳನ್ನು ಸುಡುವುದು (ಮಹಿಳೆಯರು ಸಿಗರೇಟ್ ಉರಿಸಲು ಬಳಸುವುದು), ಹಳೆಯ ಲಯನ್ ಅಂಡ್ ಸನ್ ಧ್ವಜವನ್ನು (ಪಹ್ಲವಿ ಕಾಲದ ರಾಜಧ್ವಜ) ತೋರಿಸುವುದು ಸೇರಿದಂತೆ ವಿವಿಧ ರೀತಿಯಲ್ಲಿ ಖಮೇನಿ ಆಡಳಿತದ ವಿರುದ್ದ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಅಂತಾರಾಷ್ಟ್ರಿಯ ಪ್ರತಿಕ್ರಿಯೆ

ಅಮೆರಿಕ ಅಧ್ಯಕ್ಷ ಟ್ರಂಪ್ “ಇರಾನ್ ದೊಡ್ಡ ಸಮಸ್ಯೆಯಲ್ಲಿದೆ” ಎಂದಿದ್ದು, ಪ್ರತಿಭಟನಕಾರರನ್ನು “ಧೈರ್ಯಶಾಲಿಗಳು” ಎಂದು ಹೊಗಳಿದ್ದಾರೆ. ಹೆಚ್ಚಿನ ಸಾವುಗಳಾದರೆ ತೀವ್ರ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ. ಯುರೋಪಿಯನ್ ದೇಶಗಳು (ಫ್ರಾನ್ಸ್, ಯುಕೆ, ಜರ್ಮನಿ) ಹತ್ಯೆಗಳನ್ನು ಖಂಡಿಸಿದ್ದು, ಸಂಯಮ ಕಾಯ್ದುಕೊಳ್ಳಲು ಒತ್ತಾಯಿಸಿವೆ. ಎಕ್ಸ್‌ (ಟ್ವಿಟರ್) ಪ್ರತಿಭಟನಾಕಾರರನ್ನು ಬೆಂಬಲಿಸಿ ಇರಾನ್ ಧ್ವಜದ ಇಮೋಜಿಯನ್ನು ಹಳೆಯ ಲಯನ್ ಅಂಡ್ ಸನ್‌ಗೆ ಬದಲಾಯಿಸಿದೆ.

ಈ ಪ್ರತಿಭಟನೆಗಳು ಇರಾನ್‌ನ ಇಸ್ಲಾಮಿಕ್ ರಿಪಬ್ಲಿಕ್‌ಗೆ ಇತ್ತೀಚಿನ ವರ್ಷಗಳಲ್ಲಿ ಎದುರಾಗಿರುವ ಅತಿ ದೊಡ್ಡ ಆಂತರಿಕ ಸವಾಲುಗಳಲ್ಲಿ ಒಂದು. ಆರ್ಥಿಕ ದುಸ್ಥಿತಿ, ರಾಜಕೀಯ ಆಡಳಿತದ ವಿರುದ್ದ ಆಕ್ರೋಶ ಮತ್ತು 2025ರ ಇಸ್ರೇಲ್-ಇರಾನ್ ಸಂಘರ್ಷದ ನಂತರ ಖಮೇನಿ ಆಡಳಿತಕ್ಕೆ ದೊಡ್ಡ ಸವಾಲು ಎದುರಾಗಿದೆ. ಸ್ಥಿತಿ ಬಹಳ ತ್ವರಿತವಾಗಿ ಬದಲಾಗುತ್ತಿದೆ, ದಮನ ತೀವ್ರವಾಗುತ್ತಿದ್ದರೂ ಪ್ರತಿಭಟನೆಗಳು ಮುಂದುವರೆಯುತ್ತಿವೆ ಎಂದು ವರದಿಗಳು ಹೇಳಿವೆ.

