Homeಅಂಕಣಗಳುಮೀಸಲಾತಿ ವಿರೋಧಿ-ಮೀಸಲಾತಿ ಹೆಚ್ಚಳ ಬೇಡಿಕೆಯ ರಾಜಕೀಯದ ನಡುವೆ ಸವಲತ್ತು ಉಳಿಸಿಕೊಳ್ಳುವ ಮಸಲತ್ತು!

ಮೀಸಲಾತಿ ವಿರೋಧಿ-ಮೀಸಲಾತಿ ಹೆಚ್ಚಳ ಬೇಡಿಕೆಯ ರಾಜಕೀಯದ ನಡುವೆ ಸವಲತ್ತು ಉಳಿಸಿಕೊಳ್ಳುವ ಮಸಲತ್ತು!

ಸಾಮಾಜಿಕ ಬಂಡವಾಳವನ್ನು ಅನುಭವಿಸಿಕೊಂಡು ಬಂದಿರುವ ಈ ಮೂರೂ ಸಮುದಾಯಗಳಿಗೆ ಮೀಸಲಾತಿಯ ಆಶಯ ಇನ್ನೂ ಅರ್ಥವಾಗದೇ ಇರುವುದು ಸ್ವಾತಂತ್ರ್ಯೋತ್ತರ ಭಾರತದ ದುರಂತಮಯ ಇತಿಹಾಸವೇ ಎನ್ನಬಹುದು.

- Advertisement -
- Advertisement -

ಇಷ್ಟು ದಿನ ಮೀಸಲಾತಿ ವಿರೋಧಿ ರಾಜಕೀಯವನ್ನು ನಿರಂತರವಾಗಿ ಮಾಡಿಕೊಂಡು ಬರುತ್ತಿದ್ದ ಒಂದು ಜಾತಿಯ ಸಮುದಾಯ, ನರೇಂದ್ರ ಮೋದಿ ಸರ್ಕಾರ ತಮಗೆ 10% ಮೀಸಲಾತಿ ಘೋಷಣೆ ಮಾಡಿದ ಮೇಲೆ, ಈಗ ತನ್ನ ಪ್ರಪಗಾಂಡಕ್ಕೆ ಬೀಗ ಜಡಿದಿದೆ. ಇದೇ ಸಮುದಾಯದಿಂದ ಪ್ರೇರಿತರಾಗಿ, ಮೀಸಲಾತಿಯ ಫಲವನ್ನುಣ್ಣುತ್ತಾ ಇದ್ದರೂ, ಕರ್ನಾಟಕದ ಎರಡು ಬಲಿಷ್ಠ ಸಮುದಾಯದ ಕೆಲವು ಜನ ಮೀಸಲಾತಿಯನ್ನು ಲೇವಡಿ ಮಾಡುವುದನ್ನು ಕಲಿತುಕೊಂಡಿದ್ದರು. ಈಗ ಕಳೆದ ಕೆಲವು ದಿನಗಳಿಂದ ಈ ಸಮುದಾಯಗಳ ಕೆಲವು ಮುಖಂಡರು ತಮ್ಮ ಜಾತಿಯ ಜನಕ್ಕೆ ಮೀಸಲಾತಿ ಏರಿಸಿ ಎಂದು ಅಬ್ಬರಿಸುತ್ತಿದ್ದಾರೆ. ಆಧುನಿಕ ಭಾರತ ಮತ್ತು ಕರ್ನಾಟಕದ ಇತಿಹಾಸದುದ್ದಕ್ಕೂ ಶಿಕ್ಷಣ, ಉದ್ಯೋಗ ಮತ್ತು ಸಂಪನ್ಮೂಲಗಳ ಸಿಂಹಪಾಲನ್ನು ಅನುಭವಿಸಿ, ತಮಗೆ ಬೇಕಾದಾಗ ಲೇವಡಿ ಮಾಡುವ ಮತ್ತೆ ಬೇಕಾದಾಗ ಮೀಸಲಾತಿ ಹೆಚ್ಚಿಸುವ ಬೇಡಿಕೆ ಇಡುವ ಈ ಸಮುದಾಯಗಳು ಯಾವುವು ಎಂಬುದನ್ನು ಇಷ್ಟು ಹೊತ್ತಿಗೆ ಊಹಿಸಲು ಕಷ್ಟವೇನಿಲ್ಲ. ಸಮಾನತೆಯ ಕನಸಿನ ಸಾಕಾರಕ್ಕೆ ತೊಡಗಿ, ತಮಗಿಂತಲೂ ದುರ್ಬಲವಾದ ಸಮುದಾಯಗಳ ಏಳಿಗೆಯನ್ನು ಮೊದಲು ಕಂಡು, ಸಾಕಾರಗೊಳಿಸಿ, ಸಮತಟ್ಟಿಗೆ ಎಲ್ಲ ಸಮುದಾಯಗಳನ್ನು ತಂದು ನಂತರ ತಮ್ಮ ಬೇಡಿಕೆಗಳನ್ನು ಮುಂದು ಮಾಡಿದ್ದರೆ ಆ ಮಾತು ಬೇರೆ.

