HomeಅಂಕಣಗಳುKarnataka against SIRSIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

- Advertisement -
- Advertisement -

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ ‘SIR ವಿರೋಧಿ ಜನಜಾಗೃತಿ ಜಾಥಾ’ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು.

ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ ತಂಡವು, ಅಲ್ಲಿ ಯಶಸ್ವಿ ಪ್ರಚಾರ ಮತ್ತು ಸಭೆ ನಡೆಸಿತು. ನಂತರ ಆಲ್ದೂರಿಗೆ ತೆರಳಿ ಕರಪತ್ರಗಳನ್ನು ಹಂಚುವ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿತು. ಅಲ್ಲಿಂದ ಸಂಜೆ ಚಿಕ್ಕಮಗಳೂರು ನಗರಕ್ಕೆ ಆಗಮಿಸಿದ ಜಾಥಾ ನೇತೃತ್ವದ ತಂಡವು ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ, ಬಳಿಕ ಹಮ್ಮಿಕೊಳ್ಳಲಾಗಿದ್ದ ಬಹಿರಂಗ ಸಭೆಯಲ್ಲಿ ಪಾಲ್ಗೊಂಡಿತು.

ರಕ್ತ ಕೊಟ್ಟೇವು, ಮತದಾನದ ಹಕ್ಕು ಕಳೆದುಕೊಳ್ಳುವುದಿಲ್ಲ: ಗೌಸ್ ಮೊಹಿದ್ದೀನ್ ಆಕ್ರೋಶ

ಬಹಿರಂಗ ಸಭೆಯನ್ನುದ್ದೇಶಿಸಿ ಮಾತನಾಡಿದ ‘ಎದ್ದೇಳು ಕರ್ನಾಟಕ’ ಸಂಘಟನೆಯ ಮುಖಂಡರಾದ ಗೌಸ್ ಮೊಹಿದ್ದೀನ್, “ನಾವು ರಕ್ತ ಕೊಟ್ಟೇವು, ಆದರೆ ನಮ್ಮ ಮತದಾನದ ಹಕ್ಕನ್ನು ಯಾವುದೇ ಕಾರಣಕ್ಕೂ ಕಳೆದುಕೊಳ್ಳುವುದಿಲ್ಲ” ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

“ಹಿಂದೆ ಮತದಾರರು ಸರ್ಕಾರವನ್ನು ಆಯ್ಕೆ ಮಾಡುತ್ತಿದ್ದರು. ಆದರೆ, ಈಗ ಸರ್ಕಾರವೇ ತನಗೆ ಬೇಕಾದ ಮತದಾರರನ್ನು ಆಯ್ಕೆ ಮಾಡಿಕೊಳ್ಳುವಂತಹ ವಿಪರ್ಯಾಸದ ಪರಿಸ್ಥಿತಿ ನಿರ್ಮಾಣವಾಗಿದೆ. ಒಂದು ವೇಳೆ ನಾವು ಮತದಾನದ ಹಕ್ಕನ್ನು ಕಳೆದುಕೊಂಡರೆ, ಮುಂದಿನ ದಿನಗಳಲ್ಲಿ ಸರ್ಕಾರದ ಎಲ್ಲಾ ಸೌಲಭ್ಯಗಳಿಂದ ವಂಚಿತರಾಗಬೇಕಾಗುತ್ತದೆ” ಎಂದು ಅವರು ಎಚ್ಚರಿಸಿದರು.

