HomeಅಂಕಣಗಳುKarnataka against SIRವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

- Advertisement -
- Advertisement -

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು.

ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ ಗಣಿಹಾರ, ಎಸ್‌ಐಆರ್‌ ಬಗ್ಗೆ ಜನರಿಗೆ ಸರಿಯಾದ ಮಾಹಿತಿಯಿಲ್ಲ. ಈ ಬಗ್ಗೆ ಜಾಗೃತಿ ಮೂಡಿಸಲು ಹೊರಟಿರುವ ಜಾಥಾಗೆ ಶುಭವಾಗಲಿ ಎಂದರು.

ಜಮಾಅತೆ ಇಸ್ಲಾಮಿ ಹಿಂದ್ ಸಂಘಟನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಯೂಸುಫ್ ಕನ್ನಿ ಮಾತನಾಡಿ, ಎಸ್‌ಐಆರ್ ಏನೆಂದು ಜನರಿಗೆ ಗೊತ್ತಿಲ್ಲ. ಎಸ್‌ಐಆರ್ ಅನ್ನು ಸರ್ ಎನ್ನುತ್ತಾ, ಹಾಗಂದ್ರೆ ಏನು ಎಂದು ಕೇಳುತ್ತಿದ್ದಾರೆ. ಹಾಗಾಗಿ, ಅವರಿಗೆ ಈ ಬಗ್ಗೆ ಜಾಗೃತಿ ಮೂಡಿಸಲು ಜಾಥಾ ಹಮ್ಮಿಕೊಂಡಿದ್ದೇವೆ ಎಂದು ತಿಳಿಸಿದರು.

ಸುಮಾರು 150 ಜನ ಸಂಘಟನೆಗಳು, ಜಾತ್ಯಾತೀತ ಪಕ್ಷಗಳ ಎಸ್‌ಐಆರ್ ವಿರೋಧಿ ಒಕ್ಕೂಟ ಜೂನ್ 13ರಿಂದ 18ರವರೆಗೆ ರಾಜ್ಯದ ಕನಿಷ್ಠ 30 ಜಿಲ್ಲೆಗಳ ಸುಮಾರು 100 ತಾಲೂಕುಗಳಲ್ಲಿ ಎಸ್‌ಐಆರ್ ಜಾಗೃತಿ ಜಾಥಾ ಹಮ್ಮಿಕೊಂಡಿದೆ. ತಲಾ ಆರು ಜಿಲ್ಲೆಗಳನ್ನು ಒಳಗೊಂಡ ಒಟ್ಟು ಐದು ಮಾರ್ಗಗಳಲ್ಲಿ ಇಂದು ಏಕಕಾಲಕ್ಕೆ ಜಾಥಾಗೆ ಚಾಲನೆ ನೀಡಲಾಗಿದೆ ಎಂದು ವಿವರಿಸಿದರು.

ವಿಜಯಪುರದಲ್ಲಿ ಇಂದು ಚಾಲನೆ ಪಡೆದುಕೊಂಡಿರುವ ಜಾಥಾ ನಾಳೆ (ಜೂ.14) ಬಾಗಲಕೋಟೆ, ಜೂ. 15 ಬೆಳಗಾವಿ, ಜೂ.16 ಧಾರವಾಡ, ಜೂ.17ಂದು ಗದಗ ಜಿಲ್ಲೆಗಳಲ್ಲಿ ಸಂಚರಿಸಿ, ಜೂ.18ರಂದು ಹಾವೇರಿಯಲ್ಲಿ ಸಮಾಪ್ತಿಯಾಗಲಿ. ಜೂ.20ರಂದು ಬೆಂಗಳೂರಿನಲ್ಲಿ ಎಸ್‌ಐಆರ್ ವಿರುದ್ದ ಬೃಹತ್ ಪ್ರತಿರೋಧ ಸಮಾವೇಶ ನಡೆಯಲಿದೆ ಎಂದು ಮಾಹಿತಿ ನೀಡಿದರು.