ಇದನ್ನೂ ಓದಿ: ಪ್ರತ್ಯೇಕ ರಾಜ್ಯದ ಕೂಗಿನ ವಿರುದ್ಧ ಗಟ್ಟಿ ದನಿ: ‘ಕರ್ನಾಟಕವೊಂದೇ’ ಅಭಿಯಾನಕ್ಕೆ ವ್ಯಾಪಕ ಬೆಂಬಲ

ಇತ್ತೀಚೆಗೆ ಕರ್ನಾಟಕ ಸರ್ಕಾರ ಮರಾಠ ಪ್ರಾಧಿಕಾರ ರಚಿಸಿದ ಬೆನ್ನಲ್ಲಿಯೇ, ಲಿಂಗಾಯತ ಸಮುದಾಯದ ಮುಖಂಡರು ತಮಗೆ ಪ್ರಾಧಿಕಾರ ಬೇಡ, 16% ಮೀಸಲಾತಿ ಕೊಡಿ ಎಂಬ ಬೇಡಿಕೆಯಿಟ್ಟರು. ಇದರ ಬೆನ್ನಲ್ಲಿಯೇ ಒಕ್ಕಲಿಗ ಸಮುದಾಯದ ಒಬ್ಬ ಮಠಾಧೀಶರ ನಾಯಕತ್ವದಲ್ಲಿ ತಮ್ಮ ಜಾತಿಯ ಮೀಸಲಾತಿಯನ್ನು 15%ಕ್ಕೆ ಏರಿಸದಿದ್ದರೆ ಪ್ರತ್ಯೇಕ ರಾಜ್ಯದ ಬೇಡಿಕೆ ಇಡುವುದಾಗಿ ಬೆದರಿಸಿದ್ದರು. ಸದ್ಯಕ್ಕೆ ಈ ಎರಡೂ ಸಮುದಾಯಗಳು ಶಿಕ್ಷಣ ಮತ್ತು ಉದ್ಯೋಗಾವಕಾಶದಲ್ಲಿ 3ಬಿ ಮತ್ತು 3ಎ ವಿಭಾಗದಡಿ 5% ಮತ್ತು 4% ಮೀಸಲಾತಿ ಸೌಲಭ್ಯವನ್ನು ಪಡೆದಿರುವಂತವೇ. ಇದು ಸಾಲದೆಂಬಂತೆ ಕೇಂದ್ರ ಸರ್ಕಾರದ 27% ಮೀಸಲಾತಿಯ ಹಿಂದುಳಿದ ಪಟ್ಟಿಗೆ ಲಿಂಗಾಯತ ಸಮುದಾಯವನ್ನು ಶಿಫಾರಸ್ಸು ಮಾಡಲು ಮುಖ್ಯಮಂತ್ರಿ ಯಡಿಯೂರಪ್ಪನವರು ಮುಂದಾಗಿ ಕೊನೆ ಕ್ಷಣದಲ್ಲಿ ಅದು ಕೇಂದ್ರದ ಬಿಜೆಪಿ ಸರ್ಕಾರದ ಮೇಲೆ ತರುವ ಒತ್ತಡದ ಮುನ್ಸೂಚನೆಯ ಮೇರೆಗೆ ಅದನ್ನು ತಡೆ ಹಿಡಿಯಲಾಯಿತು.

