Homeಅಂತರಾಷ್ಟ್ರೀಯಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

- Advertisement -
- Advertisement -

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ.

ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ ಕುಸಿತ, ಹಣದುಬ್ಬರ, ಬೆಲೆ ಏರಿಕೆ) ಶುರುವಾದ ಪ್ರತಿಭಟನೆ, ಈಗ ಸರ್ಕಾರ ವಿರೋಧಿ ಕ್ರಾಂತಿಯಾಗಿ ಬದಲಾಗಿದೆ. ಪ್ರತಿಭಟನಕಾರರು ಸುಪ್ರೀಂ ಲೀಡರ್ ಅಯತೊಲ್ಲಾ ಅಲಿ ಖಮೇನಿಯನ್ನು ಅಧಿಕಾರದಿಂದ ಕೆಳಗಿಳಿಸುವ ಘೋಷಣೆಗಳನ್ನು ಕೂಗುತ್ತಿದ್ದಾರೆ.

“ಸರ್ವಾಧಿಕಾರಿಗೆ ಮರಣ!”, “ಈ ವರ್ಷ ರಕ್ತದ ವರ್ಷ, ಸೈಯದ್ ಅಲಿ ಉರುಳುತ್ತಾನೆ/ಕೆಳಗಿಳಿಯುತ್ತಾನೆ” ಇತ್ಯಾದಿ ಘೋಷಣೆಗಳನ್ನು ಖಮೇನಿ ವಿರುದ್ದ ಪ್ರತಿಭಟನಕಾರರು ಕೂಗುತ್ತಿದ್ದಾರೆ. ಇದೇ ವೇಳೆ ಹಳೆಯ ಪಹ್ಲವಿ ರಾಜವಂಶದ ರಾಜಕುಮಾರ ರೆಝಾ ಪಹ್ಲವಿಯನ್ನು ಬೆಂಬಲಿಸುತ್ತಿದ್ದಾರೆ. “ಶಾಹ್ ದೀರ್ಘಾಯುಷ್ಯ!”, “ರೆಝಾ ಪಹ್ಲವಿ ಬರುತ್ತಿದ್ದಾರೆ!” ಈ ಘೋಷಣೆಗಳೂ ಕೂಡ ಪ್ರತಿಭಟನಾಕಾರರಿಂದ ಕೇಳಿ ಬರುತ್ತಿವೆ.

ಇರಾನ್‌ನ ಎಲ್ಲ 31 ಪ್ರಾಂತ್ಯಗಳ 100ಕ್ಕೂ ಹೆಚ್ಚು ನಗರಗಳಲ್ಲಿ (ತೆಹ್ರಾನ್, ಇಸ್ಫಹಾನ್, ಕೊಮ್, ಶಿರಾಜ್, ಕರ್ಮಾನ್‌ಶಾಹ್, ಮಶ್ಹದ್ ಸೇರಿದಂತೆ) ಪ್ರತಿಭಟನೆಗಳು ನಡೆಯುತ್ತಿವೆ. ಖಮೇನಿಯ ಪ್ರಭಾವ ಹೆಚ್ಚಿರುವ ಕೇಂದ್ರಗಳಲ್ಲೂ (ಕೊಮ್, ಮಶ್ಹದ್) ಪ್ರತಿಭಟನೆಗಳು ಹರಡಿವೆ.

ಪೊಲೀಸ್, ಬಸಿಜ್ ಪ್ಯಾರಾ ಮಿಲಿಟರಿ, ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಸೈನಿಕರು ಲೈವ್ ಬುಲೆಟ್, ಟಿಯರ್ ಗ್ಯಾಸ್, ಶಾಟ್‌ಗನ್‌ನಿಂದ ಮೆಟಲ್ ಪೆಲೆಟ್‌ಗಳನ್ನು ಬಳಸಿ ಪ್ರತಿಭಟನಾಕಾರರ ಮೇಲೆ ದಾಳಿ ಮಾಡುತ್ತಿದ್ದಾರೆ. ಪ್ರತಿಭಟನಕಾರರು ಬಸಿಜ್ ಕಚೇರಿಗಳು, ಸರ್ಕಾರಿ ಕಟ್ಟಡಗಳು, ಪೊಲೀಸ್ ವಾಹನಗಳನ್ನು ಸುಟ್ಟಿದ್ದಾರೆ. ಕೆಲವು ಸ್ಥಳಗಳಲ್ಲಿ ತೀವ್ರ ಘರ್ಷಣೆಗಳು ನಡೆದಿವೆ ಎಂದು ವರದಿಯಾಗಿದೆ.

