Homeಅಂತರಾಷ್ಟ್ರೀಯಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

- Advertisement -
- Advertisement -

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ.

ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ ಕುಸಿತ, ಹಣದುಬ್ಬರ, ಬೆಲೆ ಏರಿಕೆ) ಶುರುವಾದ ಪ್ರತಿಭಟನೆ, ಈಗ ಸರ್ಕಾರ ವಿರೋಧಿ ಕ್ರಾಂತಿಯಾಗಿ ಬದಲಾಗಿದೆ. ಪ್ರತಿಭಟನಕಾರರು ಸುಪ್ರೀಂ ಲೀಡರ್ ಅಯತೊಲ್ಲಾ ಅಲಿ ಖಮೇನಿಯನ್ನು ಅಧಿಕಾರದಿಂದ ಕೆಳಗಿಳಿಸುವ ಘೋಷಣೆಗಳನ್ನು ಕೂಗುತ್ತಿದ್ದಾರೆ.

“ಸರ್ವಾಧಿಕಾರಿಗೆ ಮರಣ!”, “ಈ ವರ್ಷ ರಕ್ತದ ವರ್ಷ, ಸೈಯದ್ ಅಲಿ ಉರುಳುತ್ತಾನೆ/ಕೆಳಗಿಳಿಯುತ್ತಾನೆ” ಇತ್ಯಾದಿ ಘೋಷಣೆಗಳನ್ನು ಖಮೇನಿ ವಿರುದ್ದ ಪ್ರತಿಭಟನಕಾರರು ಕೂಗುತ್ತಿದ್ದಾರೆ. ಇದೇ ವೇಳೆ ಹಳೆಯ ಪಹ್ಲವಿ ರಾಜವಂಶದ ರಾಜಕುಮಾರ ರೆಝಾ ಪಹ್ಲವಿಯನ್ನು ಬೆಂಬಲಿಸುತ್ತಿದ್ದಾರೆ. “ಶಾಹ್ ದೀರ್ಘಾಯುಷ್ಯ!”, “ರೆಝಾ ಪಹ್ಲವಿ ಬರುತ್ತಿದ್ದಾರೆ!” ಈ ಘೋಷಣೆಗಳೂ ಕೂಡ ಪ್ರತಿಭಟನಾಕಾರರಿಂದ ಕೇಳಿ ಬರುತ್ತಿವೆ.

ಇರಾನ್‌ನ ಎಲ್ಲ 31 ಪ್ರಾಂತ್ಯಗಳ 100ಕ್ಕೂ ಹೆಚ್ಚು ನಗರಗಳಲ್ಲಿ (ತೆಹ್ರಾನ್, ಇಸ್ಫಹಾನ್, ಕೊಮ್, ಶಿರಾಜ್, ಕರ್ಮಾನ್‌ಶಾಹ್, ಮಶ್ಹದ್ ಸೇರಿದಂತೆ) ಪ್ರತಿಭಟನೆಗಳು ನಡೆಯುತ್ತಿವೆ. ಖಮೇನಿಯ ಪ್ರಭಾವ ಹೆಚ್ಚಿರುವ ಕೇಂದ್ರಗಳಲ್ಲೂ (ಕೊಮ್, ಮಶ್ಹದ್) ಪ್ರತಿಭಟನೆಗಳು ಹರಡಿವೆ.

ಪೊಲೀಸ್, ಬಸಿಜ್ ಪ್ಯಾರಾ ಮಿಲಿಟರಿ, ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಸೈನಿಕರು ಲೈವ್ ಬುಲೆಟ್, ಟಿಯರ್ ಗ್ಯಾಸ್, ಶಾಟ್‌ಗನ್‌ನಿಂದ ಮೆಟಲ್ ಪೆಲೆಟ್‌ಗಳನ್ನು ಬಳಸಿ ಪ್ರತಿಭಟನಾಕಾರರ ಮೇಲೆ ದಾಳಿ ಮಾಡುತ್ತಿದ್ದಾರೆ. ಪ್ರತಿಭಟನಕಾರರು ಬಸಿಜ್ ಕಚೇರಿಗಳು, ಸರ್ಕಾರಿ ಕಟ್ಟಡಗಳು, ಪೊಲೀಸ್ ವಾಹನಗಳನ್ನು ಸುಟ್ಟಿದ್ದಾರೆ. ಕೆಲವು ಸ್ಥಳಗಳಲ್ಲಿ ತೀವ್ರ ಘರ್ಷಣೆಗಳು ನಡೆದಿವೆ ಎಂದು ವರದಿಯಾಗಿದೆ.

