HomeಅಂಕಣಗಳುKarnataka against SIRಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

- Advertisement -
- Advertisement -

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು.

ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ ಮುಖಂಡರು ಜಾಥಾವನ್ನು ಬರಮಾಡಿಕೊಂಡಿತು. ನಗರದ ಮಧ್ಯಭಾಗದಲ್ಲಿರುವ ಅಂಬೇಡ್ಕರ್ ವೃತ್ತದಲ್ಲಿ ಜಮಾವಣೆಗೊಂಡು ಅಲ್ಲಿನ ಅಂಬೇಡ್ಕರ್ ಮಾಲಾರ್ಪಣೆ ಮಾಡಿ ನಂತರ ಜಿಲ್ಲಾ ಕ್ರೀಡಾಂಗಣದ ಬಳಿಯಿರುವ ಗಾಂಧೀಜಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನೂರಾರು ಯುವಕರು ಬೈಕ್ ಜಾಥಾ ಆರಂಭಿಸಿದರು.

ಜಾಥಾ ಉದ್ಘಾಟನೆ ಮಾಡಿ ಮಾತನಾಡಿದ ಚಾಮರಸ ಮಾಲಿ ಪಾಟೀಲ್, ಮಹಮ್ಮದ್ ಶಾಲಂ, ಶ್ರೀನಿವಾಸ ರೆಡ್ಡಿ, ಎಂ ಆರ್ ಭೇರಿ, ಎಸ್ ಮಾರೆಪ್ಪ, ವಿಜಯರಾಣಿ, ಅಂಬಣ್ಣ ಆರೋಲಿಕರ್ SIR ಎಂಬ ಷಡ್ಯಂತ್ರವು ಹೀಗೆ ಎಲ್ಲಾ ಸಮುದಾಯದ ಬಡವರ ವಿರೋಧಿಯಾಗಿದೆ ಹಾಗೂ ಮಹಿಳೆಯರ ವಿರೋಧಿಯಾಗಿದೆ ಎಂದು ವಿವರಿಸಿದರು.

ಕರ್ನಾಟಕ ರಾಜ್ಯ ರೈತ ಸಂಘದ ಗೌರವಾಧ್ಯಕ್ಷರಾದ ಚಾಮರಸ ಮಾಲಿ ಮಾಲಿ ಪಾಟೀಲ್ ಅವರು ಮಾತನಾಡಿ, ಈ ದೇಶದಲ್ಲಿ ನೂರಾರು ವರ್ಷಗಳಿಂದ ನೆಲೆಸಿರುವ ಜನರನ್ನು ನೀವು ಈ ದೇಶದ ನಾಗರಿಕತ್ವವನ್ನು ಸಾಬೀತುಪಡಿಸಿಕೊಳ್ಳಿ ಎಂದು ಹೇಳುವಂತಿದೆ ಈ SIR. ಇದು ಸರ್ವಾಧಿಕಾರದ ಮನೋಭಾವ. ಇನ್ನು ಚುನಾವಣಾ ಆಯೋಗವೂ ಕೂಡ ಕೇಂದ್ರ ಸರ್ಕಾರದ ಕೈಗೊಂಬೆಯಾಗಿ ಕೆಲಸ ಮಾಡುತ್ತಿದೆ ಎಂದು ಅಭಿಪ್ರಾಯಪಟ್ಟರು.

ನಂತರ ನೆರೆದಿದ್ದ ಜನರನ್ನು ಉದ್ದೇಶಿಸಿ ಮಾತನಾಡಿದ ರಾಯಚೂರು ವಿಧಾಸಭಾ ಕ್ಷೇತ್ರದ ಪರಾಜಿತ ಅಭ್ಯರ್ಥಿ ಮೊಹಮ್ಮದ್ ಶಾಲಂ, SIR ಎನ್ನುವದು ಕೇವಲ ಅಲ್ಪಸಂಖ್ಯಾತರಿಗೆ ಮಾತ್ರ ಸಂಬಂಧಿಸಿದ್ದಲ್ಲ. ಇದು ಕರ್ನಾಟಕದ ಎಲ್ಲ ಜಾತಿ ಧರ್ಮಗಳ ಬಡವರ ಹಕ್ಕುಗಳನ್ನು ಕಿತ್ತುಕೊಳ್ಳಲು ನಡೆಸುತ್ತಿರುವ ಕೃತ್ಯ ಎಂದು ಅಭಿಪ್ರಾಯಪಟ್ಟರು.

ರಾಯಚೂರು ಮಹಾನಗರ ಪಾಲಿಕೆಯ ಸದಸ್ಯರಾದ ಶ್ರೀನಿವಾಸ ರೆಡ್ಡಿ, SIR ಎಂಬ ಜನವಿರೋಧಿ ಪ್ರಕ್ರಿಯೆಯನ್ನು ವಿರೋಧಿಸಲು ಎಲ್ಲ ಸಂವಿಧಾನ ಪ್ರೇಮಿಗಳು ಒಂದಾಗಬೇಕೆಂದು ವಿನಂತಿ ಮಾಡಿದರು.