ಟ್ರಂಪ್ ಮಧ್ಯಪ್ರವೇಶ ಕೋರಿದ ಪಹ್ಲವಿ

ಹೊರಗಟ್ಟಲ್ಪಟ್ಟ ಇರಾನ್‌ನ ಮಾಜಿ ರಾಜಕುಮಾರ ರೆಝಾ ಪಹ್ಲವಿ (ಪಹ್ಲವಿ ವಂಶದ ಕೊನೆಯ ಶಾಹ್‌ನ ಮಗ) ಜನವರಿ 9, 2026ರಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಸಾಮಾಜಿಕ ಜಾಲತಾಣ ಪೋಸ್ಟ್ ಮೂಲಕ ತುರ್ತು ಮನವಿಯೊಂದನ್ನು ಮಾಡಿದ್ದು, ಇರಾನ್‌ನ ಆಂತರಿಕ ವಿಚಾರದಲ್ಲಿ ಮಧ್ಯಪ್ರವೇಶಿಸುವಂತೆ ಮತ್ತು ಪ್ರತಿಭಟನಾಕಾರರನ್ನು ಬೆಂಬಲಿಸುವಂತೆ ಕೋರಿದ್ದಾರೆ.

“ಮಿಸ್ಟರ್ ಪ್ರೆಸಿಡೆಂಟ್, ಇದು ನಿಮ್ಮ ಗಮನ, ಬೆಂಬಲ ಮತ್ತು ಕ್ರಮಕ್ಕಾಗಿ ತುರ್ತು ಮತ್ತು ತಕ್ಷಣದ ಕೋರಿಕೆಯಾಗಿದೆ. ಪ್ರತಿಭಟನಕಾರರು ರಸ್ತೆಗಳಲ್ಲಿ ಲೈವ್ ಬುಲೆಟ್‌ಗಳನ್ನು ಎದುರಿಸುತ್ತಿದ್ದಾರೆ. ಈಗ ದೇಶವ್ಯಾಪಿ ಇಂಟರ್ನೆಟ್ ಮತ್ತು ಫೋನ್ ಸೇವೆಗಳ ನಿರ್ಬಂಧದಿಂದ ಸಂಪರ್ಕ ಕಡಿತಗೊಂಡಿದೆ. ಸುಪ್ರೀಂ ಲೀಡರ್ ಅಲಿ ಖಮೇನಿ ಇಂಟರ್‌ನೆಟ್‌, ಫೋನ್‌ ಸೇವೆಗಳನ್ನು ನಿರ್ಬಂಧಿಸಿ ‘ಯುವ ನಾಯಕರನ್ನು ಕೊಲ್ಲಲು’ ಯೋಜಿಸುತ್ತಿದ್ದಾರೆ” ಎಂದು ಪಹ್ಲವಿ ಟ್ರಂಪ್‌ ಅನ್ನು ಉದ್ದೇಶಿಸಿ ಮಾಡಿದ ಪೋಸ್ಟ್‌ನಲ್ಲಿ ಆರೋಪಿಸಿದ್ದಾರೆ.

“ಟ್ರಂಪ್ ಶಾಂತಿ ಬಯಸುವ ಮತ್ತು ಮಾತಿನ ಮೇಲೆ ನಿಲ್ಲುವ ಮನುಷ್ಯ” ಎಂದು ಕೊಂಡಾಡಿರುವ ಪಹ್ಲವಿ, ಇರಾನ್ ಜನರಿಗೆ ಸಹಾಯ ಮಾಡಲು ಸಿದ್ಧರಾಗಿರಿ ಎಂದು ಕೋರಿದ್ದಾರೆ.

ಖಮೇನಿ ಹೇಳಿದ್ದೇನು?

ಜನವರಿ 9, 2026ರಂದು ಸುಪ್ರೀಂ ಲೀಡರ್ ಅಯತೊಲ್ಲಾ ಅಲಿ ಖಮೇನಿ ತಮ್ಮ ಮೊದಲ ಸಾರ್ವಜನಿಕ ಭಾಷಣದಲ್ಲಿ ಪ್ರತಿಭಟನೆಗಳನ್ನು ತೀವ್ರವಾಗಿ ಖಂಡಿಸಿದ್ದಾರೆ. ಪ್ರತಿಭಟನಕಾರರನ್ನು “ವಾಂಡಲ್ಸ್” (ವಿನಾಶಕಾರಿ), “ಸಬೋಟರ್ಸ್” (ವಿನಾಶಕಾರಿ ಏಜೆಂಟ್‌ಗಳು) ಮತ್ತು ವಿದೇಶಿ ಶಕ್ತಿಗಳ (ವಿಶೇಷವಾಗಿ ಅಮೆರಿಕ) ಬೆಂಬಲಿಗರು ಎಂದು ಕರೆದಿದ್ದಾರೆ.