ಇಲ್ಲಿಯವರೆಗೂ ಈ ರಾಜ್ಯದ ರಾಜಕೀಯ ಶಕ್ತಿ ಈ ಎರಡು ಸಮುದಾಯಗಳ ಮೇಲೆ ನಿಂತಿದೆ. ಈ ಸಮುದಾಯದವರು ಒಗ್ಗೂಡಿದರೆ ಒಂದು ಹಿಂದುಳಿದ ಸಮುದಾಯದ ಜನಪ್ರಿಯ ಮುಖ್ಯಮಂತ್ರಿಯನ್ನು ಮರುಆಯ್ಕೆಯಾಗದಂತೆ ತಡೆಯುವಷ್ಟು ಶಕ್ತಿ ಹೊಂದಿದ್ದಾರೆ. ಇನ್ನು ಅಧಿಕಾರಶಾಹಿಯ ಪ್ರಮುಖ ಹುದ್ದೆಗಳಲ್ಲಿ, ಖಾಸಗಿಯ ಬಹುತೇಕ ಉದ್ದಿಮೆಗಳು, ಕಾರ್ಖಾನೆಗಳನ್ನು ಮುನ್ನಡೆಸುವ ಉದ್ಯೋಗಗಳಲ್ಲಿ ಅತಿ ಕಡಿಮೆ ಜನಸಂಖ್ಯೆಯಿರುವ ಬ್ರಾಹ್ಮಣ ಸಮುದಾಯದ್ದೇ ಸಿಂಹಪಾಲಾಗಿದ್ದರೆ ನಂತರದ ಪಾಲನ್ನು ಈ ಎರಡು ಸಮುದಾಯಗಳು ತಮ್ಮದಾಗಿಸಿಕೊಂಡಿವೆ. ಇಷ್ಟೆಲ್ಲಾ ಸಾಮಾಜಿಕ ಬಂಡವಾಳವನ್ನು ಅನುಭವಿಸಿಕೊಂಡು ಬಂದಿರುವ ಈ ಮೂರೂ ಸಮುದಾಯಗಳಿಗೆ ಮೀಸಲಾತಿಯ ಆಶಯ ಇನ್ನೂ ಅರ್ಥವಾಗದೇ ಇರುವುದು ಸ್ವಾತಂತ್ರ್ಯೋತ್ತರ ಭಾರತದ ದುರಂತಮಯ ಇತಿಹಾಸವೇ ಎನ್ನಬಹುದು.

ಇದು ಕರ್ನಾಟಕಕ್ಕೆ ಮಾತ್ರ ಸೀಮಿತವಾಗಿಲ್ಲ. ಗುಜರಾತಿನ ಪಟೇಲ್ ಸಮುದಾಯ ಕೂಡ ಇದೇ ಜಾಡಿನಲ್ಲಿ ಇರುವಂತಹ ಒಂದು ಸಮುದಾಯ. ಒಂದು ಕಾಲದಲ್ಲಿ ಮೀಸಲಾತಿಯನ್ನು ವಿರೋಧಿಸಿಕೊಂಡು ಬಂದಿದ್ದ ಪಟೇಲ್ ಸಮುದಾಯ ನಂತರದ ವರ್ಷಗಳಲ್ಲಿ ಮೀಸಲಾತಿ ಹೆಚ್ಚಳಕ್ಕೆ ದುಂಬಾಲು ಬಿದ್ದಿತ್ತು. ಹರ್ಯಾಣದ ಜಾಟ್ ಸಮುದಾಯ ಕೂಡ ಭೂಹಿಡುವಳಿಯನ್ನು ಹೆಚ್ಚು ಪ್ರಮಾಣದಲ್ಲಿ ಹೊಂದಿರುವ, ಹೆಚ್ಚು ಸಂಪನ್ಮೂಲಗಳನ್ನು ನಿಯಂತ್ರಿಸುವ ಬಲಾಢ್ಯ ಸಮುದಾಯವಾಗಿದ್ದರೂ ಮೀಸಲಾತಿ ಹೆಚ್ಚಳಕ್ಕೆ ಹಿಂಸಾತ್ಮಕ ಪ್ರತಿಭಟನೆಗೆ ಇಳಿದಿತ್ತು. ಇಂತಹವನ್ನು ಹೆಚ್ಚು ಕಡಿಮೆ ಪ್ರತಿ ರಾಜ್ಯಗಳಲ್ಲೂ ಕಾಣಬಹುದು.