ಮಾನವ ಹಕ್ಕು ಸಂಘಟನೆಗಳ ಪ್ರಕಾರ (HRANA, Hengaw, Amnesty)ಕನಿಷ್ಠ 51 ರಿಂದ 65ಕ್ಕೂ ಹೆಚ್ಚು ಪ್ರತಿಭಟನಕಾರರು ಸತ್ತಿದ್ದಾರೆ (ಮಕ್ಕಳು ಸೇರಿದಂತೆ). ಕೆಲವು ಪೊಲೀಸ್ ಅಧಿಕಾರಿಗಳು ಮತ್ತು ಐಆರ್‌ಜಿಸಿ ಸೈನಿಕರು ಕೂಡ ಬಲಿಯಾಗಿದ್ದಾರೆ.

2000ಕ್ಕಿಂತ ಹೆಚ್ಚು ಜನರನ್ನು ಬಂಧಿಸಲಾಗಿದೆ. ಆಸ್ಪತ್ರೆಗಳಲ್ಲಿ ಗಾಯಾಳುಗಳನ್ನು ಬಂಧಿಸುವ ಪ್ರಕ್ರಿಯೆಗಳೂ ನಡೆದಿವೆ.

ದೇಶವ್ಯಾಪಿ ಇಂಟರ್ನೆಟ್ ಮತ್ತು ಫೋನ್ ಸೇವೆಗಳನ್ನು ಸರ್ಕಾರ ಕಡಿತಗೊಳಿಸಿದೆ. ಇದರಿಂದ ಮಾಹಿತಿ ಹರಿವು ತಡೆಯಲಾಗಿದೆ, ಆದರೆ ವಿಪಿಎನ್‌ ಮತ್ತು ಸ್ಟಾರ್‌ಲಿಂಕ್ ಮೂಲಕ ಕೆಲವು ವೀಡಿಯೊಗಳು ಹೊರಬರುತ್ತಿವೆ.

ರಸ್ತೆಗಳನ್ನು ತಡೆಯುವುದು, ಬೆಂಕಿ ಹಚ್ಚುವುದು, ಖಮೇನಿ ಪೋಸ್ಟರ್‌ಗಳನ್ನು ಸುಡುವುದು (ಮಹಿಳೆಯರು ಸಿಗರೇಟ್ ಉರಿಸಲು ಬಳಸುವುದು), ಹಳೆಯ ಲಯನ್ ಅಂಡ್ ಸನ್ ಧ್ವಜವನ್ನು (ಪಹ್ಲವಿ ಕಾಲದ ರಾಜಧ್ವಜ) ತೋರಿಸುವುದು ಸೇರಿದಂತೆ ವಿವಿಧ ರೀತಿಯಲ್ಲಿ ಖಮೇನಿ ಆಡಳಿತದ ವಿರುದ್ದ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಅಂತಾರಾಷ್ಟ್ರಿಯ ಪ್ರತಿಕ್ರಿಯೆ

ಅಮೆರಿಕ ಅಧ್ಯಕ್ಷ ಟ್ರಂಪ್ “ಇರಾನ್ ದೊಡ್ಡ ಸಮಸ್ಯೆಯಲ್ಲಿದೆ” ಎಂದಿದ್ದು, ಪ್ರತಿಭಟನಕಾರರನ್ನು “ಧೈರ್ಯಶಾಲಿಗಳು” ಎಂದು ಹೊಗಳಿದ್ದಾರೆ. ಹೆಚ್ಚಿನ ಸಾವುಗಳಾದರೆ ತೀವ್ರ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ. ಯುರೋಪಿಯನ್ ದೇಶಗಳು (ಫ್ರಾನ್ಸ್, ಯುಕೆ, ಜರ್ಮನಿ) ಹತ್ಯೆಗಳನ್ನು ಖಂಡಿಸಿದ್ದು, ಸಂಯಮ ಕಾಯ್ದುಕೊಳ್ಳಲು ಒತ್ತಾಯಿಸಿವೆ. ಎಕ್ಸ್‌ (ಟ್ವಿಟರ್) ಪ್ರತಿಭಟನಾಕಾರರನ್ನು ಬೆಂಬಲಿಸಿ ಇರಾನ್ ಧ್ವಜದ ಇಮೋಜಿಯನ್ನು ಹಳೆಯ ಲಯನ್ ಅಂಡ್ ಸನ್‌ಗೆ ಬದಲಾಯಿಸಿದೆ.

