HomeಅಂಕಣಗಳುKarnataka against SIRಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

- Advertisement -
- Advertisement -

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR – Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಈ ಹಿನ್ನೆಲೆಯಲ್ಲಿ ಹಮ್ಮಿಕೊಳ್ಳಲಾಗಿರುವ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ಕ್ಕೆ ಕಾಂಗ್ರೆಸ್ ಪಕ್ಷ ಸಂಪೂರ್ಣ ಬೆಂಬಲ ನೀಡುತ್ತದೆ ಎಂದು ಚಿಕ್ಕಮಗಳೂರು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಡಾ. ಅಂಶುಮಂತ್ ಅವರು ಪ್ರಕಟಿಸಿದರು.

ಶಿವಮೊಗ್ಗದಲ್ಲಿ ಉದ್ಘಾಟನೆಗೊಂಡು ಶಿರಸಿ ಮತ್ತು ಭಟ್ಕಳದ ಮೂಲಕ ಸಂಚರಿಸಿ, ಇಂದು (ಎರಡನೇ ದಿನ) ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ‘ಎದ್ದೇಳು ಕರ್ನಾಟಕ’ ಮತ್ತು ‘ಎಸ್‌ಐಆರ್ ವಿರೋಧಿ ಒಕ್ಕೂಟ’ದ ಕಾರ್ಯಕರ್ತರ ಜನಜಾಗೃತಿ ಜಾಥಾವನ್ನು ಆತ್ಮೀಯವಾಗಿ ಸ್ವಾಗತಿಸಿ ಅವರು ಮಾತನಾಡಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಡಾ. ಅಂಶುಮಂತ್ ಬೇರೆ ಬೇರೆ ರಾಜ್ಯಗಳಲ್ಲಿ ಎಸ್‌ಐಆರ್ ಪ್ರಕ್ರಿಯೆಯ ಮೂಲಕ ಲಕ್ಷಾಂತರ ಅರ್ಹ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಹೊರಗಿಡಲಾಗಿದೆ ಎಂಬ ಆತಂಕವಿದೆ. ಕರ್ನಾಟಕದಲ್ಲಿ ಇಂತಹ ಯಾವುದೇ ಲೋಪಗಳು ಮರುಕಳಿಸದಂತೆ ನಾವು ಎಚ್ಚರ ವಹಿಸಬೇಕಾಗಿದೆ, ಮತದಾರರ ಪಟ್ಟಿ ಪರಿಷ್ಕರಣೆ ಸಂದರ್ಭದಲ್ಲಿ ಬೂತ್ ಮಟ್ಟದ ಅಧಿಕಾರಿಗಳು (BLO) ಮತ್ತು ಬೂತ್ ಮಟ್ಟದ ಏಜೆಂಟರ (BLA) ಜವಾಬ್ದಾರಿ ಅತ್ಯಂತ ಹೆಚ್ಚಾಗಿದೆ. ಸಂವಿಧಾನ ನಮಗೆ ನೀಡಿರುವ ಪವಿತ್ರವಾದ ಮತದಾನದ ಹಕ್ಕನ್ನು ಉಳಿಸಿಕೊಳ್ಳಲು ನಾವೆಲ್ಲರೂ ಒಟ್ಟಾಗಿ ಶ್ರಮಿಸಬೇಕು ಎಂದರು.