ಎರಡನೇ ಹಂತದಲ್ಲಿ ದೇಶದ 13 ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಎಸ್‌ಐಆರ್ ನಡೆದಿದೆ. ಈ ರಾಜ್ಯಗಳಲ್ಲಿ ಸುಮಾರು 6 ಕೋಟಿ 50 ಲಕ್ಷ ಜನರನ್ನು ಮತದಾರರ ಪಟ್ಟಿಯಿಂದ ಹೊರಗಿಡಲಾಗಿದೆ. ಎಸ್‌ಐಆರ್‌ನಲ್ಲಿ ಜನರ ಬಳಿ ಇಲ್ಲದ ದಾಖಲೆಗಳನ್ನು ಕೇಳಲಾಗ್ತಿದೆ. ಈ ಮೂಲಕ ಅವರನ್ನು ಮತದಾನದ ಹಕ್ಕಿನಿಂದ ವಂಚಿತರನ್ನಾಗಿ ಮಾಡಲಾಗ್ತಿದೆ. ನಮ್ಮ ದೇಶದಲ್ಲಿ ಶೇಕಡ 36.5 ಜನರಲ್ಲಿ ಮಾತ್ರ ದಾಖಲೆಗಳಿಗೆ. ದಾಖಲೆಗಳು ಇಲ್ಲದವರು ಶೇಕಡ 63.5ರಷ್ಟಿದ್ದಾರೆ. ಬಡವರು, ದಲಿತರು, ಕೂಲಿ ಕಾರ್ಮಿಕರು ಎಲ್ಲಿಂದ ದಾಖಲೆಗಳನ್ನು ಕೊಡಬೇಕು ಎಂದು ಪ್ರಶ್ನಿಸಿದರು.

ಕರ್ನಾಟಕದಲ್ಲಿ ಎಸ್‌ಐಆರ್ ಮೂಲಕ 50 ಲಕ್ಷಕ್ಕೂಹೆಚ್ಚು ಜನರ ಹೆಸರನ್ನು ಮತದಾರ ಪಟ್ಟಿಯಿಂದ ತೆಗೆದು ಹಾಕುವ ಸಾಧ್ಯತೆ ಇದೆ. ಇದರ ವಿರುದ್ದ ನಾವು ಹೋರಾಟ ರೂಪಿಸುವ ಅಗತ್ಯವಿದೆ. ಸಂವಿಧಾನದ ಆಶಯಗಳನ್ನು ಕಾಪಾಡುವ ಜವಬ್ದಾರಿ ನಮ್ಮಲಿದೆ ಎಂದು ಜನರನ್ನು ಎಚ್ಚರಸಿದರು.

ಅಖಂಡ ರಾಜ್ಯ ರೈತ ಸಂಘದ ರಾಜ್ಯ ಕಾರ್ಯದರ್ಶಿ ಅರವಿಂದ್ ಕುಲಕರ್ಣಿ ಮಾತನಾಡಿ, ಎಸ್‌ಐಆರ್ ಮೂಲಕ ಜನರ ಮತದಾನದ ಹಕ್ಕನ್ನು ಕಸಿಯಲು ಚುನಾವಣಾ ಆಯೋಗ ಷಡ್ಯಂತ್ರ ರೂಪಿಸಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಬುಡಮೇಲು ಮಾಡಲು ಈ ಮೂಲಕ ಪ್ರಯತ್ನಿಸುತ್ತಿದೆ. ನಮ್ಮನ್ನು ಅಳುವ ರಾಜಕಾರಣಿಗಳನ್ನು ಓಟು ಹಾಕಿ ಗೆಲ್ಲಿಸುವಾಗ ನಾವು ಅವರ ಬಗ್ಗೆ ಯಾವುದೇ ಪರಿಶೀಲನೆ ನಡೆಸಿಲ್ಲ. ಆದರೆ, ನಾವು ಓಟು ಹಾಕಿ ಗೆಲ್ಲಸಿದವರು ನಮ್ಮ ಪರಿಶೀಲನೆ ಮಾಡಲು ಹೊರಟಿದ್ದಾರೆ. ಮುಂದೆ ನಾವು ಎಂಪಿ, ಎಂಎಲ್‌ಗಳನ್ನು ನಾವು ಪರಿಶೀಲನೆ ಮಾಡಬೇಕಾಗುತ್ತದೆ ಎಂದು ಆಕ್ರೋಶ ಹೊರಹಾಕಿದರು.