ಈ ಪ್ರತಿಭಟನೆಗಳು ಇರಾನ್‌ನ ಇಸ್ಲಾಮಿಕ್ ರಿಪಬ್ಲಿಕ್‌ಗೆ ಇತ್ತೀಚಿನ ವರ್ಷಗಳಲ್ಲಿ ಎದುರಾಗಿರುವ ಅತಿ ದೊಡ್ಡ ಆಂತರಿಕ ಸವಾಲುಗಳಲ್ಲಿ ಒಂದು. ಆರ್ಥಿಕ ದುಸ್ಥಿತಿ, ರಾಜಕೀಯ ಆಡಳಿತದ ವಿರುದ್ದ ಆಕ್ರೋಶ ಮತ್ತು 2025ರ ಇಸ್ರೇಲ್-ಇರಾನ್ ಸಂಘರ್ಷದ ನಂತರ ಖಮೇನಿ ಆಡಳಿತಕ್ಕೆ ದೊಡ್ಡ ಸವಾಲು ಎದುರಾಗಿದೆ. ಸ್ಥಿತಿ ಬಹಳ ತ್ವರಿತವಾಗಿ ಬದಲಾಗುತ್ತಿದೆ, ದಮನ ತೀವ್ರವಾಗುತ್ತಿದ್ದರೂ ಪ್ರತಿಭಟನೆಗಳು ಮುಂದುವರೆಯುತ್ತಿವೆ ಎಂದು ವರದಿಗಳು ಹೇಳಿವೆ.

ಟ್ರಂಪ್ ಮಧ್ಯಪ್ರವೇಶ ಕೋರಿದ ಪಹ್ಲವಿ

ಹೊರಗಟ್ಟಲ್ಪಟ್ಟ ಇರಾನ್‌ನ ಮಾಜಿ ರಾಜಕುಮಾರ ರೆಝಾ ಪಹ್ಲವಿ (ಪಹ್ಲವಿ ವಂಶದ ಕೊನೆಯ ಶಾಹ್‌ನ ಮಗ) ಜನವರಿ 9, 2026ರಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಸಾಮಾಜಿಕ ಜಾಲತಾಣ ಪೋಸ್ಟ್ ಮೂಲಕ ತುರ್ತು ಮನವಿಯೊಂದನ್ನು ಮಾಡಿದ್ದು, ಇರಾನ್‌ನ ಆಂತರಿಕ ವಿಚಾರದಲ್ಲಿ ಮಧ್ಯಪ್ರವೇಶಿಸುವಂತೆ ಮತ್ತು ಪ್ರತಿಭಟನಾಕಾರರನ್ನು ಬೆಂಬಲಿಸುವಂತೆ ಕೋರಿದ್ದಾರೆ.