ಮಾನವ ಹಕ್ಕು ಸಂಘಟನೆಗಳ ಪ್ರಕಾರ (HRANA, Hengaw, Amnesty)ಕನಿಷ್ಠ 51 ರಿಂದ 65ಕ್ಕೂ ಹೆಚ್ಚು ಪ್ರತಿಭಟನಕಾರರು ಸತ್ತಿದ್ದಾರೆ (ಮಕ್ಕಳು ಸೇರಿದಂತೆ). ಕೆಲವು ಪೊಲೀಸ್ ಅಧಿಕಾರಿಗಳು ಮತ್ತು ಐಆರ್‌ಜಿಸಿ ಸೈನಿಕರು ಕೂಡ ಬಲಿಯಾಗಿದ್ದಾರೆ.

2000ಕ್ಕಿಂತ ಹೆಚ್ಚು ಜನರನ್ನು ಬಂಧಿಸಲಾಗಿದೆ. ಆಸ್ಪತ್ರೆಗಳಲ್ಲಿ ಗಾಯಾಳುಗಳನ್ನು ಬಂಧಿಸುವ ಪ್ರಕ್ರಿಯೆಗಳೂ ನಡೆದಿವೆ.

ದೇಶವ್ಯಾಪಿ ಇಂಟರ್ನೆಟ್ ಮತ್ತು ಫೋನ್ ಸೇವೆಗಳನ್ನು ಸರ್ಕಾರ ಕಡಿತಗೊಳಿಸಿದೆ. ಇದರಿಂದ ಮಾಹಿತಿ ಹರಿವು ತಡೆಯಲಾಗಿದೆ, ಆದರೆ ವಿಪಿಎನ್‌ ಮತ್ತು ಸ್ಟಾರ್‌ಲಿಂಕ್ ಮೂಲಕ ಕೆಲವು ವೀಡಿಯೊಗಳು ಹೊರಬರುತ್ತಿವೆ.

ರಸ್ತೆಗಳನ್ನು ತಡೆಯುವುದು, ಬೆಂಕಿ ಹಚ್ಚುವುದು, ಖಮೇನಿ ಪೋಸ್ಟರ್‌ಗಳನ್ನು ಸುಡುವುದು (ಮಹಿಳೆಯರು ಸಿಗರೇಟ್ ಉರಿಸಲು ಬಳಸುವುದು), ಹಳೆಯ ಲಯನ್ ಅಂಡ್ ಸನ್ ಧ್ವಜವನ್ನು (ಪಹ್ಲವಿ ಕಾಲದ ರಾಜಧ್ವಜ) ತೋರಿಸುವುದು ಸೇರಿದಂತೆ ವಿವಿಧ ರೀತಿಯಲ್ಲಿ ಖಮೇನಿ ಆಡಳಿತದ ವಿರುದ್ದ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಅಂತಾರಾಷ್ಟ್ರಿಯ ಪ್ರತಿಕ್ರಿಯೆ

ಅಮೆರಿಕ ಅಧ್ಯಕ್ಷ ಟ್ರಂಪ್ “ಇರಾನ್ ದೊಡ್ಡ ಸಮಸ್ಯೆಯಲ್ಲಿದೆ” ಎಂದಿದ್ದು, ಪ್ರತಿಭಟನಕಾರರನ್ನು “ಧೈರ್ಯಶಾಲಿಗಳು” ಎಂದು ಹೊಗಳಿದ್ದಾರೆ. ಹೆಚ್ಚಿನ ಸಾವುಗಳಾದರೆ ತೀವ್ರ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ. ಯುರೋಪಿಯನ್ ದೇಶಗಳು (ಫ್ರಾನ್ಸ್, ಯುಕೆ, ಜರ್ಮನಿ) ಹತ್ಯೆಗಳನ್ನು ಖಂಡಿಸಿದ್ದು, ಸಂಯಮ ಕಾಯ್ದುಕೊಳ್ಳಲು ಒತ್ತಾಯಿಸಿವೆ. ಎಕ್ಸ್‌ (ಟ್ವಿಟರ್) ಪ್ರತಿಭಟನಾಕಾರರನ್ನು ಬೆಂಬಲಿಸಿ ಇರಾನ್ ಧ್ವಜದ ಇಮೋಜಿಯನ್ನು ಹಳೆಯ ಲಯನ್ ಅಂಡ್ ಸನ್‌ಗೆ ಬದಲಾಯಿಸಿದೆ.