ದೇಶದ ಇಂದಿನ ಪರಿಸ್ಥಿತಿ ನೋಡಿದರೆ ನಮಗೆ ಸ್ವಾತಂತ್ರ್ಯ ತಂದುಕೊಟ್ಟವರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದರು ಎಂದು ವ್ಯಂಗ್ಯವಾಡಿದರು. ಎಸ್‌ಐಆರ್ ಹಿಂಪಡೆಯಬೇಕು, ಇಲ್ಲದಿದ್ದರೆ ಅದರ ವಿರುದ್ದ ದೇಶದಲ್ಲಿ ಕ್ರಾಂತಿಯಾಗಲಿದೆ ಎಂದರು.

ಎಸ್‌ಯುಸಿಐ ಜಿಲ್ಲಾ ಕಾರ್ಯದರ್ಶಿ ಬಿ. ಭಗವಾನ್ ರೆಡ್ಡಿ ಮಾತನಾಡಿ, ದೇಶದ ಮೇಲೆ 2 ಲಕ್ಷ ಕೋಟಿ ಸಾಲ‌‌ ಇದೆ. ಆರ್ಥಿಕತೆ ಹದಗೆಡುತ್ತಿದೆ, ಖಾಸಗಿಕರಣ ಆಗ್ತಿದೆ, ನೀಟ್, ಇಡಿ, ಸಿಬಿಐನಂತಹ ಎಲ್ಲಾ ಸಂಸ್ಥೆಗಳು ಹದೆಗೆಡುತ್ತಿವೆ. ಭರವಸೆ ಇದ್ದ ಸುಪ್ರಿಂ‌ ಕೋರ್ಟ್ ಕೂಡ ಎಸ್‌ಐಅರ್‌ಪರ ಇದೆ ಎಂದರು.

ಎಸ್‌ಐಅರ್ ಹಿಂದೆ ಏನೊ ಗೌಪ್ಯ ಉದ್ದೇಶ ಇದೆ. ನುಸುಳುಕೋರರು ಅಂದ್ರೆ 6 ಕೋಟಿ ಜನರು ನುಸುಳುಕೋರರ..ಜನರು ಮತ ಚಲಾಯಿಸಲು ನಾಲಾಯಕ್ ಅಂದ್ರೆ ನಿಮ್ಮ ಅರ್ಹತೆ ಏನು? ಇಲ್ಲಿ ಸರ್ವಾಧಿಕಾರ ತರುವ ಉದ್ದೇಶ ಸರ್ಕಾರಕ್ಕೆ ಇದ್ದಂಗಿದೆ. ಇದು ಬರೀ ಅಲ್ಪ ಸಂಖ್ಯಾತರ ಸಮಸ್ಯೆ ಅಲ್ಲಿ ದಲಿತರು, ಮಹಿಳೆಯರು ಮತ್ತು ಬಡವರ ಸಮಸ್ಯೆ ಎಂದು ಹೇಳಿದರು.

ಕಾಂಗ್ರೆಸ್ ಮುಖಂಡ ಸುರೇಶ ಬಿಜಾಪುರ್ ಮಾತನಾಡಿ, ಇದೇ ರೀತಿ ಮುಂದವರಿದರೆ ಎಸ್‌ಐಆರ್ ಮಾಡಿ ಎಷ್ಟು ಜನರನ್ನು ಮತದಾರರ ಪಟ್ಟಿಯಿಂದ ತೆಗಿಯುತ್ತೀರಿ ಎಂದು ಚುನಾವಣಾ ಆಯೋಗವನ್ನು ಪ್ರಶ್ನಿಸಿದರು. ಸಾಂವಧಾನಿಕ ಸಂಸ್ಥೆಯಾದ ಆಯೋಗ ರಾಜಕೀಯ ಆಗಬಾರದು ಎಂದರು.

