HomeಅಂಕಣಗಳುKarnataka against SIRಜೂನ್ 13 ರಿಂದ ಕರ್ನಾಟಕದಲ್ಲಿ 'SIR ವಿರೋಧಿ' ಜನಜಾಗೃತಿ ಜಾಥ

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

- Advertisement -
- Advertisement -

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ ಜೂನ್ 18 ರವರೆಗೆ ರಾಜ್ಯಾದ್ಯಂತ ಬೃಹತ್ ಜನಜಾಗೃತಿ ಜಾಥಾವನ್ನು ಹಮ್ಮಿಕೊಳ್ಳಲಾಗಿದೆ.

ಈ ಕುರಿತು ಮಾಜಿ ಸಚಿವೆ ಬಿ.ಟಿ. ಲಲಿತಾ ನಾಯಕ್, ರೈತ ಹೋರಾಟಗಾರ ಜೆ.ಎಂ. ವೀರಸಂಗಯ್ಯ ಹಾಗೂ ಎದ್ದೇಳು ಕರ್ನಾಟಕದ ಪದಾಧಿಕಾರಿ ಕೆ.ಎಲ್. ಅಶೋಕ್ ಜಂಟಿ ಪತ್ರಿಕಾ ಹೇಳಿಕೆ ನೀಡಿದ್ದಾರೆ. “ಇದು ಕರ್ನಾಟಕ, ಇಲ್ಲಿ ನಡೆಯದು ಯಾವುದೇ ದುಷ್ಟ ಆಟ” ಎಂಬ ಆಕರ್ಷಕ ಘೋಷಾವಾಕ್ಯದೊಂದಿಗೆ ಈ ಬೃಹತ್ ಜಾಗೃತಿ ಅಭಿಯಾನ ನಡೆಯಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ರಾಜ್ಯದ ಪ್ರತಿಯೊಂದು ಜಿಲ್ಲೆಯನ್ನು ತಲುಪುವ ಉದ್ದೇಶದಿಂದ ಈ ಜನಜಾಗೃತಿ ಅಭಿಯಾನವನ್ನು ಒಟ್ಟು ಐದು ಮಾರ್ಗಗಳಾಗಿ ವಿಭಜಿಸಲಾಗಿದೆ:

ಮಾರ್ಗ-1 (ಕಲ್ಯಾಣ ಕರ್ನಾಟಕ ಬಾಗ): ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಬಳ್ಳಾರಿ, ವಿಜಯನಗರ, ಕೊಪ್ಪಳ.

ಮಾರ್ಗ-2 (ಕಿತ್ತೂರು ಕರ್ನಾಟಕ ಭಾಗ): ವಿಜಯಪುರ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ್, ಹಾವೇರಿ.

ಮಾರ್ಗ-3 (ಮಲೆನಾಡು ಮತ್ತು ಮಧ್ಯ ಕರ್ನಾಟಕ): ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ.

ಮಾರ್ಗ-4 (ಬೆಂಗಳೂರು ಸುತ್ತಮುತ್ತಲಿನ ಜಿಲ್ಲೆಗಳು): ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ, ರಾಮನಗರ.

ಮಾರ್ಗ-5 (ಕರಾವಳಿ ಮತ್ತು ಹಳೆ ಮೈಸೂರು ಭಾಗ): ಉಡುಪಿ, ದಕ್ಷಿಣ ಕನ್ನಡ, ಕೊಡಗು, ಮೈಸೂರು, ಚಾಮರಾಜನಗರ, ಮಂಡ್ಯ.

ಚುನಾವಣಾ ಆಯೋಗ ಸರ್ಕಾರದ ಏಜೆಂಟನಂತೆ ವರ್ತಿಸುತ್ತಿದೆ

“ಇಂದಿನ ಚುನಾವಣಾ ಆಯೋಗವು ಸಂವಿಧಾನದ ಆಶಯ ಮತ್ತು ಮೌಲ್ಯಗಳನ್ನು ಗಾಳಿಗೆ ತೂರಿ ಬಿಜೆಪಿ ಸರ್ಕಾರದ ಏಜೆಂಟ್ ರೀತಿಯಲ್ಲಿ ವರ್ತಿಸುತ್ತಿದೆ” ಎಂದು ಹೋರಾಟಗಾರರು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ಸಂವಿಧಾನವು ದೇಶದ ಪ್ರತಿಯೊಬ್ಬ ನಾಗರಿಕನಿಗೂ ಸಮಾನ ಮತದಾನದ ಹಕ್ಕನ್ನು ನೀಡಿದೆ. ಅದನ್ನು ಕಾಪಾಡುವುದು ಆಯೋಗದ ಆದ್ಯ ಕರ್ತವ್ಯ. ಮತದಾನದ ಹಕ್ಕು ಎಂಬುದು ಕೇವಲ ಆಡಳಿತಾತ್ಮಕ ವಿಷಯವಲ್ಲ, ಅದು ನಾಗರಿಕ ಸಮಾನತೆಯ ಪ್ರತೀಕ. ಆದರೆ ಆಯೋಗ ಇದನ್ನು ಮರೆತಿರುವುದು ದುರಂತ ಎಂದು ಮುಖಂಡರು ಬೇಸರ ವ್ಯಕ್ತಪಡಿಸಿದ್ದಾರೆ.

‘ಡಿಲಿಸ್ಟಿಂಗ್’ ಹೆಸರಲ್ಲಿ ಎರಡನೇ ದರ್ಜೆಯ ನಾಗರಿಕರ ಸೃಷ್ಟಿ?