ಈ ಪ್ರತಿಭಟನೆಗಳು ಇರಾನ್‌ನ ಇಸ್ಲಾಮಿಕ್ ರಿಪಬ್ಲಿಕ್‌ಗೆ ಇತ್ತೀಚಿನ ವರ್ಷಗಳಲ್ಲಿ ಎದುರಾಗಿರುವ ಅತಿ ದೊಡ್ಡ ಆಂತರಿಕ ಸವಾಲುಗಳಲ್ಲಿ ಒಂದು. ಆರ್ಥಿಕ ದುಸ್ಥಿತಿ, ರಾಜಕೀಯ ಆಡಳಿತದ ವಿರುದ್ದ ಆಕ್ರೋಶ ಮತ್ತು 2025ರ ಇಸ್ರೇಲ್-ಇರಾನ್ ಸಂಘರ್ಷದ ನಂತರ ಖಮೇನಿ ಆಡಳಿತಕ್ಕೆ ದೊಡ್ಡ ಸವಾಲು ಎದುರಾಗಿದೆ. ಸ್ಥಿತಿ ಬಹಳ ತ್ವರಿತವಾಗಿ ಬದಲಾಗುತ್ತಿದೆ, ದಮನ ತೀವ್ರವಾಗುತ್ತಿದ್ದರೂ ಪ್ರತಿಭಟನೆಗಳು ಮುಂದುವರೆಯುತ್ತಿವೆ ಎಂದು ವರದಿಗಳು ಹೇಳಿವೆ.

ಟ್ರಂಪ್ ಮಧ್ಯಪ್ರವೇಶ ಕೋರಿದ ಪಹ್ಲವಿ

ಹೊರಗಟ್ಟಲ್ಪಟ್ಟ ಇರಾನ್‌ನ ಮಾಜಿ ರಾಜಕುಮಾರ ರೆಝಾ ಪಹ್ಲವಿ (ಪಹ್ಲವಿ ವಂಶದ ಕೊನೆಯ ಶಾಹ್‌ನ ಮಗ) ಜನವರಿ 9, 2026ರಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಸಾಮಾಜಿಕ ಜಾಲತಾಣ ಪೋಸ್ಟ್ ಮೂಲಕ ತುರ್ತು ಮನವಿಯೊಂದನ್ನು ಮಾಡಿದ್ದು, ಇರಾನ್‌ನ ಆಂತರಿಕ ವಿಚಾರದಲ್ಲಿ ಮಧ್ಯಪ್ರವೇಶಿಸುವಂತೆ ಮತ್ತು ಪ್ರತಿಭಟನಾಕಾರರನ್ನು ಬೆಂಬಲಿಸುವಂತೆ ಕೋರಿದ್ದಾರೆ.

“ಮಿಸ್ಟರ್ ಪ್ರೆಸಿಡೆಂಟ್, ಇದು ನಿಮ್ಮ ಗಮನ, ಬೆಂಬಲ ಮತ್ತು ಕ್ರಮಕ್ಕಾಗಿ ತುರ್ತು ಮತ್ತು ತಕ್ಷಣದ ಕೋರಿಕೆಯಾಗಿದೆ. ಪ್ರತಿಭಟನಕಾರರು ರಸ್ತೆಗಳಲ್ಲಿ ಲೈವ್ ಬುಲೆಟ್‌ಗಳನ್ನು ಎದುರಿಸುತ್ತಿದ್ದಾರೆ. ಈಗ ದೇಶವ್ಯಾಪಿ ಇಂಟರ್ನೆಟ್ ಮತ್ತು ಫೋನ್ ಸೇವೆಗಳ ನಿರ್ಬಂಧದಿಂದ ಸಂಪರ್ಕ ಕಡಿತಗೊಂಡಿದೆ. ಸುಪ್ರೀಂ ಲೀಡರ್ ಅಲಿ ಖಮೇನಿ ಇಂಟರ್‌ನೆಟ್‌, ಫೋನ್‌ ಸೇವೆಗಳನ್ನು ನಿರ್ಬಂಧಿಸಿ ‘ಯುವ ನಾಯಕರನ್ನು ಕೊಲ್ಲಲು’ ಯೋಜಿಸುತ್ತಿದ್ದಾರೆ” ಎಂದು ಪಹ್ಲವಿ ಟ್ರಂಪ್‌ ಅನ್ನು ಉದ್ದೇಶಿಸಿ ಮಾಡಿದ ಪೋಸ್ಟ್‌ನಲ್ಲಿ ಆರೋಪಿಸಿದ್ದಾರೆ.