ಉತ್ತರದ ಈ ರಾಜ್ಯಗಳಿಗೆ ಹೋಲಿಸಿದರೆ, ಇಂದು ತಮಗಿಂತಲೂ ನಿರ್ಲಕ್ಷಿತಗೊಂಡ ಸಮುದಾಯಗಳ ಹಿತದ ಬಗ್ಗೆ ಕಿಂಚಿತ್ತೂ ಯೋಚಿಸದೆ ಮೀಸಲಾತಿ ಹೆಚ್ಚಳಕ್ಕೆ ಬೊಬ್ಬಿಡುತ್ತಿರುವ ಲಿಂಗಾಯತ-ಒಕ್ಕಲಿಗ ಸಮುದಾಯಗಳಲ್ಲಿ ಹೆಚ್ಚು ಸುಧಾರಿತ ಯುವಕರಿದ್ದಾರೆ ಎಂಬುದನ್ನು ನಾವು ನಿರೀಕ್ಷಿಸಬಹುದೇ? ಇದು ಈ ಹಳೆಯ ತಾರತಮ್ಯ ಸಮಾಜ ವ್ಯವಸ್ಥೆಯ ರಕ್ಷಕರ ಕೂಗನ್ನು ಸೋಲಿಸಬಲ್ಲದೇ? ಸಮ ಸಮಾಜ ವ್ಯವಸ್ಥೆಗೆ ಬೀಜ ನೆಟ್ಟಿದ್ದ ಬಸವಣ್ಣ, ವಿಶ್ವಮಾನವರಾಗಲು ಕರೆಕೊಟ್ಟ ಕುವೆಂಪು ಅಂತಹ ಮಹನೀಯರ ತತ್ವಗಳು ಇವರನ್ನು ಕಾಯಬಲ್ಲವೇ? ಆಧುನಿಕ ಕರ್ನಾಟಕದಲ್ಲಿ ರಾಜಕೀಯ ಒತ್ತಡಕ್ಕೆ ಮಣಿದು ಈ ಸಮುದಾಯಗಳಿಗೆ ಮೀಸಲಾತಿ ಕಲ್ಪಿಸಿದ್ದ ರಾಜಕೀಯ ನಿಲುವುಗಳನ್ನು ವಿರೋಧಿಸಿದ್ದ ಲಂಕೇಶ್-ತೇಜಸ್ವಿಯಂತಹ ಬರಹಗಾರರ ಬರೆವಣಿಗೆ ವಿವೇಕ ಮೂಡಿಸಬಲ್ಲದೇ?

ಹಿಂದುಳಿದ ಮತ್ತು ದಲಿತ ಸಮುದಾಯದ ಬೆರಳೆಣಿಕೆಯಷ್ಟು ಜನ ತಮಗಿರುವ ಎಲ್ಲಾ ಅಡತಡೆಗಳನ್ನು ದಾಟಿ, ಅವಮಾನ, ತಾರತಮ್ಯಗಳನ್ನು ಮೀರಿ ಶಿಕ್ಷಣವನ್ನು ಪಡೆದುಕೊಳ್ಳುತ್ತಿರುವ, ಒಂದಷ್ಟು ಉದ್ಯೋಗ ಪಡೆದು ಸಬಲೀಕರಣಗೊಳ್ಳುತ್ತಿರುವ, ಸಣ್ಣ ಉದ್ದಿಮೆಗಳನ್ನು ಕಟ್ಟಿ ಬೆಳೆಸಲು ಶಕ್ತಗೊಳ್ಳುತ್ತಿರುವ ಈ ಬದಲಾವಣೆಯ ಪರ್ವದಲ್ಲಿ, ಅರ್ಥಶಾಸ್ತ್ರಜ್ಞ-ಚಿಂತಕ ಜಾನ್ ಡ್ರೀಜ್ ಅವರ ಮಾತುಗಳನ್ನು ಉಪಯೋಗಿಸಿಕೊಂಡು ಹೇಳುವುದಾದರೆ ಮೇಲ್ಜಾತಿಗಳು ಬಂಡಾಯ ಎದ್ದಿವೆ. ಈ ಬಂಡಾಯ ಸಮಾಜದ ವ್ಯವಸ್ಥೆಯನ್ನು ಇನ್ನಷ್ಟು ಹಿಂದಕ್ಕೆ ಕೊಂಡೊಯ್ಯುವ, ತಾರತಮ್ಯದ ಜಾತಿವ್ಯವಸ್ಥೆಯನ್ನು ಇನ್ನಷ್ಟು ಬಲಗೊಳಿಸುವ ಪ್ರಕ್ರಿಯೆಯಾಗಿದೆ. ವೈದಿಕ ಸಮಾಜ ಸೃಷ್ಟಿಸಿದ್ದ ಶ್ರೇಣೀಕರಣದಲ್ಲಿ, ಅವರನ್ನೇ ಅನುಸರಿಸಿ, ಆದರೆ ಅದನ್ನು ಮೆಟ್ಟಿನಿಲ್ಲುವ ಚಾಕಚಕ್ಯತೆಯನ್ನು ತಾವು ಮಾತ್ರ ಬೆಳೆಸಿಕೊಂಡು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಮೇಲ್ಮುಖವಾಗಿ ಚಲಿಸಿ, ಹಿಂದುಳಿದ ಸಮುದಾಯಗಳನ್ನು ಹಿಂದಕ್ಕೆ ಉಳಿಸುವ ಬಂಡಾಯ ಇದಾಗಿದೆ. ಇದು ಬಸವಣ್ಣ ಕಟ್ಟಲು ಪ್ರಯತ್ನಿಸಿದ, ಅಂಬೇಡ್ಕರ್ ಅವರು ತಿದ್ದಿ ಸಮಾಜವನ್ನು ಸರಿಪಡಿಸಲು ಪ್ರಯತ್ನಿಸಿದ, ಸಾಂಸ್ಕೃತಿಕವಾಗಿ ಸಮಾಜದಲ್ಲಿ ವಿವೇಕ ಮೂಡಿಸಲು ಪ್ರಯತ್ನಿಸಿದ ಕುವೆಂಪು ಅಂತಹವರ ಕೆಲಸಗಳನ್ನು ಮಣ್ಣುಪಾಲು ಮಾಡಿದಂತೆ.

