HomeಅಂಕಣಗಳುKarnataka against SIRಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

- Advertisement -
- Advertisement -

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ, ಜನಶಕ್ತಿ ಸಂಘಟನೆ, ರೈತ ಸಂಘ, ದಲಿತ ಸಂಘರ್ಷ ಸಮಿತಿ ಹಾಗೂ ಜಮಾತೆ ಸಂಘಟನೆಗಳ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಜಾಥಾವನ್ನು ಅತ್ಯಂತ ಉತ್ಸಾಹದಿಂದ ಸ್ವಾಗತಿಸಿದರು.

ಜೂನ್ 13ರಂದು ಶಿವಮೊಗ್ಗದಿಂದ ಆಯೋಜನೆಗೊಂಡಿದ್ದ ಈ ಜಾಥಾವು ಈಗಾಗಲೇ ಐದು ಜಿಲ್ಲೆಗಳಲ್ಲಿ ಯಶಸ್ವಿಯಾಗಿ ಸಂಚರಿಸಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದೆ. ಚಿತ್ರದುರ್ಗದಲ್ಲಿ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿದ ಜಾಥಾದ ನೇತೃತ್ವ ವಹಿಸಿದ್ದ ಸುರೇಶ್ ನಾಯ್ಕ್ ಅವರು, “ಮುಂಬರುವ ಜೂನ್ 20ರಂದು ಬೆಂಗಳೂರಿನಲ್ಲಿ ಬೃಹತ್ ಸಮಾವೇಶ ನಡೆಯಲಿದೆ. ಆ ಮೂಲಕ ಚುನಾವಣಾ ಆಯೋಗವು ಪ್ರಜಾಪ್ರಭುತ್ವ ವಿರೋಧಿಯಾದ ಎಸ್‌ಐಆರ್ ವ್ಯವಸ್ಥೆಯನ್ನು ತಕ್ಷಣವೇ ಹಿಂತೆಗೆದುಕೊಳ್ಳಬೇಕು ಎಂದು ಸರ್ಕಾರಕ್ಕೆ ಕಡಕ್ ಎಚ್ಚರಿಕೆ ನೀಡಲಾಗುವುದು” ಎಂದು ಪ್ರಕಟಿಸಿದರು.

ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಖ್ಯಾತ ವಕೀಲ ಅನೀಷ್ ಪಾಷಾ, ಕೇಂದ್ರದ ಬಿಜೆಪಿ ಸರ್ಕಾರವು ತನ್ನ ಹಿಂಬಾಗಿಲ ರಾಜಕಾರಣಕ್ಕಾಗಿ ಚುನಾವಣಾ ಆಯೋಗವನ್ನು ಬಳಸಿಕೊಂಡು ಎಸ್‌ಐಆರ್ ಜಾರಿಗೊಳಿಸಲು ಮುಂದಾಗಿದೆ ಎಂದು ಗಂಭೀರವಾಗಿ ಆರೋಪಿಸಿದರು. ಈ ವ್ಯವಸ್ಥೆಯಿಂದಾಗಿ ದೇಶದ ನಿಜವಾದ ಮತದಾರರು ತಮ್ಮ ಹಕ್ಕುಗಳನ್ನು ಕಳೆದುಕೊಳ್ಳುವ ಭೀತಿ ಎದುರಾಗಿದೆ. ಈ ದೇಶದ ಮೂಲ ನಿವಾಸಿಗಳ ಪೌರತ್ವವನ್ನೇ ಪ್ರಶ್ನಿಸುತ್ತಿರುವ ಚುನಾವಣಾ ಆಯೋಗದ ನಡೆ ಅತ್ಯಂತ ಖಂಡನೀಯವಾಗಿದ್ದು, ಇದನ್ನು ಯಾವುದೇ ಕಾರಣಕ್ಕೂ ಒಪ್ಪಲು ಸಾಧ್ಯವಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಹೊರಕೇರಪ್ಪ ಅವರು, ಎಸ್‌ಐಆರ್ ಹೆಸರಿನಲ್ಲಿ ಜನರ ಸಂವಿಧಾನಬದ್ಧ ಮತದಾನದ ಹಕ್ಕನ್ನು ಕಸಿದುಕೊಳ್ಳುವ ಸಂಚು ನಡೆಯುತ್ತಿದೆ ಎಂದರು. ಈಗಾಗಲೇ ಐದು ರಾಜ್ಯಗಳಲ್ಲಿ ಇದರ ಪ್ರಯೋಗದಿಂದಾಗಿ ಲಕ್ಷಾಂತರ ಮತದಾರರ ಹೆಸರುಗಳು ಪಟ್ಟಿಯಿಂದ ನಿಗೂಢವಾಗಿ ಮಾಯವಾಗಿವೆ. ಎಲ್ಲಾ ಸೂಕ್ತ ದಾಖಲೆಗಳಿದ್ದರೂ ಜನಸಾಮಾನ್ಯರನ್ನು ನುಸುಳುಕೋರರಂತೆ ಬಿಂಬಿಸಿ ಹೆಸರು ಕೈಬಿಟ್ಟಿರುವುದರ ಹಿಂದೆ ರಾಜಕೀಯ ಪಿತೂರಿಯಿದೆ. ಬಾಬಾಸಾಹೇಬ್ ಡಾ. ಬಿ.ಆರ್. ಅಂಬೇಡ್ಕರ್ ಅವರು ದೇಶದ ಪ್ರತಿಯೊಬ್ಬ ಪ್ರಜೆಗೂ ನೀಡಿರುವ ಪವಿತ್ರವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಬಿಡುವುದಿಲ್ಲ ಎಂದು ಅವರು ಎಚ್ಚರಿಸಿದರು.

