HomeಅಂಕಣಗಳುSIRಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

- Advertisement -
- Advertisement -

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. “ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ” ಎಂಬ ದೃಢ ಸಂಕಲ್ಪದೊಂದಿಗೆ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಮತ್ತು ‘ಎದ್ದೇಳು ಕರ್ನಾಟಕ’ ಸಂಘಟನೆಯ ನೇತೃತ್ವದಲ್ಲಿ ಬೃಹತ್ ಜನಜಾಗೃತಿ ಜಾಥಾ ಆರಂಭಗೊಂಡಿದೆ. ಒಟ್ಟು 5 ಪ್ರಮುಖ ಮಾರ್ಗಗಳಲ್ಲಿ ಸಾಗುತ್ತಿರುವ ಈ ಕ್ರಾಂತಿಕಾರಿ ಜಾಥಾದಲ್ಲಿ, ಉತ್ತರ ಕನ್ನಡ ಜಿಲ್ಲೆಯನ್ನು ಒಳಗೊಂಡ ‘ಮಾರ್ಗ 3’ ಅತ್ಯಂತ ಪ್ರಮುಖ ಪಾತ್ರ ವಹಿಸಿದೆ.

ಶಿವಮೊಗ್ಗದ ಅಂಬೇಡ್ಕರ್ ಪ್ರತಿಮೆ ಬಳಿ ಅದ್ಧೂರಿ ಚಾಲನೆ

ಇಂದು ಬೆಳಿಗ್ಗೆ 8:30ಕ್ಕೆ ಶಿವಮೊಗ್ಗದ ಮಹಾನಗರ ಪಾಲಿಕೆ ಆವರಣದಲ್ಲಿರುವ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಯ ಎದುರು ಜಾಥಾಕ್ಕೆ ಅದ್ಧೂರಿ ಚಾಲನೆ ನೀಡಲಾಯಿತು. ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷರಾದ ಎಚ್.ಆರ್. ಬಸವರಾಜಪ್ಪ ಅವರು ಜಾಥಾವನ್ನು ಉದ್ಘಾಟಿಸಿ ಚಾಲನೆ ನೀಡಿದರು.

ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಬಸವರಾಜಪ್ಪ ಅವರು, “ಇಡೀ ದೇಶಾದ್ಯಂತ ಎಸ್‌ಐಆರ್ ಎಂಬ ಅಸ್ತ್ರವನ್ನು ಬಳಸಿಕೊಂಡು ನಾಗರಿಕರ ಮತದಾನದ ಹಕ್ಕನ್ನೇ ಕಸಿದುಕೊಳ್ಳಲು ಮತ್ತು ಜನರ ಅಸ್ತಿತ್ವವನ್ನೇ ಪ್ರಶ್ನಿಸಲು ಕೇಂದ್ರ ಸರ್ಕಾರ ಮುಂದಾಗಿರುವುದು ಅಕ್ಷಮ್ಯ ಅಪರಾಧ. ಪ್ರತಿ 10 ವರ್ಷಕ್ಕೊಮ್ಮೆ ಚುನಾವಣಾ ಆಯೋಗವು ಮತದಾರರ ಪಟ್ಟಿ ಪರಿಷ್ಕರಣೆ ನಡೆಸುತ್ತದೆಯಾದರೂ, ಈಗ ಬದುಕಿರುವವರ ಮತಗಳನ್ನೇ ಡಿಲೀಟ್ ಮಾಡುತ್ತಿರುವುದು ರಾಜಕೀಯ ಲಾಭಕ್ಕಾಗಿ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಬುಡಮೇಲು ಮಾಡಲು. ನಮ್ಮ ಮತದಾನದ ಹಕ್ಕನ್ನು ಉಳಿಸಿಕೊಳ್ಳಲು ಪ್ರಬಲ ಪ್ರತಿರೋಧ ಅನಿವಾರ್ಯವಾಗಿದೆ” ಎಂದು ಕೇಂದ್ರದ ವಿರುದ್ಧ ಕಿಡಿಕಾರಿದರು.

“ಪ್ರಜಾಪ್ರಭುತ್ವದ ಅಡಿಪಾಯದ ಕಲ್ಲುಗಳನ್ನೇ ತೆಗೆಯುವ ಕೆಲಸ”

ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಪ್ರಖ್ಯಾತ ಸಾಮಾಜಿಕ ಹೋರಾಟಗಾರ ಹಾಗೂ ವಕೀಲರಾದ ಕೆ.ಪಿ. ಶ್ರೀಪಾಲ್ ಅವರು, ಹಿರಿಯ ಸಾಹಿತಿ ದೇವನೂರು ಮಹಾದೇವ ಅವರ ಮಾತುಗಳನ್ನು ಸ್ಮರಿಸಿದರು. “ಪ್ರಜಾಪ್ರಭುತ್ವದ ತಳಪಾಯವೇ ಮತದಾನದ ಹಕ್ಕು. ಆದರೆ ಸರ್ಕಾರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಡುವ ಮೂಲಕ ಪ್ರಜಾಪ್ರಭುತ್ವದ ಅಡಿಪಾಯದ ಕಲ್ಲುಗಳನ್ನೇ ಕಿತ್ತೆಸೆಯುವ ಕೆಲಸ ಮಾಡುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು. ಎಸ್‌ಐಆರ್‌ನಿಂದ ದೇಶದ ಜನಸಾಮಾನ್ಯರಿಗೆ ಎದುರಾಗಲಿರುವ ಭೀಕರ ಅನಾಹುತಗಳ ಬಗ್ಗೆ ಜನ ಈಗಲೇ ಎಚ್ಚೆತ್ತು, ಪಟ್ಟಿಯಿಂದ ಹೆಸರುಗಳು ಹೊರಗುಳಿಯದಂತೆ ನೋಡಿಕೊಳ್ಳಬೇಕು. BLA ಮೂಲಕ ಪಟ್ಟಿಗಳನ್ನು ಪರಿಶೀಲಿಸಿ ತಿದ್ದುಪಡಿಗಳಿದ್ದರೆ ಮಾಡಿಸಿಕೊಳ್ಳಬೇಕು ಎಂದರು.