“ಅಮೆರಿಕಾ ಅಧ್ಯಕ್ಷನನ್ನು ಸಂತೋಷಪಡಿಸಲು ಪ್ರತಿಭಟನಾಕಾರರು ತಮ್ಮ ರಸ್ತೆಗಳನ್ನು ಹಾಳುಗೆಡವುತ್ತಿದ್ದಾರೆ. ಟ್ರಂಪ್ ಕೈಗಳಲ್ಲಿ ಇರಾನ್ ಜನರ ರಕ್ತ ಮೆತ್ತಿಕೊಂಡಿವೆ. ಅವರು ತಮ್ಮ ದೇಶದ ಸಮಸ್ಯೆಗಳತ್ತ ಗಮನ ಹರಿಸಬೇಕು” ಎಂದು ಹೇಳಿದ್ದಾರೆ.

ಆಡಳಿತ “ಹಿಂದಕ್ಕೆ ಸರಿಯುವುದಿಲ್ಲ” ಎಂದು ದೃಢವಾಗಿ ಹೇಳಿ, ಹೆಚ್ಚಿನ ದಮನದ ಸಂಕೇತ ನೀಡಿದೆ.
ಪ್ರತಿಭಟನೆಗಳನ್ನು “ಟೆರರಿಸ್ಟ್ ಆಕ್ಷನ್‌” ಎಂದು ಕರೆದು, ಏಕತೆಗೆ ಕರೆ ಕೊಟ್ಟಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಪೊಲೀಸರಿಂದ ಬೈಕ್ ಸೀಝ್‌; ಠಾಣೆ ಮುಂದೆ ಬೆಂಕಿ ಹಚ್ಚಿಕೊಂಡ ‘ಗಿಗ್’ ಕಾರ್ಮಿಕ

ಪೊಲೀಸರು ತನ್ನ ಬೈಕ್‌ ವಶಪಡಿಸಿಕೊಂಡ ನಂತರ 32 ವರ್ಷದ ಗಿಗ್ ಕಾರ್ಮಿಕನೊಬ್ಬ ಠಾಣೆಯ ಹೊರಗೆ ಬೆಂಕಿಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. ಅಕ್ಷಯ್ ಕಶ್ಯಪ್ ಎಂದು ಗುರುತಿಸಲ್ಪಟ್ಟ ಯುವಕನಿಗೆ ದೇಹದ...

ಎಪ್‌ಸ್ಟೀನ್ ಫೈಲ್ಸ್ ನಲ್ಲಿ ಹೆಸರು ಪ್ರಸ್ತಾಪ; ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ ಬಿಲ್ ಗೇಟ್ಸ್: ವರದಿ 

ನ್ಯೂಯಾರ್ಕ್: ಅಮೆರಿಕದ ತಂತ್ರಜ್ಞಾನ ಉದ್ಯಮಿ ಬಿಲ್ ಗೇಟ್ಸ್, ಲೈಂಗಿಕ ಅಪರಾಧಿ ಜೆಫ್ರಿ ಎಪ್‌ಸ್ಟೈನ್‌ನೊಂದಿಗಿನ ಹಳೆಯ ಸಂಪರ್ಕಕ್ಕಾಗಿ ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ್ದಾರೆ ಎಂದು ವರದಿಯಾಗಿದೆ. ವಾಲ್ ಸ್ಟ್ರೀಟ್ ಜರ್ನಲ್ ವರದಿಯ ಪ್ರಕಾರ, ಫೌಂಡೇಶನ್‌ನ ಟೌನ್...

