HomeಅಂಕಣಗಳುKarnataka against SIRಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

- Advertisement -
- Advertisement -

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು ಜಾಗೃತಿಯ ಜಾಥಾ ನಡೆಸುತ್ತಿದೆ. ಇದರ ಭಾಗವಾಗಿ ಇಂದು ಕಲಬುರಗಿ ಜಿಲ್ಲೆಗೆ ಪ್ರವೇಶಿಸಿದ ಜಾಥಾ ತಂಡವು ವೀರಾಪುರ ವೃತ್ತದಲ್ಲಿನ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಜಾಗೃತಿಯನ್ನು ಆರಂಭಿಸಿತ್ತು.

ನಂತರ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಡಾ ಅನಿಲ್ ತೆಂಗಳಿ ಸಂಧರ್ಬದಲ್ಲಿ ನಾವು ಮೈ ಮರೆತರೆ ನಮ್ಮ ಮತದಾನದ ಹಕ್ಕನ್ನು ಕಳೆದುಕೊಳ್ಳುತ್ತೇವೆ. ಇದು ಕೇವಲ ಎದ್ದೇಳು ಕರ್ನಾಟಕ ಯಾವುದೂ ಒಂದು ಸಂಘಟನೆಯ ಕೆಲಸವಲ್ಲ ಇದು ಪ್ರತೀ ನಾಗರಿಕರ ಕರ್ತವ್ಯ. ಮತದಾರರನ್ನು ಆಧಾರ್ ಕಾರ್ಡ್ ಗೆ ಲಿಂಕ್ ಮಾಡುವ ಕೆಲಸ ಮಾಡಲು ಚುನಾವಣಾ ಆಯೋಗಕ್ಕೆ ಒತ್ತಡ ತರಬೇಕಿದೆ ಎಂದ ಅಭಿಪ್ರಾಯಪಟ್ಟರು.

ಸಲೀಂ ಚಿತ್ತಾಪುರ, ಸತ್ತವರ ಹೆಸರನ್ನು ತೆಗೆಯಲು ನಮ್ಮ ವಿರೋಧವಿಲ್ಲ, ಆದರೆ ಯಾವುದೇ ಒಬ್ಬ ಅರ್ಹ ಮತದಾರರನ್ನು ಮತಪಟ್ಟಿಯಿಂದ ತೆಗೆದರೆ ನಾವು ಸುಮ್ಮನಿರುವುದಿಲ್ಲ, ಪಶ್ಚಿಮ ಬಂಗಾಳ ಮುಂತಾದ ಕಡೆಯಲ್ಲಿ ಚುನಾವಣಾ ಆಯೋಗ ನಡೆಸಿದ ಪ್ರಕ್ರಿಯೆಯನ್ನು ನಾವು ಕರ್ನಾಟಕದಲ್ಲಿ ನಡೆಯಲು ಬಿಡುವುದಿಲ್ಲ ಎಂದ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದ ಸಲೀಂ ಚಿತ್ತಾಪುರ ಅಭಿಪ್ರಾಯಪಟ್ಟರು.

ಕೇಂದ್ರ ಸರ್ಕಾರ ಈ ಹಿಂದೆ ನಡೆಸಿದ ಸಂವಿಧಾನ ವಿರೋಧಿ ನಡೆಯದ CAA NRC ಯನ್ನು ಜಾರಿಮಾಡಲು ವಿಫಲವಾದ್ದರಿಂದ ಈಗ SIR ಮೂಲಕ ಅದನ್ನು ಮರಳಿ ಜಾರಿ ಮಾಡಲು ಪ್ರಯತ್ನಿಸುತ್ತಿದೆ. ಬಿಜೆಪಿ ತನಗೆ ಯಾರೆಲ್ಲ ಮತ ನೀಡುವುದಿಲ್ಲವೋ ಆ ಎಲ್ಲ ಜನರನ್ನು ಗುರಿಯಾಗಿಸಿಕೊಂಡು ಅವರನ್ನು ಮತದಾನದ ಹಕ್ಕಿನಿಂದ ಹೊರಗುಳಿಸುವ ಪ್ರಕ್ರಿಯೆ ನಡೆಸಲಾಗುತ್ತಿದೆ. ಇದು ಸಂವಿಧಾನ ವಿರೋಧಿಯಾದ ಕೃತ್ಯ ಎಂದು ಸಿಖ್ ಸಮುದಾಯದ ಶೇಖರ್ ಸಿಂಗ್ ಅಭಿಪ್ರಾಯಪಟ್ಟರು.

ಜಾಥಾದ ಪ್ರಮುಖರಾದ ವೀರಸಂಗಯ್ಯ ಮಾತನಾಡುತ್ತಾ, ಇದು ನಾವು 30-40 ವರ್ಷಗಳಿಂದ ಇಲ್ಲೇ ಇಡೀ ನೆಲದಲ್ಲಿ ಬದುಕಿರುವವರು ನಾವು, ನಮ್ಮನೇ ಈ ದೇಶದ ಪ್ರಜೆಯಲ್ಲ ಎಂದು ಹೇಳಿದರೆ ನಾವು ಒಪ್ಪಿಕೊಳ್ಳಬೇಕ. ನಾವು ಈ ನೆಲದ ಮೂಲ ವಾರಸುದಾರರು, ನಮ್ಮನ್ನು ಈ ದೇಶದ ಪ್ರಜೆ ಅಲ್ಲ ಎಂದರೆ ಸಹಿಸುವುದಿಲ್ಲ. ಇದು ಕೇವಲ ದ್ವೇಷ ರಾಜಕಾರಣ ಮಾತ್ರವೇ ಆಗಿದೆ. ಮುಂದಿನ ದಿನಗಳಲ್ಲಿ ಬೃಹತ್ ಜನಾಂದೋಲನ ನಡೆಸಲಾಗುತ್ತದೆ ಎಂದರು.

ಕಾರ್ಯಕಾರಿ ಸಂಪಾದಕ, ನಾನುಗೌರಿ.ಕಾಮ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

ಚಂದ್ರು ತರಹುಣಿಸೆ
ಚಂದ್ರು ತರಹುಣಿಸೆhttps://naanugauri.com/
ಕಾರ್ಯಕಾರಿ ಸಂಪಾದಕ, ನಾನುಗೌರಿ.ಕಾಮ್
- Advertisment -

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...