ಸಂವಿಧಾನದ ಪೀಠಿಕೆಯಲ್ಲಿ ಕೆತ್ತಲ್ಪಟ್ಟಿರುವ ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವಗಳನ್ನು ಮೊದಲು ಸಾಮೂಹಿಕವಾಗಿ ಮೇಲ್ಜಾತಿಗಳ ಈ ಎಲ್ಲಾ ಸಮುದಾಯಗಳು, ಮುಖಂಡರಂತೆ ವರ್ತಿಸುವ ಈ ಸಮುದಾಯಗಳ ರಾಜಕೀಯ ನಾಯಕರು, ಮಠಾಧೀಶರು, ಮತ್ತು ಈ ಸಮುದಾಯದ ಎಲ್ಲ ವ್ಯಕ್ತಿಗಳು ಮೈಗೂಡಿಸಿಕೊಳ್ಳಬೇಕಿದೆ. ಆ ನಿಟ್ಟಿನಲ್ಲಿ ಅಂತಹ ದೇಶವನ್ನು ಕಟ್ಟಲು, ತಮ್ಮ ಪೂರ್ವಜರು ಶತಮಾನಗಳಿಂದ ನಿರ್ಮಿಸಿದ್ದ ಈ ಜಾತಿ ಶ್ರೇಣಿಕರಣವನ್ನು ಒಡೆಯಲು, ಸಮಾನತೆಯ ಸಮತಟ್ಟನ್ನು ನಿರ್ಮಿಸಲು ಇಷ್ಟು ದಿನ ಕಸಿದುಕೊಂಡಿದ್ದ ತಮಗಿಂತಲೂ ಹಿಂದುಳಿದ ಸಮುದಾಯಗಳ ಜನರ ಹಕ್ಕುಗಳನ್ನು, ಸವಲತ್ತುಗಳನ್ನು ಸಿಗುವಂತೆ ಮಾಡಿದರೆ ತಮ್ಮ ಶ್ರೇಯೋಭಿವೃದ್ಧಿಯೂ ಅದರ ಜತೆಗೇ ಸಾಗುವುದರಲ್ಲಿ ಸಂಶಯವಿಲ್ಲ.

ಮಠಾಧೀಶರ ಮತ್ತು ತಮ್ಮ ಸಮುದಾಯಗಳ ಸ್ವಾರ್ಥಕ್ಕೆ ಮಾತ್ರ ಇರುವ ರಾಜಕೀಯ ಮುಖಂಡರನ್ನು ಯುವಜನತೆ ತಿರಸ್ಕರಿಸಿ ಹೊಸ ನಾಡಿಗೆ ಹೊಸ ರಾಜಕೀಯ ಭಾಷೆ ಬರೆಯುವಂತಾಗಲಿ. ಅದರಲ್ಲೂ ಈ ಮೂರು ಸಮುದಾಯಗಳಿಗೆ ಸೇರಿದ ಪ್ರಜ್ಞಾವಂತ ಯುವಕರು ಈ ಅನ್ಯಾಯದ ರಾಜಕಾರಣದ ವಿರುದ್ಧ ಮುಂಚೂಣಿಯಲ್ಲಿ ನಿಲ್ಲಬೇಕು. ಅಂತಹ ಸೂಚನೆಯನ್ನು ಹಲವರು ಸಾಮಾಜಿಕ ಜಾಲತಾಣಗಳಲ್ಲಿ ತೋರುತ್ತಿರುವುದು ಆಶಾದಾಯಕ ಬೆಳವಣಿಗೆಯಾಗಿದೆ.


ಇದನ್ನೂ ಓದಿ: ಬಿಜೆಪಿ ವರ್ಸಸ್ ಒಕ್ಕಲಿಗರು ಇದರಲ್ಲಿ ಅಡಗಿರುವ ರಾಜಕೀಯ ಏನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...