ಕೆಎಸ್‌ಯು-ಐಯುಎಂಎಲ್ ಪ್ರತಿಭಟನೆಯಲ್ಲಿ ಘರ್ಷಣೆ; ಗಾಯಗೊಂಡ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್

ಕಣ್ಣೂರು ರೈಲ್ವೆ ನಿಲ್ದಾಣದಲ್ಲಿ ಬುಧವಾರ ಪೊಲೀಸರು ಮತ್ತು ಕೇರಳ ವಿದ್ಯಾರ್ಥಿ ಸಂಘ (ಕೆಎಸ್‌ಯು)-ಐಯುಎಂಎಲ್ ಯುವ ಘಟಕದ ಪ್ರತಿಭಟನಾಕಾರರ ನಡುವೆ ನಡೆದ ಘರ್ಷಣೆಯಲ್ಲಿ ಆರೋಗ್ಯ ಸಚಿವೆ ವೀಣಾ ಜಾರ್ಜ್ ಕುತ್ತಿಗೆ ಮತ್ತು ಕೈಗೆ ಗಾಯಗಳಾಗಿದೆ. ಕಾಂಗ್ರೆಸ್-ಕೆಎಸ್‌ಯು...

ಉತ್ತರಾಖಂಡ| ದೇವಸ್ಥಾನದ ಸಮೀಪ ಖಾಲಿ ಜಾಗದಲ್ಲಿ ನಮಾಜ್; ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ

ಉತ್ತರಾಖಂಡದ ಜಗತ್ಪುರದ ಅತ್ರಿಯ ದೇವಸ್ಥಾನದ ಮುಂಭಾಗದಲ್ಲಿರುವ ಖಾಲಿ ಜಾಗದಲ್ಲಿ ನಮಾಜ್ ಮಾಡಿದ ನಂತರ ಶಾಹಿದ್ ಎಂದು ಗುರುತಿಸಲಾದ ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಧಾರ್ಮಿಕ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು...

ಮುಝಫ್ಫರ್‌ನಗರ ಗಲಭೆ ಪ್ರಕರಣ : 37 ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

ಉತ್ತರ ಪ್ರದೇಶದ ಮುಝಫ್ಫರ್‌ನಗರದ ನ್ಯಾಯಾಲಯ 2013ರ ಕೋಮು ಗಲಭೆಗೆ ಸಂಬಂಧಿಸಿದ ಎಂಟು ಜನರ ಹತ್ಯೆ ಪ್ರಕರಣದಲ್ಲಿ ಸಾಕ್ಷ್ಯಗಳ ಕೊರತೆಯನ್ನು ಉಲ್ಲೇಖಿಸಿ 37 ಆರೋಪಿಗಳನ್ನು ಮಂಗಳವಾರ (ಫೆ.25) ಖುಲಾಸೆಗೊಳಿಸಿದೆ ಎಂದು ವರದಿಯಾಗಿದೆ. ತೀರ್ಪು ಪ್ರಕಟಿಸಿದ ಹೆಚ್ಚುವರಿ...

ಇಸ್ರೇಲ್ ಸಂಸತ್ತಿನಲ್ಲಿ ಭಾಷಣದ ವೇಳೆ ಪ್ರಧಾನಿ ಮೋದಿ ಗಾಝಾ ನರಮೇಧ ಉಲ್ಲೇಖಿಸಲಿ : ಪ್ರಿಯಾಂಕಾ ಗಾಂಧಿ ಆಗ್ರಹ

ಇಸ್ರೇಲ್‌ಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಅಲ್ಲಿನ ಸಂಸತ್ತಾದ ನೆಸೆಟ್ ಅನ್ನು ಉದ್ದೇಶಿಸಿ ಮಾತನಾಡುವಾಗ ಗಾಝಾ ನರಮೇಧವನ್ನು ಉಲ್ಲೇಖಿಸಿ ನ್ಯಾಯಕ್ಕಾಗಿ ಆಗ್ರಹಿಸಬೇಕು ಎಂದು ಎಐಸಿಸಿ ಕಾರ್ಯದರ್ಶಿ ಹಾಗೂ ವಯನಾಡ್ ಸಂಸದೆ ಪ್ರಿಯಾಂಕಾ...

