Homeಅಂತರಾಷ್ಟ್ರೀಯಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

- Advertisement -
- Advertisement -

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ.

ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ ಕುಸಿತ, ಹಣದುಬ್ಬರ, ಬೆಲೆ ಏರಿಕೆ) ಶುರುವಾದ ಪ್ರತಿಭಟನೆ, ಈಗ ಸರ್ಕಾರ ವಿರೋಧಿ ಕ್ರಾಂತಿಯಾಗಿ ಬದಲಾಗಿದೆ. ಪ್ರತಿಭಟನಕಾರರು ಸುಪ್ರೀಂ ಲೀಡರ್ ಅಯತೊಲ್ಲಾ ಅಲಿ ಖಮೇನಿಯನ್ನು ಅಧಿಕಾರದಿಂದ ಕೆಳಗಿಳಿಸುವ ಘೋಷಣೆಗಳನ್ನು ಕೂಗುತ್ತಿದ್ದಾರೆ.

“ಸರ್ವಾಧಿಕಾರಿಗೆ ಮರಣ!”, “ಈ ವರ್ಷ ರಕ್ತದ ವರ್ಷ, ಸೈಯದ್ ಅಲಿ ಉರುಳುತ್ತಾನೆ/ಕೆಳಗಿಳಿಯುತ್ತಾನೆ” ಇತ್ಯಾದಿ ಘೋಷಣೆಗಳನ್ನು ಖಮೇನಿ ವಿರುದ್ದ ಪ್ರತಿಭಟನಕಾರರು ಕೂಗುತ್ತಿದ್ದಾರೆ. ಇದೇ ವೇಳೆ ಹಳೆಯ ಪಹ್ಲವಿ ರಾಜವಂಶದ ರಾಜಕುಮಾರ ರೆಝಾ ಪಹ್ಲವಿಯನ್ನು ಬೆಂಬಲಿಸುತ್ತಿದ್ದಾರೆ. “ಶಾಹ್ ದೀರ್ಘಾಯುಷ್ಯ!”, “ರೆಝಾ ಪಹ್ಲವಿ ಬರುತ್ತಿದ್ದಾರೆ!” ಈ ಘೋಷಣೆಗಳೂ ಕೂಡ ಪ್ರತಿಭಟನಾಕಾರರಿಂದ ಕೇಳಿ ಬರುತ್ತಿವೆ.

ಇರಾನ್‌ನ ಎಲ್ಲ 31 ಪ್ರಾಂತ್ಯಗಳ 100ಕ್ಕೂ ಹೆಚ್ಚು ನಗರಗಳಲ್ಲಿ (ತೆಹ್ರಾನ್, ಇಸ್ಫಹಾನ್, ಕೊಮ್, ಶಿರಾಜ್, ಕರ್ಮಾನ್‌ಶಾಹ್, ಮಶ್ಹದ್ ಸೇರಿದಂತೆ) ಪ್ರತಿಭಟನೆಗಳು ನಡೆಯುತ್ತಿವೆ. ಖಮೇನಿಯ ಪ್ರಭಾವ ಹೆಚ್ಚಿರುವ ಕೇಂದ್ರಗಳಲ್ಲೂ (ಕೊಮ್, ಮಶ್ಹದ್) ಪ್ರತಿಭಟನೆಗಳು ಹರಡಿವೆ.

ಪೊಲೀಸ್, ಬಸಿಜ್ ಪ್ಯಾರಾ ಮಿಲಿಟರಿ, ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಸೈನಿಕರು ಲೈವ್ ಬುಲೆಟ್, ಟಿಯರ್ ಗ್ಯಾಸ್, ಶಾಟ್‌ಗನ್‌ನಿಂದ ಮೆಟಲ್ ಪೆಲೆಟ್‌ಗಳನ್ನು ಬಳಸಿ ಪ್ರತಿಭಟನಾಕಾರರ ಮೇಲೆ ದಾಳಿ ಮಾಡುತ್ತಿದ್ದಾರೆ. ಪ್ರತಿಭಟನಕಾರರು ಬಸಿಜ್ ಕಚೇರಿಗಳು, ಸರ್ಕಾರಿ ಕಟ್ಟಡಗಳು, ಪೊಲೀಸ್ ವಾಹನಗಳನ್ನು ಸುಟ್ಟಿದ್ದಾರೆ. ಕೆಲವು ಸ್ಥಳಗಳಲ್ಲಿ ತೀವ್ರ ಘರ್ಷಣೆಗಳು ನಡೆದಿವೆ ಎಂದು ವರದಿಯಾಗಿದೆ.