ಚುನಾವಣಾ ಆಯೋಗದ ನಿಷ್ಪಕ್ಷಪಾತತೆಯನ್ನು ಪ್ರಶ್ನಿಸಿದ ಯಾದವ್ ರೆಡ್ಡಿ, ಭಾರತೀಯ ಚುನಾವಣಾ ಆಯೋಗವು ಸದ್ಯ ಒಂದು ರಾಜಕೀಯ ಪಕ್ಷದ ಏಜೆಂಟ್‌ನಂತೆ ವರ್ತಿಸುತ್ತಿದೆ ಎಂದು ಟೀಕಿಸಿದರು. ಚುನಾವಣಾ ಆಯುಕ್ತರ ಆಯ್ಕೆ ಪ್ರಕ್ರಿಯೆಯೇ ಅಸಂವಿಧಾನಿಕವಾಗಿದ್ದು, ಆಯುಕ್ತರಾದ ಜ್ಞಾನೇಶ್ ಕುಮಾರ್ ಅವರು ಒಂದು ಪಕ್ಷದ ವಕ್ತಾರರಂತೆ ಕೆಲಸ ಮಾಡುತ್ತಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಆಯೋಗ ಸೃಷ್ಟಿಸಿದ ಗೊಂದಲಗಳು ಹಾಗೂ ಸುಪ್ರೀಂ ಕೋರ್ಟ್ ನೀಡಿರುವ ಬಿಹಾರದ ತೀರ್ಪು ಜನಸಾಮಾನ್ಯರ ವಿರೋಧಿಯಾಗಿದೆ. ಪ್ರಜಾಪ್ರಭುತ್ವವನ್ನು ಉಳಿಸಲು ಈ ಜನವಿರೋಧಿ ನೀತಿಯನ್ನು ನಾವೆಲ್ಲರೂ ಒಗ್ಗಟ್ಟಾಗಿ ಹಿಮ್ಮೆಟ್ಟಿಸಬೇಕಿದೆ ಎಂದು ಕರೆ ನೀಡಿದರು.

ಮಹಿಳಾ ಮುನ್ನಡೆ ಸಂಘಟನೆಯ ನಾಯಕಿ ಪವಿತ್ರಾ ಅವರು ಜಾಥಾಕ್ಕೆ ಪೂರ್ಣ ಬೆಂಬಲ ವ್ಯಕ್ತಪಡಿಸಿ, ಎಸ್‌ಐಆರ್ ಜಾರಿ ನಿರ್ಧಾರದಿಂದ ಸರ್ಕಾರ ತಕ್ಷಣ ಹಿಂದೆ ಸರಿಯಬೇಕು ಹಾಗೂ ಜೂನ್ 20ರ ಬೆಂಗಳೂರು ಸಮಾವೇಶದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ನಮ್ಮ ಹಕ್ಕುಗಳನ್ನು ಗಟ್ಟಿಯಾಗಿ ಪ್ರತಿಪಾದಿಸಬೇಕು ಎಂದರು. ಮತ್ತೊಬ್ಬ ಮುಖಂಡ ಮುನ್ನ ಕಡೂರು ಮಾತನಾಡಿ, ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಜಾಥಾಕ್ಕೆ ಅಭೂತಪೂರ್ವ ಬೆಂಬಲ ಸಿಕ್ಕಿದ್ದು, ಬೆಂಗಳೂರಿನ ಸಮಾವೇಶವನ್ನು ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.

ಈ ಜನಜಾಗೃತಿ ಜಾಥಾದಲ್ಲಿ ಮುಖಂಡರುಗಳಾದ ಶಿವಕುಮಾರ್, ಪುರುಷೋತ್ತಮ, ಸಾಲುಮರದ ರಾಜಕುಮಾರ್, ಹೊರಕೇರಪ್ಪ, ಮಾವಳ್ಳಿ ಗೋವಿಂದಪ್ಪ, ಸೈಯದ್ ಅಲಿ. ಎಸ್.ಕೆ, ಮುಸ್ತಾಕ್, ಮೊಹಮ್ಮದ್ ರಫಿಕ್, ಬೆಂಕಿ ಬಸವರಾಜು, ಬೈಲಮ್ಮ, ಪ್ರಭಾವತಿ ಸೇರಿದಂತೆ ಹಲವು ಪ್ರಮುಖರು ಹಾಗೂ ಪ್ರಗತಿಪರ ಸಂಘಟನೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು. ಎದ್ದೇಳು ಕರ್ನಾಟಕದಿಂದ ಆಯಿಷಾ ಅವರು ಭಾಗವಹಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...