HomeಅಂಕಣಗಳುKarnataka against SIRಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

- Advertisement -
- Advertisement -

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು.

ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ ಮುಖಂಡರು ಜಾಥಾವನ್ನು ಬರಮಾಡಿಕೊಂಡಿತು. ನಗರದ ಮಧ್ಯಭಾಗದಲ್ಲಿರುವ ಅಂಬೇಡ್ಕರ್ ವೃತ್ತದಲ್ಲಿ ಜಮಾವಣೆಗೊಂಡು ಅಲ್ಲಿನ ಅಂಬೇಡ್ಕರ್ ಮಾಲಾರ್ಪಣೆ ಮಾಡಿ ನಂತರ ಜಿಲ್ಲಾ ಕ್ರೀಡಾಂಗಣದ ಬಳಿಯಿರುವ ಗಾಂಧೀಜಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನೂರಾರು ಯುವಕರು ಬೈಕ್ ಜಾಥಾ ಆರಂಭಿಸಿದರು.

ಜಾಥಾ ಉದ್ಘಾಟನೆ ಮಾಡಿ ಮಾತನಾಡಿದ ಚಾಮರಸ ಮಾಲಿ ಪಾಟೀಲ್, ಮಹಮ್ಮದ್ ಶಾಲಂ, ಶ್ರೀನಿವಾಸ ರೆಡ್ಡಿ, ಎಂ ಆರ್ ಭೇರಿ, ಎಸ್ ಮಾರೆಪ್ಪ, ವಿಜಯರಾಣಿ, ಅಂಬಣ್ಣ ಆರೋಲಿಕರ್ SIR ಎಂಬ ಷಡ್ಯಂತ್ರವು ಹೀಗೆ ಎಲ್ಲಾ ಸಮುದಾಯದ ಬಡವರ ವಿರೋಧಿಯಾಗಿದೆ ಹಾಗೂ ಮಹಿಳೆಯರ ವಿರೋಧಿಯಾಗಿದೆ ಎಂದು ವಿವರಿಸಿದರು.

ಕರ್ನಾಟಕ ರಾಜ್ಯ ರೈತ ಸಂಘದ ಗೌರವಾಧ್ಯಕ್ಷರಾದ ಚಾಮರಸ ಮಾಲಿ ಮಾಲಿ ಪಾಟೀಲ್ ಅವರು ಮಾತನಾಡಿ, ಈ ದೇಶದಲ್ಲಿ ನೂರಾರು ವರ್ಷಗಳಿಂದ ನೆಲೆಸಿರುವ ಜನರನ್ನು ನೀವು ಈ ದೇಶದ ನಾಗರಿಕತ್ವವನ್ನು ಸಾಬೀತುಪಡಿಸಿಕೊಳ್ಳಿ ಎಂದು ಹೇಳುವಂತಿದೆ ಈ SIR. ಇದು ಸರ್ವಾಧಿಕಾರದ ಮನೋಭಾವ. ಇನ್ನು ಚುನಾವಣಾ ಆಯೋಗವೂ ಕೂಡ ಕೇಂದ್ರ ಸರ್ಕಾರದ ಕೈಗೊಂಬೆಯಾಗಿ ಕೆಲಸ ಮಾಡುತ್ತಿದೆ ಎಂದು ಅಭಿಪ್ರಾಯಪಟ್ಟರು.

ನಂತರ ನೆರೆದಿದ್ದ ಜನರನ್ನು ಉದ್ದೇಶಿಸಿ ಮಾತನಾಡಿದ ರಾಯಚೂರು ವಿಧಾಸಭಾ ಕ್ಷೇತ್ರದ ಪರಾಜಿತ ಅಭ್ಯರ್ಥಿ ಮೊಹಮ್ಮದ್ ಶಾಲಂ, SIR ಎನ್ನುವದು ಕೇವಲ ಅಲ್ಪಸಂಖ್ಯಾತರಿಗೆ ಮಾತ್ರ ಸಂಬಂಧಿಸಿದ್ದಲ್ಲ. ಇದು ಕರ್ನಾಟಕದ ಎಲ್ಲ ಜಾತಿ ಧರ್ಮಗಳ ಬಡವರ ಹಕ್ಕುಗಳನ್ನು ಕಿತ್ತುಕೊಳ್ಳಲು ನಡೆಸುತ್ತಿರುವ ಕೃತ್ಯ ಎಂದು ಅಭಿಪ್ರಾಯಪಟ್ಟರು.

ರಾಯಚೂರು ಮಹಾನಗರ ಪಾಲಿಕೆಯ ಸದಸ್ಯರಾದ ಶ್ರೀನಿವಾಸ ರೆಡ್ಡಿ, SIR ಎಂಬ ಜನವಿರೋಧಿ ಪ್ರಕ್ರಿಯೆಯನ್ನು ವಿರೋಧಿಸಲು ಎಲ್ಲ ಸಂವಿಧಾನ ಪ್ರೇಮಿಗಳು ಒಂದಾಗಬೇಕೆಂದು ವಿನಂತಿ ಮಾಡಿದರು.