ಮಾನವ ಹಕ್ಕು ಸಂಘಟನೆಗಳ ಪ್ರಕಾರ (HRANA, Hengaw, Amnesty)ಕನಿಷ್ಠ 51 ರಿಂದ 65ಕ್ಕೂ ಹೆಚ್ಚು ಪ್ರತಿಭಟನಕಾರರು ಸತ್ತಿದ್ದಾರೆ (ಮಕ್ಕಳು ಸೇರಿದಂತೆ). ಕೆಲವು ಪೊಲೀಸ್ ಅಧಿಕಾರಿಗಳು ಮತ್ತು ಐಆರ್‌ಜಿಸಿ ಸೈನಿಕರು ಕೂಡ ಬಲಿಯಾಗಿದ್ದಾರೆ.

2000ಕ್ಕಿಂತ ಹೆಚ್ಚು ಜನರನ್ನು ಬಂಧಿಸಲಾಗಿದೆ. ಆಸ್ಪತ್ರೆಗಳಲ್ಲಿ ಗಾಯಾಳುಗಳನ್ನು ಬಂಧಿಸುವ ಪ್ರಕ್ರಿಯೆಗಳೂ ನಡೆದಿವೆ.

ದೇಶವ್ಯಾಪಿ ಇಂಟರ್ನೆಟ್ ಮತ್ತು ಫೋನ್ ಸೇವೆಗಳನ್ನು ಸರ್ಕಾರ ಕಡಿತಗೊಳಿಸಿದೆ. ಇದರಿಂದ ಮಾಹಿತಿ ಹರಿವು ತಡೆಯಲಾಗಿದೆ, ಆದರೆ ವಿಪಿಎನ್‌ ಮತ್ತು ಸ್ಟಾರ್‌ಲಿಂಕ್ ಮೂಲಕ ಕೆಲವು ವೀಡಿಯೊಗಳು ಹೊರಬರುತ್ತಿವೆ.

ರಸ್ತೆಗಳನ್ನು ತಡೆಯುವುದು, ಬೆಂಕಿ ಹಚ್ಚುವುದು, ಖಮೇನಿ ಪೋಸ್ಟರ್‌ಗಳನ್ನು ಸುಡುವುದು (ಮಹಿಳೆಯರು ಸಿಗರೇಟ್ ಉರಿಸಲು ಬಳಸುವುದು), ಹಳೆಯ ಲಯನ್ ಅಂಡ್ ಸನ್ ಧ್ವಜವನ್ನು (ಪಹ್ಲವಿ ಕಾಲದ ರಾಜಧ್ವಜ) ತೋರಿಸುವುದು ಸೇರಿದಂತೆ ವಿವಿಧ ರೀತಿಯಲ್ಲಿ ಖಮೇನಿ ಆಡಳಿತದ ವಿರುದ್ದ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಅಂತಾರಾಷ್ಟ್ರಿಯ ಪ್ರತಿಕ್ರಿಯೆ

ಅಮೆರಿಕ ಅಧ್ಯಕ್ಷ ಟ್ರಂಪ್ “ಇರಾನ್ ದೊಡ್ಡ ಸಮಸ್ಯೆಯಲ್ಲಿದೆ” ಎಂದಿದ್ದು, ಪ್ರತಿಭಟನಕಾರರನ್ನು “ಧೈರ್ಯಶಾಲಿಗಳು” ಎಂದು ಹೊಗಳಿದ್ದಾರೆ. ಹೆಚ್ಚಿನ ಸಾವುಗಳಾದರೆ ತೀವ್ರ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ. ಯುರೋಪಿಯನ್ ದೇಶಗಳು (ಫ್ರಾನ್ಸ್, ಯುಕೆ, ಜರ್ಮನಿ) ಹತ್ಯೆಗಳನ್ನು ಖಂಡಿಸಿದ್ದು, ಸಂಯಮ ಕಾಯ್ದುಕೊಳ್ಳಲು ಒತ್ತಾಯಿಸಿವೆ. ಎಕ್ಸ್‌ (ಟ್ವಿಟರ್) ಪ್ರತಿಭಟನಾಕಾರರನ್ನು ಬೆಂಬಲಿಸಿ ಇರಾನ್ ಧ್ವಜದ ಇಮೋಜಿಯನ್ನು ಹಳೆಯ ಲಯನ್ ಅಂಡ್ ಸನ್‌ಗೆ ಬದಲಾಯಿಸಿದೆ.