ಹಿರಿಯ ದಲಿತ ಹೋರಾಟಗಾರರಾದ ಎಂ.ಆರ್. ಭೇರಿ ಮಾತನಾಡುತ್ತಾ, ಈ SIR ಎಂಬ ಷಡ್ಯಂತ್ರಕ್ಕೆ ಮೊದಲು ಬಲಿಯಾಗುತ್ತಿರುವುದು ಈ ದೇಶದ ಮಹಿಳೆಯರು, ದಲಿತರು ಹಾಗೂ ಅಲ್ಪಸಂಖ್ಯಾತರು.

ಮಹಿಳೆಯರು ಮದುವೆಯಾದ ನಂತರ ಗಂಡನ ಮನೆಗೆ ಬಂದಾಗ ಬೇರೊಂದು ಹೆಸರಿಟ್ಟುಕೊಳ್ಳುತ್ತಾರೆ. ಹೀಗಾಗಿ ಅವರ ದಾಖಲಾತಿಯಲ್ಲಿಯೇ ಬೇರೆ ಹೆಸರಿರುತ್ತದೆ, ಮತ ಪಟ್ಟಿಯಲ್ಲಿ ಬೇರೆಯದೇ ಹೆಸರಿರುತ್ತದೆ. ಹೀಗಾಗಿ ಮಹಿಳೆಯರು ಈ SIR ನಿಂದ ಹೆಚ್ಚು ಬಾದಿತರಾಗುತ್ತಾರೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಹಿರಿಯ ಒಳಮೀಸಲಾತಿ ಹೋರಾಟಗಾರರಾದ ಎಸ್. ಮಾರೆಪ್ಪ ಅವರು ಮಾತನಾಡುತ್ತಾ, ಈ ದೇಶದಲ್ಲಿ ಬೀದಿ ಬೀದಿಗಳಲ್ಲಿ ಗುಡಿಸಲು ಹಾಕಿಕೊಂಡಿರುವ ಅಲೆಮಾರಿ ಜನರ ಬಳಿ ಯಾವ ದಾಖಲೆಗಳು ಇರುತ್ತವೆ. ಅವರ ತನ್ನ ಜೀವನವನ್ನು ನಡೆಸಲು ಊರೂರು ಅಲೆಯುತ್ತಾ ಭಿಕ್ಷೆ ಬೇಡುವವರು. ಅವರ ಬಳಿ ನಿಮ್ಮ ಶಾಲೆಗಳನ್ನು ತೂರಿಸಿ ಎನ್ನುವದು ನಿಜಕ್ಕೂ ಕ್ರೌರ್ಯ ಎಂದು ಅಭಿಪ್ರಾಯಪಟ್ಟರು.

ಹಿರಿಯ ಒಳಮೀಸಲಾತಿ ಹೋರಾಟಗಾರದ ಅಂಬಣ್ಣ ಆರೋಲಿಕರ್ ಮಾತನಾಡುತ್ತಾ, ಈ ದೇಶದಲ್ಲಿ ಸಂವಿಧಾನವನ್ನು ಜಾರಿಮಾಡಬೇಕಾದ ಸುಪ್ರೀಮ್ ಕೋರ್ಟ್ ಕೂಡಾ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಮುಂದಾದರೆ ಜನರು ಯಾರ ಬಳಿ ನ್ಯಾಯ ಕೇಳಲು ಹೋಗಬೇಕು, ಇದು ಈ ದೇಶದಲ್ಲಿ ಸರ್ವಾಧಿಕಾರ ಆಡಳಿತ ಜಾರಿಯಾಗಿದೆ ಎಂಬ ಸೂಚನೆಯಾಗಿದೆ. ಜನರು ತಮ್ಮ ಹಕ್ಕುಗಳನ್ನು ರಕ್ಷಿಸಿಕೊಳ್ಳಲು ಜನವಿರೋಧಿ ನೀತಿಗಳ ವಿರುದ್ಧ ದೊಡ್ಡ ಆಂದೋಲನ ಮಾಡಬೇಕಿದೆ ಎಂದು ಅಭಿಪ್ರಾಯಪಟ್ಟರು.

ಜಾಥಾದ ರಾಯಚೂರು ಜಿಲ್ಲೆಯ ಹೇಮರಾಜ್, ಜಾನ್ ವೆಸ್ಲಿ, ಆಸುಮುದ್ದಿನ ಅಕ್ತರ್, ಸಮ್ಮದ್ ಪಾಷಾ, ಫೈನಲ್ ಖಾನ್, ಮಾರಪ್ಪ ಹರವಿ, ಹಿಜಾಜಾ ಅಲಿ, ಗುರುರಾಜ್ ಪಾಟೀಲ್, ಲಕ್ಷ್ಮಣ್ ಮಂಡಲಗೇರಾ ಮುಂತಾದವರು ಭಾಗವಹಿಸಿದ್ದರು.

ಕಾರ್ಯಕಾರಿ ಸಂಪಾದಕ, ನಾನುಗೌರಿ.ಕಾಮ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

ಚಂದ್ರು ತರಹುಣಿಸೆ
ಚಂದ್ರು ತರಹುಣಿಸೆhttps://naanugauri.com/
ಕಾರ್ಯಕಾರಿ ಸಂಪಾದಕ, ನಾನುಗೌರಿ.ಕಾಮ್
- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...