ಭಾರತೀಯ ಚುನಾವಣಾ ಆಯೋಗವು ಯಾವುದೇ ಒಂದು ನಿರ್ದಿಷ್ಟ ರಾಜಕೀಯ ಪಕ್ಷದ ಅಥವಾ ಸರ್ಕಾರದ ಪರವಾಗಿ ಕೆಲಸ ಮಾಡಬಾರದು. ಅದು ಸ್ವತಂತ್ರವಾಗಿ ಮತ್ತು ಪಾರದರ್ಶಕವಾಗಿ ಕಾರ್ಯನಿರ್ವಹಿಸಬೇಕು. ಎಸ್‌ಐಆರ್ ಪ್ರಕ್ರಿಯೆ ನಡೆಯುವಾಗ ಬಡವರು, ದಲಿತರು, ಆದಿವಾಸಿಗಳು ಹಾಗೂ ಅಲ್ಪಸಂಖ್ಯಾತ ಸಮುದಾಯಗಳ ಹಕ್ಕುಗಳಿಗೆ ಧಕ್ಕೆಯಾಗದಂತೆ ರಕ್ಷಿಸಬೇಕು. ಅಗತ್ಯ ದಾಖಲೆಗಳನ್ನು ಕ್ರೂಢೀಕರಿಸಿ ಸಲ್ಲಿಸಲು ಸಾರ್ವಜನಿಕರಿಗೆ ಹೆಚ್ಚಿನ ಕಾಲಾವಕಾಶವನ್ನು ಆಯೋಗ ನೀಡಬೇಕು, “ಎಸ್‌ಐಆರ್ ಪ್ರಕ್ರಿಯೆಯ ಸಂದರ್ಭದಲ್ಲಿ ರಾಜ್ಯದ ಯಾವೊಬ್ಬ ನಾಗರಿಕನೂ ತನ್ನ ಮತದ ಹಕ್ಕನ್ನು ಕಳೆದುಕೊಳ್ಳದಂತೆ ಜಾಗ್ರತೆ ವಹಿಸಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ಅವರು ಈಗಾಗಲೇ ಸ್ಪಷ್ಟ ಸೂಚನೆ ನೀಡಿದ್ದಾರೆ. ಹಾಗಾಗಿ, ಮತದಾರರ ಹಕ್ಕುಗಳ ರಕ್ಷಣೆಗಾಗಿ ನಡೆಯುವ ಈ ಹೋರಾಟದ ಪ್ರತಿ ಹಂತದಲ್ಲೂ ಕಾಂಗ್ರೆಸ್ ಪಕ್ಷವು ನಿಮ್ಮ ಜೊತೆಗೆ ದೃಢವಾಗಿ ನಿಲ್ಲಲಿದೆ.” ಎಂದು ತಿಳಿಸಿದರು.

ಜಾಥಾವನ್ನು ಉದ್ದೇಶಿಸಿ ಮಾತನಾಡಿದ ವಕೀಲರಾದ ಸುಧೀರ್ ಕುಮಾರ್ ಮುರೊಳ್ಳಿ, “ಸ್ವಾತಂತ್ರ್ಯದ ನಂತರ ದೇಶದ ಪ್ರತಿ ಪ್ರಜೆಯೂ ಮತದಾನದಲ್ಲಿ ಭಾಗವಹಿಸಬೇಕು ಎಂಬುದು ಸಂವಿಧಾನದ ಆಶಯವಾಗಿತ್ತು. ಆದರೆ, ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ತೀವ್ರ ವಿಶೇಷ ಪರಿಷ್ಕರಣೆಯು ಸಂವಿಧಾನದ ಮೂಲ ಆಶಯಗಳನ್ನೇ ಬುಡಮೇಲು ಮಾಡುತ್ತಿದೆ. ಅರ್ಹರನ್ನು ಮತಪಟ್ಟಿಯಿಂದ ಹೊರಗಿಟ್ಟು, ಅವರನ್ನು ‘ಅನುಮಾನಾಸ್ಪದ ಮತದಾರರು’ ಎಂದು ಹಣೆಪಟ್ಟಿ ಕಟ್ಟಲಾಗುತ್ತಿದೆ. ಭಾರತೀಯನಾದ ನಾನು ಭಾರತೀಯನೇ ಎಂದು ಸಾಬೀತುಪಡಿಸಿಕೊಳ್ಳಬೇಕಾದ ದುಸ್ಥಿತಿಗೆ ನಾಗರಿಕರನ್ನು ತಳ್ಳಲಾಗುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಚುನಾವಣಾ ಆಯೋಗದ ಕಾರ್ಯವೈಖರಿ ನಿಸ್ಪಕ್ಷಪಾತವಾಗಿಲ್ಲ ಎಂಬ ಆರೋಪಗಳು ನಾಗರಿಕ ಸಮಾಜದಿಂದ ಕೇಳಿಬರುತ್ತಿವೆ. ಇದು ಪ್ರಜಾಪ್ರಭುತ್ವದ ಆರೋಗ್ಯದ ದೃಷ್ಟಿಯಿಂದ ಅಪಾಯಕಾರಿ. ಎಸ್‌ಐಆರ್ (SIR) ಎಂಬುದು ಜನತಂತ್ರದ ಮೇಲಿನ ದಾಳಿಯಾಗಿದ್ದು, ಇದನ್ನು ಪಕ್ಷ, ಸಂಘಟನೆಗಳ ಭೇದ ಮರೆತು ವಿರೋಧಿಸಬೇಕು. ರಾಜ್ಯಾದ್ಯಂತ ನಡೆಯುತ್ತಿರುವ ಈ ಜಾಥಾದ ಉದ್ದೇಶವು ಅರ್ಹ ಮತದಾರರ ಹೆಸರು ಪಟ್ಟಿಯಿಂದ ಕೈಬಿಟ್ಟು ಹೋಗದಂತೆ ಎಚ್ಚರ ವಹಿಸುವುದೇ ಆಗಿದೆ” ಎಂದು ಕರೆ ನೀಡಿದರು.

ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಜನವಿರೋಧಿ ಮತ್ತು ಸಂವಿಧಾನ ವಿರೋಧಿಯಾಗಿ ಕಾರ್ಯನಿರ್ವಹಿಸುತ್ತದೆ. ಈ ಹಿಂದ ಇದ್ದ ಹಲವು ಸರ್ಕಾರಗಳು ದೇಶದಲ್ಲಿ ಪ್ರತಿಯೊಬ್ಬರಿಗೂ ಮತದಾನದ ಹಕ್ಕು ಲಭ್ಯವಾಗಬೇಕು ಆ ಮುಖೇನ ಹೆಚ್ಚೆಚ್ಚು ಮತದಾನದ ಮೂಲಕ ಒಂದು ಚುನಾಯಿತ ಸರ್ಕಾರ ಆಯ್ಕೆಯಾಗಬೇಕು ಎಂದು ಹೇಳುತ್ತಿದ್ದವು. ಆದರೆ ಈಗಿನ ಸರ್ಕಾರ ಯಾರು ಮತದಾರರಾಗಿ ಇರಬೇಕು ಎಂದು ನಿರ್ಧರಿಸಿ ಸರ್ಕಾರ ಮತದಾರರನ್ನ ಆಯ್ಕೆ ಮಾಡುತ್ತಿದೆ. ಈ SIR ಪ್ರಕ್ರಿಯೆಯಲ್ಲಿ ಮತದಾರರು ಹಲವು ರೀತಿಯ ದಾಖಲೆಗಳನ್ನು ನೀಡಬೇಕು ಎಂದು ಹೇಳುತ್ತಿದೆ ಆದರೆ ಈ ಬಡವರು ಅಲ್ಪಸಂಖ್ಯಾತರು, ಆದಿವಾಸಿಗಳ ಬಳಿ ಇವರು ಹೇಳುವ ಯಾವ ದಾಖಲೆಗಳು ಇರತ್ತೆ? ಆಗ ಇವರನ್ನು ಮತದಾನ ದಿಂದ ಹೊರಗಿಟ್ಟು ಇವರ ಪರವಾದವರು ಮಾತ್ರ ಈ ಹಕ್ಕಿನಲ್ಲಿ ಉಳಿಯುವಂತೆ ಮಾಡುತ್ತಾರೆ ಇದು ಅಕ್ಷಮ್ಯ ಮತ್ತು ಅಸಂವಿಧಾನಿಕ ಹಾಗಾಗಿ SIR ಅನ್ನು ಜಾರಿ ಮಾಡಲು ಬಿಡಬಾರದು ಎಂದು ಸಾಮಾಜಿಕ ಕಾರ್ಯಕರ್ತ ಮತ್ತು ಪ್ರಗತಿಪರ ಚಿಂತಕ ಎಲ್ದೊ ಹೊನ್ನಕೂಡಿಗೆ ಕೇಂದ್ರ ಚುನಾವಣಾ ಆಯೋಗದ ನಡೆಯನ್ನು ತೀವ್ರವಾಗಿ ತರಾಟೆ ತೆಗೆದುಕೊಂಡರು.

ಈ ಸಂದರ್ಭದಲ್ಲಿ ‘ಎದ್ದೇಳು ಕರ್ನಾಟಕ’ ಮತ್ತು ‘ಎಸ್‌ಐಆರ್ ವಿರೋಧಿ ಒಕ್ಕೂಟ’ದ ಪ್ರಮುಖ ಪದಾಧಿಕಾರಿಗಳು, ಸ್ಥಳೀಯ ಕಾಂಗ್ರೆಸ್ ಮುಖಂಡರು ಹಾಗೂ ನೂರಾರು ಸಂಖ್ಯೆಯ ಕಾರ್ಯಕರ್ತರು ಉಪಸ್ಥಿತರಿದ್ದರು. ಜಾಥಾದ ನೇತೃತ್ವವನ್ನು ಸುರೇಶ್ ನಾಯ್ಕ್ ಮುನ್ನ ಕಡೂರು, ರಾಮು ಕೌಳಿ, ಸಂದೀಪ್ ಸುಮಂತ್ ರಾಜೀವ್ ಸರೋಜ ಮತ್ತು ಪವಿತ್ರ ವಹಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...