ಜನರು ರೊಚ್ಚಿಗೆದ್ದರೆ ಸರ್ಕಾರ ಇರುವುದಿಲ್ಲ, ಆಯೋಗವೂ ಇರುವುದಿಲ್ಲ. ನಾವು ಅಕ್ರಮ ವಲಸಿಗರ ಹೆಸರು ತೆಗೆಯಬಾರದು ಎಂದು ಹೇಳುತ್ತಿಲ್ಲ. ಭಾರತೀಯರ ಹೆಸರನ್ನು ಗುರಿಯಾಗಿಸಿ ತೆಗಿಯಬೇಡಿ ಎನ್ನುತ್ತಿದ್ದೇವೆ. ಮುಖ್ಯವಾಗಿ ಮುಸಲ್ಮಾನರನ್ನು ಗುರಿಯಾಗುವುಸುದು ಬಿಡಿ. ಇಲ್ಲೇ ಹುಟ್ಟಿ ಬೆಳೆದವರ ಹಕ್ಕು ಕಿತ್ತಿಕೊಳ್ಳುವುದು ಅಂದರೆ ಏನು ಎಂದು ಪ್ರಶ್ನಿಸಿದರು. ಆಧಾರ್ ಕಾರ್ಡ್ ಮುಂದಿಟ್ಟು ಎಸ್‌ಐಆರ್ ಮಾಡಿ ಎಂದು ಆಗ್ರಹಿಸಿದರು.

ದಲಿತ ವಿದ್ಯಾರ್ಥಿ ಪರಿಷತ್ ಸಂಸ್ಥಾಪಕ ರಾಜ್ಯಾಧ್ಯಕ್ಷ ಶ್ರೀನಾಥ್ ಪೂಜಾರಿ ಮಾತನಾಡಿ, ನಮ್ಮ ಪೂರ್ವಜರು ಕಟ್ಟಿಕೊಟ್ಟ ದೇಶ ಉಳಿಸಿಕೊಳ್ಳಲು ನಾವು ಹೋರಾಡುತ್ತಿದ್ದೇವೆ. ಮತದಾನದ ಹಕ್ಕು ಹೋದರೆ ಈ ದೇಶದ ನಾಗರಿಕತ್ವ ಹೋದಂತೆ. ಈ ನಿಟ್ಟಿನಲ್ಲಿ ನಾವು ಗಂಭೀರವಾಗಿ ಕೆಲಸ ಮಾಡಿಬೇಕಾಗಿದೆ. ನಾಗರಿಕ ಹಕ್ಕುಗಳನ್ನು ಕಿತ್ತುಕೊಳ್ಳುವ ಎಸ್‌ಐಆರ್ ವಿರೋಧಿಸಲೇಬೇಕು. ಜನರಿಗೆ ಇದರ ಅನಾಹುತಗಳನ್ನು ತಿಳಿಸಬೇಕು ಎಂದರು.

ವಿಜಯಪುರ ನಗರದಲ್ಲಿ ಜಾಗೃತಿ ಜಾಥಾ

ಅಂಬೇಡ್ಕರ್ ವೃತ್ತದಲ್ಲಿ ಚಾಲನೆ ಪಡೆದ ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ, ನಗರದ ಗಾಂಧಿ ಕಟ್ಟೆ ಸರ್ಕಲ್ ಬಳಿಗೆ ಸಾಗಿತು. ಅಲ್ಲಿ ಜಾಥಾದ ನಾಯಕರು ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದರು. ಎಸ್‌ಐಆರ್‌ನ ಅನಾಹುತಗಳನ್ನು ತಿಳಿಸಿಕೊಟ್ಟು, ಅದನ್ನು ಹೇಗೆ ಎದುರಿಸಬೇಕು ಮತ್ತು ತಮ್ಮ ಮತದಾನದ ಹಕ್ಕನ್ನು ಹೇಗೆ ಉಳಿಸಿಕೊಳ್ಳಬೇಕು ಎಂದು ವಿವರಿಸಿದರು.