ಶಿವಮೊಗ್ಗದಲ್ಲಿ ಉದ್ಘಾಟನೆಹೊಂಡಿರುವ ಈ ಜಾಥಾವು ಒಟ್ಟು 5 ಮಾರ್ಗಗಳಲ್ಲಿ ಸಂಚರಿಸುತ್ತಿದ್ದು, ಪ್ರಮುಖವಾಗಿ ಮಾರ್ಗ 3ರ ಅಡಿಯಲ್ಲಿ ಕರಾವಳಿ ಮತ್ತು ಮಲೆನಾಡು ಭಾಗವನ್ನು ಬೆಸೆಯಲಿದೆ.

ಶಿವಮೊಗ್ಗದಿಂದ ಹೊರಡುವ ಜಾಥಾವು ಉತ್ತರ ಕನ್ನಡ ಜಿಲ್ಲೆಯ ಪ್ರಮುಖ ಕೇಂದ್ರಗಳಾದ ಶಿರಸಿ ಮತ್ತು ಭಟ್ಕಳವನ್ನು ಪ್ರವೇಶಿಸಿ ಜನಜಾಗೃತಿ ಮೂಡಿಸಲಿದೆ ಅಲ್ಲಿಂದ ಮುಂದುವರಿದು ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಬೃಹತ್ ರ‍್ಯಾಲಿಗಳ ಮೂಲಕ ಸಾಗಲಿದೆ.
ಎಲ್ಲಾ 5 ಮಾರ್ಗಗಳ ಜಾಥಾಗಳು ಜೂನ್ 20ರಂದು ಬೆಂಗಳೂರನ್ನು ತಲುಪಲಿದ್ದು, ಅಲ್ಲಿ ಬೃಹತ್ ಸಮಾರೋಪ ಸಮಾವೇಶ ನಡೆಯಲಿದೆ.

ದೇಶದ ಮತ್ತು ಸಂವಿಧಾನದ ಭವಿಷ್ಯವನ್ನು ಕಾಪಾಡಲು ಪ್ರತಿಯೊಬ್ಬ ನಾಗರಿಕರೂ ಜೂನ್ 20ರಂದು ಬೆಂಗಳೂರಿನಲ್ಲಿ ನಡೆಯುವ ಬೃಹತ್ ಸಮಾವೇಶದಲ್ಲಿ ಭಾಗವಹಿಸಿ, ಈ ಹೋರಾಟವನ್ನು ಯಶಸ್ವಿಗೊಳಿಸಬೇಕಾಗಿ ಮುಖಂಡರು ಕರೆ ನೀಡಿದ್ದಾರೆ.

ಈ ಐತಿಹಾಸಿಕ ಜನಜಾಗೃತಿ ಚಾಲನಾ ಕಾರ್ಯಕ್ರಮದಲ್ಲಿ ಎದ್ದೇಳು ಕರ್ನಾಟಕದ ರಾಜ್ಯ ಮುಖಂಡರಾದ ಕೆ.ಎಲ್. ಅಶೋಕ್, ದಲಿತ ಸಂಘರ್ಷ ಸಮಿತಿಯ (DSS) ಮುಖಂಡರಾದ ಬಸವಲಿಂಗಪ್ಪ, ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷರಾದ ರಾಘವೇಂದ್ರ, ಸುರೇಶ್ ಗಡಿಕಲ್, ಜಮಾತೆ ಇಸ್ಲಾಮಿ ಹಿಂದ್ ಸಂಘಟನೆಯ ಜಿಲ್ಲಾಧ್ಯಕ್ಷರಾದ ಅಬ್ದುಲ್ ವಾಹಬ್, ಆಪ್ತಾಪ್ ಪರ್ವೀಜ್, ಮುನ್ನ ಕಡೂರು ಸೇರಿದಂತೆ ಪ್ರಮುಖ ಹೋರಾಟಗಾರರು, ವಕೀಲರು ಹಾಗೂ ನೂರಾರು ಸಾರ್ವಜನಿಕರು ಭಾಗವಹಿಸಿ ಸರ್ಕಾರದ ಜನವಿರೋಧಿ ಧೋರಣೆಯ ವಿರುದ್ಧ ಧ್ವನಿ ಎತ್ತಿದರು. ಕೆ ಎಲ್ ಅಶೋಕ್, ಸುರೇಶ್ ನಾಯಕ್ ಮತ್ತು ಮುನ್ನ ಕಡೂರು ರವರು ಜಾಥಾ ಮಾರ್ಗ- 3ರ ನೇತೃತ್ವವನ್ನು ವಹಿಸಿದ್ದಾರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...