ಪಶ್ಚಿಮ ಬಂಗಾಳದ ಉದಾಹರಣೆ ನೀಡಿದ ಅವರು, “ಅಲ್ಲಿ ಇದೇ ಕಾನೂನಿನಿಂದಾಗಿ ಸುಮಾರು 91 ಲಕ್ಷ ಜನರು ಮತದಾನದ ಹಕ್ಕಿನಿಂದ ವಂಚಿತರಾಗಿದ್ದಾರೆ. ಭವಿಷ್ಯದಲ್ಲಿ ಅವರು ಈ ದೇಶದ ನಾಗರಿಕರಲ್ಲ ಎಂದರೆ ಅವರು ಎಲ್ಲಿಗೆ ಹೋಗಬೇಕು? ದೇಶದ ಮೂಲ ನಿವಾಸಿಗಳಾದ ದಲಿತರು, ಆದಿವಾಸಿಗಳು ಮತ್ತು ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ಈ ‘SIR’ ಅನ್ನು ಜಾರಿ ಮಾಡಲಾಗುತ್ತಿದೆ. ಇದನ್ನು ನಾವು ಯಾವುದೇ ಕಾರಣಕ್ಕೂ ಒಪ್ಪುವುದಿಲ್ಲ. ಪ್ರತಿಯೊಬ್ಬರೂ ಈ ಸಂದರ್ಭದಲ್ಲಿ ಎಚ್ಚೆತ್ತುಕೊಂಡು ತಮ್ಮ ಮತದಾನದ ಹಕ್ಕನ್ನು ಕಾಪಾಡಿಕೊಳ್ಳಬೇಕು ಹಾಗೂ ಜನಸಾಮಾನ್ಯರಲ್ಲಿ ಈ ಬಗ್ಗೆ ವ್ಯಾಪಕ ಜಾಗೃತಿ ಮೂಡಿಸಬೇಕು” ಎಂದು ಮನವಿ ಮಾಡಿದರು.

ಜೂನ್ 20ರ ಬೆಂಗಳೂರು ಸಮಾವೇಶಕ್ಕೆ ಕರೆ

ಇದೇ ವೇಳೆ ಮಾತನಾಡಿದ ನಾಯಕರು, ಬರುವ 20ನೇ ತಾರೀಖಿನಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ಬೃಹತ್ ಸಮಾವೇಶಕ್ಕೆ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಹಾಗೂ ಕಾರ್ಯಕರ್ತರು ಭಾಗವಹಿಸಬೇಕು. ಆ ಮೂಲಕ ಸರ್ಕಾರ ಮತ್ತು ಚುನಾವಣಾ ಆಯೋಗಕ್ಕೆ ದೇಶದ ನಾಗರಿಕರ ಶಕ್ತಿಯನ್ನು ತೋರ್ಪಡಿಸಿ, ತಕ್ಕ ಎಚ್ಚರಿಕೆ ನೀಡಬೇಕು ಎಂದು ಕರೆ ನೀಡಿದರು.

ಎಸ್‌ಐಆರ್ ವಿರೋಧಿ ಜಾಥಾವನ್ನು ಸ್ವಾಗತಿಸಿದ ಚಿಕ್ಕಮಗಳೂರು ಸಂಗಾತಿಗಳು

ಈ ಸಂದರ್ಭದಲ್ಲಿ ಸಿಪಿಐ ಮುಖಂಡರಾದ ರಾಧಾ ಸುಂದರೇಶ್, ಡಿಎಸ್ಎಸ್ ನಾಯಕರಾದ ಅಣ್ಣಯ್ಯ, ಮಂಜು, ಟಿಪ್ಪು ಸಮಿತಿಯ ರಾಜ್ಯಾಧ್ಯಕ್ಷರಾದ ಜಮ್ಶದ್ ಖಾನ್, ಮುನ್ನ ಕಡೂರು, ರಿಸ್ವನ್ ಖಾಲೀದ್ ಸೇರಿದಂತೆ ಪ್ರಮುಖ ಪ್ರಗತಿಪರ ಚಿಂತಕರು ಹಾಗೂ ನೂರಾರು ಕಾರ್ಯಕರ್ತರು ಉಪಸ್ಥಿತರಿದ್ದರು. ಜಾಥಾದ ನೇತೃತ್ವವನ್ನು ಸುರೇಶ್ ನಾಯ್ಕ್ ಮುನ್ನ ಕಡೂರು, ರಾಮು ಕೌಳಿ, ಸಂದೀಪ್ ಸುಮಂತ್ ರಾಜೀವ್ ಸರೋಜ ಮತ್ತು ಪವಿತ್ರ ವಹಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...