“ಮಿಸ್ಟರ್ ಪ್ರೆಸಿಡೆಂಟ್, ಇದು ನಿಮ್ಮ ಗಮನ, ಬೆಂಬಲ ಮತ್ತು ಕ್ರಮಕ್ಕಾಗಿ ತುರ್ತು ಮತ್ತು ತಕ್ಷಣದ ಕೋರಿಕೆಯಾಗಿದೆ. ಪ್ರತಿಭಟನಕಾರರು ರಸ್ತೆಗಳಲ್ಲಿ ಲೈವ್ ಬುಲೆಟ್‌ಗಳನ್ನು ಎದುರಿಸುತ್ತಿದ್ದಾರೆ. ಈಗ ದೇಶವ್ಯಾಪಿ ಇಂಟರ್ನೆಟ್ ಮತ್ತು ಫೋನ್ ಸೇವೆಗಳ ನಿರ್ಬಂಧದಿಂದ ಸಂಪರ್ಕ ಕಡಿತಗೊಂಡಿದೆ. ಸುಪ್ರೀಂ ಲೀಡರ್ ಅಲಿ ಖಮೇನಿ ಇಂಟರ್‌ನೆಟ್‌, ಫೋನ್‌ ಸೇವೆಗಳನ್ನು ನಿರ್ಬಂಧಿಸಿ ‘ಯುವ ನಾಯಕರನ್ನು ಕೊಲ್ಲಲು’ ಯೋಜಿಸುತ್ತಿದ್ದಾರೆ” ಎಂದು ಪಹ್ಲವಿ ಟ್ರಂಪ್‌ ಅನ್ನು ಉದ್ದೇಶಿಸಿ ಮಾಡಿದ ಪೋಸ್ಟ್‌ನಲ್ಲಿ ಆರೋಪಿಸಿದ್ದಾರೆ.

“ಟ್ರಂಪ್ ಶಾಂತಿ ಬಯಸುವ ಮತ್ತು ಮಾತಿನ ಮೇಲೆ ನಿಲ್ಲುವ ಮನುಷ್ಯ” ಎಂದು ಕೊಂಡಾಡಿರುವ ಪಹ್ಲವಿ, ಇರಾನ್ ಜನರಿಗೆ ಸಹಾಯ ಮಾಡಲು ಸಿದ್ಧರಾಗಿರಿ ಎಂದು ಕೋರಿದ್ದಾರೆ.

ಖಮೇನಿ ಹೇಳಿದ್ದೇನು?

ಜನವರಿ 9, 2026ರಂದು ಸುಪ್ರೀಂ ಲೀಡರ್ ಅಯತೊಲ್ಲಾ ಅಲಿ ಖಮೇನಿ ತಮ್ಮ ಮೊದಲ ಸಾರ್ವಜನಿಕ ಭಾಷಣದಲ್ಲಿ ಪ್ರತಿಭಟನೆಗಳನ್ನು ತೀವ್ರವಾಗಿ ಖಂಡಿಸಿದ್ದಾರೆ. ಪ್ರತಿಭಟನಕಾರರನ್ನು “ವಾಂಡಲ್ಸ್” (ವಿನಾಶಕಾರಿ), “ಸಬೋಟರ್ಸ್” (ವಿನಾಶಕಾರಿ ಏಜೆಂಟ್‌ಗಳು) ಮತ್ತು ವಿದೇಶಿ ಶಕ್ತಿಗಳ (ವಿಶೇಷವಾಗಿ ಅಮೆರಿಕ) ಬೆಂಬಲಿಗರು ಎಂದು ಕರೆದಿದ್ದಾರೆ.

“ಅಮೆರಿಕಾ ಅಧ್ಯಕ್ಷನನ್ನು ಸಂತೋಷಪಡಿಸಲು ಪ್ರತಿಭಟನಾಕಾರರು ತಮ್ಮ ರಸ್ತೆಗಳನ್ನು ಹಾಳುಗೆಡವುತ್ತಿದ್ದಾರೆ. ಟ್ರಂಪ್ ಕೈಗಳಲ್ಲಿ ಇರಾನ್ ಜನರ ರಕ್ತ ಮೆತ್ತಿಕೊಂಡಿವೆ. ಅವರು ತಮ್ಮ ದೇಶದ ಸಮಸ್ಯೆಗಳತ್ತ ಗಮನ ಹರಿಸಬೇಕು” ಎಂದು ಹೇಳಿದ್ದಾರೆ.

ಆಡಳಿತ “ಹಿಂದಕ್ಕೆ ಸರಿಯುವುದಿಲ್ಲ” ಎಂದು ದೃಢವಾಗಿ ಹೇಳಿ, ಹೆಚ್ಚಿನ ದಮನದ ಸಂಕೇತ ನೀಡಿದೆ.
ಪ್ರತಿಭಟನೆಗಳನ್ನು “ಟೆರರಿಸ್ಟ್ ಆಕ್ಷನ್‌” ಎಂದು ಕರೆದು, ಏಕತೆಗೆ ಕರೆ ಕೊಟ್ಟಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...