“ಟ್ರಂಪ್ ಶಾಂತಿ ಬಯಸುವ ಮತ್ತು ಮಾತಿನ ಮೇಲೆ ನಿಲ್ಲುವ ಮನುಷ್ಯ” ಎಂದು ಕೊಂಡಾಡಿರುವ ಪಹ್ಲವಿ, ಇರಾನ್ ಜನರಿಗೆ ಸಹಾಯ ಮಾಡಲು ಸಿದ್ಧರಾಗಿರಿ ಎಂದು ಕೋರಿದ್ದಾರೆ.

ಖಮೇನಿ ಹೇಳಿದ್ದೇನು?

ಜನವರಿ 9, 2026ರಂದು ಸುಪ್ರೀಂ ಲೀಡರ್ ಅಯತೊಲ್ಲಾ ಅಲಿ ಖಮೇನಿ ತಮ್ಮ ಮೊದಲ ಸಾರ್ವಜನಿಕ ಭಾಷಣದಲ್ಲಿ ಪ್ರತಿಭಟನೆಗಳನ್ನು ತೀವ್ರವಾಗಿ ಖಂಡಿಸಿದ್ದಾರೆ. ಪ್ರತಿಭಟನಕಾರರನ್ನು “ವಾಂಡಲ್ಸ್” (ವಿನಾಶಕಾರಿ), “ಸಬೋಟರ್ಸ್” (ವಿನಾಶಕಾರಿ ಏಜೆಂಟ್‌ಗಳು) ಮತ್ತು ವಿದೇಶಿ ಶಕ್ತಿಗಳ (ವಿಶೇಷವಾಗಿ ಅಮೆರಿಕ) ಬೆಂಬಲಿಗರು ಎಂದು ಕರೆದಿದ್ದಾರೆ.

“ಅಮೆರಿಕಾ ಅಧ್ಯಕ್ಷನನ್ನು ಸಂತೋಷಪಡಿಸಲು ಪ್ರತಿಭಟನಾಕಾರರು ತಮ್ಮ ರಸ್ತೆಗಳನ್ನು ಹಾಳುಗೆಡವುತ್ತಿದ್ದಾರೆ. ಟ್ರಂಪ್ ಕೈಗಳಲ್ಲಿ ಇರಾನ್ ಜನರ ರಕ್ತ ಮೆತ್ತಿಕೊಂಡಿವೆ. ಅವರು ತಮ್ಮ ದೇಶದ ಸಮಸ್ಯೆಗಳತ್ತ ಗಮನ ಹರಿಸಬೇಕು” ಎಂದು ಹೇಳಿದ್ದಾರೆ.

ಆಡಳಿತ “ಹಿಂದಕ್ಕೆ ಸರಿಯುವುದಿಲ್ಲ” ಎಂದು ದೃಢವಾಗಿ ಹೇಳಿ, ಹೆಚ್ಚಿನ ದಮನದ ಸಂಕೇತ ನೀಡಿದೆ.
ಪ್ರತಿಭಟನೆಗಳನ್ನು “ಟೆರರಿಸ್ಟ್ ಆಕ್ಷನ್‌” ಎಂದು ಕರೆದು, ಏಕತೆಗೆ ಕರೆ ಕೊಟ್ಟಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...

ಜಿಲ್ಲಾ ನ್ಯಾಯಾಧೀಶೆ ತಬಸ್ಸುಮ್ ಖಾನ್‌ಗೆ ಬಲಪಂಥೀಯರಿಂದ ಬೆದರಿಕೆ : ಗಂಭೀರವಾಗಿ ಪರಿಗಣಿಸಿದ ಹೈಕೋರ್ಟ್

ನರ್ಮದಾಪುರಂ ಜಿಲ್ಲಾ ನ್ಯಾಯಾಧೀಶರಾದ ತಬಸ್ಸುಮ್ ಖಾನ್ ಅವರು ತಮ್ಮ ಕರ್ತವ್ಯ ನಿರ್ವಹಣೆಯ ಕಾರಣಕ್ಕಾಗಿ ಬೆದರಿಕೆ ಮತ್ತು ನಿಂದನೆಗೆ ಒಳಗಾಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಮಧ್ಯಪ್ರದೇಶ ಹೈಕೋರ್ಟ್, ಅವರಿಗೆ ಸೂಕ್ತ ರಕ್ಷಣೆ ನೀಡುವಂತೆ ಮತ್ತು ಅಪರಾಧಿಗಳನ್ನು ಪತ್ತೆಹಚ್ಚಲು ಕೈಗೊಂಡಿರುವ...