ಈ ಪ್ರತಿಭಟನೆಗಳು ಇರಾನ್‌ನ ಇಸ್ಲಾಮಿಕ್ ರಿಪಬ್ಲಿಕ್‌ಗೆ ಇತ್ತೀಚಿನ ವರ್ಷಗಳಲ್ಲಿ ಎದುರಾಗಿರುವ ಅತಿ ದೊಡ್ಡ ಆಂತರಿಕ ಸವಾಲುಗಳಲ್ಲಿ ಒಂದು. ಆರ್ಥಿಕ ದುಸ್ಥಿತಿ, ರಾಜಕೀಯ ಆಡಳಿತದ ವಿರುದ್ದ ಆಕ್ರೋಶ ಮತ್ತು 2025ರ ಇಸ್ರೇಲ್-ಇರಾನ್ ಸಂಘರ್ಷದ ನಂತರ ಖಮೇನಿ ಆಡಳಿತಕ್ಕೆ ದೊಡ್ಡ ಸವಾಲು ಎದುರಾಗಿದೆ. ಸ್ಥಿತಿ ಬಹಳ ತ್ವರಿತವಾಗಿ ಬದಲಾಗುತ್ತಿದೆ, ದಮನ ತೀವ್ರವಾಗುತ್ತಿದ್ದರೂ ಪ್ರತಿಭಟನೆಗಳು ಮುಂದುವರೆಯುತ್ತಿವೆ ಎಂದು ವರದಿಗಳು ಹೇಳಿವೆ.

ಟ್ರಂಪ್ ಮಧ್ಯಪ್ರವೇಶ ಕೋರಿದ ಪಹ್ಲವಿ

ಹೊರಗಟ್ಟಲ್ಪಟ್ಟ ಇರಾನ್‌ನ ಮಾಜಿ ರಾಜಕುಮಾರ ರೆಝಾ ಪಹ್ಲವಿ (ಪಹ್ಲವಿ ವಂಶದ ಕೊನೆಯ ಶಾಹ್‌ನ ಮಗ) ಜನವರಿ 9, 2026ರಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಸಾಮಾಜಿಕ ಜಾಲತಾಣ ಪೋಸ್ಟ್ ಮೂಲಕ ತುರ್ತು ಮನವಿಯೊಂದನ್ನು ಮಾಡಿದ್ದು, ಇರಾನ್‌ನ ಆಂತರಿಕ ವಿಚಾರದಲ್ಲಿ ಮಧ್ಯಪ್ರವೇಶಿಸುವಂತೆ ಮತ್ತು ಪ್ರತಿಭಟನಾಕಾರರನ್ನು ಬೆಂಬಲಿಸುವಂತೆ ಕೋರಿದ್ದಾರೆ.