ಗಾಂಧಿ ಕಟ್ಟೆ ಸರ್ಕಲ್‌ನ ಕಾರ್ಯಕ್ರಮವನ್ನು ರಸ್ತೆಯ ಇಕ್ಕೆಲಗಳಲ್ಲಿ ನಿಂತ ನೂರಾರು ಜನರು ವೀಕ್ಷಿಸಿದರು, ಭಾಷಣಗಳನ್ನು ಆಲಿಸಿದರು. ಇದೇ ಸಂದರ್ಭದಲ್ಲಿ ಜನರಿಗೆ ಕರಪತ್ರಗಳನ್ನು ವಿತರಿಸಲಾಯಿತು.

ಗಾಂಧಿ ಕಟ್ಟೆಯಿಂದ ಹೊರಟ ಜಾಥಾ ಇತಿಹಾಸ ಪ್ರಸಿದ್ದ ಜಾಮಿಯಾ ಮಸೀದಿ ಬಳಿಯ ಝಂಡಾ ಕಟ್ಟೆಗೆ ತೆರಳಿತು. ಅಲ್ಲಿ ಕಾಲಿ ಮಸ್ಜಿದ್ ಮುಂಭಾಗದಲ್ಲಿ ನೆರೆದಿದ್ದ ಜನರನ್ನು ಉದ್ದೇಶಿಸಿ ಹೋರಾಟಗಾರರು ಮಾತನಾಡಿದರು.

ಮೊದಲ ದಿನದ ಜಾಥಾ ವಿಜಯಪುರ ನಗರದಲ್ಲಿ ಸಮಾಪ್ತಿಗೊಂಡಿತು. ಎರಡನೇ ದಿನ, ಅಂದರೆ ಜೂನ್ 14ರಂದು ವಿಜಯಪುರದಿಂದ ಹೊರಡುವ ಜಾಥಾ ಬಾಗಲಕೋಟೆ ತಲುಪಲಿದೆ. ಅಲ್ಲಿನ ವಿವಿಧ ಕೇಂದ್ರಗಳಲ್ಲಿ ಜನಜಾಗೃತಿ ಸಭೆಗಳು ನಡೆಯಲಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...

ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ : ಕದನ ವಿರಾಮ ಮುಕ್ತಾಯಗೊಂಡಿದೆ ಎಂದ ಟ್ರಂಪ್

ಮಂಗಳವಾರ ರಾತ್ರಿಯಿಂದ (ಭಾರತೀಯ ಕಾಲಮಾನ) ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ ಶುರುವಾಗಿದ್ದು, ಕದನ ವಿರಾಮ ಮುಕ್ತಾಯಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಟರ್ಕಿಯಲ್ಲಿ ನಡೆದ ನ್ಯಾಟೋ ಶೃಂಗಸಭೆಯಲ್ಲಿ ಮಾತನಾಡಿದ ಟ್ರಂಪ್...

ಅಯೋಧ್ಯೆ ದೇಣಿಗೆ ಹಗರಣ: ಕೇವಲ 45 ದಿನಗಳಲ್ಲಿ 70 ಬಾರಿ ಕಳ್ಳತನ, SIT ವರದಿ

ಅಯೋಧ್ಯೆಯ ರಾಮಮಂದಿರಕ್ಕೆ ಬಂದ ಸಾರ್ವಜನಿಕರ ದೇಣಿಗೆ ದುರುಪಯೋಗದ ಆರೋಪದ ಕುರಿತು ವಿಶೇಷ ತನಿಖಾ ತಂಡ (SIT) ನಡೆಸಿದ ಪ್ರಾಥಮಿಕ ತನಿಖೆಯಲ್ಲಿ, ಕೇವಲ 45 ದಿನಗಳಲ್ಲಿ ಸುಮಾರು 70 ಸಂಶಯಾಸ್ಪದ ಕಳ್ಳತನಗಳು ನಡೆದಿರುವುದಕ್ಕೆ ಪ್ರಾಥಮಿಕ...