ಕೇಂದ್ರ ಸಚಿವರ ಸಮ್ಮುಖದಲ್ಲಿ ‘ಮುಸ್ಲಿಂ ವಿರೋಧಿ ಹೇಳಿಕೆ’ ನೀಡಿದ ಹಿಂದುತ್ವವಾದಿ ವ್ಯಕ್ತಿ

ಉತ್ತರಾಖಂಡದಲ್ಲಿ ನಡೆದ ಸಾರ್ವಜನಿಕ ಹಿಂದೂ ಧಾರ್ಮಿಕ ಕಾರ್ಯಕ್ರಮದಲ್ಲಿ, ಕೇಂದ್ರ ಸಚಿವರ ಸಮ್ಮುಖದಲ್ಲಿಯೇ ಹಿಂದುತ್ವವಾದಿ ಮುಖಂಡನೊಬ್ಬ ಮುಸ್ಲಿಮರ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದು ರಾಜಕೀಯ ಮತ್ತು ಸಾಮಾಜಿಕ ವಿವಾದಕ್ಕೆ ಕಾರಣವಾಗಿದೆ. ಇದು ಪೊಲೀಸ್ ಕ್ರಮ...

ಎನ್‌ಸಿಇಆರ್‌ಟಿ ಪಠ್ಯಪುಸ್ತಕದ ‘ನ್ಯಾಯಾಂಗದಲ್ಲಿನ ಭ್ರಷ್ಟಾಚಾರ’ ವಿಷಯಕ್ಕೆ ಸುಪ್ರೀಂ ಕೋರ್ಟ್ ತೀವ್ರ ಆಕ್ಷೇಪ

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಪ್ರಕಟಿಸಿದ 8ನೇ ತರಗತಿಯ ಹೊಸ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ "ನ್ಯಾಯಾಂಗದಲ್ಲಿನ ಭ್ರಷ್ಟಾಚಾರ" ಎಂಬ ವಿಷಯ ಉಲ್ಲೇಖಿಸಿರುವುದಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಫೆ.25) ತೀವ್ರ...

ಮಧ್ಯಪ್ರದೇಶ: ಡಾ. ಹರಿಸಿಂಗ್ ಗೌರ್ ವಿವಿಯಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ ದುಷ್ಕರ್ಮಿಗಳಿಂದ ವಿದ್ಯಾರ್ಥಿಗಳ ಮೇಲೆ ದಾಳಿ, ಜೀವಬೆದರಿಕೆ;  ಎಫ್‌ಐಆರ್ ದಾಖಲು

ಮಧ್ಯಪ್ರದೇಶದ ಸಾಗರ್‌ನಲ್ಲಿರುವ ಡಾ. ಹರಿ ಸಿಂಗ್ ಗೌರ್ ವಿಶ್ವವಿದ್ಯಾಲಯದಲ್ಲಿ ನಡೆದ ಸರಣಿ ಹಿಂಸಾತ್ಮಕ ಘಟನೆಗಳು ಕ್ಯಾಂಪಸ್ ಸುರಕ್ಷತೆಯ ಬಗ್ಗೆ ಗಂಭೀರ ಕಳವಳವನ್ನು ಉಂಟುಮಾಡಿವೆ. ಐದು ದಿನಗಳಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ವ್ಯಕ್ತಿಗಳಿಂದ ಎರಡು ಜೀವ...

ಅಜೀಂ ಪ್ರೇಮ್‌ ಜಿ ವಿವಿಯಲ್ಲಿ ದಾಂಧಲೆ : ಎಬಿವಿಪಿ ಸದಸ್ಯರ ವಿರುದ್ಧ ಕಠಿಣ ಕ್ರಮಕ್ಕೆ ಕೆವಿಎಸ್‌ ಆಗ್ರಹ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ ನುಗ್ಗಿ ದಾಂಧಲೆ ನಡೆಸಿದ ಎಬಿವಿಪಿ ಸದಸ್ಯರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಕರ್ನಾಟಕ ವಿದ್ಯಾರ್ಥಿ ಸಂಘಟನೆ (ಕೆವಿಎಸ್‌) ಆಗ್ರಹಿಸಿದೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಸಂಘಟನೆಯ ರಾಜ್ಯ...