ಎಸ್ಐಆರ್ ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗದ ಪಕ್ಷಪಾತದ ಬಗ್ಗೆ ಸಿಜೆಐಗೆ ಪ್ರತಿಪಕ್ಷಗಳಿಂದ ಪತ್ರ: ‘ಪ್ರಜಾಪ್ರಭುತ್ವ ಅಪಾಯದಲ್ಲಿದೆ’ ಎಂದು ಆರೋಪ

ದೇಶದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಪಕ್ಷಪಾತ ಧೋರಣೆ ತಳೆದಿದೆ ಎಂದು ಆರೋಪಿಸಿ, 24 ವಿರೋಧ ಪಕ್ಷಗಳ ನಾಯಕರು ಹಾಗೂ ಒಬ್ಬರು ಸ್ವತಂತ್ರ...

ಬೆಂಗಳೂರು| ಕೆ.ಆರ್. ವೃತ್ತದ ಬಳಿ ಬಿಎಂಟಿಸಿ ಬಸ್‌ಗಳ ನಡುವೆ ಅಪಘಾತ; ಹಲವರಿಗೆ ಗಾಯ

ಇಂದು ಬೆಳಿಗ್ಗೆ ವಿಧಾನಸೌಧದಿಂದ ಸ್ವಲ್ಪ ದೂರದಲ್ಲಿರುವ ಜನನಿಬಿಡ ಕೆ.ಆರ್. ವೃತ್ತ ಜಂಕ್ಷನ್ ಬಳಿ ಎರಡು ಬಿಎಂಟಿಸಿ ಬಸ್‌ಗಳು ಡಿಕ್ಕಿ ಹೊಡೆದ ಪರಿಣಾಮ ಹಲವಾರು ಪ್ರಯಾಣಿಕರು ಗಾಯಗೊಂಡರು. ಡಿಕ್ಕಿಯ ಪರಿಣಾಮ ಬಸ್ಸಿನೊಳಗೆ ಹಲವಾರು ಪ್ರಯಾಣಿಕರು...

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಲೋಪ ಆರೋಪ; ಕೋಲಾರ-ಮೈಸೂರಿನ ಅಧಿಕಾರಿಗಳಿಗೆ ನೋಟಿಸ್ ಜಾರಿ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)ಗೆ ಸಂಬಂಧಿಸಿದಂತೆ, ಕೋಲಾರ ಮತ್ತು ಮೈಸೂರಿನಲ್ಲಿ ನಡೆದ ಕಾರ್ಯವಿಧಾನದಲ್ಲಿ ನಿಯಮ ಉಲ್ಲಂಘನೆ ಆರೋಪ ಕೇಳಿಬಂದೆ. ಕೋಲಾರದಲ್ಲಿ, ಪರಿಷ್ಕರಣಾ ಕಾರ್ಯದ ಸಮಯದಲ್ಲಿ ಕರ್ತವ್ಯ...

ಸೂರತ್ ಧ್ವಂಸ ಕಾರ್ಯಾಚರಣೆ ಸಂಪೂರ್ಣ ‘ಕಾನೂನುಬಾಹಿರ’: 100 ನಿರಾಶ್ರಿತ ಕುಟುಂಬಗಳ ಪುನರ್ವಸತಿಗೆ ಗುಜರಾತ್ ಹೈಕೋರ್ಟ್ ಆದೇಶ

ಅಹಮದಾಬಾದ್: ಗುಜರಾತ್‌ನ ಸೂರತ್‌ನ ನಾಸಿರ್ ನಗರದಲ್ಲಿ ನಡೆದ ಮನೆಗಳ ಧ್ವಂಸ ಕಾರ್ಯಾಚರಣೆಯನ್ನು ತೀವ್ರವಾಗಿ ಖಂಡಿಸಿರುವ ಗುಜರಾತ್ ಹೈಕೋರ್ಟ್, ಇದನ್ನು "ಸಂಪೂರ್ಣ ಕಾನೂನುಬಾಹಿರ" ಎಂದು ಕರೆದಿದೆ. ಮೇ 30 ರಂದು ನಡೆದ ಈ "ಅನಧಿಕೃತ"...

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...