ಎಸ್‌ಐಆರ್ ಜಾರಿಯಾದ ಇತರ ರಾಜ್ಯಗಳಲ್ಲಿ ಭೀಕರ ಅಕ್ರಮ ನಡೆದಿದ್ದು, ಸುಮಾರು 20 ಲಕ್ಷದಿಂದ ಹಿಡಿದು 3 ಕೋಟಿಯವರೆಗೆ ಅರ್ಹ ಮತದಾರರನ್ನು ಮತಪಟ್ಟಿಯಿಂದ ವ್ಯವಸ್ಥಿತವಾಗಿ ಹೊರಗಿಡಲಾಗಿದೆ. ಎಸ್‌ಐಆರ್ ಮೂಲಕ ಯಾವುದೇ ನುಸುಳುಕೋರರನ್ನು ಪತ್ತೆ ಹಚ್ಚುತ್ತಿಲ್ಲ, ಬದಲಿಗೆ ದೇಶದಲ್ಲೇ ಇರುವ ಒಂದು ನಿರ್ದಿಷ್ಟ ವರ್ಗದ ಮತದಾನದ ಹಕ್ಕನ್ನು ಕಸಿದುಕೊಂಡು, ಅವರನ್ನು ಎರಡನೇ ದರ್ಜೆಯ ನಾಗರಿಕರನ್ನಾಗಿ ಮಾಡುವ ಹುನ್ನಾರ ಇದರಲ್ಲಿದೆ. ಆದರೆ ಶರಣರು, ಸೂಫಿಗಳು ಮತ್ತು ಸಂತರ ಈ ಪುಣ್ಯ ನಾಡಿನಲ್ಲಿ ಇಂತಹ ಯಾವುದೇ ದುಷ್ಟ ನೀತಿಗಳು ನಡೆಯಲು ಬಿಡುವುದಿಲ್ಲ ಎಂದು ಅವರು ಎಚ್ಚರಿಸಿದ್ದಾರೆ.

ಜಾಥಾದ ಪ್ರಮುಖ ಹಕ್ಕೊತ್ತಾಯಗಳು:

1. ಬೇರೆ ರಾಜ್ಯಗಳ ಮಾದರಿಯಲ್ಲಿ ಕರ್ನಾಟಕದಲ್ಲಿ ಎಸ್‌ಐಆರ್ ಜಾರಿ ಮಾಡಲು ಯಾವುದೇ ಕಾರಣಕ್ಕೂ ಬಿಡುವುದಿಲ್ಲ.

2. ಮತದಾರರ ಪಟ್ಟಿಯಿಂದ ಹೆಸರು ಕಟ್‌ ಮಾಡಲು ‘ಲಾಜಿಕಲ್ ಡಿಸ್ಕ್ರಿಪೆನ್ಸಿ ಸಾಫ್ಟ್‌ವೇರ್’ ಅನ್ನು ಬಳಸಬಾರದು.

3. ಪ್ರತಿಯೊಂದು ಹಳ್ಳಿಯಲ್ಲಿ ಗ್ರಾಮ ಸಭೆಗಳನ್ನು ಕರೆದು, ಸಾರ್ವಜನಿಕ ಪರಿಶೀಲನೆ ನಡೆಸಿಯೇ ಮತದಾರರ ಪಟ್ಟಿಯನ್ನು ಅಂತಿಮಗೊಳಿಸಬೇಕು.

4. ಮತದಾರರ ಪಟ್ಟಿಯನ್ನು ‘ಮಷಿನ್ ರೀಡಬಲ್ ಫಾರ್ಮ್ಯಾಟ್’ ಮೂಲಕ ಪ್ರಕಟಿಸಿ ಸಂಪೂರ್ಣ ಪಾರದರ್ಶಕತೆ ಕಾಯ್ದುಕೊಳ್ಳಬೇಕು.

5. ಮನವಿ ಮತ್ತು ಆಕ್ಷೇಪಣೆ ಸಲ್ಲಿಸಲು ಅಗತ್ಯ ದಾಖಲೆಗಳನ್ನು ಒದಗಿಸಲು ಸಾರ್ವಜನಿಕರಿಗೆ ಕನಿಷ್ಠ ಆರು ತಿಂಗಳ ಸುದೀರ್ಘ ಕಾಲಾವಕಾಶ ನೀಡಬೇಕು.

ಜೂನ್ 20 ಕ್ಕೆ ಬೆಂಗಳೂರಿನಲ್ಲಿ ಪ್ರತಿರೋಧ ಸಮಾವೇಶ

ಮತದಾನದ ಹಕ್ಕನ್ನು ದುರ್ಬಲಗೊಳಿಸುವ, ಪ್ರಜಾಪ್ರಭುತ್ವದ ಹಕ್ಕುಗಳನ್ನು ಕಸಿಯುವ ಯಾವುದೇ ಪ್ರಯತ್ನಗಳನ್ನು ಕರ್ನಾಟಕದ ಪ್ರಜ್ಞಾವಂತ ಜನತೆ ಸಹಿಸುವುದಿಲ್ಲ. ರಾಜ್ಯ ಚುನಾವಣಾ ಆಯೋಗವು ನಾಗರಿಕ ಸಮಾಜಕ್ಕೆ ಉತ್ತರದಾಯಿಯಾಗಬೇಕು ಮತ್ತು ನಮ್ಮೆಲ್ಲಾ ಹಕ್ಕೊತ್ತಾಯಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ಜೂನ್ 20 ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿರೋಧ ಸಮಾವೇಶ ನಡೆಯಲಿದೆ ಎಂದು ಒಕ್ಕೂಟದ ಮುಖಂಡರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...