ಹಿರಿಯ ದಲಿತ ಹೋರಾಟಗಾರರಾದ ಎಂ.ಆರ್. ಭೇರಿ ಮಾತನಾಡುತ್ತಾ, ಈ SIR ಎಂಬ ಷಡ್ಯಂತ್ರಕ್ಕೆ ಮೊದಲು ಬಲಿಯಾಗುತ್ತಿರುವುದು ಈ ದೇಶದ ಮಹಿಳೆಯರು, ದಲಿತರು ಹಾಗೂ ಅಲ್ಪಸಂಖ್ಯಾತರು.

ಮಹಿಳೆಯರು ಮದುವೆಯಾದ ನಂತರ ಗಂಡನ ಮನೆಗೆ ಬಂದಾಗ ಬೇರೊಂದು ಹೆಸರಿಟ್ಟುಕೊಳ್ಳುತ್ತಾರೆ. ಹೀಗಾಗಿ ಅವರ ದಾಖಲಾತಿಯಲ್ಲಿಯೇ ಬೇರೆ ಹೆಸರಿರುತ್ತದೆ, ಮತ ಪಟ್ಟಿಯಲ್ಲಿ ಬೇರೆಯದೇ ಹೆಸರಿರುತ್ತದೆ. ಹೀಗಾಗಿ ಮಹಿಳೆಯರು ಈ SIR ನಿಂದ ಹೆಚ್ಚು ಬಾದಿತರಾಗುತ್ತಾರೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಹಿರಿಯ ಒಳಮೀಸಲಾತಿ ಹೋರಾಟಗಾರರಾದ ಎಸ್. ಮಾರೆಪ್ಪ ಅವರು ಮಾತನಾಡುತ್ತಾ, ಈ ದೇಶದಲ್ಲಿ ಬೀದಿ ಬೀದಿಗಳಲ್ಲಿ ಗುಡಿಸಲು ಹಾಕಿಕೊಂಡಿರುವ ಅಲೆಮಾರಿ ಜನರ ಬಳಿ ಯಾವ ದಾಖಲೆಗಳು ಇರುತ್ತವೆ. ಅವರ ತನ್ನ ಜೀವನವನ್ನು ನಡೆಸಲು ಊರೂರು ಅಲೆಯುತ್ತಾ ಭಿಕ್ಷೆ ಬೇಡುವವರು. ಅವರ ಬಳಿ ನಿಮ್ಮ ಶಾಲೆಗಳನ್ನು ತೂರಿಸಿ ಎನ್ನುವದು ನಿಜಕ್ಕೂ ಕ್ರೌರ್ಯ ಎಂದು ಅಭಿಪ್ರಾಯಪಟ್ಟರು.

ಹಿರಿಯ ಒಳಮೀಸಲಾತಿ ಹೋರಾಟಗಾರದ ಅಂಬಣ್ಣ ಆರೋಲಿಕರ್ ಮಾತನಾಡುತ್ತಾ, ಈ ದೇಶದಲ್ಲಿ ಸಂವಿಧಾನವನ್ನು ಜಾರಿಮಾಡಬೇಕಾದ ಸುಪ್ರೀಮ್ ಕೋರ್ಟ್ ಕೂಡಾ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಮುಂದಾದರೆ ಜನರು ಯಾರ ಬಳಿ ನ್ಯಾಯ ಕೇಳಲು ಹೋಗಬೇಕು, ಇದು ಈ ದೇಶದಲ್ಲಿ ಸರ್ವಾಧಿಕಾರ ಆಡಳಿತ ಜಾರಿಯಾಗಿದೆ ಎಂಬ ಸೂಚನೆಯಾಗಿದೆ. ಜನರು ತಮ್ಮ ಹಕ್ಕುಗಳನ್ನು ರಕ್ಷಿಸಿಕೊಳ್ಳಲು ಜನವಿರೋಧಿ ನೀತಿಗಳ ವಿರುದ್ಧ ದೊಡ್ಡ ಆಂದೋಲನ ಮಾಡಬೇಕಿದೆ ಎಂದು ಅಭಿಪ್ರಾಯಪಟ್ಟರು.

ಜಾಥಾದ ರಾಯಚೂರು ಜಿಲ್ಲೆಯ ಹೇಮರಾಜ್, ಜಾನ್ ವೆಸ್ಲಿ, ಆಸುಮುದ್ದಿನ ಅಕ್ತರ್, ಸಮ್ಮದ್ ಪಾಷಾ, ಫೈನಲ್ ಖಾನ್, ಮಾರಪ್ಪ ಹರವಿ, ಹಿಜಾಜಾ ಅಲಿ, ಗುರುರಾಜ್ ಪಾಟೀಲ್, ಲಕ್ಷ್ಮಣ್ ಮಂಡಲಗೇರಾ ಮುಂತಾದವರು ಭಾಗವಹಿಸಿದ್ದರು.

ಕಾರ್ಯಕಾರಿ ಸಂಪಾದಕ, ನಾನುಗೌರಿ.ಕಾಮ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

ಚಂದ್ರು ತರಹುಣಿಸೆ
ಚಂದ್ರು ತರಹುಣಿಸೆhttps://naanugauri.com/
ಕಾರ್ಯಕಾರಿ ಸಂಪಾದಕ, ನಾನುಗೌರಿ.ಕಾಮ್
- Advertisment -

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...