“ಮಿಸ್ಟರ್ ಪ್ರೆಸಿಡೆಂಟ್, ಇದು ನಿಮ್ಮ ಗಮನ, ಬೆಂಬಲ ಮತ್ತು ಕ್ರಮಕ್ಕಾಗಿ ತುರ್ತು ಮತ್ತು ತಕ್ಷಣದ ಕೋರಿಕೆಯಾಗಿದೆ. ಪ್ರತಿಭಟನಕಾರರು ರಸ್ತೆಗಳಲ್ಲಿ ಲೈವ್ ಬುಲೆಟ್‌ಗಳನ್ನು ಎದುರಿಸುತ್ತಿದ್ದಾರೆ. ಈಗ ದೇಶವ್ಯಾಪಿ ಇಂಟರ್ನೆಟ್ ಮತ್ತು ಫೋನ್ ಸೇವೆಗಳ ನಿರ್ಬಂಧದಿಂದ ಸಂಪರ್ಕ ಕಡಿತಗೊಂಡಿದೆ. ಸುಪ್ರೀಂ ಲೀಡರ್ ಅಲಿ ಖಮೇನಿ ಇಂಟರ್‌ನೆಟ್‌, ಫೋನ್‌ ಸೇವೆಗಳನ್ನು ನಿರ್ಬಂಧಿಸಿ ‘ಯುವ ನಾಯಕರನ್ನು ಕೊಲ್ಲಲು’ ಯೋಜಿಸುತ್ತಿದ್ದಾರೆ” ಎಂದು ಪಹ್ಲವಿ ಟ್ರಂಪ್‌ ಅನ್ನು ಉದ್ದೇಶಿಸಿ ಮಾಡಿದ ಪೋಸ್ಟ್‌ನಲ್ಲಿ ಆರೋಪಿಸಿದ್ದಾರೆ.

“ಟ್ರಂಪ್ ಶಾಂತಿ ಬಯಸುವ ಮತ್ತು ಮಾತಿನ ಮೇಲೆ ನಿಲ್ಲುವ ಮನುಷ್ಯ” ಎಂದು ಕೊಂಡಾಡಿರುವ ಪಹ್ಲವಿ, ಇರಾನ್ ಜನರಿಗೆ ಸಹಾಯ ಮಾಡಲು ಸಿದ್ಧರಾಗಿರಿ ಎಂದು ಕೋರಿದ್ದಾರೆ.

ಖಮೇನಿ ಹೇಳಿದ್ದೇನು?

ಜನವರಿ 9, 2026ರಂದು ಸುಪ್ರೀಂ ಲೀಡರ್ ಅಯತೊಲ್ಲಾ ಅಲಿ ಖಮೇನಿ ತಮ್ಮ ಮೊದಲ ಸಾರ್ವಜನಿಕ ಭಾಷಣದಲ್ಲಿ ಪ್ರತಿಭಟನೆಗಳನ್ನು ತೀವ್ರವಾಗಿ ಖಂಡಿಸಿದ್ದಾರೆ. ಪ್ರತಿಭಟನಕಾರರನ್ನು “ವಾಂಡಲ್ಸ್” (ವಿನಾಶಕಾರಿ), “ಸಬೋಟರ್ಸ್” (ವಿನಾಶಕಾರಿ ಏಜೆಂಟ್‌ಗಳು) ಮತ್ತು ವಿದೇಶಿ ಶಕ್ತಿಗಳ (ವಿಶೇಷವಾಗಿ ಅಮೆರಿಕ) ಬೆಂಬಲಿಗರು ಎಂದು ಕರೆದಿದ್ದಾರೆ.

“ಅಮೆರಿಕಾ ಅಧ್ಯಕ್ಷನನ್ನು ಸಂತೋಷಪಡಿಸಲು ಪ್ರತಿಭಟನಾಕಾರರು ತಮ್ಮ ರಸ್ತೆಗಳನ್ನು ಹಾಳುಗೆಡವುತ್ತಿದ್ದಾರೆ. ಟ್ರಂಪ್ ಕೈಗಳಲ್ಲಿ ಇರಾನ್ ಜನರ ರಕ್ತ ಮೆತ್ತಿಕೊಂಡಿವೆ. ಅವರು ತಮ್ಮ ದೇಶದ ಸಮಸ್ಯೆಗಳತ್ತ ಗಮನ ಹರಿಸಬೇಕು” ಎಂದು ಹೇಳಿದ್ದಾರೆ.

ಆಡಳಿತ “ಹಿಂದಕ್ಕೆ ಸರಿಯುವುದಿಲ್ಲ” ಎಂದು ದೃಢವಾಗಿ ಹೇಳಿ, ಹೆಚ್ಚಿನ ದಮನದ ಸಂಕೇತ ನೀಡಿದೆ.
ಪ್ರತಿಭಟನೆಗಳನ್ನು “ಟೆರರಿಸ್ಟ್ ಆಕ್ಷನ್‌” ಎಂದು ಕರೆದು, ಏಕತೆಗೆ ಕರೆ ಕೊಟ್ಟಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....