ಬರುಯಿಪುರ ಅತ್ಯಾಚಾರ-ಕೊಲೆ ಪ್ರಕರಣ: ಪ್ರಮುಖ ಆರೋಪಿಯ ಎನ್‌ಕೌಂಟರ್; ‘ನನ್ನ ಮಗನ ಶವ ನನಗೆ ಬೇಡ’ ಎಂದ ಹೆತ್ತ ತಾಯಿ!

ಬರುಯಿಪುರ/ಕೋಲ್ಕತ್ತಾ: ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬರುಯಿಪುರದಲ್ಲಿ 12 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಮತ್ತು ಕ್ರೂರ ಕೊಲೆ ಪ್ರಕರಣದ ಪ್ರಮುಖ ಆರೋಪಿ ಪ್ರಭಾಸ್ ಮೊಂಡೋಲ್ ಬುಧವಾರ...

ವಯನಾಡ್ ಭೂಕುಸಿತ: ಕಾಣೆಯಾದ ಐವರಿಗಾಗಿ ಮುಂದುವರೆದ ಹುಡುಕಾಟ

ಬೆಟ್ಟದ ಜಿಲ್ಲೆಯ ವಯನಾಡ್‌ನಲ್ಲಿ ನಡೆಯುತ್ತಿರುವ ಸುರಂಗ ರಸ್ತೆ ನಿರ್ಮಾಣ ಸ್ಥಳದಲ್ಲಿ ಭೂಕುಸಿತ ಸಂಭವಿಸಿ ಮೂರು ಜೀವಗಳು ಬಲಿಯಾದ ಒಂದು ದಿನದ ನಂತರ, ಕಾಣೆಯಾಗಿರುವ ಐವರಿಗಾಗಿ ಹುಡುಕಾಟ ಮುಂದುವರೆದಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ವಯನಾಡ್...

ನನ್ನನ್ನು ಕೊಂಡುಕೊಳ್ಳಲು ಯಾರ ಕೈಲೂ ಸಾಧ್ಯವಿಲ್ಲ: ಮಹುವಾ ಮೋಯಿತ್ರಾ ವಿಶೇಷ ಸಂದರ್ಶನ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಜಯಭೇರಿ ಬಾರಿಸಿದ ಬೆನ್ನಲ್ಲೇ, ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರ ಭದ್ರಕೋಟೆ ಧೂಳೀಪಟವಾಗಿದೆ. ಚುನಾವಣಾ ಸೋಲಿನ ನಂತರ ಸಾಲು...

ಕೋರ್ಟ್ ರಾಜಕೀಯ ಅಖಾಡ ಅಲ್ಲ: ಸಿಎಂ ವಿಜಯ್ ವಿರುದ್ಧ ಅರ್ಜಿ ಸಲ್ಲಿಸಿದ್ದ ಡಿಎಂಕೆಗೆ ಸುಪ್ರೀಂ ತರಾಟೆ

ತಮಿಳುನಾಡಿನ ಕರೂರ್ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡದಂತೆ ಮುಖ್ಯಮಂತ್ರಿ ವಿಜಯ್ ಅವರಿಗೆ ನಿರ್ಬಂಧ ಹೇರಬೇಕೆಂದು ಕೋರಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಜನರಿಂದ...

ಸುರಂಗ ರಸ್ತೆ ಕಾಮಗಾರಿ ವೇಳೆ ವಯನಾಡಿನಲ್ಲಿ ಭೂಕುಸಿತ: ಜನರು ಜೀವ ಉಳಿಸಿಕೊಳ್ಳಲು ಓಡಿದ ಭಯಾನಕ ದೃಶ್ಯ ಸೆರೆ

ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿಯಲ್ಲಿ ಮಂಗಳವಾರ (ಇಂದು) ಭೀಕರ ಭೂಕುಸಿತ ಸಂಭವಿಸಿದ್ದು, ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಏಳು ಜನರು ಗಾಯಗೊಂಡಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಕಾರ್ಯಾಚರಣೆ ಮುಂದುವರಿದಿದ್ದು, ಈ...